Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:8 - ಕನ್ನಡ ಸತ್ಯವೇದವು J.V. (BSI)

8 ನಿನ್ನ ಮನಸ್ಸಿನಲ್ಲಿ ಅಂದುಕೊಳ್ಳಬೇಡ. ದೇವರ ವಾಕ್ಯವು ನಿನ್ನ ಸಮೀಪದಲ್ಲಿಯೇ ಇದೆ; ಅದು ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಇದೆ ಅನ್ನುತ್ತದೆ. ಆ ವಾಕ್ಯವು ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ದೇವರ ವಾಕ್ಯವು ನಿನ್ನ ಸಮೀಪದಲ್ಲಿಯೇ ಇದೆ; ಅದು ನಿನ್ನ ಬಾಯಲ್ಲಿಯೂ, ನಿನ್ನ ಹೃದಯದಲ್ಲಿಯೂ ಇದೆ.” ಆ ವಾಕ್ಯವು ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಧರ್ಮಗ್ರಂಥವು ಹೇಳುವುದಿಷ್ಟೆ; ದೇವರ ವಾಕ್ಯ ನಿನ್ನ ಸಮೀಪದಲ್ಲೇ ಇದೆ. ಅದು ನಿನ್ನ ಬಾಯಲ್ಲೂ ಹೃದಯದಲ್ಲೂ ಇದೆ. ಅದೇ ನಾವು ನಿಮಗೆ ಬೋಧಿಸುವ ವಿಶ್ವಾಸದ ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇದಲ್ಲದೆ, “ದೇವರ ವಾಕ್ಯವು ನಿಮ್ಮ ಸಮೀಪದಲ್ಲೇ ಇದೆ. ಅದು ನಿಮ್ಮ ಬಾಯಲ್ಲಿಯೂ ನಿಮ್ಮ ಹೃದಯದಲ್ಲಿಯೂ ಇದೆ” ಎಂದು ಪವಿತ್ರ ಗ್ರಂಥವು ಹೇಳುತ್ತದೆ. ನಾವು ಜನರಿಗೆ ನಂಬಿಕೆಯ ಕುರಿತಾಗಿ ಸಾರುವ ವಾಕ್ಯವೇ ಅದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಇದು ಏನು ಹೇಳುತ್ತದೆ, “ತಕ್ಕ ವಾಕ್ಯವು ನಿನ್ನ ಬಳಿಯಲ್ಲಿ ಇದೆ, ಅದು ನಿನ್ನ ಬಾಯಿಯಲ್ಲಿಯೂ ಹೃದಯದಲ್ಲಿಯೂ ಇದೆ.” ಅದೇ ನಾವು ಸಾರುವ ವಿಶ್ವಾಸದ ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತೆ ಕಾಯ್ ಸಾಂಗ್ತಾ ಕಾಯ್ ಮಟ್ಲ್ಯಾರ್, ದೆವಾಚಿ ಬಾತ್ಮಿ ತುಜೆಕ್ಡೆ ಹಾಯ್, ತುಜ್ಯಾ ಹೊಟ್ಟಾ ವೈನಿ ಅನಿ ತುಜ್ಯಾ ಮನಾತ್ ಹಾಯ್” ತಿ ಖಲಿ ಕಾಯ್ ಮಟ್ಲ್ಯಾರ್, ತಿಚ್ ಅಮಿ ಸಾಂಗ್ತಲಿ ವಿಶ್ವಾಸಾಚಿ ಬಾತ್ಮಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:8
14 ತಿಳಿವುಗಳ ಹೋಲಿಕೆ  

ಈ ವಾಕ್ಯವು ನಿಮಗೆ ಸಮೀಪದಲ್ಲಿಯೇ ಇದೆ; ಇದು ನಿಮ್ಮ ಬಾಯಲ್ಲಿಯೂ ಹೃದಯದಲ್ಲಿಯೂ ಇದೆ; ಇದನ್ನು ಅನುಸರಿಸುವದಕ್ಕೆ ಅವಕಾಶವುಂಟಷ್ಟೆ.


ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದುವವನಾಗಿ ಕ್ರಿಸ್ತ ಯೇಸುವಿನ ಒಳ್ಳೇ ಸೇವಕನಾಗಿರುವಿ.


ಕರ್ತನ ಮಾತೋ ಸದಾಕಾಲವೂ ಇರುವದು ಎಂದು ಹೇಳಿದೆಯಷ್ಟೆ. ಆ ಮಾತು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.


ಒಂದು ಸಂಗತಿಯನ್ನು ಮಾತ್ರ ನಿವ್ಮಿುಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ? ಕೇಳಿ ನಂಬಿದ್ದರಿಂದಲೋ?


ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು ಯಾತರಿಂದಾಯಿತು? ನೀವು ನೇಮನಿಷ್ಠೆಗಳನ್ನನುಸರಿಸಿದ್ದರಿಂದಲೋ? ಕೇಳಿ ನಂಬಿದ್ದರಿಂದಲೋ? ನಂಬಿದ್ದರಿಂದಲೇ.


ಆದಕಾರಣ ಸಾರಿದ ವಾರ್ತೆಯು ನಂಬಿಕೆಗೆ ಆಧಾರ, ಆ ವಾರ್ತೆಗೆ ಕ್ರಿಸ್ತನ ವಾಕ್ಯವೇ ಆಧಾರ.


ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿಹೇಳಿದ್ದಾರೆ ಅಂದನು.


ನೀವು ಪುನರ್ಜನ್ಮ ಹೊಂದಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ, ನಾಶವಾಗದ ಬೀಜದಿಂದಲೇ ಉಂಟಾದದ್ದು. ಅದು ದೇವರ ಸದಾಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.


ಅವರು - ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆಹೊಂದುವಿ, ನಿನ್ನ ಮನೆಯವರೂ ರಕ್ಷಣೆಹೊಂದುವರು ಎಂದು ಹೇಳಿ ಅವನಿಗೂ ಅವನ ಮನೆಯಲ್ಲಿದ್ದವರೆಲ್ಲರಿಗೂ ದೇವರ ವಾಕ್ಯವನ್ನು ತಿಳಿಸಿದರು.


ಯೆಹೋವನು ಮನುಷ್ಯರ ಬಾಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ - ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು ಎಂದು ಹೇಳುತ್ತಾನೆ.


ಆತನು ಅದನ್ನು ಪ್ರತಿಷ್ಠೆಪಡಿಸುವದಕ್ಕಾಗಿ ತನ್ನನ್ನು ಒಪ್ಪಿಸಿಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು