Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:1 - ಕನ್ನಡ ಸತ್ಯವೇದವು J.V. (BSI)

1 ಹಾಗಾದರೆ ದೇವರು ತನ್ನ ಪ್ರಜೆಯನ್ನು ಬೇಡವೆಂದು ತಳ್ಳಿಬಿಟ್ಟದ್ದುಂಟೇ ಎಂದು ಕೇಳುತ್ತೇನೆ. ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹಾಗಾದರೆ ದೇವರು ತನ್ನ ಸ್ವಂತ ಜನರನ್ನು ಬೇಡವೆಂದು ತಿರಸ್ಕರಿಸಿದನೋ ಎಂದು ಕೇಳುತ್ತೇನೆ ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹಾಗಾದರೆ ದೇವರು ತಮ್ಮ ಜನರಾದ ಇಸ್ರಯೇಲರನ್ನು ತಿರಸ್ಕರಿಸಿದ್ದಾರೆ ಎಂದು ಹೇಳೋಣವೆ? ಎಂದಿಗೂ ಇಲ್ಲ. ನಾನು ಸಹ ಇಸ್ರಯೇಲನು, ಅಬ್ರಹಾಮನ ಸಂತತಿಯವನು; ಬೆನ್ಯಮೀನ್ ಮನೆತನಕ್ಕೆ ಸೇರಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಹಾಗಾದರೆ, “ದೇವರು ತನ್ನ ಜನರನ್ನು ತಿರಸ್ಕರಿಸಿದನೇ?” ಎಂದು ನಾನು ಕೇಳುತ್ತೇನೆ. ಇಲ್ಲ! ನಾನೂ ಒಬ್ಬ ಇಸ್ರೇಲನಾಗಿದ್ದೇನೆ. ನಾನು ಅಬ್ರಹಾಮನ ಕುಟುಂಬಕ್ಕೆ ಸೇರಿದವನಾಗಿದ್ದೇನೆ: ಬೆನ್ಯಾಮೀನನ ಕುಲದವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹಾಗಾದರೆ, ದೇವರು ತಮ್ಮ ಜನರನ್ನು ತ್ಯಜಿಸಿಬಿಟ್ಟಿದ್ದಾರೋ ಎಂದು ಕೇಳುತ್ತೇನೆ? ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲನೂ ಅಬ್ರಹಾಮನ ವಂಶದವನೂ ಬೆನ್ಯಾಮೀನನ ಕುಲದವನೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತಸೆ ಜಾಲ್ಯಾರ್ ಮಿಯಾ ಇಚಾರ್ತಾ: ದೆವಾನ್ ಅಪ್ನಾಚ್ಯಾ ಲೊಕಾಂಚೊ ತಿರಸ್ಕಾರ್ ಕರ್‍ಲ್ಯಾನ್ ಕಾಯ್? ಕನ್ನಾಚ್ ನಾ! ಮಿಯಾ ಸ್ವತಾಚ್ ಎಕ್ ಇಸ್ರಾಯೆಲಾಚೊ, ಮಾನುಸ್, ಅಬ್ರಾಹಾಮಾಚ್ಯಾ ಘರಾನ್ಯಾಚೊ ಮಾನುಸ್ ಬೆಂಜಾಮಿನಾಚ್ಯಾ ಕುಳಿಚೊ ಮಾನುಸ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:1
17 ತಿಳಿವುಗಳ ಹೋಲಿಕೆ  

ಇದನ್ನು ಬುದ್ಧಿಹೀನತೆಯಿಂದ ಹೇಳುತ್ತೇನೆ. ಅವರು ಇಬ್ರಿಯರೋ ನಾನೂ ಇಬ್ರಿಯನು; ಅವರು ಇಸ್ರಾಯೇಲ್ಯರೋ ನಾನೂ ಇಸ್ರಾಯೇಲ್ಯನು; ಅವರು ಅಬ್ರಹಾಮನ ವಂಶದವರೋ ನಾನೂ ಅದೇ ವಂಶದವನು;


ಯೆಹೋವನು ದಯದಿಂದ ನಿಮ್ಮನ್ನು ಸ್ವಕೀಯಜನವನ್ನಾಗಿ ಆರಿಸಿಕೊಂಡ ಮೇಲೆ ಆತನು ತನ್ನ ಮಹೋನ್ನತ ನಾಮದ ನಿವಿುತ್ತವಾಗಿ ನಿಮ್ಮನ್ನು ಕೈಬಿಡುವದೇ ಇಲ್ಲ.


ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು; ನಾನು ಇಸ್ರಾಯೇಲ್ ವಂಶದವನು, ಬೆನ್ಯಾಮೀನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು; ನೇಮನಿಷ್ಠೆಗಳನ್ನು ನೋಡಿದರೆ ನಾನು ಫರಿಸಾಯನು,


ನಾನು ಮೊದಲಿಂದಲೂ ಯೆರೂಸಲೇವಿುನಲ್ಲಿ ನನ್ನ ದೇಶದ ಜನರೊಳಗಿದ್ದುಕೊಂಡು ಬಾಲ್ಯದಿಂದ ಬದುಕಿದ ಬಗೆಯು ಎಲ್ಲಾ ಯೆಹೂದ್ಯರಿಗೆ ತಿಳಿದೇ ಅದೆ;


ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪಿತೃಗಳ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಿತನಾದೆನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ ನಾನು ಅಭಿಮಾನಿಯಾಗಿದ್ದೆನು.


ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನ ಮಾತಿಗೆ ಕಿವಿಗೊಡಲಿಲ್ಲ; ಅವರಿಗೆ ಜನಾಂಗಗಳಲ್ಲಿ ಅಲೆದಾಡುವ ಗತಿಯಾಗುವದು.


ಯೆಹೋವನು ತನ್ನ ಜನರನ್ನು ಬೇಡವೆಂದು ತಳ್ಳಿಬಿಡುವದಿಲ್ಲ; ತನ್ನ ಸ್ವಾಸ್ತ್ಯವನ್ನು ಕೈಬಿಡುವದಿಲ್ಲ.


ಶರೀರಸಂಬಂಧವಾಗಿ ಸ್ವಜನರಾಗಿರುವ ನನ್ನ ಸಹೋದರರಿಗೋಸ್ಕರ ನಾನೇ ಸಾಧ್ಯವಾದರೆ ಕ್ರಿಸ್ತನನ್ನು ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.


ಎಲ್ಲಾ ಮನುಷ್ಯರು ಸುಳ್ಳುಗಾರರಾದರೂ ದೇವರು ಸತ್ಯವಂತನೇ ಸರಿ. ನೀನು ಎಲ್ಲಾ ನುಡಿಗಳಲ್ಲಿ ನ್ಯಾಯಸ್ಥನೆಂದು ಕಾಣಿಸಿಕೊಳ್ಳಬೇಕು, ನಿನ್ನ ಮೇಲೆ ವ್ಯಾಜ್ಯ ನಡೆಯುವಾಗ ನೀನು ಗೆಲ್ಲಬೇಕು ಎಂದು ಬರೆದದೆ.


ಆತನು - ಇಸ್ರಾಯೇಲ್ಯರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು; ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣವನ್ನೂ ನನ್ನ ನಾಮಮಹತ್ತಿಗೋಸ್ಕರ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು ಎಂದು ಹೇಳಿದನು.


ಕರ್ತನು ಸದಾಕಾಲಕ್ಕೂ ಬಿಟ್ಟೇಬಿಡುವನೋ? ಆತನು ಪುನಃ ಪ್ರಸನ್ನನಾಗುವದಿಲ್ಲವೋ?


ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವದಕ್ಕೆ ಕೊಡುವನು ಅಂದನು.


ಹಾಗಾದರೆ ಅವರು ಬಿದ್ದೇ ಹೋಗುವಂತೆ ಎಡವಿದರೇನು ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಹುರುಡು ಹುಟ್ಟಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು