Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:12 - ಕನ್ನಡ ಸತ್ಯವೇದವು J.V. (BSI)

12 ಅವರು ಬಿದ್ದುಹೋದದ್ದು ಸರ್ವಲೋಕದ ಭಾಗ್ಯಕ್ಕೂ ಅವರು ಸೋತು ಹೋದದ್ದು ಅನ್ಯಜನಗಳ ಭಾಗ್ಯಕ್ಕೂ ಮಾರ್ಗವಾಗಿರಲಾಗಿ ಅವರ ಪೂರ್ಣ ಪುನಃಸ್ಥಾಪನೆಯು ಎಷ್ಟೋ ಹೆಚ್ಚಾಗಿ ಭಾಗ್ಯಕ್ಕೆ ಕಾರಣವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರು ಬಿದ್ದುಹೋದದ್ದು ಸರ್ವಲೋಕದ ಸೌಭಾಗ್ಯಕ್ಕೂ, ಅವರು ಸೋತುಹೋದದ್ದು ಅನ್ಯಜನಗಳ ಸಂಪತ್ತಿಗೂ ಮಾರ್ಗವಾಗಿರಲಾಗಿ ಅವರ ಪೂರ್ಣ ಪುನಃಸ್ಥಾಪನೆಯು ಪ್ರಪಂಚಕ್ಕೆ ಎಷ್ಟೋ ಹೆಚ್ಚಾದ ಭಾಗ್ಯಕ್ಕೆ ಕಾರಣವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವರ ಅಪರಾಧ ಜಗತ್ತಿಗೆಲ್ಲ ಸೌಭಾಗ್ಯವನ್ನೂ ಅವರ ಅಪಜಯವು ಇತರರಿಗೆಲ್ಲಾ ಆಶೀರ್ವಾದವನ್ನೂ ತರಲು ಕಾರಣವಾದರೆ, ಅವರ ಸಂಪೂರ್ಣ ಪರಿವರ್ತನೆ ಮತ್ತೆಷ್ಟೋ ಕಲ್ಯಾಣವನ್ನು ಉಂಟುಮಾಡಬೇಕಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೂದ್ಯರ ಅಪರಾಧವು ಜಗತ್ತಿಗೆ ಅಧಿಕವಾದ ಆಶೀರ್ವಾದಗಳನ್ನೂ ಅವರ ಅಪಜಯವು ಯೆಹೂದ್ಯರಲ್ಲದ ಜನರಿಗೆ ಅಧಿಕವಾದ ಆಶೀರ್ವಾದಗಳನ್ನೂ ತರಲು ಕಾರಣವಾದರೆ, ದೇವರ ಇಚ್ಛೆಗನುಸಾರವಾಗಿ ಯೆಹೂದ್ಯರೆಲ್ಲರು ಪರಿವರ್ತನೆ ಹೊಂದಿದಾಗ ಜಗತ್ತು ಮತ್ತಷ್ಟು ಅಗಾಧವಾದ ಆಶೀರ್ವಾದಗಳನ್ನು ಹೊಂದುವುದು ನಿಶ್ಚಯವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಅವರ ಅಪರಾಧವು ಜಗತ್ತಿಗೆ ಐಶ್ವರ್ಯವನ್ನು ಉಂಟುಮಾಡಿತು. ಅವರ ನಷ್ಟವೇ ಯೆಹೂದ್ಯರಲ್ಲದವರಿಗೆ ಐಶ್ವರ್ಯವನ್ನು ಉಂಟುಮಾಡುವುದಾದರೆ, ಅವರ ಪರಿಪೂರ್ಣತೆಯು ಇನ್ನೂ ಎಷ್ಟೋ ಹೆಚ್ಚಾದ ಐಶ್ವರ್ಯವನ್ನು ಉಂಟುಮಾಡಬಹುದಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜುದೆವ್ ಲೊಕಾಂಚ್ಯಾ ಪಾಪಾನ್ ಜಗಾ ವರ್ತಿ ಮೊಟಿ ಆರ್ಶಿವಾದಾ ಘೆವ್ನ್ ಯೆಲ್ಯಾನ್, ಅನಿ ತೆಂಚ್ಯಾ ಆತ್ಮಿಕ್ ಗರಿಬ್ಕಿನ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ವರ್‍ತಿ ಮೊಟೊ ಆಶಿರ್ವಾದ್ ಹಾನ್ಲಿನ್. ತಸೆಜಾಲ್ಯಾರ್ ಸಗ್ಳ್ಯಾ ಜುದೆವ್ ಲೊಕಾಕ್ನಿ ಧರ್ಲ್ಯಾರ್ ತಿ ಆಶಿರ್ವಾದಾ ಕವ್ಡಿ ಮೊಟಿ ರ್‍ಹಾತಿಲ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:12
15 ತಿಳಿವುಗಳ ಹೋಲಿಕೆ  

ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬದಾಗಿ ಎಣಿಸಿಕೊಳ್ಳದಂತೆ ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ; ಅದೇನಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವದು;


ಅನ್ಯಜನಗಳ ವಿಷಯವಾದ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ ತಿಳಿಸಲಿಕ್ಕೆ ಮನಸ್ಸು ಮಾಡಿಕೊಂಡನು. ಈ ಮರ್ಮವು ಏನಂದರೆ ಕ್ರಿಸ್ತನು ನಿಮ್ಮಲ್ಲಿದ್ದು ಪ್ರಭಾವದ ನಿರೀಕ್ಷೆಗೆ ಆಧಾರಭೂತನಾಗಿರುವದೇ.


ಯಾಕಂದರೆ ಇಸ್ರಾಯೇಲ್ಯರನ್ನು ತಳ್ಳುವದರಿಂದ ಲೋಕವು ದೇವರ ಸಂಗಡ ಸಮಾಧಾನವಾಗುವದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದುಬಂದಂತಾಗುವದಲ್ಲವೇ.


ನಾನು ಕ್ರಿಸ್ತನ ಅಪ್ರಮೇಯವಾದ ಐಶ್ವರ್ಯದ ವಿಷಯವಾದ ಶುಭಸಮಾಚಾರವನ್ನು ಅನ್ಯಜನರಿಗೆ ಪ್ರಸಿದ್ಧಿಪಡಿಸುವ ಹಾಗೆಯೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಮರೆಯಾಗಿದ್ದ ಮರ್ಮವು ಪ್ರಕಟವಾಗುವ ವಿಧ ಎಂಥದೆಂದು ತಿಳಿಸುವ ಹಾಗೆಯೂ ದೇವಜನರೊಳಗೆ ಅತ್ಯಲ್ಪನಾದ ನನಗೆ ಅನುಗ್ರಹಿಸೋಣವಾಯಿತು.


ಮತ್ತು ಪ್ರಭಾವ ಹೊಂದುವದಕ್ಕೆ ತಾನು ಮುಂದಾಗಿ ಸಿದ್ಧಮಾಡಿದ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.


ಯೆಹೋವನ ವರವಾದ ಇಬ್ಬನಿಯೂ ಹುಲ್ಲನ್ನು ಬೆಳೆಯಿಸುವ ಹದಮಳೆಗಳೂ ಹೇಗೆ ಮನುಷ್ಯರನ್ನು ಎದುರುನೋಡದೆ ಮಾನವರನ್ನು ನಿರೀಕ್ಷಿಸದೆ ಹಿತಕರವಾಗಿರುವವೋ ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವದು.


ಆ ದಿನದಲ್ಲಿ ಕರ್ತನು ತನ್ನ ಜನಶೇಷವನ್ನು ಬಿಡಿಸಿಕೊಳ್ಳುವದಕ್ಕೆ ಎರಡನೆಯ ಸಾರಿ ಕೈಹಾಕಿ ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್, ಸಮುದ್ರದ ಕರಾವಳಿ, ಈ ಸ್ಥಳಗಳಲ್ಲಿ ಉಳಿದವರನ್ನು ಬರಮಾಡಿಕೊಳ್ಳುವನು.


ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವವು; ನಾನು ನಿನ್ನ ಮಧ್ಯದಲ್ಲಿ ವಾಸಿಸುವೆನು; ಆಗ ಸೇನಾಧೀಶ್ವರ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬದು ನಿನಗೆ ಗೊತ್ತಾಗುವದು.


ಆಹಾ, ದೇವರ ಐಶ್ವರ್ಯವೂ ಜ್ಞಾನವೂ ವಿವೇಕವೂ ಎಷ್ಟೋ ಅಗಾಧ! ಆತನ ತೀರ್ಮಾನಗಳು ಪರಿಶೋಧನೆಗೆ ಎಷ್ಟೋ ಅಗಮ್ಯ! ಆತನ ಮಾರ್ಗಗಳು ಕಂಡುಹಿಡಿಯುವದಕ್ಕೆ ಎಷ್ಟೋ ಅಸಾಧ್ಯ!


ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಆ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಹೇಳಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು