Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:20 - ಕನ್ನಡ ಸತ್ಯವೇದವು J.V. (BSI)

20 ನೀನು ಹೇಳುವದು ನಿಜ; ಅವರು ನಂಬದೆಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನೀನು ಹೇಳುವುದು ನಿಜ. ಅವರು ನಂಬದೇ ಹೋದ್ದದರಿಂದ ಮುರಿದುಹಾಕಲ್ಪಟ್ಟರು. ನೀನು ನಿಂತಿರುವುದು ನಂಬಿಕೆಯಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದು ಸರಿಯೆ. ಅವರ ಅವಿಶ್ವಾಸದ ಕಾರಣದಿಂದ ಅವರನ್ನು ಕಡಿದುಹಾಕಲಾಯಿತು. ನೀನು ದೃಢವಾಗಿ ನಿಂತಿರುವುದಾದರೋ ವಿಶ್ವಾಸದ ಪ್ರಯುಕ್ತವೇ. ಆದ್ದರಿಂದ ಗರ್ವಪಡಬೇಡ. ಭಯಭಕ್ತಿಯಿಂದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅದು ಸತ್ಯ. ಆ ಕೊಂಬೆಗಳು ಮುರಿಯಲ್ಪಟ್ಟವು. ಅದಕ್ಕೆ ಅಪನಂಬಿಕೆಯೇ ಕಾರಣ. ನೀವು ಆ ಮರದ ಒಂದು ಭಾಗವಾದದ್ದು ನಿಮ್ಮ ನಂಬಿಕೆಯಿಂದಲೇ. ಆದ್ದರಿಂದ ಗರ್ವಪಡಬೇಡ, ಭಯದಿಂದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅದು ನಿಜವೆ, ಆದರೆ ಅವರ ಅವಿಶ್ವಾಸದಿಂದಲೇ ಅವರನ್ನು ಮುರಿದು ಹಾಕಲಾಯಿತು. ನೀನಾದರೋ ವಿಶ್ವಾಸದಿಂದಲೇ ಇನ್ನೂ ನಿಂತಿರುವೆ. ಗರ್ವಪಡದೆ ಭಯದಿಂದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತೆ ಖರೆ ತೆನಿ ವಿಶ್ವಾಸ್ ಕರುಕ್‍ನ್ಯಾತ್ ತೆಚೆಸಾಟ್ನಿ ತೆಂಕಾ ಕಾತ್ರುನ್ ಟಾಕುನ್ ಹೊಲ್ಲೆ , ತಿಯಾ ತ್ಯಾ ಜಾಗ್ಯಾರ್ ಹಾಸ್ ಕಶ್ಯಾಕ್ ತಿಯಾ ವಿಶ್ವಾಸ್ ಕರ್‍ಲೆಯ್ ಗರುಕಿ ಕರುನ್ ದಾಕ್ವುನಕ್ಕೊ; ತೆಚ್ಯಾ ಬದ್ಲಾಕ್ ತುಕಾ ಭಿಂಯೆ ರ್‍ಹಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:20
43 ತಿಳಿವುಗಳ ಹೋಲಿಕೆ  

ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರ್ರಿ, ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.


ನಾವು ನಂಬಿಕೆಯ ವಿಷಯದಲ್ಲಿಯೂ ನಿಮ್ಮ ಮೇಲೆ ದೊರೆತನಮಾಡುವವರೆಂದು ನನ್ನ ತಾತ್ಪರ್ಯವಲ್ಲ; ನಿಮ್ಮ ಸಂತೋಷಕ್ಕೆ ನಾವು ಸಹಾಯಕರಾಗಿದ್ದೇವೆ; ನಂಬಿಕೆಯ ವಿಷಯದಲ್ಲಿ ದೃಢ ನಿಂತಿದ್ದೀರಿ.


ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳದಂತೆ ಎಚ್ಚರಿಕೆಯಾಗಿರಲಿ.


ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರಲಾಗಿ ಈ ಲೋಕದಲ್ಲಿ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯುಳ್ಳವರಾಗಿ ಕಳೆಯಿರಿ.


ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಕೇಳಿದಂತೆ ಈಗಲೂ ಕೇಳಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.


ಸಹೋದರರೇ, ನೋಡಿಕೊಳ್ಳಿರಿ, ಜೀವಸ್ವರೂಪನಾದ ದೇವರನ್ನು ಬಿಟ್ಟುಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.


ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ


ಆತನಲ್ಲಿ ಬೇರೂರಿಕೊಂಡು ಭಕ್ತಿವೃದ್ಧಿಯನ್ನು ಹೊಂದಿ ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರಮಾಡುವವರಾಗಿರಿ.


ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ, ಅದು ನಿನಗೆ ಆಧಾರವಾಗಿದೆಯಷ್ಟೆ.


ನಾವು ವಿತರ್ಕಗಳನ್ನೂ ದೇವಜ್ಞಾನವನ್ನು ವಿರೋಧಿಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದ ಎಲ್ಲಾ ಕೊತ್ತಲಗಳನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು


ಇಗೋ, ಆ ದುಷ್ಟನ ಅಂತರಾತ್ಮವು ಉಬ್ಬಿಕೊಂಡಿದೆ, ಯಥಾರ್ಥವಲ್ಲ; ನೀತಿವಂತನೋ ತನ್ನ ನಂಬಿಕೆಯಿಂದಲೇ ಬದುಕುವನು.


ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, [ನನ್ನ ಕೈಯಿಂದಲೇ] ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ಭಯದಿಂದ ನಡೆದುಕೊಳ್ಳುವವನು ಧನ್ಯನು; ಕಠಿನಹೃದಯನು ಕೇಡಿಗೆ ಸಿಕ್ಕಿಬೀಳುವನು.


ಅವಳು ಎಷ್ಟು ಮಟ್ಟಿಗೆ ತನ್ನನ್ನು ಘನಪಡಿಸಿಕೊಂಡು ಭೋಗಿನಿಯಾಗಿದ್ದಾಳೋ ಅಷ್ಟು ಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ. ಅವಳು ತನ್ನ ಹೃದಯದಲ್ಲಿ - ನಾನು ರಾಣಿಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ,


ನೀನು ನಿನ್ನ ವಿಷಯದಲ್ಲಿ - ನಾನು ಐಶ್ವರ್ಯವಂತನು, ಸಂಪನ್ನನು, ಒಂದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು, ಕುರುಡನು, ಬಟ್ಟೆಯಿಲ್ಲದವನು ಆಗಿರುವದನ್ನು ತಿಳಿಯದೆ ಇದ್ದೀ.


ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಾನು ಸಂಕ್ಷೇಪವಾಗಿ ಬರೆದು ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ.


ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂದು ನಿಮಗೆ ತಿಳಿದದೆಯಲ್ಲಾ.


ಆತನು ನಮ್ಮ ಮೇಲೆ ಅತಿಶಯವಾದ ಕೃಪೆಯನ್ನು ಇಡುತ್ತಾನೆ. ಆದುದರಿಂದ - ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ ಎಂದು ಶಾಸ್ತ್ರವು ಹೇಳುತ್ತದೆ.


ದೇವರು ಒಬ್ಬನೇ ಎಂದು ನೀನು ನಂಬುವವನು. ಹಾಗೆ ನಂಬುವದು ಒಳ್ಳೇದು. ದೆವ್ವಗಳು ಕೂಡ ಹಾಗೆಯೇ ನಂಬಿ ಹೆದರಿ ನಡುಗುತ್ತವೆ.


ಆದದರಿಂದ ನಾವು ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸಪಡೋಣ; ನಮ್ಮಲ್ಲಿ ಒಬ್ಬರಾದರೂ ಅವರ ಅವಿಧೇಯತ್ವವನ್ನು ಅನುಸರಿಸುವವರಾಗಬಾರದು.


ಹೀಗಿರಲಾಗಿ ಆ ವಿಶ್ರಾಂತಿಯಲ್ಲಿ ಕೆಲವರು ಸೇರಬೇಕೆಂಬುವ ಮಾತು ಇನ್ನೂ ಇರುವದರಿಂದಲೂ ಮೊದಲು ಶುಭವರ್ತಮಾನವನ್ನು ಕೇಳಿದವರು ಅವಿಧೇಯರಾದ ಕಾರಣ ಅದರಲ್ಲಿ ಸೇರದೆಹೋದದ್ದರಿಂದಲೂ


ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.


ಯಾವದು ದೇವರೆನಿಸಿಕೊಳ್ಳುತ್ತದೋ ಯಾವದು ಪೂಜೆ ಹೊಂದುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಹೇಳಿಕೊಂಡು ದೇವರ ಗರ್ಭಗುಡಿಯಲ್ಲೇ ಕೂತುಕೊಳ್ಳುತ್ತಾನೆ.


ಅವರಲ್ಲಿ ಕೆಲವರು ನಂಬದೆ ಹೋಗಿದ್ದರೇನು? ಅವರು ನಂಬದೆ ಹೋದದರಿಂದ ದೇವರು ವಚನಕ್ಕೆ ತಪ್ಪುವವನಾದನೋ? ಎಂದಿಗೂ ಇಲ್ಲ;


ಅವರು ಎದುರಿಸಿ ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ - ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಇಂದಿನಿಂದ ಶುದ್ಧಮನಸ್ಸುಳ್ಳವನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ


ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು, ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.


ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೀಡಾಗವು; ಆಗ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.


ಅರುವತ್ತೈದು ವರುಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು. ನಿಮಗೆ ನಂಬಿಕೆಯು ಸ್ಥಿರವಿಲ್ಲದಿದ್ದರೆ ನಿಮಗೆ ಸ್ಥಿರತೆಯೇ ಇಲ್ಲ ಎಂಬದೇ.


ಸಾಮಾನ್ಯರ ಗರ್ವವು ಕುಗ್ಗುವದು, ಮುಖಂಡರ ಅಹಂಕಾರವೂ ತಗ್ಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಸಾಮಾನ್ಯರ ಗರ್ವದೃಷ್ಟಿಯು ತಗ್ಗಿಹೋಗುವದು, ಮುಖಂಡರ ಅಹಂಕಾರವು ಕುಗ್ಗಿಹೋಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ತನ್ನಲ್ಲೇ ಭರವಸವಿಡುವವನು ಮೂಢನು; ಜ್ಞಾನದಿಂದ ನಡೆಯುವವನು ಉದ್ಧಾರವನ್ನು ಪಡೆಯುವನು.


ಯೆಹೋವನು ಮಹೋನ್ನತನು; ಆದರೂ ದೀನರನ್ನು ಲಕ್ಷಿಸುತ್ತಾನೆ; ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ.


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಅವರು ಹೊರಡುವಾಗ ಯೆಹೋಷಾಫಾಟನು ನಿಂತು ಅವರಿಗೆ - ಯೆಹೂದ್ಯರೇ, ಯೆರೂಸಲೇವಿುನವರೇ, ನನ್ನ ಮಾತನ್ನು ಕೇಳಿರಿ. ಯೆಹೋವನಲ್ಲಿ ಭರವಸವಿಡಿರಿ, ಆಗ ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ ಎಂದು ಹೇಳಿದನು.


ಎಚ್ಚರವಾಗಿರಿ, ಕ್ರಿಸ್ತನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ.


ಗರ್ವಪಡಬೇಡ, ಭಯದಿಂದಿರು; ದೇವರು ಹುಟ್ಟುಕೊಂಬೆಗಳನ್ನು ಉಳಿಸದೆ ಇದ್ದ ಮೇಲೆ ನಿನ್ನನ್ನೂ ಉಳಿಸುವದಿಲ್ಲ.


ದೇವರು ನನಗೆ ಕೃಪೆಮಾಡಿದ ಸೇವೆಯನ್ನು ನಡಿಸಿ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ವಿಶ್ವಾಸ ಬಲವನ್ನು ಕೊಟ್ಟನೋ ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ಭಾವಿಸಿಕೊಳ್ಳಬೇಕು.


ಸಹೋದರರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನಿಮ್ಮ ನೆನಪಿಗೆ ತರುತ್ತೇನೆ; ನೀವು ಅದನ್ನು ಸ್ವೀಕರಿಸಿದಿರಿ, ಅದರಲ್ಲಿ ನಿಂತಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು