Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:22 - ಕನ್ನಡ ಸತ್ಯವೇದವು J.V. (BSI)

22 ಆದದರಿಂದ ದೇವರ ದಯೆಯನ್ನೂ ಕಾಠಿಣ್ಯವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನಿನ್ನ ಕಡೆಗೆ ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆ; ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದ್ದರಿಂದ ದೇವರ ದಯೆಯನ್ನೂ, ದಂಡನೆಯನ್ನು ನೋಡು; ಬಿದ್ದವರಿಗೆ ದಂಡನೆಯನ್ನೂ, ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆಯನ್ನು ಹೊಂದುವಿ. ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇಲ್ಲ, ದೇವರ ಕರುಣೆ ಹಾಗೂ ಕಠಿಣತೆಯನ್ನು ಗಮನಿಸು. ಬಿದ್ದವರತ್ತ ಕಾಠಿಣ್ಯವನ್ನೂ ನಿನ್ನತ್ತ ಕರುಣೆಯನ್ನೂ ತೋರಿಸಿದ್ದಾರೆ. ನೀನು ಅವರ ಕರುಣೆಯನ್ನು ಆಶ್ರಯಿಸಿ ನಡೆಯಬೇಕು. ಇಲ್ಲವಾದರೆ ನಿನ್ನನ್ನು ಆ ರೆಂಬೆಗಳಂತೆ ಕಡಿದುಹಾಕಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದ್ದರಿಂದ ದೇವರು ದಯೆ ಉಳ್ಳವನಾಗಿದ್ದರೂ ಬಹುಕಠಿಣನೂ ಆಗಿದ್ದಾನೆ ಎಂಬುದನ್ನು ಗಮನಿಸು. ದೇವರು ತನ್ನನ್ನು ಹಿಂಬಾಲಿಸದಿರುವ ಜನರನ್ನು ದಂಡಿಸುತ್ತಾನೆ. ಆದರೆ ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡಿದ್ದರೆ, ದೇವರು ನಿನಗೆ ದಯಾಳುವಾಗಿರುತ್ತಾನೆ. ಇಲ್ಲವಾದರೆ, ನಿನ್ನನ್ನು ಮರದಿಂದ ಕಡಿದುಹಾಕಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದ್ದರಿಂದ, ದೇವರ ದಯೆಯನ್ನೂ ಕಾಠಿಣ್ಯವನ್ನೂ ನೋಡು. ಬಿದ್ದವರ ಕಡೆಗೆ ಅವರ ಕಾಠಿಣ್ಯವಿದೆ, ನೀನು ದೇವರ ದಯೆಯಲ್ಲಿಯೇ ಮುಂದುವರಿಯುವುದಾದರೆ ನಿನ್ನ ಮೇಲೆ ದೇವರ ದಯೆಯಿರುವುದು. ಇಲ್ಲದೆ ಹೋದರೆ, ನೀನು ಕೂಡ ಕಡಿದುಹಾಕಲಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಹಿತ್ತೆ ಅಮ್ಕಾ ದೆವಾಚಿ ದಯಾ ಕಶಿ ಹಾಯ್, ತೆಚೆ ಕಟೊರ್‍ಪಾನ್‍ಬಿ ಕಶೆ ಹಾಯ್ ಮನುನ್ ದಿಸುನ್ ಯೆತಾ. ವಿಶ್ವಾಸಾತ್ ಪಡುನ್ ಗೆಲ್ಲ್ಯಾಕ್ನಿ ತೊ ಕಟೊರ್, ಖರೆ ತಿಯಾ ತೆಚ್ಯಾ ದಯಾಳ್‍ಪಾನಾಚ್ಯಾ ಅಸ್ರ್ಯಾತ್ ಹಾಸ್ ಜಾಲ್ಯಾರ್ ತುಕಾ ತೊ ದಯಾಳ್‍ಪಾನ್ ದಾಕ್ವುತಾ, ನಾಹೊಲ್ಯಾರ್ ತುಕಾಬಿ ತೊ ಕಾತ್ರುನ್ ಟಾಕ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:22
33 ತಿಳಿವುಗಳ ಹೋಲಿಕೆ  

ಮೊದಲಿಂದಿರುವ ಭರವಸವನ್ನು ಅಂತ್ಯದವರೆಗೂ ದೃಢವಾಗಿ ಹಿಡಿದುಕೊಳ್ಳುವ ಪಕ್ಷಕ್ಕೆ ಕ್ರಿಸ್ತನಲ್ಲಿ ಪಾಲುಗಾರರಾಗಿದ್ದೇವಲ್ಲಾ!


ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇ ತನಕ ದೃಢವಾಗಿ ಹಿಡಿದುಕೊಂಡವರಾದರೆ ನಾವೇ ದೇವರ ಮನೆಯವರು.


ನಾನು ಯಾವ ಸಂಗತಿಯನ್ನು ಹೇಳಿ ನಿಮಗೆ ಸುವಾರ್ತೆಯನ್ನು ತಿಳಿಸಿದೆನೋ ನೀವು ಅದನ್ನು ಗಟ್ಟಿಯಾಗಿ ಹಿಡುಕೊಂಡರೆ ಮತ್ತು ನಿಮ್ಮ ನಂಬಿಕೆಯು ನಿರಾಧಾರವಾಗದ ಪಕ್ಷಕ್ಕೆ ಆ ಸುವಾರ್ತೆಯಿಂದ ನಿಮಗೆ ರಕ್ಷಣೆಯಾಗುತ್ತದೆ.


ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲಕೊಡುವ ಹಾಗೆ ಅದನ್ನು ಶುದ್ಧಿಮಾಡುತ್ತಾನೆ.


ಆದದರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ದೇವರ ಕಡೆಗೆ ತಿರುಗಿಕೋ. ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ದೇವರ ಕಡಗೆ ತಿರುಗಿಕೊಳ್ಳದೆ ಹೋದರೆ ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು.


ಒಳ್ಳೇದನ್ನು ಮಾಡುವದರಲ್ಲಿ ಬೇಸರಗೊಳ್ಳದೆ ಇರೋಣ. ಯಾಕಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.


ಯಾರು ಪ್ರಭಾವ ಮಾನ ನಿರ್ಲಯತ್ವಗಳನ್ನು ಹೊಂದಬೇಕೆಂದು ಒಳ್ಳೇದನ್ನು ಬೇಸರಗೊಳ್ಳದೆ ಮಾಡುತ್ತಾರೋ ಅವರಿಗೆ ನಿತ್ಯಜೀವವನ್ನು ಕೊಡುವನು.


ನಮ್ಮ ನಿರೀಕ್ಷೆಯನ್ನು ಕುರಿತು ನಾವು ಮಾಡಿದ ಪ್ರತಿಜ್ಞೆಯನ್ನು ನಿಶ್ಚಂಚಲವಾಗಿ ಪರಿಗ್ರಹಿಸೋಣ; ವಾಗ್ದಾನ ಮಾಡಿದಾತನು ನಂಬಿಗಸ್ತನು.


ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕೆಂಬದಾಗಿ ಎಚ್ಚರಿಕೆಯ ಮಾತನ್ನು ಹೇಳಿ ಕ್ರಿಸ್ತನಂಬಿಕೆಯಲ್ಲಿ ಸ್ಥಿರವಾಗಿರ್ರಿ ಎಂದು ಅವರನ್ನು ಧೈರ್ಯಗೊಳಿಸಿದರು.


ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ - ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡವರಾದರೆ ನಿಜವಾಗಿ ನನ್ನ ಶಿಷ್ಯರಾಗಿದ್ದು ಸತ್ಯವನ್ನು ತಿಳಿದುಕೊಳ್ಳುವಿರಿ;


ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಮಗೆ ಜೀವಕಳೆ.


ಅವನು ಒಳ್ಳೆಯವನೂ ಪವಿತ್ರಾತ್ಮಭರಿತನೂ ನಂಬಿಕೆಯಿಂದ ತುಂಬಿದವನೂ ಆಗಿದ್ದನು. ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು - ನೀವು ದೃಢಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರ್ರಿ ಎಂದು ಅವರೆಲ್ಲರಿಗೆ ಬುದ್ಧಿ ಹೇಳಿದನು.


ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ಒಳ್ಳೆಯ ಹೃದಯದಲ್ಲಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ; ಇವರೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವವರು.


ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವದು, ನಿಮ್ಮ ಎಲುಬುಗಳು ಹಸಿಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.


ಆದದರಿಂದ ನಾನು ಇನ್ನು ತಡೆಯಲಾರದೆ ಒಂದು ವೇಳೆ ಶೋಧಕನು ನಿಮ್ಮನ್ನು ಶೋಧಿಸಿದ್ದರಿಂದ ನಮ್ಮ ಪ್ರಯಾಸವು ವ್ಯರ್ಥವಾಯಿತೋ ಏನೋ ಎಂದು ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳಿದುಕೊಳ್ಳುವದಕ್ಕೆ ಅವನನ್ನು ಕಳುಹಿಸಿದೆನು.


ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿ ದುಷ್ಟನು ನಡಿಸುವ ದುರಾಚಾರಗಳನ್ನೆಲ್ಲಾ ನಡಿಸಿದರೆ ಅವನು ಬಾಳುವನೋ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.


ಇದಲ್ಲದೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿ ನಾನು ಅವನ ಮುಂದೆ ಒಡ್ಡಿದ ಆಟಂಕವನ್ನು ಎಡವಿದರೆ ಅವನು ಸತ್ತೇ ಸಾಯುವನು; ನೀನು ಅವನನ್ನು ಎಚ್ಚರಿಸದೆಹೋದ ಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಸುಕೃತ್ಯಗಳು ಲೆಕ್ಕಕ್ಕೆ ಬಾರವು; ಅವನ ಮರಣಕ್ಕಾಗಿ ನಿನಗೇ ಮುಯ್ಯಿತೀರಿಸುವೆನು.


ಅವರು ನಮ್ಮನ್ನು ಬಿಟ್ಟು ಹೊರಟುಹೋದರು, ಆದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು, ಆದರೆ ಅವರು ನಮ್ಮನ್ನು ಬಿಟ್ಟುಹೋದದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲವೆಂಬದು ಸ್ಪಷ್ಟವಾಗಿ ತೋರಬಂತು.


ಸದ್ಭಕ್ತರಿಗೋಸ್ಕರ ನೀನು ಇಟ್ಟುಕೊಂಡಿರುವ ಮೇಲೂ ಆಶ್ರಿತರಿಗೋಸ್ಕರ ನೀನು ಎಲ್ಲರ ಮುಂದೆ ಮಾಡಿದ ಉಪಕಾರಗಳೂ ಎಷ್ಟೋ ವಿಶೇಷವಾಗಿವೆ.


ಗರ್ವಪಡಬೇಡ, ಭಯದಿಂದಿರು; ದೇವರು ಹುಟ್ಟುಕೊಂಬೆಗಳನ್ನು ಉಳಿಸದೆ ಇದ್ದ ಮೇಲೆ ನಿನ್ನನ್ನೂ ಉಳಿಸುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು