Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:33 - ಕನ್ನಡ ಸತ್ಯವೇದವು J.V. (BSI)

33 ಆಹಾ, ದೇವರ ಐಶ್ವರ್ಯವೂ ಜ್ಞಾನವೂ ವಿವೇಕವೂ ಎಷ್ಟೋ ಅಗಾಧ! ಆತನ ತೀರ್ಮಾನಗಳು ಪರಿಶೋಧನೆಗೆ ಎಷ್ಟೋ ಅಗಮ್ಯ! ಆತನ ಮಾರ್ಗಗಳು ಕಂಡುಹಿಡಿಯುವದಕ್ಕೆ ಎಷ್ಟೋ ಅಸಾಧ್ಯ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಹೌದು, ದೇವರ ಐಶ್ವರ್ಯವು ಎಷ್ಟೋ ಅಪಾರವಾಗಿದೆ! ದೇವರ ವಿವೇಕಕ್ಕೂ ಜ್ಞಾನಕ್ಕೂ ಕೊನೆಯೇ ಇಲ್ಲ! ದೇವರು ನಿರ್ಧರಿಸುವ ಸಂಗತಿಗಳನ್ನು ಯಾವನೂ ವಿವರಿಸಲಾರನು. ದೇವರ ಮಾರ್ಗಗಳನ್ನು ಯಾವನೂ ಅರ್ಥಮಾಡಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆಹಾ! ದೇವರ ಐಶ್ವರ್ಯ, ಜ್ಞಾನ ಮತ್ತು ವಿವೇಕಗಳು ಎಷ್ಟು ಆಳವಾದವುಗಳು! ದೇವರ ತೀರ್ಮಾನಗಳು ಪರೀಶೀಲಿಸಲು ಅಸಾಧ್ಯವಾದದ್ದು! ದೇವರ ಮಾರ್ಗಗಳನ್ನು ಕಂಡುಹಿಡಿಯುವುದು ಅಪರಿಮಿತವಾದದ್ದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ದೆವಾಚಿ ಸಂಪತ್ತ್ ಕವ್ಡಿ ಮೊಟಿ!‍ ತೆಚಿ ಬುದ್ದ್ ಅನಿ ಶಾನ್‍ಪಾನ್ ಕವ್ಡೆ ಮೊಟೆ! ತೆನಿ ಘೆಟಲ್ಲ್ಯಾ ನಿರ್ದಾರಾಂಚ್ಯಾ ವಿಶಯಾತ್ನಿ ಸೊಡ್ಸುನ್ ಸಾಂಗ್ತಲೊ ಕೊನ್ ಹಾಯ್? ತೆಚ್ಯಾ ವಾಟಾಂಚ್ಯಾ ವಿಶಯಾತ್ ಕಳ್ವುನ್ ಘೆತಲೊ ಕೊನ್ ಹಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:33
38 ತಿಳಿವುಗಳ ಹೋಲಿಕೆ  

ಆತನು ಅಪ್ರಮೇಯ ಮಹಾಕಾರ್ಯಗಳನ್ನೂ ಅಸಂಖ್ಯವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ;


ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ; ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ.


ಆತನ ಅಪಾರವಾದ ದಯಾ ಸಹನ ದೀರ್ಘಶಾಂತಿಗಳನ್ನು ಅಸಡ್ಡೆಮಾಡುತ್ತೀಯಾ? ಮನಸ್ಸನ್ನು ಬೇರೆಮಾಡಿಕೊಳ್ಳುವದಕ್ಕೆ ದೇವರ ಉಪಕಾರವು ನಿನ್ನನ್ನು ಪ್ರೇರಿಸುತ್ತದೆಂಬದು ನಿನಗೆ ಗೊತ್ತಿಲ್ಲವೇ?


ಇಂಥ ಸರ್ವಶಕ್ತನನ್ನು ನಾವು ಕಂಡುಹಿಡಿಯಲಾರೆವು; ಆತನ ಪರಾಕ್ರಮವು ಬಹಳ; ಆತನು ನ್ಯಾಯವನ್ನಾಗಲಿ ಪರಿಪೂರ್ಣಧರ್ಮವನ್ನಾಗಲಿ ಕುಂದಿಸುವದಿಲ್ಲ.


ದೇವರು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ಅನಾದಿಕಾಲದಿಂದ ಮಾಡಿದ ಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ ಅಧಿಕಾರಗಳಿಗೂ ಈಗ ಕ್ರೈಸ್ತ ಸಭೆಯ ಮೂಲಕ ಗೊತ್ತಾಗಬೇಕೆಂಬದನ್ನು ಉದ್ದೇಶಿಸಿದ್ದನು.


ಒಂದೊಂದು ವಸ್ತುವನ್ನು ಸಮಯಕ್ಕೆ ತಕ್ಕ ಹಾಗೆ ಅಂದವಾಗಿ ನಿರ್ಮಿಸಿದ್ದಾನೆ; ಇದಲ್ಲದೆ ಮನುಷ್ಯರ ಹೃದಯದಲ್ಲಿ ಅನಂತಕಾಲದ ಯೋಚನೆಯನ್ನು ಇಟ್ಟಿದ್ದಾನೆ; ಆದರೂ ದೇವರು ಆದ್ಯಂತವಾಗಿ ನಡಿಸುತ್ತಿರುವ ಕೆಲಸವನ್ನು ಅವರು ಗ್ರಹಿಸಲಾರದಂತೆ ಮಾಡಿದ್ದಾನೆ.


ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀ.


ಈತನು ನಮಗೋಸ್ಕರ ತನ್ನ ರಕ್ತವನ್ನು ಸುರಿಸಿದ್ದರಿಂದ ನಮ್ಮ ಅಪರಾಧಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು. ಇದು ದೇವರ ಕೃಪಾತಿಶಯವೇ.


ಅನ್ಯಜನಗಳ ವಿಷಯವಾದ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ ತಿಳಿಸಲಿಕ್ಕೆ ಮನಸ್ಸು ಮಾಡಿಕೊಂಡನು. ಈ ಮರ್ಮವು ಏನಂದರೆ ಕ್ರಿಸ್ತನು ನಿಮ್ಮಲ್ಲಿದ್ದು ಪ್ರಭಾವದ ನಿರೀಕ್ಷೆಗೆ ಆಧಾರಭೂತನಾಗಿರುವದೇ.


ಮತ್ತು ಪ್ರಭಾವ ಹೊಂದುವದಕ್ಕೆ ತಾನು ಮುಂದಾಗಿ ಸಿದ್ಧಮಾಡಿದ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.


ಮುಗಿಲೂ ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ನೀತಿನ್ಯಾಯಗಳು ಆತನ ಸಿಂಹಾಸನದ ಅಸ್ತಿವಾರ.


ನೀನು ಸಮುದ್ರದಲ್ಲಿ ಮಾರ್ಗಮಾಡಿದಿ; ಮಹಾಜಲರಾಶಿಗಳನ್ನು ದಾಟಿದಿ; ನಿನ್ನ ಹೆಜ್ಜೆಯ ಗುರುತು ಕಾಣಲಿಲ್ಲ.


ಆಹಾ, ಈ ಅದ್ಭುತಗಳು ಆತನ ಮಾರ್ಗಗಳ ಕಟ್ಟಕಡೆಯಾಗಿವೆ. ಆತನ ವಿಷಯವಾಗಿ ಸೂಕ್ಷ್ಮಶಬ್ದವನ್ನು ಮಾತ್ರ ಕೇಳಿದ್ದೇವೆ, ಆತನ ಪ್ರಾಬಲ್ಯದ ಘನಗರ್ಜನೆಯನ್ನು ಯಾರು ಗ್ರಹಿಸಬಲ್ಲರು?


ಮುಂದಣ ಯುಗಗಳಲ್ಲಿ ತೋರಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ ಪರಲೋಕದಲ್ಲಿ ಆತನೊಂದಿಗೆ ಕೂಡ್ರಿಸಿದ್ದಾನೆ.


ಭೂನಿವಾಸಿಗಳೆಲ್ಲರೂ [ಆತನ ದೃಷ್ಟಿಯಲ್ಲಿ] ಏನೂ ಅಲ್ಲದಂತಿದ್ದಾರೆ, ಪರಲೋಕಸೈನ್ಯದವರಲ್ಲಿಯೂ ಭೂಲೋಕದವರಲ್ಲಿಯೂ ತನ್ನ ಇಚ್ಫಾನುಸಾರ ನಡೆಯುತ್ತಾನೆ; ಯಾರೂ ಆತನ ಕೈಯನ್ನು ಹಿಂದಕ್ಕೆ ತಳ್ಳಲಾರರು, ನೀನು ಏನು ಮಾಡುತ್ತೀ ಎಂದು ಯಾರೂ ಕೇಳಲಾರರು.


ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯವು; ಅವು ಅಸಂಖ್ಯಾತವಾಗಿವೆ.


ಅಪ್ರಮೇಯ ಮಹಾಕಾರ್ಯಗಳನ್ನೂ ಅಸಂಖ್ಯವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ.


ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲ ಹೊಂದಿದವರಾಗುವ ಹಾಗೆಯೂ


ನಾನು ಕ್ರಿಸ್ತನ ಅಪ್ರಮೇಯವಾದ ಐಶ್ವರ್ಯದ ವಿಷಯವಾದ ಶುಭಸಮಾಚಾರವನ್ನು ಅನ್ಯಜನರಿಗೆ ಪ್ರಸಿದ್ಧಿಪಡಿಸುವ ಹಾಗೆಯೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಮರೆಯಾಗಿದ್ದ ಮರ್ಮವು ಪ್ರಕಟವಾಗುವ ವಿಧ ಎಂಥದೆಂದು ತಿಳಿಸುವ ಹಾಗೆಯೂ ದೇವಜನರೊಳಗೆ ಅತ್ಯಲ್ಪನಾದ ನನಗೆ ಅನುಗ್ರಹಿಸೋಣವಾಯಿತು.


ಆಕಾಶವು ಉನ್ನತ, ಭೂವಿುಯು ಅಗಾಧ, ರಾಜರ ಹೃದಯವು ಅಗೋಚರ.


ನೀವು ದೇವರ ಪ್ರೀತಿಯಲ್ಲಿ ನೆಲೆಗೊಂಡು ನಿಂತು ಅದರ ಅಗಲ ಉದ್ದ ಎತ್ತರ ಆಳ ಎಷ್ಟೆಂಬದನ್ನು ದೇವಜನರೆಲ್ಲರೊಂದಿಗೆ ಗ್ರಹಿಸಲೂ


ಆತನಿಗೆ ಹೇಳತಕ್ಕದ್ದನ್ನು ನಮಗೆ ನೀನೇ ತಿಳಿಸು, ಅಂಧಕಾರವು ನಮಗೆ ಕವಿದಿರುವದರಿಂದ ವಾಕ್ಯವನ್ನು ಸರಿಪಡಿಸಿಕೊಳ್ಳಲಾರೆವು.


ಆತನು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ದಯಪಾಲಿಸನೆಂಬದಾಗಿ ನೀನು ಆತನೊಂದಿಗೆ ವ್ಯಾಜ್ಯವಾಡುವದೇಕೆ?


ದೇವರ ಆಲೋಚನಾಸಭೆಯಲ್ಲಿದ್ದುಕೊಂಡು ಅಲ್ಲಿ ಹೇಳಿದ್ದನ್ನು ಕೇಳಿದಿಯೇನೋ? ಜ್ಞಾನವನ್ನೆಲ್ಲಾ ನಿನ್ನ ಕಡೆಗೆ ಸೆಳೆದುಕೊಂಡಿದ್ದೀಯಾ?


ಇಂಥ ಜ್ಞಾನವು ನನಗೆ ಬಹು ಆಶ್ಚರ್ಯವಾಗಿದೆ; ಅದು ಉನ್ನತವಾದದ್ದು, ನನಗೆ ನಿಲುಕುವದಿಲ್ಲ.


ಯೆಹೋವನು ಮಹೋನ್ನತನೂ ಮಹಾಸ್ತುತಿಪಾತ್ರನೂ ಆಗಿದ್ದಾನೆ; ಆತನ ಮಹತ್ತು ಅಪಾರವಾದದ್ದು.


ವಿಷಯವನ್ನು ರಹಸ್ಯಮಾಡುವದು ದೇವರ ಪ್ರಭಾವ; ವಿಷಯವನ್ನು ವಿಮರ್ಶೆಮಾಡುವದು ರಾಜರ ಪ್ರಭಾವ.


ತತ್ವವು ಬಹು ದೂರ, ಅಗಾಧವೇ ಅಗಾಧ; ಅದನ್ನು ಯಾರು ಕಂಡುಕೊಂಡಾರು?


ಲೋಕದಲ್ಲಿ ನಡೆಯುವದನ್ನು ಮನುಷ್ಯನು ಗ್ರಹಿಸಲಾರನು, ಎಷ್ಟು ಪ್ರಯಾಸಪಟ್ಟು ವಿಚಾರಿಸಿದರೂ ಗ್ರಹಿಸಲಾರನು; ಹೌದು, ಜ್ಞಾನಿಯು ಗ್ರಹಿಸಬಹುದೆಂದರೂ ಗ್ರಹಿಸಲಾರನು ಎಂಬದಾಗಿ ನಾನು ದೇವರ ಕೆಲಸವನ್ನೆಲ್ಲಾ ದೃಷ್ಟಿಸಿ ತಿಳಿದುಕೊಂಡೆನು.


ಈ ವಿವೇಕವು ಸಹ ಅತಿಶಯಾಲೋಚನಾಪರನೂ ಸುಜ್ಞಾನಶ್ರೇಷ್ಠನೂ ಆಗಿರುವ ಸೇನಾಧೀಶ್ವರನಾದ ಯೆಹೋವನಿಂದಲೇ ಉಂಟಾಗುತ್ತದೆ.


ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ ಭೂವಿುಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ; ಆತನು ದಣಿದು ಬಳಲುವದಿಲ್ಲ; ಆತನ ವಿವೇಕವು ಪರಿಶೋಧನೆಗೆ ಅಗಮ್ಯ.


ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅದನ್ನು ಪ್ರಕಟಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸುವವನಾಗಿದ್ದಾನೆ.


ಈ ಸಂಗತಿಯು ಮೊರ್ದೆಕೈಗೆ ಗೊತ್ತಾದಾಗ ಅವನು ಅದನ್ನು ಎಸ್ತೇರ್‍ರಾಣಿಗೆ ತಿಳಿಸಿದನು. ಆಕೆಯು ಅವನ ಹೆಸರನ್ನು ಅರಸನಿಗೆ ಹೇಳಿ ಆ ಸಂಗತಿಯನ್ನು ತಿಳಿಸಿದಳು.


ಆದರೂ ನಿನ್ನ ಹೃದಯದಲ್ಲಿ ಇವುಗಳನ್ನು ಮರೆಮಾಡಿಕೊಂಡಿದ್ದೀ, ಇವು ನಿನ್ನಲ್ಲಿ ಇದ್ದೇ ಇರುತ್ತವೆಂದು ನನಗೆ ಗೊತ್ತುಂಟು.


ನನ್ನ ವಿಷಯದಲ್ಲಿ ನೇಮಕವಾದದ್ದನ್ನು ಪೂರೈಸುವನಷ್ಟೆ, ಆತನಲ್ಲಿ ಇಂಥಾ ಸಂಕಲ್ಪಗಳು ಅನೇಕವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು