Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:7 - ಕನ್ನಡ ಸತ್ಯವೇದವು J.V. (BSI)

7 ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದು ಅವರೆಲ್ಲರಿಗೆ ದೊರೆಯಲಿಲ್ಲ, ಅವರೊಳಗೆ ಆಯಲ್ಪಟ್ಟವರಿಗೆ ದೊರೆಯಿತು. ವಿುಕ್ಕವರು ಮೊಂಡರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಆರಿಸಲ್ಪಟ್ಟವರಿಗೆ ಅದು ದೊರೆಯಿತು. ಉಳಿದವರು ಮೊಂಡರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇದರ ಅರ್ಥವಾದರೂ ಏನು? ಇಸ್ರಯೇಲರು ಅರಸುತ್ತಿದ್ದುದು ಅವರಿಗೆ ದೊರಕಲಿಲ್ಲ. ಆಯ್ಕೆಯಾದವರಿಗೆ ಮಾತ್ರ ಅದು ದೊರಕಿತು. ಮಿಕ್ಕವರು ಕಠಿಣ ಹೃದಯಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ನಡೆದ ಸಂಗತಿಯಿಷ್ಟೆ: ಇಸ್ರೇಲಿನ ಜನರು ನೀತಿವಂತರಾಗಲು ಪ್ರಯತ್ನಿಸಿದರು. ಆದರೆ ಅವರಿಂದ ಸಾಧ್ಯವಾಗಲಿಲ್ಲ. ಹೀಗಿರಲು, ದೇವರಿಂದ ಆರಿಸಲ್ಪಟ್ಟಿದ್ದ ಜನರು ನೀತಿವಂತರಾದರು. ಆದರೆ ಉಳಿದ ಜನರು ಕಠಿಣರಾಗಿ ದೇವರಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹಾಗಾದರೆ ಏನು? ಇಸ್ರಾಯೇಲ್ ಹುಡುಕಿದ್ದನ್ನು ಹೊಂದಲಿಲ್ಲ. ಆದರೆ ಅವರಲ್ಲಿ ಆಯ್ಕೆಯಾದವರು ಹೊಂದಿದರು, ಮಿಕ್ಕವರು ಕಠಿಣ ಹೃದಯಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತಸೆ ಜಾಲ್ಯಾರ್ ಕಾಯ್? ಇಸ್ರಾಯೆಲಾಚ್ಯಾ ಲೊಕಾಕ್ನಿ ತೆನಿ ಕಾಯ್ ಹುಡ್ಕುಕ್ ಲಾಗಲ್ಲ್ಯಾನಿ ತೆ ಗಾವುಕ್‍ ನಾ. ದೆವಾನ್ ಎಚುನ್ ಕಾಡಲ್ಲ್ಯಾ ಲೊಕಾಂಚ್ಯಾ ಉಲ್ಲ್ಯಾಶ್ಯಾ ತಾಂಡ್ಯಾಕ್ ತೆ ಸಗ್ಳೆ ಗಾವ್ಲೆ; ಅನಿ ಹುರಲ್ಲೆ ದೆವಾಚ್ಯಾ ಬಲ್ವನಿಕ್ ಆಯ್ಕಿನಸ್ತಾನಾ ರ್‍ಹಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:7
25 ತಿಳಿವುಗಳ ಹೋಲಿಕೆ  

ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಸುವಾರ್ತೆಯ ಪ್ರಕಾಶವು ಉದಯವಾಗಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದನು.


ದೇವರು ಯಾರನ್ನು ಕರುಣಿಸಿದರೂ ಯಾರನ್ನು ಕಠಿಣಪಡಿಸಿದರೂ ಅದೆಲ್ಲವು ಆತನ ಇಷ್ಟಾನುಸಾರವಾಗಿಯೇ ಇದೆ ಎಂಬದು ಇದರಿಂದ ತೋರಿಬರುತ್ತದೆ.


ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬದಾಗಿ ಎಣಿಸಿಕೊಳ್ಳದಂತೆ ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ; ಅದೇನಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವದು;


ಅದರಂತೆ ಈಗಿನ ಕಾಲದಲ್ಲಿಯೂ ದೇವರು ಕೃಪೆಯಿಂದ ಆದುಕೊಂಡವರಾದ ಕೆಲವರು ಉಳಿದಿದ್ದಾರೆ.


ಹೇಗಂದರೆ ನಾವು ಪ್ರೀತಿಯಲ್ಲಿ ನಡೆದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು ನಮ್ಮನ್ನು ಜಗದುತ್ಪತ್ತಿಗೆ ಮುಂಚೆ ಕ್ರಿಸ್ತನಲ್ಲಿ ಆರಿಸಿಕೊಂಡನು.


ಆದರೆ ಅವರ ಬುದ್ಧಿ ಮಂದವಾಯಿತು; ಈ ದಿನದವರೆಗೂ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗ ಅದು ಕ್ರಿಸ್ತನಲ್ಲಿ ಗತಿಸಿಹೋಗುತ್ತದೆಂಬದು ಅವರಿಗೆ ಪ್ರಕಟವಾಗದೆ ಇರುವದರಿಂದ ಅದೇ ಮುಸುಕು ಎತ್ತಲ್ಪಡದೆ ಇರುತ್ತದೆ.


ಮತ್ತು ಪ್ರಭಾವ ಹೊಂದುವದಕ್ಕೆ ತಾನು ಮುಂದಾಗಿ ಸಿದ್ಧಮಾಡಿದ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.


ಹೇಗಾದರೇನು? ಯಾವ ರೀತಿಯಿಂದಾದರೂ ಕಪಟದಿಂದಾಗಲಿ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿಸುವದುಂಟು; ಇದಕ್ಕೆ ಸಂತೋಷಿಸುತ್ತೇನೆ, ಮುಂದೆಯೂ ಸಂತೋಷಿಸುವೆನು.


ಹೀಗೆ ಹೇಳುವದರಿಂದ ಏನು ಹೇಳಿದ ಹಾಗಾಯಿತು? ವಿಗ್ರಹಕ್ಕೆ ನೈವೇದ್ಯ ಮಾಡಿದ ಪದಾರ್ಥವು ವಾಸ್ತವವೆಂದು ಅಥವಾ ವಿಗ್ರಹವು ವಾಸ್ತವವೆಂದು ನನ್ನ ಅಭಿಪ್ರಾಯವೋ? ಅಲ್ಲ.


ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.


ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪಾಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು.


ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಉತ್ತಮಸ್ಥಾನದಲ್ಲಿದ್ದೇವೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಬಿದ್ದವರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ.


ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ತಿರುಗಿಕೊಳ್ಳದೆ ತನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿನಮಾಡಿದನು ಎಂಬದೇ.


ಆತನು ಅವರಿಗೆ - ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗುವದಕ್ಕೆ ಹೆಣಗಾಡಿರಿ. ಬಹುಜನ ಒಳಕ್ಕೆ ಹೋಗುವದಕ್ಕೆ ನೋಡುವರು, ಆದರೆ ಅವರಿಂದಾಗುವದಿಲ್ಲ ಎಂದು ನಿಮಗೆ ಹೇಳುತ್ತೇನೆ.


ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು; ಅವರ ಕಣ್ಣು ಕಾಣದಂತೆಯೂ ಹೃದಯ ಗ್ರಹಿಸದಂತೆಯೂ ಯೆಹೋವನು ಅಂಟು ಬಳಿದಿದ್ದಾನಲ್ಲಾ.


ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದದ ಹಾಗೆ ಈ ಜನರ ಹೃದಯಕ್ಕೆ ಕೊಬ್ಬೇರಿಸಿ ಕಿವಿಯನ್ನು ಮಂದಮಾಡಿ ಕಣ್ಣಿಗೆ ಅಂಟುಬಳಿ ಎಂದು ನನಗೆ ಹೇಳಿದನು.


ಆಗ ಅವರು ನನಗೆ ಮೊರೆಯಿಟ್ಟರೂ ನಾನು ಉತ್ತರ ಕೊಡೆನು, ನನ್ನನ್ನು ಆತುರದಿಂದ ಹುಡುಕಿದರೂ ನಾನು ಕಾಣಿಸೆನು.


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ ದೇವರಿಗೆ ವಿಧೇಯರಾಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗುವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನುಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ಅನಂತರದಲ್ಲಿ ತನ್ನ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ, ನಡೆದದ್ದನ್ನು ಇಲ್ಲದ ಹಾಗೆ ಮಾಡುವದಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ಬಲ್ಲಿರಿ.


ಯಾಕಂದರೆ ಅವರು ರೊಟ್ಟಿಯ ವಿಷಯವಾದ ಮಹತ್ಕಾರ್ಯವನ್ನು ಗ್ರಹಿಸಲಿಲ್ಲ; ಅವರ ಮನಸ್ಸು ಕಲ್ಲಾಗಿತ್ತು.


ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ; ಅವರ ಮನಸ್ಸು ಮೊಬ್ಬಾಗಿ ಹೋಗಿದೆ, ಅವರು ತಮ್ಮ ಹೃದಯದ ಕಾಠಿಣ್ಯದ ನಿವಿುತ್ತದಿಂದಲೂ ತಮ್ಮಲ್ಲಿರುವ ಅಜ್ಞಾನದ ನಿವಿುತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು