Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:2 - ಕನ್ನಡ ಸತ್ಯವೇದವು J.V. (BSI)

2 ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತಕ್ಕನುಸಾರವಾದದ್ದು ಅಂದರೆ ಉತ್ತಮವಾದದ್ದೂ ಮೆಚ್ಚಿಕೆಯಾದದ್ದೂ ದೋಷವಿಲ್ಲದ್ದೂ ಯಾವ ಯಾವದೆಂದು ವಿವೇಚಿಸಿ ತಿಳುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇಹಲೋಕದ ಆಚಾರವಿಚಾರಗಳಿಗೆ ಮಾರುಹೋಗಬೇಡಿ. ಬದಲಿಗೆ, ಮಾನಸಾಂತರಗೊಂಡು ನೂತನ ಜೀವಿಗಳಾಗಿ ಬಾಳಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಉನ್ನತವಾದುದು, ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈ ಲೋಕದವರ ನಡವಳಿಕೆಯನ್ನು ಅನುಸರಿಸದೆ ಅಂತರಂಗದಲ್ಲಿ ಮಾರ್ಪಾಟನ್ನು ಹೊಂದಿದವರಾಗಿದ್ದು ಪರಲೋಕಭಾವದವರಾಗಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಮೆಚ್ಚಿಕೆಯಾದುದು ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಹ್ಯಾ ಜಗಾಚ್ಯಾ ಚಾಲಿ ಸರ್ಕೆ ತುಮಿ ಚಲುನಕಾಶಿ, ಹೆಚ್ಯಾ ಬದ್ಲಾಕ್, ತುಮ್ಚಿ ಮನಾ ಬದ್ಲಾ, ತುಮ್ಚೆ ಜಿವನುಚ್ ಬದ್ಲಾವನ್ ಹೊವ್ಚೆ, ತನ್ನಾ ದೆವಾಚ್ಯಾ ಮನಾ ಸರ್ಕೆ ಕಾಯ್ ಹಾಯ್ ಮನುನ್ ತುಮಿ ವಳ್ಕುನ್ ಪಾವ್ತ್ಯಾಶಿ, ಅನಿ ಖಲೆ ಬರೆ ಅನಿ ದೆವಾಕ್ ಮಾನಿ ಸರ್ಕೆ ಹಾಯ್ ಮನುನ್ ತುಮಿ ಕಳ್ವುನ್ ಘೆತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:2
61 ತಿಳಿವುಗಳ ಹೋಲಿಕೆ  

ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆಯುವವರಾಗಿರದೆ


ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನಸೃಷ್ಟಿಯಾದನು. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.


ಈ ಸ್ವಭಾವವು ಅದನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ದಿನೇದಿನೇ ನೂತನವಾಗುತ್ತಾ ಪೂರ್ಣಜ್ಞಾನವನ್ನು ಉಂಟುಮಾಡುತ್ತದೆ.


ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ.


ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.


ಯಾಕಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪದ ವಶದಿಂದ ತಪ್ಪಿಸಿಕೊಂಡವನಾಗಿ ಉಳಿದಿರುವ ತನ್ನ ಜೀವಮಾನಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವದಕ್ಕೆ ಪ್ರಯತ್ನಮಾಡುವನು.


ಆದದರಿಂದ ಸಹೋದರರೇ, ದೇವರ ಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವದೇನಂದರೆ - ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ ಮೆಚ್ಚಿಗೆಯಾಗಿಯೂ ಇರುವ ಸಜೀವಯಜ್ಞವಾಗಿ ಅರ್ಪಿಸಿರಿ; ಇದೇ ನಿಮ್ಮ ವಿವೇಕಪೂರ್ವಕವಾದ ಆರಾಧನೆಯು.


ನೀವು ಲೋಕದ ಕಡೆಯವರಾಗಿರುತ್ತಿದ್ದರೆ ಲೋಕವು ನಿಮ್ಮ ಮೇಲೆ ತನ್ನವರೆಂದು ಮಮತೆ ಇಡುತ್ತಿತ್ತು; ಆದರೆ ನೀವು ಲೋಕದ ಕಡೆಯವರಲ್ಲದೆ ಇರುವದರಿಂದಲೂ ನಾನು ನಿಮ್ಮನ್ನು ಲೋಕದೊಳಗಿಂದ ಆರಿಸಿ ತೆಗೆದುಕೊಂಡಿರುವದರಿಂದಲೂ ಲೋಕವು ನಿಮ್ಮ ಮೇಲೆ ದ್ವೇಷ ಮಾಡುತ್ತದೆ.


ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನ ಪಡಿಸು.


ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.


ನಾವು ಮಾಡಿದ ಪುಣ್ಯಕ್ರಿಯೆಗಳ ನಿವಿುತ್ತದಿಂದಲ್ಲ ಆತನ ಕರುಣೆಯಲ್ಲಿಯೇ ಪುನರ್ಜನ್ಮವನ್ನು ಸೂಚಿಸುವ ಸ್ನಾನದ ಮೂಲಕವಾಗಿಯೂ ಪವಿತ್ರಾತ್ಮನು ನಮ್ಮಲ್ಲಿ ನೂತನಸ್ವಭಾವವನ್ನು ಉಂಟುಮಾಡುವದರ ಮೂಲಕವಾಗಿಯೂ ಆತನು ನಮ್ಮನ್ನು ರಕ್ಷಿಸಿದನು.


ವ್ಯಭಿಚಾರಿಗಳು ನೀವು; ಇಹಲೋಕಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.


ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಸುವಾರ್ತೆಯ ಪ್ರಕಾಶವು ಉದಯವಾಗಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದನು.


ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ; ನಾನು ಲೋಕದವನಲ್ಲದೆ ಇರುವ ಪ್ರಕಾರ ಇವರೂ ಲೋಕದವರಲ್ಲ; ಆದಕಾರಣ ಲೋಕವು ಇವರ ಮೇಲೆ ದ್ವೇಷ ಮಾಡಿ ಅದೆ.


ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಪ್ರಭಾವ ಗುಣಾತಿಶಯಗಳಿಂದ ಅಮೂಲ್ಯವಾಗಿಯೂ ಉತ್ಕೃಷ್ಟವಾಗಿಯೂ ಇರುವ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.


ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.


ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನಮಾಡಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಲೇಕೆ?


ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.


ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.


ದೇವರ ಚಿತ್ತವೇನಂದರೆ ನೀವು ಶುದ್ಧರಾಗಿ ಇರಬೇಕೆಂಬದೇ. ಆದದರಿಂದ ಹಾದರಕ್ಕೆ ದೂರವಾಗಿರಬೇಕು.


ನಾವು ದೇವರಿಂದ ಹುಟ್ಟಿದವರೆಂದೂ ಲೋಕವೆಲ್ಲವು ಕೆಡುಕನ ವಶದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ.


ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನಿಂದ ಕರಿಸಿಕೊಂಡವರು ನಿರೀಕ್ಷಿಸುವ ಪದವಿ ಎಂಥದೆಂಬದನ್ನೂ ದೇವಜನರೆಂಬ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ


ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.


ನೀವು ಪೂರ್ವದಲ್ಲಿ ಅಪರಾಧಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರನಡಿಸುವ ಅಧಿಪತಿಗೆ, ಅಂದರೆ ನಂಬಲೊಲ್ಲದವರನ್ನು ಅವಿಧೇಯತೆಗೆ ಈಗ ಪ್ರೇರೇಪಿಸುವ ಆತ್ಮನಿಗೆ ಅನುಸಾರವಾಗಿ ನಡೆದುಕೊಂಡಿರಿ.


ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಯನ್ನು ಕೋರುತ್ತೇನೆ; ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವು.


ಈತನು ನಮ್ಮನ್ನು ಕೆಟ್ಟದ್ದಾಗಿರುವ ಈಗಿನ ದುಷ್ಟಯುಗದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕೆ ಅನುಸಾರವಾಗಿ ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿದನು.


ಯಾಕಂದರೆ ಇಹಲೋಕ ಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೇ ಹಿಡುಕೊಳ್ಳುತ್ತಾನೆಂತಲೂ


ನಿಜವಾಗಿ ನಿನ್ನ ಎಲ್ಲಾ ನೇಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ; ಎಲ್ಲಾ ವಿುಥ್ಯಾಮಾರ್ಗಗಳನ್ನು ಹಗೆಮಾಡುತ್ತೇನೆ.


ಅಂತರಾತ್ಮದೊಳಗೆ ದೇವರ ನಿಯಮದಲ್ಲಿ ಆನಂದ ಪಡುವವನಾಗಿದ್ದೇನೆ. ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮ ಉಂಟೆಂದು ನೋಡುತ್ತೇನೆ.


ನಿನ್ನ ಧರ್ಮಶಾಸ್ತ್ರವು ನನಗೆ ಎಷ್ಟೋ ಪ್ರಿಯವಾಗಿದೆ; ದಿನವೆಲ್ಲಾ ಅದೇ ನನ್ನ ಧ್ಯಾನ.


ನೀನು ಉಸಿರಿದ ಧರ್ಮಶಾಸ್ತ್ರವು ಸಾವಿರಾರು ಚಿನ್ನಬೆಳ್ಳಿಯ ನಾಣ್ಯಗಳಿಗಿಂತಲೂ ನನಗೆ ಅತಿಪ್ರಿಯವಾಗಿದೆ.


ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿಹೇಳುವದರಿಂದ ನನ್ನನ್ನು ಹಗೆಮಾಡುತ್ತದೆ.


ದುಷ್ಕಾರ್ಯವನ್ನು ಮಾಡುವವರು ಬಹು ಮಂದಿ ಆದಾಗ್ಯೂ ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ನಮಸ್ಕಾರ ಮಾಡುವರು.


ನೀವು ಜೀವವುಳ್ಳ ಕಲ್ಲಾಗಿರುವ ಆತನನ್ನು ಸೇರಿಕೊಂಡಿದ್ದೀರಿ.


ನಿನ್ನ ನುಡಿಗಳು ನನ್ನ ನಾಲಿಗೆಗೆ ಎಷ್ಟೋ ರುಚಿಯಾಗಿವೆ; ಅವು ನನ್ನ ಬಾಯಿಗೆ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.


ಹೀಗಿರಲಾಗಿ ಧರ್ಮಶಾಸ್ತ್ರವು ಪರಿಶುದ್ಧವಾದದ್ದು. ಮತ್ತು ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದು ಸರಿ.


ಕ್ರಿಸ್ತ ಯೇಸುವಿನ ದಾಸನಾಗಿರುವ ನಿಮ್ಮ ಊರಿನ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ; ಇವನು ಪ್ರಾರ್ಥನೆ ಮಾಡುವಾಗೆಲ್ಲಾ ನಿಮಗೋಸ್ಕರ ಹೋರಾಡಿ ನೀವು ಪ್ರವೀಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ವಿಜ್ಞಾಪನೆ ಮಾಡುತ್ತಾನೆ.


ನಿಮ್ಮ ಹಿರಿಯರು ಕಲಿಸಿಕೊಟ್ಟ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ಬೆಳ್ಳಿಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ,


ಇನ್ನು ನಾನು ನಿಮ್ಮ ಸಂಗಡ ಬಹಳ ಮಾತುಗಳನ್ನಾಡುವದಿಲ್ಲ, ಯಾಕಂದರೆ ಇಹಲೋಕಾಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ಯಾವದೊಂದೂ ನನ್ನಲ್ಲಿಲ್ಲ;


ಧರ್ಮಶಾಸ್ತ್ರವು ಪಾರಮಾರ್ಥಿಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ ಪಾಪದ ಸ್ವಾಧೀನದಲ್ಲಿರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.


ಭೂಲೋಕದವರನ್ನೆಲ್ಲಾ ಮರುಳುಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾತನ ಸರ್ಪವು ದೊಬ್ಬಲ್ಪಟ್ಟು ಭೂವಿುಗೆ ಬಿದ್ದನು;


ಈಗ ನಿಮ್ಮ ಪಿತೃಗಳ ದೇವರಾದ ಯೆಹೋವನಿಗೆ ನಿಮ್ಮ ಪಾಪಗಳನ್ನು ಅರಿಕೆಮಾಡಿ ಆತನ ಚಿತ್ತಕ್ಕನುಸಾರವಾಗಿ ದೇಶನಿವಾಸಿಗಳನ್ನೂ ಅನ್ಯಜನರಿಂದ ತಂದ ಹೆಂಡತಿಯರನ್ನೂ ಬಿಟ್ಟು ಬೇರೆಯಾಗಿರಿ ಅನ್ನಲು


ಒಬ್ಬನು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ ಐಶ್ವರ್ಯದಿಂದುಂಟಾಗುವ ಮೋಸವೂ ಆ ವಾಕ್ಯವನ್ನು ಅಡಗಿಸಿಬಿಡುವದರಿಂದ, ಫಲವನ್ನು ಕೊಡದೆ ಇರುತ್ತಾನೆ; ಇವನೇ ಮುಳ್ಳುಗಿಡಗಳಲ್ಲಿ ಬೀಜ ಬಿದ್ದ ನೆಲವಾಗಿರುವವನು.


ಆದಕಾರಣ ನಾವು ನಿಮ್ಮ ಸುದ್ದಿಯನ್ನು ಕೇಳಿದ ದಿವಸದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲ ಆತ್ಮೀಯ ಜ್ಞಾನವನ್ನೂ ಗ್ರಹಿಕೆಯನ್ನೂ ಹೊಂದಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು