Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 13:13 - ಕನ್ನಡ ಸತ್ಯವೇದವು J.V. (BSI)

13 ದುಂದೌತಣ ಕುಡಿಕತನಗಳಲ್ಲಿಯಾಗಲಿ ಕಾಮ ವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚುಗಳಲ್ಲಿಯಾಗಲಿ ಕಾಲಕಳೆಯದೆ ಹಗಲು ಹೊತ್ತಿಗೆ ತಕ್ಕಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದುಂದೌತಣ ಕುಡಿಕತನಗಳಲ್ಲಾಗಲಿ, ಕಾಮವಿಲಾಸ, ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೆಕಿಚ್ಚುಗಳಲ್ಲಿಯಾಗಲಿ ಕಾಲ ಕಳೆಯದೆ ಹಗಲಿನಲ್ಲಿರ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದುಂದೌತಣ - ಕುಡಿತಗಳಲ್ಲಾಗಲೀ, ಕಾಮವಿಲಾಸ-ನಿರ್ಲಜ್ಜಾಕೃತ್ಯಗಳಲ್ಲಾಗಲೀ, ಕಲಹ-ಮತ್ಸರಗಳಲ್ಲಾಗಲೀ ಕಾಲಕಳೆಯದೆ ಬೆಳಕಿನಲ್ಲಿ ಬಾಳುವವರಂತೆ ಸಭ್ಯರಾಗಿ ವರ್ತಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಹಗಲಿಗೆ ಸೇರಿದ ಜನರಂತೆ ಸರಿಯಾದ ರೀತಿಯಲ್ಲಿ ಜೀವಿಸೋಣ. ಕೆಟ್ಟದಾದ ಮತ್ತು ವ್ಯರ್ಥವಾದ ಔತಣಕೂಟಗಳನ್ನು ನಾವು ಏರ್ಪಡಿಸಕೂಡದು; ಕುಡಿದು ಮತ್ತರಾಗಕೂಡದು; ನಾವು ಲೈಂಗಿಕ ಪಾಪವನ್ನಾಗಲಿ ನಮ್ಮ ದೇಹದಿಂದ ಯಾವುದೇ ಬಗೆಯ ಪಾಪವನ್ನಾಗಲಿ ಮಾಡಕೂಡದು; ವಾಗ್ವಾದಗಳನ್ನಾಗಲಿ ಜಗಳಗಳನ್ನಾಗಲಿ ಎಬ್ಬಿಸಬಾರದು; ಅಲ್ಲದೆ ಹೊಟ್ಟೆಕಿಚ್ಚುಪಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಪಕ್ಷತನ ಕುಡಿಕತನಗಳಲ್ಲಾಗಲಿ, ಕಾಮವಿಲಾಸ ನಿರ್ಲಜ್ಯ ಕೃತ್ಯಗಳಲ್ಲಾಗಲಿ, ಮತ್ಸರಗಳಲ್ಲಾಗಲಿ ನಿರತರಾಗಿರದೆ ಹಗಲಿನಲ್ಲಿರುವವರಂತೆ ಸಭ್ಯತೆಯಿಂದ ನಡೆದುಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅಮ್ಚಿ ಚಾಲ್, ಅನಿ ಅಮ್ಚಿ ಚಲ್ನುಕ್ ದಿಸಾಚ್ಯಾ ಉಜ್ವೊಡಾತ್ ಜಿವನ್ ಕರ್‍ತಲ್ಯಾ ಲೊಕಾಂಚ್ಯಾ ಸರ್ಕೆ ಹೊವ್ನ್ ರ್‍ಹಾವ್ಕ್ ಪಾಜೆ, ಪೊಜ್ಡೆಪಾನ್; ನಾಹೊಲ್ಯಾರ್ ಫಿದೊಡೆಪಾನ್, ನಸ್ತೆಪಾನ್ ನಾಹೊಲ್ಯಾರ್ ಬುರ್ಶಿಚಾಲ್, ಝಗ್ಡೆ ನಾಹೊಲ್ಯಾರ್ ಅನಿ ಎಕ್ಲ್ಯಾಚೆ ಬಗುನ್ ಜಳ್ತಲೆ, ಅಮ್ಕಾ ನಕ್ಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 13:13
42 ತಿಳಿವುಗಳ ಹೋಲಿಕೆ  

ಇವುಗಳ ವಿಷಯದಲ್ಲಿ - ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ಹಿಂದೆ ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.


ಮದ್ಯಪಾನ ಮಾಡಿ ಮತ್ತರಾಗಬೇಡಿರಿ; ಅದರಿಂದ ಪಟಿಂಗತನವು ಹುಟ್ಟುತ್ತದೆ.


ಹೀಗಿದ್ದರೆ ನೀವು ಹೊರಗಿನವರ ಎದುರಿನಲ್ಲಿ ಸಜ್ಜನರಾಗಿ ನಡೆದುಕೊಳ್ಳುವಿರಿ ಮತ್ತು ನಿಮಗೆ ಯಾವದಕ್ಕೂ ಕೊರತೆಯಿರುವದಿಲ್ಲ.


ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ.


ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಜ್ಞಾನವಿಲ್ಲದರಾಗಿರದೆ ಜ್ಞಾನವಂತರಾಗಿರ್ರಿ.


ತನ್ನ ರಾಜ್ಯಪ್ರಭಾವಗಳಲ್ಲಿ ಪಾಲುಗಾರರಾಗುವದಕ್ಕೆ ಕರೆಯುವ ದೇವರಿಗೆ ಯೋಗ್ಯರಾಗಿ ನೀವು ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೇ ತಿಳಿದದೆ.


ನಿಮ್ಮ ವಿಷಯದಲ್ಲಿ ಜಾಗರೂಕರಾಗಿರ್ರಿ. ಅತಿಭೋಜನದ ಮದಡಿನಿಂದಲೂ ಅಮಲಿನಿಂದಲೂ ಪ್ರಪಂಚದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿವಸವು ನಿಮ್ಮ ಮೇಲೆ ಉರ್ಲಿನಂತೆ ಫಕ್ಕನೆ ಬಂದೀತು.


ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ಅವರನ್ನು ಬೆಂಕಿಯ ಬಾಯೊಳಗಿಂದ ಎಳಕೊಂಡು ರಕ್ಷಿಸಿರಿ. ಕೆಲವರನ್ನು ಭಯಯುಕ್ತರಾಗಿ ಕರುಣಿಸಿರಿ; ಹೊಲಸು ನಡತೆಯಿಂದ ಮೈಲಿಗೆಯಾದ ಅವರ ಅಂಗಿಯನ್ನೂ ಅಸಹ್ಯಿಸಿರಿ.


ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಮಗುಂಟಾದ ಆಜ್ಞಾನುಸಾರ ಸತ್ಯವಂತರಾಗಿ ನಡೆಯುವದನ್ನು ಕಂಡು ಬಹಳ ಸಂತೋಷವುಳ್ಳವನಾದೆನು.


ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆ ಎಂಬ ಶಾಸ್ತ್ರೋಕ್ತಿ ಬರೀ ಮಾತೆಂದು ಭಾವಿಸುತ್ತೀರೋ?


ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಸಾಯಿಸಿರಿ. ಜಾರತ್ವ ಬಂಡುತನ ಕಾಮಾಭಿಲಾಷೆ ದುರಾಶೆ ವಿಗ್ರಹಾರಾಧನೆಗೆ ಸಮವಾಗಿರುವ ಲೋಭ ಇವುಗಳನ್ನು ವಿಸರ್ಜಿಸಿಬಿಡಿರಿ;


ಕರ್ತನ ಚಿತ್ತದ ವಿಷಯವಾದ ತಿಳುವಳಿಕೆಯಿಂದ ತುಂಬಿಕೊಂಡು ಆತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯವೆಂಬ ಫಲವನ್ನು ಕೊಡುತ್ತಾ ದೇವಜ್ಞಾನದಿಂದ ಅಭಿವೃದ್ಧಿಯಾಗುತ್ತಿರಬೇಕೆಂತಲೂ


ಪಕ್ಷಪಾತದಿಂದಾಗಲಿ ಒಣಹೆಮ್ಮೆಯಿಂದಾಗಲಿ ಯಾವದನ್ನೂ ಮಾಡದೆ ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.


ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕ್ರಿಸ್ತನಲ್ಲಿದ್ದು ಬೆಳಕಾಗಿದ್ದೀರಿ.


ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರದೆಂದು ಕರ್ತನಲ್ಲಿರುವವನಾಗಿ ನಿಮಗೆ ಖಂಡಿತವಾಗಿ ಹೇಳುತ್ತೇನೆ.


ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಯೋಗ್ಯರಾಗಿ ನಡೆದುಕೊಳ್ಳಬೇಕೆಂದು ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ.


ಶರೀರಭಾವದ ಕರ್ಮಗಳು ಪ್ರಸಿದ್ಧವಾಗಿಯೇ ಅವೆ; ಯಾವವಂದರೆ - ಜಾರತ್ವ ಬಂಡುತನ ನಾಚಿಕೆಗೇಡಿತನ ವಿಗ್ರಹಾರಾಧನೆ ಮಾಟ ಹಗೆತನ ಜಗಳ ಹೊಟ್ಟೇಕಿಚ್ಚು ಸಿಟ್ಟು


ನೀವು ಭಾವಿಸಿದಂತೆ ಇವರು ಅಮಲೇರಿದವರಲ್ಲ; ಈಗ ಬೆಳಿಗ್ಗೆ ಒಂಭತ್ತು ಘಂಟೆಯಾಗಿದೆಯಷ್ಟೆ.


ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಸಕಲಾತಿ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು ಪ್ರತಿದಿನವೂ ವೈಭವದೊಡನೆ ಸುಖಸಂತೋಷಪಡುತ್ತಿದ್ದನು.


ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.


ಕುಡುಕರಲ್ಲಿಯೂ ಅತಿಮಾಂಸಭಕ್ಷಕರಲ್ಲಿಯೂ ಸೇರದಿರು.


ಯಾಕಂದರೆ ಇನ್ನೂ ಶರೀರಾಧೀನಸ್ವಭಾವವುಳ್ಳವರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು ಜಗಳಗಳು ಇರುವಲ್ಲಿ ನೀವು ಶರೀರಾಧೀನಸ್ವಭಾವವುಳ್ಳವರಾಗಿದ್ದು ಕೇವಲ ನರಪ್ರಾಣಿಗಳಂತೆ ನಡೆಯುತ್ತೀರಲ್ಲವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು