Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 13:8 - ಕನ್ನಡ ಸತ್ಯವೇದವು J.V. (BSI)

8 ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ಧರ್ಮಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ವಿಧವಾದ ಋಣವೂ ನಿಮಗಿರಬಾರದು. ಏಕೆಂದರೆ ಪರರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನು ಪೂರ್ಣವಾಗಿ ನೆರವೇರಿಸಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜನರಿಗೆ ಯಾವ ವಿಷಯದಲ್ಲಿಯೂ ಸಾಲಗಾರರಾಗಿರಬೇಡಿ. ಆದರೆ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ವಿಷಯದಲ್ಲಿ ಮಾತ್ರ ಯಾವಾಗಲೂ ಸಾಲಗಾರರಾಗಿದ್ದೀರಿ. ಇತರ ಜನರನ್ನು ಪ್ರೀತಿಸುವ ವ್ಯಕ್ತಿಯು ಇಡೀ ಧರ್ಮಶಾಸ್ತ್ರಕ್ಕೆ ವಿಧೇಯನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಸಾಲವೇ ಹೊರತು ನಿಮಗೆ ಬೇರೆ ಯಾವ ಸಾಲವೂ ಇರಬಾರದು. ಏಕೆಂದರೆ ಮತ್ತೊಬ್ಬರನ್ನು ಪ್ರೀತಿಸುವವನು ಮೋಶೆಯ ನಿಯಮವನ್ನೇ ನೆರವೇರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಎಕಾಮೆಕಾಚೊ ಪ್ರೆಮ್ ಕರುಚೊ -ಮನ್ತಲ್ಯಾ ಹ್ಯಾ ಎಕುಚ್ ಎಕ್ ರಿನಾತ್ ಸೊಡುನ್ ಕೊನಾಚ್ಯಾಬಿ ಕಸ್ಲ್ಯಾಬಿ ರಿನಾತ್ ರ್‍ಹಾವ್‍ನಕಾಶಿ. ಕಶ್ಯಾಕ್ ಮಟ್ಲ್ಯಾರ್, ಜೊ ಕೊನ್ ಎಕಾಮೆಕಾಚೊ ಪ್ರೆಮ್ ಕರ್‍ತಾ ತೊ ಸಗ್ಳೆ ಖಾಯ್ದೆ ಫಾಳ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 13:8
12 ತಿಳಿವುಗಳ ಹೋಲಿಕೆ  

ಪ್ರೀತಿಯು ಮತ್ತೊಬ್ಬರಿಗೆ ಯಾವ ಕೇಡನ್ನೂ ಮಾಡುವದಿಲ್ಲ. ಆದಕಾರಣ ಪ್ರೀತಿಯಿಂದಲೇ ಧರ್ಮಪ್ರಮಾಣವು ನೆರವೇರುತ್ತದೆ.


ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ಧರ್ಮಶಾಸ್ತ್ರವೆಲ್ಲಾ ಅಡಕವಾಗಿದೆ.


ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಇದೇ ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ.


ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆಯನ್ನು ಸಲ್ಲಿಸಿರಿ.


ಆದರೂ ಶಾಸ್ತ್ರಕ್ಕೆ ಸರಿಯಾಗಿ ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬ ರಾಜಾಜ್ಞೆಯನ್ನು ನೀವು ನೆರವೇರಿಸುತ್ತಿದ್ದರೆ ನೀವು ಒಳ್ಳೇದನ್ನು ಮಾಡುವವರು.


ಇದೆಲ್ಲಾದರ ಮೇಲೆ ಪ್ರೀತಿಯನ್ನು ಧರಿಸಿಕೊಳ್ಳಿರಿ. ಅದು ಸಮಸ್ತವನ್ನು ಸಂಪೂರ್ಣಮಾಡುವ ಬಂಧವಾಗಿದೆ.


ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ; ಏನಂದರೆ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು; ನಾನು ನಿಮ್ಮನ್ನು ಪ್ರೀತಿಸಿದ ಮೇರೆಗೆ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು ಎಂಬದೇ.


ಶುದ್ಧ ಹೃದಯ ಒಳ್ಳೇಮನಸ್ಸಾಕ್ಷಿ ನಿಷ್ಕಪಟವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವವಾಕ್ಯೋಪದೇಶದ ಗುರಿಯಾಗಿದೆ.


ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಂದ ಹುಟ್ಟಿದವರಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು