Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 13:9 - ಕನ್ನಡ ಸತ್ಯವೇದವು J.V. (BSI)

9 ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು - ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೇಗೆಂದರೆ “ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು.” ಈ ಮೊದಲಾದ ಎಲ್ಲಾ ಕಟ್ಟಳೆಗಳು “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ಒಂದೇ ಮಾತಿನಲ್ಲಿ ಅಡಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ವ್ಯಭಿಚಾರ ಮಾಡಬೇಡ, ಕೊಲಬೇಡ, ಕಳಬೇಡ, ದುರಾಶೆ ಪಡಬೇಡ,” - ಈ ಮುಂತಾದ ಆಜ್ಞೆಗಳೆಲ್ಲವೂ “ನೀನು ನಿನ್ನನ್ನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನೂ ಪ್ರೀತಿಸು,” ಎಂಬ ಒಂದೇ ಆಜ್ಞೆಯಲ್ಲಿ ಅಡಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಏಕೆಂದರೆ, “ವ್ಯಭಿಚಾರ ಮಾಡಕೂಡದು; ಕೊಲೆ ಮಾಡಕೂಡದು; ಕದಿಯಕೂಡದು; ಇತರರಿಗೆ ಸೇರಿದ ವಸ್ತುಗಳನ್ನು ಅಪೇಕ್ಷಿಸಕೂಡದು” ಎಂದು ಧರ್ಮಶಾಸ್ತ್ರವು ಹೇಳುತ್ತದೆ. ಈ ಆಜ್ಞೆಗಳನ್ನು ಮೊದಲುಗೊಂಡು ಉಳಿದೆಲ್ಲಾ ಆಜ್ಞೆಗಳು, “ನೀನು ನಿನ್ನನ್ನು ಪ್ರೀತಿಸುವಂತೆ ಇತರ ಜನರನ್ನೂ ಪ್ರೀತಿಸು” ಎಂಬ ಒಂದೇ ಆಜ್ಞೆಯಲ್ಲಿ ಅಡಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಏಕೆಂದರೆ, “ವ್ಯಭಿಚಾರ ಮಾಡಬೇಡ, ಕೊಲೆ ಮಾಡಬೇಡ, ಕದಿಯಬೇಡ, ದುರಾಶೆ ಪಡಬೇಡ,” ಎನ್ನುವ ಹಾಗೂ ಇತರ ಯಾವ ಆಜ್ಞೆಗಳೇ ಇರಲಿ ಅವೆಲ್ಲವೂ, “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು,” ಎಂಬ ಒಂದೇ ಮಾತಿನಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 “ವೆಭಿಚಾರ್ ಕರುನಕೊ, ಜಿವಾನಿ ಮಾರುನಕೊ, ಚೊರುನಕೊ, ದುಸ್ರ್ಯಾಂಚ್ಯಾ ಸಾಮಾನಾಂಚಿ ಆಶಾ ಕರುನಕೊ”, ಹೆ ಅನಿ ದುಸ್ರೆ ಕಸ್ಲೆಬಿ ಜೆ ಖಾಯ್ದೆ ಹಾತ್ ತೆ “ತುಜೊ ತಿಯಾ ಪ್ರೆಮ್ ಕರ್‍ತೆ ತಸೊ ತುಜ್ಯಾ ಸೆಜಾರ್‍ಯಾಚೊಬಿ ಪ್ರೆಮ್ ಕರ್” ಮನ್ತಲ್ಯಾ ಹ್ಯಾ ಹುಕುಮಾತ್ ಮಿಳಲ್ಲೆ ಹಾತ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 13:9
13 ತಿಳಿವುಗಳ ಹೋಲಿಕೆ  

ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಒಂದು ಉಂಟು, ಅದು ಯಾವದಂದರೆ - ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದೇ.


ಅದಕ್ಕೆ ಅವನು - ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಬುದ್ಧಿಯಿಂದಲೂ ಪ್ರೀತಿಸಬೇಕು. ಮತ್ತು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂದು ಬರೆದದೆ ಅಂದನು.


ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದೇ ಎರಡನೆಯ ಆಜ್ಞೆ; ಇವುಗಳಿಗಿಂತ ಹೆಚ್ಚಿನ ಆಜ್ಞೆ ಮತ್ತೊಂದಿಲ್ಲ ಎಂದು ಉತ್ತರಕೊಟ್ಟನು.


ನಿಮ್ಮ ಸ್ವಜನರಲ್ಲಿ ಯಾರಿಗಾದರೂ ಕೇಡಿಗೆ ಕೇಡನ್ನು ಮಾಡದೆ ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.


ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನಸ್ವಭಾವಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.


ಅವರು ನಿಮಗೆ ಸ್ವದೇಶದವರಂತೆಯೇ ಇರಬೇಕು; ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಐಗುಪ್ತದೇಶದಲ್ಲಿದ್ದಾಗ ನೀವೂ ಅನ್ಯರಾಗಿದ್ದಿರಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.


ವ್ಯಭಿಚಾರ ಮಾಡಬಾರದು; ನರಹತ್ಯ ಮಾಡಬಾರದು; ಕದಿಯಬಾರದು; ಸುಳ್ಳುಸಾಕ್ಷಿ ಹೇಳಬಾರದು; ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ ಎಂದು ಹೇಳಿದನು.


ನರಹತ್ಯ ಮಾಡಬಾರದು; ವ್ಯಭಿಚಾರಮಾಡಬಾರದು; ಕದಿಯಬಾರದು; ಸುಳ್ಳುಸಾಕ್ಷಿ ಹೇಳಬಾರದು; ಮೋಸಮಾಡಬಾರದು; ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು