Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:19 - ಕನ್ನಡ ಸತ್ಯವೇದವು J.V. (BSI)

19 ಆದದರಿಂದ ನಾವು ಸಮಾಧಾನಕ್ಕೂ ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವವುಗಳನ್ನು ಸಾಧಿಸಿಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದ್ದರಿಂದ ನಾವು ಸಮಾಧಾನಕ್ಕೂ, ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವಂಥವುಗಳನ್ನು ಸಾಧಿಸಿಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆದ್ದರಿಂದ ಶಾಂತಿಸಮಾಧಾನಕ್ಕೂ ಪರಸ್ಪರ ಅಭ್ಯುದಯಕ್ಕೂ ಹಿತಕರವಾದವುಗಳನ್ನೇ ಅರಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದ್ದರಿಂದ ಸಮಾಧಾನವನ್ನು ಉಂಟುಮಾಡುವ ಕಾರ್ಯಗಳನ್ನು ನಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಮಾಡಲು ನಾವು ಪ್ರಯತ್ನಿಸೋಣ. ಪರಸ್ಪರ ಸಹಾಯಕವಾದ ಕಾರ್ಯಗಳನ್ನೇ ಮಾಡಲು ನಾವು ಪ್ರಯತ್ನಿಸೋಣ. ದೇವರ ಕಾರ್ಯವನ್ನು ನಾಶಪಡಿಸಲು ಆಹಾರಕ್ಕೆ ಅವಕಾಶ ಕೊಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದ್ದರಿಂದ ಯಾವುದು ನಮ್ಮನ್ನು ಸಮಾಧಾನಕ್ಕೂ ಪರಸ್ಪರ ಭಕ್ತಿವೃದ್ಧಿಗೂ ನಡೆಸುತ್ತದೋ ಅದನ್ನೇ ಮಾಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅಶೆ ರ್‍ಹಾತಾನಾ, ಅಮಿ ಸಮಾದಾನ್ ಹಾನ್ತಲ್ಯಾ ಅನಿ ಎಕಾಮೆಕಾಕ್ ಆದಾರ್ ಹೊತಲ್ಯಾ ವಿಶಯಾಂಚ್ಯಾಸಾಟ್ನಿ ರಾಬುವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:19
28 ತಿಳಿವುಗಳ ಹೋಲಿಕೆ  

ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಭಕ್ತಿಯನ್ನು ವೃದ್ಧಿಮಾಡುವಂಥ ಕಾಲೋಚಿತವಾದ ಮಾತು ಇದ್ದರೆ ಕೇಳುವವರ ಹಿತಕ್ಕಾಗಿ ಅದನ್ನು ಆಡಿರಿ.


ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ.


ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು; ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.


ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹಿತವನ್ನೂ ಭಕ್ತಿವೃದ್ಧಿಯನ್ನೂ ಅಪೇಕ್ಷಿಸುವವನಾಗಿ ಅವನ ಸುಖವನ್ನು ನೋಡಿಕೊಳ್ಳಲಿ.


ಎಲ್ಲರ ಸಂಗಡ ಸಮಾಧಾನದಿಂದಿರುವದಕ್ಕೂ ಪರಿಶುದ್ಧತೆಯನ್ನು ಹೊಂದುವದಕ್ಕೂ ಪ್ರಯತ್ನಮಾಡಿರಿ;


ಕಡೇ ಮಾತೇನಂದರೆ ಸಹೋದರರೇ ಸಂತೋಷಪಡಿರಿ, ಕ್ರಮಪಡಿಸಿಕೊಳ್ಳಿರಿ; ಧೈರ್ಯವುಳ್ಳವರಾಗಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ; ಆಗ ಪ್ರೀತಿಯನ್ನೂ ಶಾಂತಿಯನ್ನೂ ಕೊಡುವ ದೇವರು ನಿಮ್ಮ ಸಂಗಡ ಇರುವನು.


ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪೆಯಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.


ಸಮಾಧಾನ ಪಡಿಸುವವರು ಧನ್ಯರು; ಅವರು ದೇವರ ಮಕ್ಕಳು ಅನ್ನಿಸಿಕೊಳ್ಳುವರು.


ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೇದನ್ನು ಮಾಡಲಿ; ಸಮಾಧಾನವನ್ನು ಹಾರೈಸಿ ಅದಕ್ಕೋಸ್ಕರ ಪ್ರಯತ್ನಪಡಲಿ.


ಹಾಗಾದರೇನು, ಸಹೋದರರೇ? ನೀವು ಕೂಡಿ ಬಂದಿರುವಾಗ ಒಬ್ಬನು ಹಾಡುವದೂ, ಒಬ್ಬನು ಉಪದೇಶಮಾಡುವದೂ, ಒಬ್ಬನು ತನಗೆ ಪ್ರಕಟವಾದದ್ದನ್ನು ತಿಳಿಸುವದೂ, ಒಬ್ಬನು ವಾಣಿಯನ್ನಾಡುವದೂ, ಒಬ್ಬನು ಅದರ ಅರ್ಥವನ್ನು ಹೇಳುವದೂ ಉಂಟಷ್ಟೆ. ನೀವು ಏನೂ ನಡಿಸಿದರೂ ಭಕ್ತಿವೃದ್ಧಿಗಾಗಿಯೇ ನಡಿಸಿರಿ.


ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೆ ಮನುಷ್ಯರೆಲ್ಲರೂ ರಕ್ಷಣೆಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ ಎಲ್ಲರನ್ನೂ ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ.


ಆಹಾ, ಸಹೋದರರು ಒಂದಾಗಿರುವದು ಎಷ್ಟೋ ಒಳ್ಳೇದು, ಎಷ್ಟೋ ರಮ್ಯವಾದದ್ದು!


ನೀನು ಯೌವನದ ಇಚ್ಫೆಗಳಿಗೆ ದೂರವಾಗಿರು; ನೀತಿ ವಿಶ್ವಾಸ ಪ್ರೀತಿ ಮತ್ತು ಸಮಾಧಾನವನ್ನು ಸಂಪಾದಿಸುವದಕ್ಕೆ ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ಪ್ರಯಾಸಪಡು.


ಕಲ್ಪನಾಕಥೆಗಳಿಗೂ ಕೊನೆಮೊದಲಿಲ್ಲದ ವಂಶಾವಳಿಗಳಿಗೂ ಲಕ್ಷ್ಯಕೊಡಬಾರದೆಂತಲೂ ಆಜ್ಞಾಪಿಸಬೇಕೆಂಬದಾಗಿ ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ದೇವರು ನಿರ್ವಹಿಸುವ ಕೆಲಸಕ್ಕೆ ಅನುಕೂಲವಾಗಿಲ್ಲ; ಇದರಲ್ಲಿ ನಂಬಿಕೆಯೇ ಮುಖ್ಯವಾದದ್ದು.


ನಾವು ಇಷ್ಟು ಹೊತ್ತು ನಿಮ್ಮ ಮುಂದೆ ಪ್ರತಿವಾದ ಮಾಡುವವರೆಂದು ನೆನಸುತ್ತೀರೋ? ನಿಮ್ಮ ಮುಂದೆಯಲ್ಲ, ದೇವರ ಸನ್ನಿಧಾನದಲ್ಲಿಯೇ ನಾವು ಕ್ರಿಸ್ತನಲ್ಲಿದ್ದು ಮಾತಾಡುವವರಾಗಿದ್ದೇವೆ. ಪ್ರಿಯರೇ, ನಾವು ಮಾತಾಡುವದೆಲ್ಲಾ ನಿಮ್ಮ ಭಕ್ತಿವೃದ್ಧಿಗೋಸ್ಕರವೇ ಆಗಿದೆ.


ಆದರೆ ಕ್ರಿಸ್ತನಂಬಿಕೆಯಿಲ್ಲದವನು ಅಗಲಬೇಕೆಂದಿದ್ದರೆ ಅಗಲಿಹೋಗಲಿ; ಇಂಥ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನಾಗಲಿ ಸಹೋದರಿಯಾಗಲಿ ಬದ್ಧರಲ್ಲ. ಸಮಾಧಾನದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.


ವಿಗ್ರಹಕ್ಕೆ ನೈವೇದ್ಯ ಮಾಡಿದ ಪದಾರ್ಥಗಳ ವಿಷಯದಲ್ಲಿ ಈಗ ನೋಡೋಣ. ನಮ್ಮೆಲ್ಲರಿಗೆ ಜ್ಞಾನವುಂಟೆಂದು ಬಲ್ಲೆವು. ಜ್ಞಾನವು ಉಬ್ಬಿಸುತ್ತದೆ, ಪ್ರೀತಿಯು ಭಕ್ತಿವೃದ್ಧಿಯನ್ನುಂಟುಮಾಡುತ್ತದೆ.


ಎಲ್ಲಾ ಕಾರ್ಯಗಳನ್ನು ಮಾಡುವದಕ್ಕೆ ಸ್ವಾತಂತ್ರ್ಯವುಂಟು, ಆದರೆ ಎಲ್ಲವೂ ವಿಹಿತವಾಗಿರುವದಿಲ್ಲ. ಎಲ್ಲಾ ಕಾರ್ಯಗಳನ್ನು ಮಾಡುವದಕ್ಕೆ ಸ್ವಾತಂತ್ರ್ಯವುಂಟು,


ಪ್ರವಾದಿಸುವವರಾದರೋ ಮನುಷ್ಯರ ಸಂಗಡ ಮಾತಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟುಮಾಡುತ್ತಾನೆ.


ವಾಣಿಯನ್ನಾಡುವವನು ತನಗೆ ಮಾತ್ರ ಭಕ್ತಿವೃದ್ಧಿಯನ್ನುಂಟುಮಾಡುತ್ತಾನೆ, ಪ್ರವಾದಿಸುವವನು ಸಭೆಗೆ ಭಕ್ತಿವೃದ್ಧಿಯನ್ನುಂಟುಮಾಡುತ್ತಾನೆ.


ನೀವೆಲ್ಲರೂ ವಾಣಿಗಳನ್ನಾಡಬೇಕೆಂದು ನಾನು ಅಪೇಕ್ಷಿಸಿದರೂ ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬದೇ ನನ್ನಿಷ್ಟ. ವಾಣಿಗಳನ್ನಾಡುವವನು ಸಭೆಗೆ ಭಕ್ತಿವೃದ್ಧಿಯಾಗುವದಕ್ಕಾಗಿ ಆ ವಾಣಿಯ ಅರ್ಥವನ್ನು ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠ.


ದೇವಜನರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸಭೆಯ ಸೇವೆಗೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೋಸ್ಕರವೂ ಆತನು ಇವರನ್ನು ಅನುಗ್ರಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು