Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:22 - ಕನ್ನಡ ಸತ್ಯವೇದವು J.V. (BSI)

22 ನಿನಗಿರುವ ನಂಬಿಕೆಯು ದೇವರಿಗೆ ಮಾತ್ರ ಗೋಚರವಾಗಿ ನಿನ್ನ ಮಟ್ಟಿಗೇ ಇರಲಿ. ತಾನು ಒಪ್ಪಿದ ಕೆಲಸದ ವಿಷಯದಲ್ಲಿ ಇದು ಸರಿಯೋ ಸರಿಯಲ್ಲವೋ ಎಂದು ಸಂಶಯ ಪಡದವನೇ ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಿನಗಿರುವ ನಂಬಿಕೆಯು ದೇವರಿಗೆ ಮಾತ್ರ ಗೋಚರವಾಗಿ ಅದು ನಿನ್ನ ಮಟ್ಟಿಗೆ ಮಾತ್ರ ಇರಲಿ. ತಾನು ಒಪ್ಪಿದ ವಿಷಯದಲ್ಲಿ ಸಂಶಯ ಪಡದವನೇ ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಈ ವಿಷಯದಲ್ಲಿ ನಿನಗಿರುವ ವೈಯಕ್ತಿಕ ನಂಬಿಕೆ ದೇವರಿಗೆ ಮತ್ತು ನಿನಗೆ ಮಾತ್ರ ತಿಳಿದಿರಲಿ. ತಾನು ಅನುಮೋದಿಸಿ ಮಾಡಿದುದರ ಬಗ್ಗೆ ಅನುಮಾನಪಡದವನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಈ ಸಂಗತಿಗಳ ಬಗ್ಗೆ ನಿನಗಿರುವ ವಿಶ್ವಾಸವು ನಿನಗೂ ದೇವರಿಗೂ ಮಾತ್ರ ತಿಳಿದಿರಲಿ. ತನಗೆ ಸರಿಯೆನಿಸಿದ ಕಾರ್ಯಗಳನ್ನು ತಾನು ದೋಷಿಯಾಗುತ್ತೇನೆಂಬ ಸಂಶಯವಿಲ್ಲದೆ ಮಾಡುವವನೇ ಭಾಗ್ಯವಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಈ ವಿಷಯದಲ್ಲಿ ನಿಮಗಿರುವ ವೈಯಕ್ತಿಕ ದೃಢವಿಶ್ವಾಸವನ್ನು ನೀವು ದೇವರ ಮುಂದೆ ಇಟ್ಟುಕೊಂಡಿರು. ತಾವು ಅನುಮೋದಿಸಿ ಮಾಡಿದ ಕಾರ್ಯಗಳ ಬಗ್ಗೆ ತಮಗೆ ದಂಡನಾತೀರ್ಪು ಮಾಡಿಕೊಳ್ಳದವರು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ವಿಶ್ವಾಸಾಚ್ಯಾ ವೈನಾ ದೆವಾಚ್ಯಾ ನದ್ರೆತ್ ತಿಯಾ ಕರಲ್ಲೊ ನಿರ್‍ದಾರ್ ತುಜ್ಯಾ ಜಿವನಾಚೊ ಉಜ್ವೊಡ್ ಹೊವ್ನ್ ರ್‍ಹಾಂವ್ದಿತ್. ಅಪ್ನಾಚ್ಯಾ ಭುತ್ತುರ್‍ಲ್ಯಾ ಮನಾಚ್ಯಾ ವಿರೊದ್ ಜಾಯ್ನಸ್ತಾನಾ ಹೆ ನಾಹೊಲ್ಯಾರ್ ತೆ ಕರುಕ್ ನಿರ್‍ದಾರ್ ಘೆತಲೊ ಮಾನುಸ್ ಸುಖಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:22
13 ತಿಳಿವುಗಳ ಹೋಲಿಕೆ  

ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ದೋಷಿಗಳೆಂದು ನಿರ್ಣಯಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಧೈರ್ಯವುಂಟು.


ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ವಿಶೇಷವೆಂದೆಣಿಸುತ್ತಾನೆ; ಮತ್ತೊಬ್ಬನು ಎಲ್ಲಾ ದಿವಸಗಳನ್ನೂ ವಿಶೇಷವೆಂದೆಣಿಸುತ್ತಾನೆ; ಪ್ರತಿಯೊಬ್ಬನು ತನ್ನ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಿರಬೇಕು.


ನಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಲಕ್ಷಣವಾಗಿರುವ ಶಾಂತಗುಣದಿಂದ ಅದರ ಫಲವನ್ನು ತೋರಿಸಲಿ.


ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವದೋ ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮನಿಂದ ನಡಿಸಿಕೊಳ್ಳುವ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀನಾದರೋ ದುಷ್ಪ್ರೇರಣೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.


ಸಂಶಯಪಟ್ಟು ಉಣ್ಣುವವನು ಸಂಶಯದಿಂದ ಉಣ್ಣುವ ಕಾರಣ ದೋಷಿಯಾಗಿದ್ದಾನೆ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.


ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;


ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಬಲ್ಲೆನು, ಮತ್ತು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧ.


ಒಬ್ಬನು ಯಾವದನ್ನಾದರೂ ತಿನ್ನಬಹುದೆಂದು ನಂಬುತ್ತಾನೆ; ನಂಬಿಕೆಯಲ್ಲಿ ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ.


ಇದರ ದೆಸೆಯಿಂದ ದೇವರ ವಿಷಯದಲ್ಲಿಯೂ ಮನುಷ್ಯರ ವಿಷಯದಲ್ಲಿಯೂ ನಾನು ನಿರ್ದೋಷಿ ಎಂದು ಸಾಕ್ಷಿ ಹೇಳುವ ಮನಸ್ಸು ನನಗೆ ಯಾವಾಗಲೂ ಇರಬೇಕೆಂದು ಅಭ್ಯಾಸಮಾಡಿಕೊಳ್ಳುತ್ತೇನೆ.


ಅಯ್ಯೋ, ನಾನು ಎಂಥ ದುರವಸ್ಥೆಯಲ್ಲಿ ಬಿದ್ದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹದಿಂದ ನನ್ನನ್ನು ಬಿಡಿಸುವವನು ಯಾರು?


ಹೇಗಂದರೆ ನಾನು ಮಾಡುವದು ನನಗೇ ಗೊತ್ತಿಲ್ಲ; ಯಾವದನ್ನು ಮಾಡಬೇಕೆಂದು ನಾನು ಇಚ್ಫೈಸುತ್ತೇನೋ ಅದನ್ನು ನಡಿಸದೆ ನನಗೆ ಅಸಹ್ಯವಾದದ್ದನ್ನು ಮಾಡುತ್ತೇನೆ.


ಆದದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಯಾವನಾದರೂ ಸರಿಯೇ, ಉತ್ತರ ಹೇಳುವದಕ್ಕೆ ನಿನಗೆ ಮಾರ್ಗವಿಲ್ಲ. ಹೇಗಂದರೆ ಮತ್ತೊಬ್ಬರಲ್ಲಿ ದೋಷವೆಣಿಸುವದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ನಡಿಸುತ್ತೀಯಲ್ಲಾ.


ಆದರೆ ಈ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈ ವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಕ್ಕೆ ನೈವೇದ್ಯ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿದ್ದು ಕಲೆಯನ್ನು ಹೊಂದುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು