Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:5 - ಕನ್ನಡ ಸತ್ಯವೇದವು J.V. (BSI)

5 ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ವಿಶೇಷವೆಂದೆಣಿಸುತ್ತಾನೆ; ಮತ್ತೊಬ್ಬನು ಎಲ್ಲಾ ದಿವಸಗಳನ್ನೂ ವಿಶೇಷವೆಂದೆಣಿಸುತ್ತಾನೆ; ಪ್ರತಿಯೊಬ್ಬನು ತನ್ನ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ವಿಶೇಷವೆಂದೆಣಿಸುತ್ತಾನೆ; ಮತ್ತೊಬ್ಬನು ಎಲ್ಲಾ ದಿನಗಳನ್ನೂ ವಿಶೇಷವೆಂದೆಣಿಸುತ್ತಾನೆ; ಪ್ರತಿಯೊಬ್ಬನು ತನ್ನ ತನ್ನ ಮನಸ್ಸಿನಲ್ಲಿ ಚಂಚಲಪಡದೆ ದೃಢವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಒಂದು ದಿನಕ್ಕಿಂತ ಮತ್ತೊಂದು ದಿನ ಮಂಗಳಕರವಾದುದು ಎಂದು ಒಬ್ಬನು ಭಾವಿಸಬಹುದು. ಮತ್ತೊಬ್ಬನು, ಎಲ್ಲಾ ದಿನಗಳು ಮಂಗಳಕರವಾದುವು ಎಂದು ಹೇಳಬಹುದು. ಈ ವಿಷಯದಲ್ಲಿ ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಂತೆ ನಡೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ಹೆಚ್ಚು ಮುಖ್ಯವೆಂದು ನಂಬಬಹುದು. ಆದರೆ ಇನ್ನೊಬ್ಬನು ಎಲ್ಲಾ ದಿನಗಳು ಒಂದೇ ಎಂದು ನಂಬಬಹುದು. ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಸ್ವಂತ ಮನಸ್ಸಿನಲ್ಲಿರುವ ತನ್ನ ಸ್ವಂತ ನಂಬಿಕೆಯ ಬಗ್ಗೆ ನಿಶ್ಚಯದಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕೆಲವರು ಒಂದು ದಿನವನ್ನು ಮತ್ತೊಂದು ದಿನಕ್ಕಿಂತ ವಿಶೇಷವೆಂದು ಎಣಿಸುತ್ತಾರೆ. ಪ್ರತಿಯೊಬ್ಬರೂ ತಮ್ಮ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಂತೆ ನಡೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಉಲ್ಲಿ ಲೊಕಾ ಹ್ಯಾ ದಿಸಾನಿಕಿ ತೊ ದಿಸ್ ಲೈ ಮಹತ್ವಾಚೊ ಮನುನ್ ಚಿಂತ್ಯಾತ್, ಅನಿ ಅನಿಎಕ್ಲೊ ಸಗ್ಳಿ ದಿಸಾಬಿ ಸಮಾ ಮನುನ್ ಚಿಂತುಕ್ ಫಿರೆ, ಹೆಚ್ಯಾ ವಿಶಯಾತ್ ಹರಿ ಎಕ್ಲ್ಯಾನಿ ಅಪ್ನಾಚ್ಯಾ ಮನಾಕ್ ಖಲೆ ಬರೆ ದಿಸ್ತಾ ತೊ ನಿರ್‍ದಾರ್ ಘೆವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:5
9 ತಿಳಿವುಗಳ ಹೋಲಿಕೆ  

ಸಂಶಯಪಟ್ಟು ಉಣ್ಣುವವನು ಸಂಶಯದಿಂದ ಉಣ್ಣುವ ಕಾರಣ ದೋಷಿಯಾಗಿದ್ದಾನೆ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.


ಆದರೆ ಈ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈ ವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಕ್ಕೆ ನೈವೇದ್ಯ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿದ್ದು ಕಲೆಯನ್ನು ಹೊಂದುತ್ತದೆ.


ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಬಲ್ಲೆನು, ಮತ್ತು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧ.


ಹೀಗೆ ಆ ಬಲಹೀನನು ನಿನ್ನ ಜ್ಞಾನದಿಂದ ನಾಶವಾಗುತ್ತಾನೆ. ಅವನು ಸಹೋದರನಲ್ಲವೇ. ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣಕೊಟ್ಟನಲ್ಲವೇ.


ಶ್ರೀಮತ್ ಥೆಯೊಫಿಲನೇ, ನಮ್ಮಲ್ಲಿ ನಿಶ್ಚಯಕ್ಕೆ ಬಂದಿರುವ ಕಾರ್ಯಗಳನ್ನು ಮೊದಲಿಂದ ಕಣ್ಣಾರೆ ಕಂಡು ಸುವಾರ್ತಾ ವಾಕ್ಯವನ್ನು ಸಾರುತ್ತಿದ್ದವರು ನಮಗೆ ತಿಳಿಸಿದ ಪ್ರಕಾರ ಆ ಕಾರ್ಯಗಳನ್ನು ಚರಿತ್ರ ರೂಪವಾಗಿ ಬರೆಯುವದಕ್ಕೆ ಅನೇಕರು ಪ್ರಯತ್ನಿಸಿರಲಾಗಿ


ದೇವರನ್ನು ಘನಪಡಿಸುವವನಾಗಿ ಆತನು ತನ್ನ ವಾಗ್ದಾನವನ್ನು ನೆರವೇರಿಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟು ದೃಢನಂಬಿಕೆಯುಳ್ಳವನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು