Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:6 - ಕನ್ನಡ ಸತ್ಯವೇದವು J.V. (BSI)

6 ದಿನವನ್ನು ಗಣ್ಯಮಾಡುವವನು ಕರ್ತನಿಗಾಗಿ ಅದನ್ನು ಗಣ್ಯಮಾಡುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವಸ್ತೋತ್ರ ಮಾಡುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವಸ್ತೋತ್ರ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದಿನವನ್ನು ಆಚರಿಸುವವನು ಕರ್ತನಿಗಾಗಿ ಅದನ್ನು ಆಚರಿಸುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರನ್ನು ಸ್ತುತಿಸುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವರನ್ನು ಸ್ತುತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಒಂದು ದಿನವನ್ನು ಮಂಗಳಕರವೆಂದು ಭಾವಿಸುವವನು ಪ್ರಭುವಿಗಾಗಿಯೇ ಆ ರೀತಿ ಭಾವಿಸುತ್ತಾನೆ. ಮಾಂಸವನ್ನು ತಿನ್ನುವವನು ಪ್ರಭುವಿಗಾಗಿಯೇ ತಿನ್ನುತ್ತಾನೆ. ಹೇಗೆಂದರೆ, ತಿನ್ನುವ ಆ ಪದಾರ್ಥಕ್ಕಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾನೆ. ಸಸ್ಯಾಹಾರಿಯೂ ಪ್ರಭುವಿಗಾಗಿಯೇ ಮಾಂಸವನ್ನು ತಿನ್ನದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ಮುಖ್ಯವೆಂದು ಯೋಚಿಸುವ ವ್ಯಕ್ತಿಯು ಪ್ರಭುವಿಗೋಸ್ಕರವಾಗಿಯೇ ಹಾಗೆ ಯೋಚಿಸುವವನಾಗಿದ್ದಾನೆ. ಅಂತೆಯೇ ಎಲ್ಲಾ ಬಗೆಯ ಆಹಾರಪದಾರ್ಥಗಳನ್ನು ತಿನ್ನುವ ವ್ಯಕ್ತಿಯು ಪ್ರಭುವಿಗೋಸ್ಕರವೇ ಅವುಗಳನ್ನು ತಿನ್ನುತ್ತಾನೆ. ಹೌದು, ಅವನು ಆ ಆಹಾರಕ್ಕಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಒಬ್ಬ ಒಂದು ದಿನವನ್ನು ವಿಶೇಷವೆಂದು ಎಣಿಸುವುದಾದರೆ ಅವನು ಅದನ್ನು ಕರ್ತನಿಗಾಗಿಯೇ ಮಾಡಲಿ. ಮಾಂಸಾಹಾರಿಯು ದೇವರಿಗೆ ಕೃತಜ್ಞತೆಯನ್ನು ಮಾಡಿ ಊಟಮಾಡುವುದಾದರೆ ಅವನು ಅದನ್ನು ಮಾಡುವುದು ಕರ್ತನಿಗಾಗಿಯೇ. ಸಸ್ಯಾಹಾರಿಯು ಕರ್ತನಿಗಾಗಿಯೇ ತಿನ್ನದೆ ಕೃತಜ್ಞತೆ ಸಲ್ಲಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಜೆ ಕೊನ್ ತೊ ದಿಸ್ ಲೈ ಮಹತ್ವಾಚೊ ಮನುನ್ ಚಿಂತಾ, ತೊ ತೆ ಧನಿಯಾಚ್ಯಾ ಗೌರವಾಚ್ಯಾ ಸಾಟ್ನಿ ಕರ್‍ತಾ. ಜೆ ಕೊನ್ ಸಗ್ಳೆ ಖಾತಾ ತೆ ಧನಿಯಾಚ್ಯಾ ಗೌರವಾಸಾಟಿ ಮನುನ್ ಖಾತಾ. ಅನಿ ಅಪ್ನಾಕ್ ಗಾವಲ್ಲ್ಯಾ ಖಾನಾಸಾಟಿ ದೆವಾಕ್ ಧನ್ಯವಾದ್ ದಿತಾ. ಅನಿ ಜೊ ಕೊನ್ ಉಲ್ಲಿ ಜಿನಸಾ ಖಾಯ್ನಾ ತೊಬಿ ಧನಿಯಾಚ್ಯಾ ಗೌರವಾಸಾಟಿ ಖಾತಾ, ಅನಿ ತೊಬಿ ಅನಿ ಎಕ್ ರಿತಿನ್ ದೆವಾಕ್ ಧನ್ಯವಾದ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:6
12 ತಿಳಿವುಗಳ ಹೋಲಿಕೆ  

ಆ ಏಳು ರೊಟ್ಟಿಗಳನ್ನೂ ಆ ಮೀನುಗಳನ್ನೂ ತೆಗೆದುಕೊಂಡು ದೇವರ ಸ್ತೋತ್ರಮಾಡಿ ಅವುಗಳನ್ನು ಮುರಿದು ಶಿಷ್ಯರಿಗೆ ಕೊಡಲು ಶಿಷ್ಯರು ಗುಂಪಿನವರಿಗೆ ಹಂಚಿಕೊಟ್ಟರು.


ಮತ್ತು ಜನರಿಗೆ ಹುಲ್ಲಿನ ಮೇಲೆ ಕೂತುಕೊಳ್ಳುವದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತಕ್ಕೊಂಡು ಆಕಾಶದ ಕಡೆಗೆ ನೋಡಿ ದೇವರ ಸ್ತೋತ್ರಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರ ಕೈಗೆ ಕೊಟ್ಟನು; ಶಿಷ್ಯರು ಜನರ ಗುಂಪಿಗೆ ಕೊಟ್ಟರು.


ನೀವು ಆಯಾ ದಿನಗಳನ್ನೂ ಮಾಸಗಳನ್ನೂ ಉತ್ಸವಕಾಲಗಳನ್ನೂ ಸಂವತ್ಸರಗಳನ್ನೂ ನಿಷ್ಠೆಯಿಂದ ಆಚರಿಸುತ್ತೀರಿ.


ಅವರು - ದೇವರಿಗೆ ಮೆಚ್ಚಿಕೆಯಾದ ಕೆಲಸಗಳನ್ನು ನಾವು ನಡಿಸಬೇಕಾದರೆ ಏನು ಮಾಡಬೇಕೆಂದು ಆತನನ್ನು ಕೇಳಿದ್ದಕ್ಕೆ


ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವದಕ್ಕಾಗಿ ನಾನು ನೇವಿುಸಿದ ಉಪವಾಸದಿನವು ಇಂಥದೋ? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣೀತಟ್ಟನ್ನೂ ಬೂದಿಯನ್ನೂ ಆಸನಮಾಡಿಕೊಳ್ಳುವದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ?


ಆಗ ಮೋಶೆ ಅವರಿಗೆ - ಈ ಹೊತ್ತು ಅದನ್ನು ಊಟ ಮಾಡಿರಿ; ಈ ದಿನವು ಯೆಹೋವನ ಸಬ್ಬತ್ ದಿನವಾದದರಿಂದ ಈ ಹೊತ್ತು ಅದು ಅಡವಿಯಲ್ಲಿ ದೊರೆಯುವದಿಲ್ಲ.


ಯೆಹೋವನು ಆ ರಾತ್ರಿಯಲ್ಲಿಯೇ ಅವರನ್ನು ಐಗುಪ್ತದೇಶದಿಂದ ಹೊರಗೆ ಬರಮಾಡಿದ್ದರಿಂದ ಅವರು ಈ ರಾತ್ರಿಯಲ್ಲಿ ಆತನ ಘನಕ್ಕಾಗಿ ಜಾಗರಣೆಯನ್ನು ಮಾಡಬೇಕು. ಇಸ್ರಾಯೇಲ್ಯರೆಲ್ಲರೂ ತಲತಲಾಂತರಕ್ಕೂ ಯೆಹೋವನಿಗೆ ಈ ಜಾಗರಣೆಯನ್ನು ಮಾಡಬೇಕು.


ಆ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು. ಅದರಲ್ಲಿ ಯೆಹೋವನ ಘನಕ್ಕಾಗಿ ಹಬ್ಬವನ್ನು ಮಾಡಬೇಕು. ಅದನ್ನು ಶಾಶ್ವತನಿಯಮವೆಂದು ತಲತಲಾಂತರಕ್ಕೂ ಆಚರಿಸಬೇಕು.


ಅಲ್ಲದೆ ಯೆರೂಸಲೇಮಿನಲ್ಲಿಯೂ ಯೆಹೂದದಲ್ಲಿಯೂ ಇರುವ ಸಕಲ ಪಾತ್ರೆಗಳು ಸೇನಾಧೀಶ್ವರ ಯೆಹೋವನಿಗೆ ಮೀಸಲಾಗಿರುವವು; ಯಜ್ಞಮಾಡುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಅವುಗಳಲ್ಲಿ ಬೇಯಿಸುವರು; ಆ ದಿನದಲ್ಲಿ ಸೇನಾಧೀಶ್ವರ ಯೆಹೋವನ ಆಲಯದೊಳಗೆ ಯಾವ ವ್ಯಾಪಾರಿಯೂ ಇರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು