Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:14 - ಕನ್ನಡ ಸತ್ಯವೇದವು J.V. (BSI)

14 ನನ್ನ ಸಹೋದರರೇ, ನೀವಂತೂ ಒಳ್ಳೇತನದಿಂದ ಭರಿತರಾಗಿಯೂ ಸಕಲ ಜ್ಞಾನದಿಂದ ತುಂಬಿದವರಾಗಿಯೂ ಒಬ್ಬರಿಗೊಬ್ಬರು ಬುದ್ಧಿ ಹೇಳುವದಕ್ಕೆ ಶಕ್ತರಾಗಿಯೂ ಇದ್ದೀರೆಂದು ನಿಮ್ಮ ವಿಷಯದಲ್ಲಿ ನನಗೂ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನನ್ನ ಸಹೋದರರೇ, ನೀವಂತೂ ಒಳ್ಳೆತನದಿಂದ ತುಂಬಿದವರಾಗಿದ್ದು, ಸಕಲ ಜ್ಞಾನದಿಂದ ತುಂಬಿದವರಾಗಿಯೂ ಒಬ್ಬರಿಗೊಬ್ಬರು ಬುದ್ಧಿಹೇಳುವುದಕ್ಕೆ ಶಕ್ತರಾಗಿಯೂ ಇದ್ದೀರೆಂದು ನಿಮ್ಮ ವಿಷಯದಲ್ಲಿ ದೃಢವಾಗಿ ನಂಬಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸಹೋದರರೇ, ನೀವು ಗುಣಸಂಪನ್ನರೂ ಜ್ಞಾನಸಂಪನ್ನರೂ ಒಬ್ಬರಿಗೊಬ್ಬರು ಬುದ್ಧಿಹೇಳಿಕೊಳ್ಳಲು ಸಮರ್ಥರೂ ಆಗಿದ್ದೀರಿ ಎಂದು ನಾನು ಚೆನ್ನಾಗಿ ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನನ್ನ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಒಳ್ಳೆಯತನವು ತುಂಬಿದೆಯೆಂದು ನನಗೆ ನಿಶ್ಚಯವಾಗಿ ಗೊತ್ತಿದೆ. ಅಗತ್ಯವಾದ ಸಕಲ ಜ್ಞಾನವು ನಿಮಗಿದೆಯೆಂದು ಮತ್ತು ಒಬ್ಬರಿಗೊಬ್ಬರು ಸಲಹೆ ನೀಡಬಲ್ಲಿರೆಂದು ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನನ್ನ ಪ್ರಿಯರೇ, ನೀವು ಒಳ್ಳೆಯತನದಿಂದ ಪೂರ್ಣವಾದವರೂ ಸಕಲ ತಿಳುವಳಿಕೆಯಿಂದ ತುಂಬಿದವರೂ ಆಗಿದ್ದು, ಒಬ್ಬರಿಗೊಬ್ಬರು ಬುದ್ಧಿ ಹೇಳುವುದಕ್ಕೆ ಶಕ್ತರಾಗಿದ್ದೀರೆಂದು ನಿಮ್ಮ ಬಗ್ಗೆ ನನಗೆ ಭರವಸೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಮಾಜ್ಯಾ ಭಾವಾನು ಅನಿ ಭೆನಿಯಾನು, ತುಮಿ ಬರ್‍ಯಾ ಮನಾಚಿ ಲೊಕಾ ಅನಿ ಸಗ್ಳ್ಯಾ ರಿತಿಚ್ಯಾ ಶಾನೆಪಾನಾನಿ ಅನಿ ಭರಲ್ಲಿ ಲೊಕಾ ತಸೆಮನುನ್ ಎಕಾಮೆಕಾಕ್ನಿ ಬುದ್‍ಬಾಳ್ ಸಾಂಗುಕ್ ತುಮ್ಚ್ಯಾನ್ ಹೊತಾ ಮನುನ್ ಮಾಕಾ ಖರೆಚ್ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:14
25 ತಿಳಿವುಗಳ ಹೋಲಿಕೆ  

ಆದದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ ನಿಮಗೆ ದೊರಕಿರುವ ಸತ್ಯದಲ್ಲಿ ಸ್ಥಿರವಾಗಿದ್ದರೂ ಅವುಗಳನ್ನು ನಿಮಗೆ ಜ್ಞಾಪಕಕೊಡುವದಕ್ಕೆ ನಾನು ಯಾವಾಗಲೂ ಸಿದ್ಧವಾಗಿರುವೆನು.


ನೀವು ಸತ್ಯವನ್ನು ತಿಳಿಯದವರೆಂಬ ಭಾವನೆಯಿಂದಲ್ಲ, ನೀವು ಅದನ್ನು ತಿಳಿದಿರುವದರಿಂದಲೂ ಯಾವ ಸುಳ್ಳೂ ಸತ್ಯದಿಂದ ಹುಟ್ಟಿ ಬರುವದಿಲ್ಲವೆಂಬದನ್ನು ನೀವು ತಿಳಿದವರಾಗಿರುವದರಿಂದಲೂ ನಿಮಗೆ ಬರೆದೆನು.


ವಿಗ್ರಹಕ್ಕೆ ನೈವೇದ್ಯ ಮಾಡಿದ ಪದಾರ್ಥಗಳ ವಿಷಯದಲ್ಲಿ ಈಗ ನೋಡೋಣ. ನಮ್ಮೆಲ್ಲರಿಗೆ ಜ್ಞಾನವುಂಟೆಂದು ಬಲ್ಲೆವು. ಜ್ಞಾನವು ಉಬ್ಬಿಸುತ್ತದೆ, ಪ್ರೀತಿಯು ಭಕ್ತಿವೃದ್ಧಿಯನ್ನುಂಟುಮಾಡುತ್ತದೆ.


ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.


ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಸಕಲಜ್ಞಾನದಿಂದ ಕೂಡಿದವರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿಕೊಳ್ಳಿರಿ, ಬುದ್ಧಿಹೇಳಿಕೊಳ್ಳಿರಿ; ಕರ್ತನ ಕೃಪೆಯನ್ನು ನೆನಸಿಕೊಳ್ಳುವವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಗಾನಮಾಡಿರಿ.


ಜ್ಞಾನಿಯಾದ ನೀನು ವಿಗ್ರಹಾಲಯದಲ್ಲಿ ಊಟಕ್ಕೆ ಕೂತಿರುವಾಗ ನಿರ್ಬಲವಾದ ಮನಸ್ಸುಳ್ಳ ಸಹೋದರನು ಕಂಡರೆ ಅವನೂ ವಿಗ್ರಹಕ್ಕೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೆ ಧೈರ್ಯತಂದುಕೊಂಡಾನಲ್ಲವೇ.


ಆದರೆ ಈ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈ ವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಕ್ಕೆ ನೈವೇದ್ಯ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿದ್ದು ಕಲೆಯನ್ನು ಹೊಂದುತ್ತದೆ.


ಯಾಕಂದರೆ ಕ್ರಿಸ್ತನ ವಿಷಯವಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿ ನೆಲೆಗೊಂಡ ಕಾರಣ ನೀವು ಎಲ್ಲಾ ನುಡಿಯಲ್ಲಿಯೂ ಎಲ್ಲಾ ತಿಳುವಳಿಕೆಯಲ್ಲಿಯೂ ಆತನಲ್ಲಿ ಸಮೃದ್ಧಿ ಹೊಂದಿದವರಾಗಿದ್ದೀರಿ.


ನನ್ನ ಮಾತನ್ನು ಕೇಳುವಿ ಎಂಬ ಭರವಸವುಳ್ಳವನಾಗಿ ಈ ಪತ್ರಿಕೆಯನ್ನು ನಿನಗೆ ಬರೆದಿದ್ದೇನೆ. ನಾನು ಹೇಳಿದ್ದಕ್ಕಿಂತಲೂ ಹೆಚ್ಚಾಗಿ ಮಾಡುವಿಯೆಂದು ನನಗೆ ಗೊತ್ತುಂಟು.


ಸಹೋದರರೇ, ಅಕ್ರಮವಾಗಿ ನಡೆಯುವವರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರಲ್ಲಿಯೂ ದೀರ್ಘಶಾಂತರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ಬೆಳಕಿನವರಂತೆ ನಡೆದುಕೊಳ್ಳಿರಿ. ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.


ಆದರೆ ಪ್ರಿಯರೇ, ಈ ರೀತಿಯಾಗಿ ನಾವು ಮಾತಾಡಿದರೂ ನೀವು ಇದಕ್ಕಿಂತ ಉತ್ತಮವಾಗಿಯೂ ರಕ್ಷಣಕರವಾಗಿಯೂ ಇರುವ ಸ್ಥಿತಿಯಲ್ಲಿದ್ದೀರೆಂದು ದೃಢವಾಗಿ ನಂಬಿದ್ದೇನೆ.


ಕಾಲವನ್ನು ನೋಡಿದರೆ ನೀವು ಇಷ್ಟರೊಳಗೆ ಬೋಧಕರಾಗಿರಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.


ನಿನ್ನಲ್ಲಿರುವ ನಿಷ್ಕಪಟವಾದ ನಂಬಿಕೆಯು ನನ್ನ ನೆನಪಿಗೆ ಬಂತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು; ಹಾಗೆಯೇ ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ.


ಸರಳರಾಗಿಯೂ ನಿರ್ಮಲರಾಗಿಯೂ ಯೇಸು ಕ್ರಿಸ್ತನ ಮೂಲಕವಾಗಿರುವ ಸುನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಕಾಣಿಸಿಕೊಂಡು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ತರಬೇಕೆಂತಲೂ ಬೇಡಿಕೊಳ್ಳುತ್ತೇನೆ.


ನಿಮ್ಮೆಲ್ಲರ ವಿಷಯದಲ್ಲಿ ಈ ಅಭಿಪ್ರಾಯವುಳ್ಳವನಾಗಿರುವದು ನ್ಯಾಯವಾಗಿದೆ; ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.


ನನಗೆ ಪ್ರವಾದನವರವಿದ್ದರೂ ಎಲ್ಲಾ ರಹಸ್ಯಗಳೂ ಸಕಲ ವಿಧವಾದ ವಿದ್ಯೆಯೂ ತಿಳಿದರೂ, ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿದ್ದೇನೆ.


ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಆ ಆತ್ಮನಿಗೆ ಅನುಗುಣವಾಗಿ ವಿದ್ಯಾವಾಕ್ಯವು,


ನೀವು ದೇವರ ಮೇಲಣ ನಂಬಿಕೆ ವಾಕ್ಚಾತುರ್ಯ ಜ್ಞಾನ ಸಕಲವಿಧವಾದ ಆಸಕ್ತಿ ನಮ್ಮ ಪ್ರೇರಣೆಯಿಂದ ನಿಮ್ಮಲ್ಲಿ ಹುಟ್ಟಿದ ಪ್ರೀತಿ ಇವೇ ಮೊದಲಾದ ಎಲ್ಲಾ ವಿಷಯಗಳಲ್ಲಿ ಹೇಗೆ ಸಮೃದ್ಧರಾಗಿದ್ದೀರೋ ಹಾಗೆಯೇ ಈ ಧರ್ಮಕಾರ್ಯದಲ್ಲಿಯೂ ಸಮೃದ್ಧರಾಗಿರಿ.


ಆ ದಿನವನ್ನು ನಾವು ಎದುರುನೋಡುತ್ತಾ ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಮಾಡಿ - ನಮ್ಮ ದೇವರು ನಿಮ್ಮನ್ನು ಕರೆದದ್ದಕ್ಕೆ ತಾನೇ ನಿಮ್ಮನ್ನು ಯೋಗ್ಯರೆಂದು ಎಣಿಸಬೇಕೆಂತಲೂ ಸತ್ಕ್ರಿಯೆಗಳಲ್ಲಿ ಸಂತೋಷಿಸುವ ನಿಮ್ಮ ಸಕಲ ಆಲೋಚನೆಯನ್ನೂ ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಶಕ್ತಿಪೂರ್ವಕವಾಗಿ ಸಿದ್ಧಿಗೆ ತರಬೇಕೆಂತಲೂ ಬೇಡಿಕೊಳ್ಳುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು