Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:18 - ಕನ್ನಡ ಸತ್ಯವೇದವು J.V. (BSI)

18 ಕ್ರಿಸ್ತನು ಅನ್ಯಜನಗಳನ್ನು ತನಗೆ ಅಧೀನಮಾಡಿಕೊಳ್ಳುವದಕ್ಕಾಗಿ ನನ್ನ ಕೈಯಿಂದ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ ಸೂಚಕಕಾರ್ಯ ಅದ್ಭುತಕಾರ್ಯಗಳ ಬಲದಿಂದಲೂ ಪವಿತ್ರಾತ್ಮನ ಬಲದಿಂದಲೂ ಮಾಡಿಸಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವದಕ್ಕೆ ನನಗೆ ಧೈರ್ಯಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಕ್ರಿಸ್ತನು ಅನ್ಯಜನಗಳನ್ನು ತನಗೆ ಅಧೀನಮಾಡಿಕೊಳ್ಳುವುದಕ್ಕಾಗಿ ನನ್ನ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ, ಸೂಚಕಕಾರ್ಯಗಳ, ಅದ್ಭುತಕಾರ್ಯಗಳ ಬಲದಿಂದಲೂ, ಪವಿತ್ರಾತ್ಮನ ಬಲದಿಂದಲೂ ಮಾಡಿಸಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವುದಕ್ಕೆ ನನಗೆ ಧೈರ್ಯ ಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಕ್ರಿಸ್ತಯೇಸು ನನ್ನ ಮುಖಾಂತರ ಅಂದರೆ, ನನ್ನ ಬೋಧನೆ ಹಾಗು ಸಾಧನೆಗಳ ಮೂಲಕ, ಸೂಚಕ ಹಾಗೂ ಅದ್ಭುತಕಾರ್ಯಗಳ ಮೂಲಕ ಮತ್ತು ಪವಿತ್ರಾತ್ಮರ ಶಕ್ತಿಯ ಮೂಲಕ ಯೆಹೂದ್ಯರಲ್ಲದವರನ್ನೂ ತಮ್ಮ ಶರಣರನ್ನಾಗಿಸಿಕೊಂಡಿದ್ದಾರೆ. ಇದೊಂದನ್ನು ಬಿಟ್ಟು ಬೇರೆ ಯಾವುದನ್ನು ಕುರಿತು ಹೊಗಳಿಕೊಳ್ಳಲು ನಾನು ಧೈರ್ಯಗೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಾನು ನನ್ನ ಸ್ವಕಾರ್ಯಗಳ ಬಗ್ಗೆಯೂ ಮಾತಾಡುವುದಿಲ್ಲ. ಯೆಹೂದ್ಯರಲ್ಲದ ಜನರನ್ನು ತನಗೆ ವಿಧೇಯರನ್ನಾಗಿ ಮಾಡಿಕೊಳ್ಳಲು ಕ್ರಿಸ್ತನು ನನ್ನ ಮೂಲಕ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ ಮಾಡಿದ ಕಾರ್ಯಗಳನ್ನು ಹೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೆಹೂದ್ಯರಲ್ಲದವರನ್ನು ದೇವರಿಗೆ ವಿಧೇಯರಾಗುವುದಕ್ಕಾಗಿ ಕ್ರಿಸ್ತನು ನನ್ನ ಮೂಲಕ ಮಾತಿನಿಂದಲೂ ಕೃತ್ಯದಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿ ದೆವಾಕ್ ಖಾಲ್ತಿ ಹೊವ್ನ್ ಚಲಿ ಸರ್ಕೆ ಕರುಕ್ ಕ್ರಿಸ್ತಾನ್ ಮಾಜೆ ವೈನಾ ಕಾಮ್ ಕರ್‍ಲ್ಯಾನಾಯ್. ತೆಚೆಸಾಟ್ನಿ ಮಿಯಾ ಸಗ್ಳೆ ಫೊಡುನ್ ಬೊಲ್ತಾ. ತೆನಿ ಹೆ ಸಗ್ಳೆ ಗೊಶ್ಟಿಯಾಂಚ್ಯಾ ಅನಿ ಕಾಮಾಂಚ್ಯಾ ವೈನಾ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:18
28 ತಿಳಿವುಗಳ ಹೋಲಿಕೆ  

ಗುಂಪುಕೂಡಿದ್ದವರೆಲ್ಲರು ಈ ಮಾತುಗಳನ್ನು ಕೇಳಿ ಮೌನವಾಗಿದ್ದು ಬಾರ್ನಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸುವದನ್ನು ಕಿವಿಗೊಟ್ಟು ಕೇಳಿದರು.


ಆತನ ಹೆಸರಿನ ಪ್ರಸಿದ್ಧಿಗಾಗಿ ಎಲ್ಲಾ ಅನ್ಯಜನಗಳಲ್ಲಿ ನಂಬಿಕೆಯೆಂಬ ವಿಧೇಯತ್ವ ಉಂಟಾಗುವದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದೆವು.


ಪೌಲನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಕಾರ್ಯಗಳನ್ನು ಒಂದೊಂದಾಗಿ ವಿವರಿಸಿದನು.


ಸುನ್ನತಿಯಾದವರಿಗೆ ಸುವಾರ್ತೆಯನ್ನು ಸಾರುವ ಕೆಲಸವು ಹೇಗೆ ಪೇತ್ರನಿಗೆ ಕೊಡಲ್ಪಟ್ಟಿತೋ ಹಾಗೆಯೇ ಸುನ್ನತಿಯಿಲ್ಲದವರಿಗೆ ಅದನ್ನು ಸಾರುವ ಕೆಲಸವು ನನಗೆ ಕೊಟ್ಟಿರುವದನ್ನು


ಬರೀ ಗಾಳಿ ಮೋಡಗಳು ಹೇಗೋ ದಾನಕೊಡುತ್ತೇನೆಂದು ಸುಳ್ಳಾಡಿ ಜಂಬಮಾಡುವವನೂ ಹಾಗೆಯೇ.


ಸಕಲ ಸತ್ಕಾರ್ಯದಲ್ಲಿಯೂ ಸದ್ವಾಕ್ಯದಲ್ಲಿಯೂ ದೃಢಪಡಿಸಲಿ.


ಆದರೆ ಪ್ರಧಾನ ದೇವದೂತನಾದ ಮೀಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದಮಾಡಿದಾಗ ಅವನು ಸೈತಾನನ ಮೇಲೆ ದೂಷಣಾಭಿಪ್ರಾಯವನ್ನು ಹೇಳುವದಕ್ಕೆ ಧೈರ್ಯಗೊಳ್ಳದೆ - ಕರ್ತನು ನಿನ್ನನ್ನು ಖಂಡಿಸಲಿ ಅಂದನು.


ಪ್ರಿಯರಾದ ಮಕ್ಕಳೇ, ನಾವು ಬರೀಮಾತಿನಿಂದಾಗಲಿ ಬಾಯುಪಚಾರದಿಂದಾಗಲಿ ಪ್ರೀತಿಸುವವರಾಗಿರಬಾರದು; ನಿಮ್ಮ ಪ್ರೀತಿಯು ಕೃತ್ಯದಲ್ಲಿಯೂ ಸತ್ಯದಲ್ಲಿಯೂ ತೋರಬೇಕು.


ವಾಕ್ಯದ ಪ್ರಕಾರ ನಡೆಯುವವರಾಗಿರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಬೇಡಿರಿ.


ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟ ಕೂಡಲೆ ಕರೆದಾತನ ಮಾತನ್ನು ಕೇಳಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.


ಇದಲ್ಲದೆ ಆತನು ಸಿದ್ಧಿಗೆ ಬಂದು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆನಿಸಿಕೊಂಡವನಾಗಿ ತನಗೆ ವಿಧೇಯರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಕಾರಣನಾದನು.


ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.


ಹೊಗಳಿಕೊಳ್ಳುವದಕ್ಕೆ ನನಗೆ ಒಂದು ವೇಳೆ ಮನಸ್ಸಿದ್ದರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾನು ಬುದ್ಧಿಹೀನನಾಗುವದಿಲ್ಲ. ಯಾಕಂದರೆ ಸತ್ಯವನ್ನೇ ಹೇಳುತ್ತಿರುವೆನು. ಆದರೂ ಯಾವನೂ ನನ್ನಲ್ಲಿ ಕಾಣುವದಕ್ಕಿಂತಲೂ ನನ್ನಿಂದ ಕೇಳುವದಕ್ಕಿಂತಲೂ ಹೆಚ್ಚಾಗಿ ನನ್ನನ್ನು ಕುರಿತು ಎಣಿಸಬಾರದು.


ನಾನು ಸುಳ್ಳಾಡುವದಿಲ್ಲವೆಂದು ಕರ್ತನಾದ ಯೇಸುವಿನ ತಂದೆಯೂ ನಿರಂತರ ಸ್ತುತಿಹೊಂದತಕ್ಕವನೂ ಆಗಿರುವ ದೇವರೇ ಬಲ್ಲನು.


ಆದರೆ ನೀವು ಮುಂಚೆ ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಲ್ಪಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದದರಿಂದಲೂ


ಮೊದಲು ದಮಸ್ಕದವರಿಗೆ, ಆಮೇಲೆ ಯೆರೂಸಲೇವಿುನಲ್ಲಿಯೂ ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ - ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


ಅವರು ಯೆರೂಸಲೇವಿುಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ತಿಳಿಸಿದರು.


ಅಲ್ಲಿ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆದದ್ದನ್ನೂ ವಿವರವಾಗಿ ಹೇಳಿದರು.


ಇತ್ತಲಾಗಿ ಅವರು ಹೊರಟುಹೋಗಿ ಎಲ್ಲೆಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಕೂಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ಬಲಪಡಿಸುತ್ತಾ ಇದ್ದನು.]


ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದು - ನೀವು ಹೊಂದಿದ ದೇವರ ಕೃಪೆಯನ್ನು ವ್ಯರ್ಥ ಮಾಡಿಕೊಳ್ಳಬೇಡಿರೆಂದು ಎಚ್ಚರಿಸುತ್ತೇವೆ.


ನಮ್ಮಿಂದಲೇ ಏನಾದರೂ ಉಂಟಾಯಿತೆಂದು ತೀರ್ಮಾನಿಸಿಕೊಳ್ಳುವದಕ್ಕೆ ನಮ್ಮಷ್ಟಕ್ಕೆ ನಾವೇ ಸಮರ್ಥರೆಂತಲ್ಲ; ನಮಗಿರುವ ಸಾಮರ್ಥ್ಯವು ದೇವರಿಂದಲೇ ಬಂದದ್ದು;


ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು