Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:31 - ಕನ್ನಡ ಸತ್ಯವೇದವು J.V. (BSI)

31 ದೇವರು ನನ್ನನ್ನು ಯೂದಾಯದಲ್ಲಿರುವ ಅವಿಧೇಯರ ಕೈಗೆ ತಪ್ಪಿಸಬೇಕೆಂತಲೂ ಯೆರೂಸಲೇವಿುಗೋಸ್ಕರ ನಾನು ಮಾಡುವಂಥ ಈ ಧರ್ಮಕಾರ್ಯವು ಅಲ್ಲಿರುವ ದೇವಜನರಿಗೆ ಹಿತಕರವಾಗಿ ತೋರಬೇಕೆಂತಲೂ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ದೇವರು ನನ್ನನ್ನು ಯೂದಾಯದಲ್ಲಿರುವ ಅವಿಧೇಯರ ಕೈಯಿಂದ ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನಾನು ಮಾಡುವಂಥ ಈ ಧರ್ಮಕಾರ್ಯವು ಅಲ್ಲಿರುವ ದೇವಜನರಿಗೆ ಹಿತಕರವಾಗಿ ತೋರಬೇಕೆಂತಲೂ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಜುದೇಯದಲ್ಲಿರುವ ಅವಿಶ್ವಾಸಿಗಳ ಕೈಯಿಂದ ನಾನು ಪಾರಾಗುವಂತೆ ಪ್ರಾರ್ಥಿಸಿರಿ; ಜೆರುಸಲೇಮಿನ ದೇವಜನರು ನನ್ನ ಸೇವೆಯನ್ನು ಸಂತೋಷದಿಂದ ಸ್ವೀಕರಿಸುವಂತೆ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಜುದೇಯದಲ್ಲಿರುವ ಅವಿಶ್ವಾಸಿಗಳ ಕೈಯಿಂದ ನಾನು ಪಾರಾಗುವಂತೆ ಪ್ರಾರ್ಥಿಸಿರಿ. ನಾನು ಜೆರುಸಲೇಮಿಗೆ ತೆಗೆದುಕೊಂಡು ಹೋಗುತ್ತಿರುವ ಈ ಸಹಾಯಧನವು ಅಲ್ಲಿರುವ ದೇವಮಕ್ಕಳಿಗೆ ಮೆಚ್ಚಿಕೆಯಾಗುವಂತೆ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನಾನು ಯೂದಾಯ ಪ್ರಾಂತದಲ್ಲಿ ಅವಿಶ್ವಾಸಿಗಳ ಕೈಯಿಂದ ಕಾಪಾಡಬೇಕೆಂತಲೂ ನನ್ನ ಸೇವೆಯು ಯೆರೂಸಲೇಮಿನಲ್ಲಿರುವ ದೇವಜನರಿಗೆ ಮೆಚ್ಚುಗೆಯಾಗಿರಬೇಕೆಂತಲೂ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಜುದೆಯಾತ್ ಹೊತ್ತ್ಯಾ ವಿಶ್ವಾಸಾತ್ ನಸಲ್ಲ್ಯಾ ಲೊಕಾಂಚ್ಯಾ ಹಾತಾನಿತ್ಲೊ ಮಿಯಾ ಹುರುಚೊ, ಅನಿ ಮಿಯಾ ಘೆವ್ನ್ ಜಾತಲೆ ಹೆ ದಾನ್, ಜೆರುಜಲೆಮಾತ್ಲ್ಯಾ ದೆವಾಚ್ಯಾ ಲೊಕಾನಿಬಿ ಸ್ವಿಕಾರ್ ಕರಿ ಸರ್ಕೆ ಹೊಂವ್ದಿತ್ ಮನುನ್ ಮಾಗಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:31
18 ತಿಳಿವುಗಳ ಹೋಲಿಕೆ  

ದೇವರು ನಮ್ಮನ್ನು ಮೂರ್ಖರಾದ ದುಷ್ಟಜನರ ಕೈಯಿಂದ ತಪ್ಪಿಸುವ ಹಾಗೆಯೂ ಪ್ರಾರ್ಥಿಸಿರಿ; ಎಲ್ಲರಲ್ಲಿ ಕ್ರಿಸ್ತ ನಂಬಿಕೆಯಿಲ್ಲವಲ್ಲಾ.


ದೇವಜನರಿಗೆ ಸಹಾಯಮಾಡುವ ಕೆಲಸದಲ್ಲಿ ತಾವು ಪಾಲುಗಾರರಾಗುವಂತೆ ಅಪ್ಪಣೆಯಾಗಬೇಕೆಂದು ನಮ್ಮನ್ನು ಬಹಳವಾಗಿ ಬೇಡಿಕೊಂಡರು.


ದೇವಜನರಿಗೋಸ್ಕರ ನಡೆಯುವ ಸಹಾಯಕಾರ್ಯವನ್ನು ಕುರಿತು ನಿಮಗೆ ಬರೆಯುವದಕ್ಕೆ ಅವಶ್ಯವಿಲ್ಲ.


ಆದರೆ ಈಗ ನಾನು ದೇವಜನರಿಗೆ ಒಂದು ಧರ್ಮಕಾರ್ಯವನ್ನು ಮಾಡುವವನಾಗಿ ಯೆರೂಸಲೇವಿುಗೆ ಹೋಗುತ್ತೇನೆ.


ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.


ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು; ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.


ಆ ಯೆಹೂದ್ಯರು ಕರ್ತನಾದ ಯೇಸುವನ್ನೂ ಪ್ರವಾದಿಗಳನ್ನೂ ಕೊಂದರು, ನಮ್ಮನ್ನೂ ಅಟ್ಟಿಬಿಟ್ಟರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ;


ಆಗ ಫೆಸ್ತನು - ಅಗ್ರಿಪ್ಪರಾಜನೇ, ನಮ್ಮ ಸಂಗಡ ಕೂಡಿಬಂದಿರುವ ಎಲ್ಲಾ ಜನರೇ, ಈ ಮನುಷ್ಯನನ್ನು ನೋಡುತ್ತೀರಲ್ಲಾ, ಇವನ ವಿಷಯದಲ್ಲಿ ಯೆಹೂದ್ಯರೆಲ್ಲರೂ - ಇವನು ಇನ್ನು ಮೇಲೆ ಬದುಕಬಾರದೆಂದು ಕೂಗುತ್ತಾ ಯೆರೂಸಲೇವಿುನಲ್ಲಿಯೂ ಇಲ್ಲಿಯೂ ನನ್ನನ್ನು ಬೇಡಿಕೊಂಡರು.


ಅಲ್ಲಿ ಮಹಾಯಾಜಕನೂ ಯೆಹೂದ್ಯರಲ್ಲಿ ಪ್ರಮುಖರೂ ಅವನಿಗೆ ಪೌಲನ ಮೇಲಣ ಫಿರಿಯಾದಿಯನ್ನು ಹೇಳಿ -


ಯಾವ ಕಾರಣದಿಂದ ಹೀಗೆ ಅವನಿಗೆ ವಿರುದ್ಧವಾಗಿ ಕೂಗಾಡುತ್ತಾರೆಂಬದನ್ನು ಸಹಸ್ರಾಧಿಪತಿಯು ತಿಳುಕೊಳ್ಳುವದಕ್ಕಾಗಿ ಅವನನ್ನು ಕೋಟೆಯೊಳಗೆ ತಂದು ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಆಜ್ಞಾಪಿಸಿದನು.


ಅದಕ್ಕೆ ಅನನೀಯನು - ಕರ್ತನೇ, ಆ ಮನುಷ್ಯನು ಯೆರೂಸಲೇವಿುನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ;


ಕರ್ತನು ಅವನಿಗೆ - ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ ಅರಸುಗಳಿಗೂ ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ಸ್ತೆಫನನ ಮನೆಯವರು ಅಖಾಯದಲ್ಲಿನ ಪ್ರಥಮಫಲವೆಂದೂ ಅವರು ದೇವಜನರಿಗೆ ಸೇವೆಮಾಡುವದಕ್ಕಾಗಿ ಕೈಹಾಕಿದರೆಂದೂ ನೀವು ಬಲ್ಲಿರಷ್ಟೆ.


ಆತನು ನಮ್ಮನ್ನು ಎಂಥ ಭಯಂಕರಮರಣದಿಂದ ತಪ್ಪಿಸಿದನು; ಮುಂದೆಯೂ ತಪ್ಪಿಸುವನು. ನೀವು ನಮಗೋಸ್ಕರ ಪ್ರಾರ್ಥನೆ ಮಾಡುವವರಾಗಿ ಸಹಕಾರಿಗಳಾಗಿರುವದರಿಂದ ಆತನು ಇನ್ನು ಮೇಲೆಯೂ ತಪ್ಪಿಸುವನೆಂದು ಆತನಲ್ಲಿ ನಿರೀಕ್ಷೆಯಿಟ್ಟವರಾಗಿದ್ದೇವೆ. ಹೀಗೆ ಅನೇಕರ ವಿಜ್ಞಾಪನೆಗಳಿಂದ ನಮಗೆ ದೊರಕುವ ಉಪಕಾರಕ್ಕಾಗಿ ನಮ್ಮ ನಿವಿುತ್ತ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿ ಉಂಟಾಗುವದು.


ಈ ಸಹಾಯದಿಂದ ತೋರಿಬಂದ ನಿಮ್ಮ ಯೋಗ್ಯಭಾವವನ್ನು ಅವರು ನೋಡುವಾಗ ನೀವು ಮಾಡಿದ್ದ ಪ್ರತಿಜ್ಞೆಗೆ ಸರಿಯಾಗಿ ಕ್ರಿಸ್ತನ ಸುವಾರ್ತೆಯನ್ನು ಅನುಸರಿಸಿದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು