Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:8 - ಕನ್ನಡ ಸತ್ಯವೇದವು J.V. (BSI)

8 ಯಾಕಂದರೆ ನಾನು ಹೇಳುವದೇನಂದರೆ - ಕ್ರಿಸ್ತನು ಪಿತೃಗಳಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಒಳಗಾದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯಾಕೆಂದರೆ ಕ್ರಿಸ್ತನು ಪೂರ್ವಿಕರಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವುದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಸೇವಕನಾಗಿದ್ದಾನೆಂದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನಗಳನ್ನು ನೆರವೇರಿಸಿ ತಮ್ಮ ಪ್ರಾಮಾಣಿಕತೆಯನ್ನು ವ್ಯಕ್ತಪಡಿಸುವಂತೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನಗಳು ಸತ್ಯವಾದುವುಗಳೆಂದು ತೋರಿಸುವುದಕ್ಕಾಗಿಯೂ ದೇವರು ಆ ವಾಗ್ದಾನಗಳನ್ನು ನೆರವೇರಿಸುತ್ತಾನೆ ಎಂಬುದನ್ನು ನಿರೂಪಿಸುವುದಕ್ಕಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ನಿಮಗೆ ಹೇಳುವುದೇನೆಂದರೆ, ದೇವರು ನಂಬಿಗಸ್ತರು ಎಂದು ತೋರಿಸುವುದಕ್ಕಾಗಿ ಕ್ರಿಸ್ತ ಯೇಸು ಯೆಹೂದ್ಯರಿಗೆ ಸೇವಕರಾಗಿ ಬಂದರು. ಹೀಗೆ ದೇವರು ಪಿತೃಗಳಿಗೆ ಕೊಟ್ಟ ವಾಗ್ದಾನಗಳನ್ನು ದೃಢಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಕಶ್ಯಾಕ್ ಮಟ್ಲ್ಯಾರ್, ಮಿಯಾ ತುಮ್ಕಾ ಸಾಂಗ್ತಾ ಅಪ್ನಿ ವಿಶ್ವಾಸಿ ಮನುನ್ ದಾಕ್ವುಸಾಟ್ನಿ ದೆವಾನ್ ಅಮ್ಚ್ಯಾ ಅದ್ಲ್ಯಾ ಲೊಕಾಕ್ನಿ ದಿಲ್ಲ್ಯಾ ಗೊಸ್ಟಿಯಾ ಪುರಾ ಕರುಸಾಟ್ನಿ ಕ್ರಿಸ್ತಾಕ್ ಜುದೆವಾಂಚೊ ಸೆವಕ್ ಕರುನ್ ನೆಮ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:8
29 ತಿಳಿವುಗಳ ಹೋಲಿಕೆ  

ಅದಕ್ಕಾತನು - ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲನ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ ಅಂದನು.


ಆತನು ತನ್ನ ಸ್ವಾಸ್ಥ್ಯಕ್ಕೆ ಬಂದನು; ಆದರೆ ಸ್ವಂತಜನರು ಆತನನ್ನು ಅಂಗೀಕರಿಸಲಿಲ್ಲ.


ನಿಶ್ಚಯವಾಗಿ ದೇವರ ವಾಗ್ದಾನಗಳು ಎಷ್ಟಿದ್ದರೂ ಕ್ರಿಸ್ತನಲ್ಲೇ ದೃಢವಾಗುತ್ತವೆ. ಆದಕಾರಣ ದೇವರ ಪ್ರಭಾವವು ಪ್ರಕಾಶವಾಗುವದಕ್ಕೋಸ್ಕರ ಆತನ ಮೂಲಕವಾಗಿ ನಾವು ಆಮೆನ್ ಎಂದು ಹೇಳುತ್ತೇವೆ.


ಇದಲ್ಲದೆ ಈ ಹಟ್ಟಿಗೆ ಸೇರದಿರುವ ಇನ್ನು ಬೇರೆ ಕುರಿಗಳು ನನಗೆ ಅವೆ, ಅವುಗಳನ್ನೂ ನಾನು ತರಬೇಕು; ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು, ಒಬ್ಬನೇ ಕುರುಬನಿರುವನು.


ಅವರಲ್ಲಿ ಕೆಲವರು ನಂಬದೆ ಹೋಗಿದ್ದರೇನು? ಅವರು ನಂಬದೆ ಹೋದದರಿಂದ ದೇವರು ವಚನಕ್ಕೆ ತಪ್ಪುವವನಾದನೋ? ಎಂದಿಗೂ ಇಲ್ಲ;


ನೀವು ಪೂರ್ವಕಾಲದಲ್ಲಿ ಕ್ರಿಸ್ತನನ್ನು ಸೇರದವರಾಗಿದ್ದು ಇಸ್ರಾಯೇಲ್ಯ ಹಕ್ಕಿನಲ್ಲಿ ಪಾಲಿಲ್ಲದವರೂ [ಅಬ್ರಹಾಮನಿಗೆ ಉಂಟಾದ] ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಸೇರದವರೂ ಈ ಲೋಕದಲ್ಲಿ ಯಾವ ನಿರೀಕ್ಷೆಯಿಲ್ಲದವರೂ ದೇವರನ್ನರಿಯದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.


ಯಾವ ಪ್ರಕಾರ ನೀವು ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆಹೊಂದಿದ್ದೀರೋ


ಆದದರಿಂದ ದೇವರ ದಯೆಯನ್ನೂ ಕಾಠಿಣ್ಯವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನಿನ್ನ ಕಡೆಗೆ ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆ; ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.


ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದಾಗಿರುವಂತೆ ಅದು ನಂಬಿಕೆಯ ಮೂಲಕ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರಮಾಡಿಕೊಂಡವರಿಗೆ ಮಾತ್ರವಲ್ಲದೆ ಅಬ್ರಹಾಮನಲ್ಲಿದ್ದಂಥ ನಂಬಿಕೆಯುಳ್ಳವರಿಗೆ ಸಹ ಸ್ಥಿರವಾಗಿ ನಿಲ್ಲುವದು.


ದೇವರು ಹಿಂದಿನ ಕಾಲದ ಪಾಪಗಳನ್ನು ದಂಡಿಸದೆ ಸಹಿಸಿಕೊಂಡಿರಲಾಗಿ ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿಸ್ವರೂಪನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತರೆಂದು ನಿರ್ಣಯಿಸುವವನಾಗಿಯೂ ಕಾಣಿಸಿಕೊಂಡಿದ್ದಾನೆ.


ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತಾಡಿ - ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪುಮಾಡಿಕೊಂಡದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.


ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


ಸಹೋದರರೇ, ನಾನು ಹೇಳುವದೇನಂದರೆ - ರಕ್ತ ಮಾಂಸವು ದೇವರ ರಾಜ್ಯಕ್ಕೆ ಬಾಧ್ಯವಾಗಲಾರದು; ಲಯವಾಗುವ ವಸ್ತು ನಿರ್ಲಯಪದವಿಗೆ ಬಾಧ್ಯವಾಗುವದಿಲ್ಲ.


ಅದು ನಿನ್ನ ಮನಸ್ಸಿನ ಸಂಶಯವಲ್ಲ, ತಿಳಿಸಿದವನ ಮನಸ್ಸಿನಲ್ಲಿರುವ ಸಂಶಯವೇ. ಮತ್ತೊಬ್ಬನ ಮನಸ್ಸಿನಲ್ಲಿರುವ ಸಂಶಯದಿಂದ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು?


ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವದಕ್ಕೆ ಬರಲಿಲ್ಲ, ಸೇವೆಮಾಡುವದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.


ಹೀಗೆ ಹೇಳುವದರಿಂದ ಏನು ಹೇಳಿದ ಹಾಗಾಯಿತು? ವಿಗ್ರಹಕ್ಕೆ ನೈವೇದ್ಯ ಮಾಡಿದ ಪದಾರ್ಥವು ವಾಸ್ತವವೆಂದು ಅಥವಾ ವಿಗ್ರಹವು ವಾಸ್ತವವೆಂದು ನನ್ನ ಅಭಿಪ್ರಾಯವೋ? ಅಲ್ಲ.


ನಿಮ್ಮೊಳಗೆ ಪ್ರತಿಯೊಬ್ಬನು - ನಾನು ಪೌಲನವನು, ಇಲ್ಲವೆ - ನಾನು ಅಪೊಲ್ಲೋಸನವನು, ಅಥವಾ - ನಾನು ಕೇಫನವನು, ಇಲ್ಲವೆ - ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.


ನನ್ನ ಬಾಯಿ ಸತ್ಯವನ್ನೇ ಆಡುವದು, ದುಷ್ಟತನವು ನನ್ನ ತುಟಿಗಳಿಗೆ ಅಸಹ್ಯವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು