Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:28 - ಕನ್ನಡ ಸತ್ಯವೇದವು J.V. (BSI)

28 ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಮತ್ತು ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಮತ್ತು ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಬಾಹ್ಯಾಚರಣೆಯಲ್ಲಿ ಮಾತ್ರ ಯೆಹೂದ್ಯನಾಗಿರುವವನು ನಿಜವಾದ ಯೆಹೂದ್ಯನಲ್ಲ. ಅಂತೆಯೇ, ನಿಜವಾದ ಸುನ್ನತಿಯು ಕೇವಲ ಬಾಹ್ಯಲಕ್ಷಣವುಳ್ಳ ಶಾರೀರಿಕ ಪದ್ಧತಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಕೇವಲ ಬಾಹ್ಯ ದೇಹದಲ್ಲಿ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ. ಕೇವಲ ದೇಹದ ಹೊರಭಾಗದ ಸುನ್ನತಿಯು ನಿಜವಾದ ಸುನ್ನತಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ. ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಅಶೆ ರಾತಾನಾ, ಖರೆಚ್ ಸುನ್ನತ್ ಕರಲ್ಲೊ, ಖರೊ ಜುದೆವ್ ಕೊನ್? ಭಾಯ್ನಾ ಖಾಲಿ ಜುದೆವ್ ಮನುನ್ ದಾಕ್ವುತಲೊ ಜುದೆವ್ ನ್ಹಯ್, ಖಾಲಿ ಆಂಗಾಕ್ ಪದ್ದತಿ ಪರ್‍ಕಾರ್ ಕರುನ್ ಘೆಟಲ್ಲಿ ಸುನ್ನತ್ , ಸುನ್ನತ್ ನ್ಹಯ್ ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:28
17 ತಿಳಿವುಗಳ ಹೋಲಿಕೆ  

ಸುನ್ನತಿಯಾಗುವದರಲ್ಲಿ ಏನೂ ಇಲ್ಲ, ಸುನ್ನತಿಯಾಗದೆ ಇರುವದರಲ್ಲಿಯೂ ಏನೂ ಇಲ್ಲ; ಹೊಸ ಸೃಷ್ಟಿಯೇ ಬೇಕು.


ಅಬ್ರಹಾಮನು ನಮಗೆ ಮೂಲಪುರುಷನಲ್ಲವೇ ಎಂಬುವ ಆಲೋಚನೆಯನ್ನು ಬಿಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.


ಸತ್ತವನಾಗಿದ್ದು ಜೀವಿತನಾಗಿ ಬಂದ ಆದ್ಯಂತನು ಹೇಳುವದೇನಂದರೆ - ನಾನು ನಿನ್ನ ಸಂಕಟವನ್ನೂ ನಿನ್ನ ಬಡತನವನ್ನೂ ಬಲ್ಲೆನು; ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವದನ್ನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಮಾಜದವರಾಗಿದ್ದಾರೆ.


ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ, ಒಳ್ಳೇ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದೇ.


ನೀನು ಯೆಹೂದ್ಯನೆನಿಸಿಕೊಂಡವನೂ ಧರ್ಮಶಾಸ್ತ್ರದಲ್ಲಿ ಭರವಸವಿಟ್ಟವನೂ ದೇವರ ವಿಷಯವಾಗಿ ಹೊಗಳಿಕೊಳ್ಳುವವನೂ


ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ - ಇಗೋ ಇವನು ನಿಜವಾದ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.


ಏಕಂದರೆ ಸಕಲಜನಾಂಗಗಳವರೂ ಸುನ್ನತಿಹೀನರು, ಎಲ್ಲಾ ಇಸ್ರಾಯೇಲ್ ವಂಶದವರೂ ಹೃದಯ ಸುನ್ನತಿಯಿಲ್ಲದವರು ಎಂದು ಯೆಹೋವನು ಅನ್ನುತ್ತಾನೆ.


ದೇವರು ನಿರ್ಮಲಚಿತ್ತರಾದ ಇಸ್ರಾಯೇಲ್ಯರಿಗೆ ದಯಾಪರನೇ ಹೌದು.


ಯೆಹೂದದವರೇ, ಯೆರೂಸಲೇವಿುನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ ಯೆಹೋವನಿಗಾಗಿ ಸುನ್ನತಿಯಾಗಿರಿ; ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿವಿುತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವದು.


ಆಹಾ, ಐಗುಪ್ತ್ಯರು ಯೆಹೂದ್ಯರು ಎದೋಮ್ಯರು ಅಮ್ಮೋನ್ಯರು ಮೋವಾಬ್ಯರು ಚಂಡಿಕೆಬಿಟ್ಟುಕೊಂಡಿರುವ ಅರಣ್ಯನಿವಾಸಿಗಳು, ಅಂತು ಸುನ್ನತಿಯುಳ್ಳವರಾದರೂ ಸುನ್ನತಿಯಿಲ್ಲದ ಇವರೆಲ್ಲರನ್ನೂ ನಾನು ದಂಡಿಸುವ ದಿನಗಳು ಬರುತ್ತವೆ;


ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ; ಶರೀರದಲ್ಲಿ ಕೈಯಿಂದ ಸುನ್ನತಿಮಾಡಿಸಿಕೊಂಡು ಸುನ್ನತಿಯವರೆನಿಸಿಕೊಳ್ಳುವವರು ನಿಮ್ಮನ್ನು ಸುನ್ನತಿಯಿಲ್ಲದವರೆಂದು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು