Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:7 - ಕನ್ನಡ ಸತ್ಯವೇದವು J.V. (BSI)

7 ಯಾರು ಪ್ರಭಾವ ಮಾನ ನಿರ್ಲಯತ್ವಗಳನ್ನು ಹೊಂದಬೇಕೆಂದು ಒಳ್ಳೇದನ್ನು ಬೇಸರಗೊಳ್ಳದೆ ಮಾಡುತ್ತಾರೋ ಅವರಿಗೆ ನಿತ್ಯಜೀವವನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕೆಲವು ಜನರು ಮಹಿಮೆಗಾಗಿ, ಘನತೆಗಾಗಿ ಮತ್ತು ಅಮರತ್ವಕ್ಕಾಗಿ ಯಾವಾಗಲೂ ಸತ್ಕಾರ್ಯಗಳನ್ನು ಮಾಡುತ್ತಾ ಜೀವಿಸುವರು. ದೇವರು ಆ ಜನರಿಗೆ ನಿತ್ಯಜೀವವನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯಾರು ಮಹಿಮೆ, ಮಾನ, ಅಮರತ್ವ ಸತ್ಕ್ರಿಯೆಗಳನ್ನು ಸಹನೆಯಿಂದ ಮಾಡುತ್ತಾರೋ ಅವರಿಗೆ ದೇವರು ನಿತ್ಯಜೀವವನ್ನು ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಉಲ್ಲಿ ಲೊಕಾ ಬರೆ ಕರುನ್ಗೆತ್ ಅನಿ ಮಾನ್, ಮಹಿಮಾ, ಅನಿ ವಾಯ್ಟ್ ನಸಲ್ಲೆ ಜಿವನ್ ಕರುನ್ಗೆತ್ ಹಾತ್; ತೆಂಕಾ ದೆವ್ ಕನ್ನಾಚ್ ಮರಾನ್ ನಸಲ್ಲೆ ಜಿವನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:7
38 ತಿಳಿವುಗಳ ಹೋಲಿಕೆ  

ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ಒಳ್ಳೆಯ ಹೃದಯದಲ್ಲಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ; ಇವರೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವವರು.


ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವವನ್ನೂ ಪ್ರಕಾಶಗೊಳಿಸಿದನು.


ಆದದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವದಿಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರಿ.


ಯಾಕಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಉಚಿತಾರ್ಥವರವು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.


ಅನ್ಯಜನಗಳ ವಿಷಯವಾದ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ ತಿಳಿಸಲಿಕ್ಕೆ ಮನಸ್ಸು ಮಾಡಿಕೊಂಡನು. ಈ ಮರ್ಮವು ಏನಂದರೆ ಕ್ರಿಸ್ತನು ನಿಮ್ಮಲ್ಲಿದ್ದು ಪ್ರಭಾವದ ನಿರೀಕ್ಷೆಗೆ ಆಧಾರಭೂತನಾಗಿರುವದೇ.


ಒಳ್ಳೇದನ್ನು ಮಾಡುವದರಲ್ಲಿ ಬೇಸರಗೊಳ್ಳದೆ ಇರೋಣ. ಯಾಕಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.


ನಮಗೋಸ್ಕರ ಮುಂದಿನ ಕಾಲದಲ್ಲಿ ಪ್ರತ್ಯಕ್ಷವಾಗುವ ಮಹಿಮಪದವಿಯನ್ನು ಆಲೋಚಿಸಿ ಈಗಿನ ಕಾಲದ ಕಷ್ಟಗಳು ಅಲ್ಪವೇ ಸರಿ ಎಂದು ಎಣಿಸುತ್ತೇನೆ.


ಆದರೆ ಒಳ್ಳೆದನ್ನು ನಡಿಸುವ ಪ್ರತಿಯೊಬ್ಬನಿಗೆ ಪ್ರಭಾವವೂ ಮಾನವೂ ಮನಶ್ಶಾಂತಿಯೂ ಉಂಟಾಗುವವು - ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ ಸಹ.


ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.


ಯೆಹೋವನನ್ನು ನಿರೀಕ್ಷಿಸಿಕೊಂಡಿರು; ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.


ಕ್ರಿಸ್ತನು ತಾನು ಕೊಡುತ್ತೇನೆಂದು ನಮಗೆ ವಾಗ್ದಾನ ಮಾಡಿದ್ದು ನಿತ್ಯಜೀವವು.


ಮತ್ತು ಪ್ರಭಾವ ಹೊಂದುವದಕ್ಕೆ ತಾನು ಮುಂದಾಗಿ ಸಿದ್ಧಮಾಡಿದ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.


ಒಬ್ಬನೇ ದೇವರಿಂದ ಬರುವಂಥ ಮಾನವನ್ನು ಅಪೇಕ್ಷಿಸದೆ ಒಬ್ಬರಿಂದೊಬ್ಬರು ಮಾನವನ್ನು ಅಂಗೀಕರಿಸುವವರಾದ ನೀವು ಹೇಗೆ ನಂಬೀರಿ?


ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು; ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು; ದುಷ್ಟರು ತೆಗೆದುಹಾಕಲ್ಪಡುವದನ್ನು ನೀನು ನೋಡುವಿ.


ಹೀಗಾದರೂ ಶಿಷ್ಟನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, ಶುದ್ಧಹಸ್ತನು ಬಲಗೊಳ್ಳುತ್ತಲೇ ಇರುವನು.


ಆ ವಾಗ್ದಾನದ ಫಲಕ್ಕೋಸ್ಕರ ಅಬ್ರಹಾಮನು ಬಹು ದಿವಸ ಕಾದುಕೊಂಡಿದ್ದು ಆ ಫಲವನ್ನು ದೇವರು ಹೇಳಿದ ಹಾಗೆಯೇ ಹೊಂದಿದನು.


ನೀವು ಮಂದಮತಿಗಳಾಗಿರದೆ ಯಾರು ವಾಗ್ದಾನಗಳನ್ನು ನಂಬಿ ಅವುಗಳ ಫಲಕ್ಕೋಸ್ಕರ ಬಹು ದಿವಸಗಳವರೆಗೂ ಕಾದಿದ್ದು ಆ ಫಲವನ್ನು ಹೊಂದುತ್ತಾರೋ ಅವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ.


ಬಡವನ ಮೇಲೆ ಕೈಮಾಡದೆ ಬಡ್ಡಿಯನ್ನು ಕೇಳದೆ ಲಾಭಕ್ಕೆ ಹಣಕೊಡದೆ ನನ್ನ ವಿಧಿಗಳನ್ನು ಆಚರಿಸಿ ನನ್ನ ನಿಯಮಗಳನ್ನು ಅನುಸರಿಸಿದರೆ ತನ್ನ ತಂದೆಯ ಅಧರ್ಮದ ನಿವಿುತ್ತ ಸಾಯನು, ಬಾಳೇ ಬಾಳುವನು.


ಮತ್ತು ಇವರು ನಿತ್ಯಶಿಕ್ಷೆಗೂ ನೀತಿವಂತರು ನಿತ್ಯಜೀವಕ್ಕೂ ಹೋಗುವರು.


ನಿಮ್ಮ ಸೈರಣೆಯಿಂದ ನಿಮ್ಮ ಪ್ರಾಣಗಳನ್ನು ಪಡಕೊಳ್ಳುವಿರಿ.


ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ; ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ; ಹೀಗೆ ಬಿತ್ತುವವನಿಗೂ ಕೊಯ್ಯುವವನಿಗೂ ಕೂಡ ಸಂತೋಷವಾಗುವದು.


ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರವಾಗಿರುವದು. ದೇಹವು ಲಯಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ನಿರ್ಲಯಾವಸ್ಥೆಯಲ್ಲಿ ಎದ್ದುಬರುವದು;


ಸಹೋದರರೇ, ನಾನು ಹೇಳುವದೇನಂದರೆ - ರಕ್ತ ಮಾಂಸವು ದೇವರ ರಾಜ್ಯಕ್ಕೆ ಬಾಧ್ಯವಾಗಲಾರದು; ಲಯವಾಗುವ ವಸ್ತು ನಿರ್ಲಯಪದವಿಗೆ ಬಾಧ್ಯವಾಗುವದಿಲ್ಲ.


ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಿರಂತರವಾದ ಪ್ರೀತಿಯಿಂದ ಪ್ರೀತಿಸುವವರೆಲ್ಲರ ಮೇಲೆ ದೇವರ ಕೃಪೆಯು ಇರಲಿ.


ಸರ್ವಯುಗಗಳ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಏಕದೇವರಿಗೆ ಯುಗಯುಗಾಂತರಗಳಲ್ಲಿಯೂ ಮಾನಪ್ರಭಾವಗಳಿರಲಿ. ಆಮೆನ್.


ಅವನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು