Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:19 - ಕನ್ನಡ ಸತ್ಯವೇದವು J.V. (BSI)

19 ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೇ ಹೇಳಿವೆಯೆಂದು ಬಲ್ಲೆವಷ್ಟೆ; ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವದು, ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಧರ್ಮಶಾಸ್ತ್ರದ ನೇಮನಿಯಮಗಳು ಆ ಶಾಸ್ತ್ರಕ್ಕೆ ಅಧೀನರಾದವರಿಗೆ ಮಾತ್ರ ಅನ್ವಯಿಸುತ್ತವೆಂದು ನಾವು ಬಲ್ಲೆವು. ಆದ್ದರಿಂದ ಯಾರೂ ಯಾವ ನೆಪವನ್ನು ಹೇಳಲೂ ಬಾಯಿ ತೆರೆಯುವಂತಿಲ್ಲ. ಜಗತ್ತೆಲ್ಲವೂ ದೇವರ ನ್ಯಾಯತೀರ್ಪಿಗೆ ಗುರಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಧರ್ಮಶಾಸ್ತ್ರದ ಅಧೀನದಲ್ಲಿರುವ ಜನರ ವಿಷಯವಾಗಿಯೇ ಧರ್ಮಶಾಸ್ತ್ರವು ಈ ಸಂಗತಿಯನ್ನು ಹೇಳುತ್ತಿದೆ. ಆದ್ದರಿಂದ ಯೆಹೂದ್ಯರು ನೆವ ಹೇಳಲು ಸಾದ್ಯವಿಲ್ಲ. ಅಲ್ಲದೆ ಇಡೀ ಲೋಕವೇ ದೇವರ ನ್ಯಾಯತೀರ್ಪಿಗೆ ಒಳಗಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಿಯಮವು ಏನೇ ಹೇಳುವುದಾದರೂ ಅದು ನಿಯಮಕ್ಕೆ ಒಳಪಟ್ಟಿರುವವರಿಗೇ ಅನ್ವಯವಾಗುವುದೆಂದು ನಾವು ಬಲ್ಲೆವು. ಹೀಗೆ ಎಲ್ಲರ ಬಾಯಿ ಮುಚ್ಚಿಹೋಗುವುದು ಮತ್ತು ಲೋಕವೆಲ್ಲಾ ದೇವರ ತೀರ್ಪಿಗೆ ಒಳಗಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಖಾಯ್ದ್ಯಾತ್ನಿ ಹೊತ್ತೆ ಸಗ್ಳೆ ಖಾಯ್ದ್ಯಾಂಚ್ಯಾ ಪರ್‍ಕಾರ್ ಚಲ್ತಲ್ಯಾ ಸಗ್ಳ್ಯಾಕ್ನಿ ಸಮಂದ್ ಪಡ್ತಾ ಮನುನ್ ಅಮ್ಕಾ ಕಳುನ್ ಯೆಲಾ, ಅಶೆ ಮಾನ್ಸಾನಿ ದಿತಲಿ ಸಗ್ಳಿ ನೆವಾನಾ ಸೊಡುನ್, ಸಗ್ಳ್ಯಾ ಜಗಾಕುಚ್ ದೆವಾಚ್ಯಾ ಇದ್ರಾಕ್ ಝಡ್ತಿಕ್ ಹಾನುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:19
24 ತಿಳಿವುಗಳ ಹೋಲಿಕೆ  

ನೇಮನಿಷ್ಠೆಗಳನ್ನು ಆಧಾರಮಾಡಿಕೊಳ್ಳುವವರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ಧರ್ಮಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತನೆಂದು ಶಾಸ್ತ್ರದಲ್ಲಿ ಬರೆದದೆ.


ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಉತ್ತಮಸ್ಥಾನದಲ್ಲಿದ್ದೇವೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಬಿದ್ದವರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷವಿುಸಿಬಿಟ್ಟ ಮೇಲೆ ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿವಿುತ್ತ ಇನ್ನು ಬಾಯಿ ತೆರೆಯದಿರುವಿ. ಇದು ಕರ್ತನಾದ ಯೆಹೋವನ ನುಡಿ.


ಆದರೆ ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ ನೇಮನಿಷ್ಠೆಗಳಿಗೆ ಅಧೀನರಲ್ಲ.


ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದೆ ಹೋಗಿದ್ದಾರೆ.


ಯಥಾರ್ಥರು ಇದನ್ನು ನೋಡಿ ಹಿಗ್ಗುವರು; ಕೆಡುಕುಬಾಯಿ ಮುಚ್ಚಿಹೋಗುವದು.


ಧರ್ಮಶಾಸ್ತ್ರಾಧೀನರಾಗುವದಕ್ಕೆ ಮನಸ್ಸುಳ್ಳವರೇ, ಧರ್ಮಶಾಸ್ತ್ರಕ್ಕೆ ಕಿವಿಗೊಡುವದಿಲ್ಲವೋ? ನನಗೆ ಹೇಳಿರಿ.


ಹೇಗಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯಶಕ್ತಿಯೂ ದೇವತ್ವವೂ ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತವೆ; ಹೀಗಿರುವದರಿಂದ ಅವರು ಉತ್ತರವಿಲ್ಲದವರಾಗಿದ್ದಾರೆ.


ಆ ಮಾತನ್ನು ಕೇಳಿ ತಾವೇ ಪಾಪಿಗಳೆಂದು ಮನಸ್ಸಿನಲ್ಲಿ ತಿಳುಕೊಂಡು ಹಿರಿಯರು ಮೊದಲುಗೊಂಡು ಕಿರಿಯರವರೆಗೂ ಒಬ್ಬರ ಹಿಂದೊಬ್ಬರು ಹೊರಗೆ ಹೋದರು; ಯೇಸು ಒಬ್ಬನೇ ಉಳಿದನು, ಮತ್ತು ನಡುವೆ ನಿಂತಿದ್ದ ಹೆಂಗಸು ಅಲ್ಲೇ ಇದ್ದಳು.


ಹೀಗೆ ಬಡವನಿಗೆ ನಿರೀಕ್ಷೆಯುಂಟಾಗುವದು, ಅನ್ಯಾಯವು ಬಾಯಿಮುಚ್ಚಿಕೊಳ್ಳುವದು.


ಆತನು ತನ್ನ ಭಕ್ತರ ಹೆಜ್ಜೆಗಳನ್ನು ಕಾಯುವನು; ದುಷ್ಟರು ಅಂಧಕಾರದಲ್ಲಿ ಮುಳುಗಿ ಮೌನಹೊಂದುವರು. ಬಾಹುಬಲದಿಂದಲೇ ಯಾವನೂ ಜಯಹೊಂದಲಾರನು.


ಎಲ್ಲಾ ಮನುಷ್ಯರು ಸುಳ್ಳುಗಾರರಾದರೂ ದೇವರು ಸತ್ಯವಂತನೇ ಸರಿ. ನೀನು ಎಲ್ಲಾ ನುಡಿಗಳಲ್ಲಿ ನ್ಯಾಯಸ್ಥನೆಂದು ಕಾಣಿಸಿಕೊಳ್ಳಬೇಕು, ನಿನ್ನ ಮೇಲೆ ವ್ಯಾಜ್ಯ ನಡೆಯುವಾಗ ನೀನು ಗೆಲ್ಲಬೇಕು ಎಂದು ಬರೆದದೆ.


ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು. ಮೊದಲನೇದಾಗಿ ದೈವೋಕ್ತಿಗಳು ಅವರ ವಶಕ್ಕೆ ಒಪ್ಪಿಸಲ್ಪಟ್ಟವು.


ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.


ಅರಸನೋ ದೇವರಲ್ಲಿ ಆನಂದಿಸುವನು. ದೇವರ ಮೇಲೆ ಆಣೆಯಿಡುವವರೆಲ್ಲರು ಸುಳ್ಳುಬಾಯಿ ಮುಚ್ಚಿಹೋಗುವದನ್ನು ಕಂಡು ಹಿಗ್ಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು