Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:2 - ಕನ್ನಡ ಸತ್ಯವೇದವು J.V. (BSI)

2 ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು. ಮೊದಲನೇದಾಗಿ ದೈವೋಕ್ತಿಗಳು ಅವರ ವಶಕ್ಕೆ ಒಪ್ಪಿಸಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಎಲ್ಲಾ ವಿಷಯಗಳನ್ನು ಕುರಿತು ಹೇಳಲು ಬಹಳ ಉಂಟು. ಮೊದಲನೇಯದಾಗಿ ದೈವೋಕ್ತಿಗಳು ಅವರ ವಶಕ್ಕೆ ಸಮರ್ಪಿಸಿ ಒಪ್ಪಿಸಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಹೌದು, ಎಲ್ಲಾ ವಿಧದಲ್ಲಿಯೂ ಹೆಚ್ಚು ಪ್ರಯೋಜನವಿದೆ. ಮೊದಲನೆಯದಾಗಿ, ದೇವರು ತಮ್ಮ ಸಂದೇಶವನ್ನು ವಹಿಸಿಕೊಟ್ಟದ್ದು ಯೆಹೂದ್ಯರಿಗೆ ತಾನೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಹೌದು, ಯೆಹೂದ್ಯರಿಗೆ ಅನೇಕ ವಿಶೇಷತೆಗಳಿವೆ. ಎಲ್ಲಕ್ಕಿಂತಲೂ ಅತಿಮುಖ್ಯವಾದದ್ದೇನೆಂದರೆ, ದೇವರು ಯೆಹೂದ್ಯರಲ್ಲಿ ಭರವಸವಿಟ್ಟು ತನ್ನ ಉಪದೇಶಗಳನ್ನು ಅವರಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಎಲ್ಲಾ ವಿಷಯಗಳಲ್ಲಿಯೂ ಬಹಳ ಪ್ರಯೋಜನವಿದೆ. ಮೊದಲನೆಯದಾಗಿ ದೇವರ ವಾಕ್ಯಗಳು ಯೆಹೂದ್ಯರ ವಶಕ್ಕೆ ಒಪ್ಪಿಸಲಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತೆ ಸಗ್ಳೆ ಸಾಂಗುಚೆ ಮಟ್ಲ್ಯಾರ್, ಲೈ ಹಾಯ್ ಸಗ್ಳ್ಯಾನ್ಕಿ ಪಯ್ಲೆ ದೆವಾಚಿ ಬರಿ ಖಬರ್ ಜುದೆವಾಂಚ್ಯಾ ತಾಬೆತ್ ದಿಲ್ಲಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:2
29 ತಿಳಿವುಗಳ ಹೋಲಿಕೆ  

ಅವರು ಇಸ್ರಾಯೇಲನ ವಂಶದವರೂ ದೇವರು ಪುತ್ರರಾಗಿ ಸ್ವೀಕರಿಸಿದವರೂ ಆಗಿದ್ದಾರೆ. ಅವರಲ್ಲಿ ದೇವರ ತೇಜಸ್ಸಾನ್ನಿಧ್ಯವು ಇದೆ; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡನು; ಅವರಿಗೆ ಧರ್ಮಶಾಸ್ತ್ರವೂ ದೇವಾಲಯದಲ್ಲಿ ನಡೆಯುವ ಆರಾಧನೆಯೂ ವಾಗ್ದಾನಗಳೂ ಕೊಡೋಣವಾದವು.


ಅವನೇ ಸೀನಾಯಿಬೆಟ್ಟದಲ್ಲಿ ತನ್ನೊಡನೆ ಮಾತಾಡಿದ ದೂತನಿಗೂ ನಮ್ಮ ಪಿತೃಗಳಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಮಧ್ಯಸ್ಥನಾಗಿದ್ದು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.


ಕಾಲವನ್ನು ನೋಡಿದರೆ ನೀವು ಇಷ್ಟರೊಳಗೆ ಬೋಧಕರಾಗಿರಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.


ನಾನು ಸ್ವಂತ ಇಷ್ಟದಿಂದ ಈ ಕೆಲಸವನ್ನು ಮಾಡಿದರೆ ನನಗೆ ಬಹುಮಾನ ದೊರೆಯುವದು; ಮತ್ತೊಬ್ಬನ ಇಷ್ಟದಿಂದ ಮಾಡಿದರೆ ಮನೆವಾರ್ತೆಯು ನನ್ನ ವಶಕ್ಕೆ ಕೊಡಲ್ಪಟ್ಟಿದೆ.


ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸಭೆಯ ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವದು. ಯೇಸು ಕ್ರಿಸ್ತನಿಗೆ ಆಧಿಪತ್ಯವೂ ಘನವೂ ಯುಗಯುಗಾಂತರಗಳಲ್ಲಿಯೂ ಇರುವವು. ಆಮೆನ್.


ಆಮೇಲೆ ಅವನು ನನಗೆ - ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ; ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತಿಳಿಯಪಡಿಸುವದಕ್ಕಾಗಿ ತನ್ನ ದೂತನನ್ನು ಕಳುಹಿಸಿಕೊಟ್ಟನು.


ಆಗ ನಾನು ಅವನಿಗೆ ನಮಸ್ಕಾರಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು - ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೇ ನಮಸ್ಕಾರಮಾಡು ಅಂದನು. ಯೇಸುವಿನ ವಿಷಯವಾದ ಸಾಕ್ಷಿಯು ಪ್ರವಾದನೆಯ ಆತ್ಮವೇ.


ಎಲೈ ತಿಮೊಥೆಯನೇ, ಜ್ಞಾನೋಪದೇಶವೆಂದು ಸುಳ್ಳಾಗಿ ಹೇಳಿಕೊಳ್ಳುವ ಬೋಧನೆಗೆ ಸಂಬಂಧಪಟ್ಟ ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೂ ವಿವಾದಗಳಿಗೂ ನೀನು ದೂರವಾಗಿದ್ದು ನಿನ್ನ ವಶಕ್ಕೆ ಕೊಟ್ಟಿರುವದನ್ನೇ ಕಾಪಾಡು.


ಸುನ್ನತಿಯಾದವರಲ್ಲಿ ಅಪೊಸ್ತಲತನವನ್ನು ನಡಿಸುವದಕ್ಕೋಸ್ಕರ ಪೇತ್ರನನ್ನು ಪ್ರೇರಿಸಿದಾತನು ಅನ್ಯಜನರಲ್ಲಿ ಅದನ್ನು ನಡಿಸುವದಕ್ಕೆ ನನ್ನನ್ನೂ ಪ್ರೇರಿಸಿದ್ದನು.


ಆ ಸಮಾಧಾನವಾಕ್ಯವೇನಂದರೆ ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿಕೊಳ್ಳುತ್ತಿದ್ದನೆಂಬದೇ. ಅದನ್ನು ಸಾರುವ ಸೇವೆಗೆ ನಮ್ಮನ್ನು ನೇವಿುಸಿದ್ದಾನೆ.


ಅವರಲ್ಲಿ ಕೆಲವರು ನಂಬದೆ ಹೋಗಿದ್ದರೇನು? ಅವರು ನಂಬದೆ ಹೋದದರಿಂದ ದೇವರು ವಚನಕ್ಕೆ ತಪ್ಪುವವನಾದನೋ? ಎಂದಿಗೂ ಇಲ್ಲ;


ಆತನ ಚಿತ್ತವನ್ನು ಬಲ್ಲವನೂ ಧರ್ಮಶಾಸ್ತ್ರದಿಂದ ಉಪದೇಶವನ್ನು ಹೊಂದಿ ಇದು ತಕ್ಕದ್ದು ಅದು ತಕ್ಕದ್ದಲ್ಲವೆಂದು ವಿವೇಚಿಸುವವನೂ ಆಗಿದ್ದೀ.


ಸುವಾರ್ತೆಯನ್ನು ಸಾರಿ ಹೇಳಿಸುತ್ತೇನೆಂದು ದೇವರು ಮುಂಚಿತವಾಗಿ ಪವಿತ್ರಶಾಸ್ತ್ರಗಳಲ್ಲಿ ತನ್ನ ಪ್ರವಾದಿಗಳ ಮೂಲಕ ಮಾತುಕೊಟ್ಟನು.


ಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ನೆನಸಿ ಅವುಗಳನ್ನು ವಿಚಾರಿಸುತ್ತೀರಲ್ಲಾ; ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿಕೊಡುವವುಗಳಾಗಿವೆ.


(ಆದರೂ ಸತ್ಯಶಾಸನದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುವೆನು.) ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಪಾಲಕನಾದ ಮೀಕಾಯೇಲನು ಹೊರತು ನನಗೆ ಬೆಂಬಲರಾಗತಕ್ಕವರು ಇನ್ನಾರೂ ಇಲ್ಲ.


ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸುವ ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವದಿಲ್ಲ.


ನಿನ್ನ ನುಡಿಯು ಪರಿಶುದ್ಧವಾದದ್ದು; ನಿನ್ನ ಸೇವಕನು ಅದನ್ನೇ ಪ್ರೀತಿಸುತ್ತಾನೆ.


ಹಾಗಾದರೆ ಯೆಹೂದ್ಯರ ಶ್ರೇಷ್ಠತ್ವವೇನು? ಸುನ್ನತಿಯಿಂದ ಲಾಭವೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು