Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:4 - ಕನ್ನಡ ಸತ್ಯವೇದವು J.V. (BSI)

4 ಎಲ್ಲಾ ಮನುಷ್ಯರು ಸುಳ್ಳುಗಾರರಾದರೂ ದೇವರು ಸತ್ಯವಂತನೇ ಸರಿ. ನೀನು ಎಲ್ಲಾ ನುಡಿಗಳಲ್ಲಿ ನ್ಯಾಯಸ್ಥನೆಂದು ಕಾಣಿಸಿಕೊಳ್ಳಬೇಕು, ನಿನ್ನ ಮೇಲೆ ವ್ಯಾಜ್ಯ ನಡೆಯುವಾಗ ನೀನು ಗೆಲ್ಲಬೇಕು ಎಂದು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಎಂದಿಗೂ ಇಲ್ಲ. ಮಾನವರೆಲ್ಲರು ಸುಳ್ಳುಗಾರರಾದರೂ ದೇವರು ಮಾತ್ರ ಸತ್ಯವಂತರೇ ಸರಿ. ಪವಿತ್ರಗ್ರಂಥದಲ್ಲಿ ಹೀಗೆಂದು ಬರೆದಿದೆ: “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇಲ್ಲ! ಪ್ರತಿಯೊಬ್ಬ ವ್ಯಕ್ತಿ ಸುಳ್ಳುಗಾರನಾದರೂ ದೇವರು ಸತ್ಯವಂತನಾಗಿಯೇ ಇರುತ್ತಾನೆ. ಪವಿತ್ರ ಗ್ರಂಥವು ಹೀಗೆಂದು ಹೇಳುತ್ತದೆ: “ನಿನ್ನ ಮಾತುಗಳಲ್ಲಿ ನೀನು ನ್ಯಾಯಸ್ಥನೆಂದು ನಿರೂಪಿತನಾಗಬೇಕು. ನಿನಗೆ ತೀರ್ಪಾಗುವಾಗ ನೀನು ಜಯಗಳಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಎಂದಿಗೂ ಹಾಗೆ ಆಗದಿರಲಿ. ಆದರೆ ಪ್ರತಿ ಮನುಷ್ಯನು ಸುಳ್ಳುಗಾರನಾದರೂ ದೇವರು ಸತ್ಯವಂತರೇ. ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ನೀನು ನಿನ್ನ ಮಾತುಗಳಲ್ಲಿಯೇ ನೀತಿವಂತನೆಂದು ನಿರ್ಣಯಿಸಲಾಗುವೆ. ನಿನ್ನ ಮೇಲೆ ತೀರ್ಪು ಮಾಡುವಾಗ ನೀನು ಜಯಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಕನ್ನಾಬಿ ನಾ! ಮಾನ್ಸಾ ಝುಟಿ ರ್‍ಹಾಲ್ಯಾರ್ ದೆವ್ ಖರೊಚ್ ರ್‍ಹಾವ್ಕ್ ಪಾಜೆ, ಪವಿತ್ರ್ ಪುಸ್ತಕ್ ಮನ್ತಾ, ತುಜ್ಯಾ ಬೊಲ್ನ್ಯಾ ವೈನಾಚ್ ತಿಯಾ ಭಕ್ತಿವಂತ್ ಮನುನ್ ದಿಸುನ್ ಯೆವ್ಕ್ ಪಾಜೆ; ತಿಯಾ ಖಟ್ಟಟಲ್ಲ್ಯಾ ತುಜ್ಯಾ ನ್ಯಾಯಾಚ್ಯಾ ಕಾಮಾತ್ ತಿಯಾ ಜಿಕುಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:4
33 ತಿಳಿವುಗಳ ಹೋಲಿಕೆ  

ನಿನಗೇ ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದಲ್ಲಾ.


ಭರವಸವುಳ್ಳವನಾಗಿಯೇ ಇದ್ದೆನು.


ಆದರೆ ನಾವು ಕ್ರಿಸ್ತನ ಆಶ್ರಯದಲ್ಲಿ ನೀತಿವಂತರೆಂಬ ನಿರ್ಣಯ ಹೊಂದುವದಕ್ಕೆ ಪ್ರಯತ್ನಿಸುತ್ತಿರುವಾಗ ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸಹಾಯಕನೆಂದು ಹೇಳಬೇಕೇನು? ಎಂದಿಗೂ ಹೇಳಬಾರದು.


ಆಶ್ರಯವನ್ನು ಹೊಂದಬೇಕೆಂದು ಓಡಿಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಎರಡು ನಿಶ್ಚಲವಾದ ಆಧಾರಗಳು ಇರುವ ಕಾರಣ ಬಲವಾದ ಧೈರ್ಯವುಂಟಾಯಿತು.


ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡಿಸುವದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಯಥಾರ್ಥನೂ ಆಗಿದ್ದಾನೆ.


ದೂರದಿಂದ ಸಂಪಾದಿಸಿದ ನನ್ನ ತಿಳುವಳಿಕೆಯ ಪ್ರಕಾರ ನನ್ನ ಸೃಷ್ಟಿಕರ್ತನನ್ನು ಧರ್ಮಸ್ವರೂಪನೆಂದು ಹೊಗಳುವೆನು.


ಆತನ ಸಾಕ್ಷಿಯನ್ನು ಒಪ್ಪಿದವನು ದೇವರು ಸತ್ಯವಂತನೆಂಬ ಮಾತಿಗೆ ಮುದ್ರೆ ಹಾಕಿದವನಾಗಿದ್ದಾನೆ.


ನಿನ್ನ ವಾಕ್ಯದ ಸಾರಾಂಶವು ಸತ್ಯವೇ; ನಿನ್ನ ನೀತಿವಿಧಿಗಳೆಲ್ಲಾ ಯುಗಯುಗಕ್ಕೂ ಇರುವವು.


ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ - ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯುವವನೂ ಯಾರೂ ತೆರೆಯದಂತೆ ಮುಚ್ಚುವವನೂ ಆಗಿರುವಾತನು ಹೇಳುವದೇನಂದರೆ -


ದೇವರ ಮಗನು ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ಮತ್ತು ನಾವು ದೇವರ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಹಾಗಾದರೆ ಏನು ಹೇಳೋಣ? ದೇವರಲ್ಲಿ ಅನ್ಯಾಯ ಉಂಟೋ? ಎಂದಿಗೂ ಇಲ್ಲ.


ನಿನ್ನ ಪರಿಶುದ್ಧಾಲಯದ ಕಡೆಗೆ ಅಡ್ಡ ಬೀಳುತ್ತೇನೆ; ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ. ವಾಗ್ದಾನವನ್ನು ವಿಶೇಷರೀತಿಯಿಂದ ನೆರವೇರಿಸಿ ನಿನ್ನ ನಾಮಮಹತ್ತನ್ನು ಹೆಚ್ಚಿಸಿದ್ದೀ.


ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.


ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗಂದರೆ ದೇವರು ತನ್ನ ಮಗನ ವಿಷಯವಾಗಿ ಹೇಳಿರುವ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.


ನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ಕರ್ಮಮಾರ್ಗದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದಕ್ಕೆ ಕಾರಣವೇ ಇಲ್ಲ.


ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪಾಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು.


ಹಾಗಾದರೆ ನಂಬಿಕೆಯಿಂದ ಧರ್ಮಪ್ರಮಾಣವನ್ನು ನಿರರ್ಥಕಮಾಡುತ್ತೇವೋ? ಎಂದಿಗೂ ಇಲ್ಲ. ಧರ್ಮಪ್ರಮಾಣವನ್ನು ಸ್ಥಿರಪಡಿಸುತ್ತೇವೆ.


ಮನುಷ್ಯಕುಮಾರನು ಬಂದನು, ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವನಾಗಿದ್ದಾನೆ; ಅವರು - ಇಗೋ, ಇವನು ಹೊಟ್ಟೆಬಾಕನು, ಕುಡುಕನು, ಭ್ರಷ್ಟರ ಮತ್ತು ಪಾಪಿಷ್ಠರ ಗೆಳೆಯನು ಅನ್ನುತ್ತಾರೆ. ಆದರೆ ಜ್ಞಾನವು ತನ್ನ ಕೆಲಸಗಳಿಂದ ಜ್ಞಾನವೇ ಎಂದು ಗೊತ್ತಾಗುವದು ಅಂದನು.


ಏನು! ನನ್ನ ನೀತಿಯನ್ನು ಖಂಡಿಸಿಬಿಡುವಿಯಾ? ನಿನ್ನ ನ್ಯಾಯವನ್ನು ಸ್ಥಾಪಿಸಿಕೊಳ್ಳಲಿಕ್ಕೆ ನನ್ನನ್ನು ಕೆಟ್ಟವನೆಂದು ನಿರ್ಣಯಿಸುವಿಯೋ?


ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ಶಿಲುಬೆಗೆ ಹಾಕಿಸಿಕೊಂಡು ನನ್ನ ಪಾಲಿಗೆ ಸತ್ತಿತು, ನಾನು ಶಿಲುಬೆಗೆ ಹಾಕಿಸಿಕೊಂಡು ಲೋಕದ ಪಾಲಿಗೆ ಸತ್ತೆನು.


ಹಾಗಾದರೆ ದೇವರು ತನ್ನ ಪ್ರಜೆಯನ್ನು ಬೇಡವೆಂದು ತಳ್ಳಿಬಿಟ್ಟದ್ದುಂಟೇ ಎಂದು ಕೇಳುತ್ತೇನೆ. ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ.


ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಲಘು.


ನಂಬಿಗಸ್ತನಾಗಿರುವ ದೇವರಾಣೆ, ನಾವು ನಿಮಗೆ ಹೇಳುವ ಮಾತು ಒಂದು ಸಾರಿ ಹೌದೆಂದು ಒಂದು ಸಾರಿ ಅಲ್ಲವೆಂದು ಇರುವದಿಲ್ಲ.


ಹಾಗಾದರೆ ಅವರು ಬಿದ್ದೇ ಹೋಗುವಂತೆ ಎಡವಿದರೇನು ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಹುರುಡು ಹುಟ್ಟಿಸುತ್ತಾನೆ.


ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. ಧರ್ಮಶಾಸ್ತ್ರದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ, ಆಶಿಸಬಾರದೆಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯುತ್ತಿದ್ದಿಲ್ಲ.


ಪಾಪದ ಪಾಲಿಗೆ ಸತ್ತವರಾದ ನಾವು ಇನ್ನೂ ಅದರಲ್ಲೇ ಬದುಕುವದು ಹೇಗೆ?


ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವದಕ್ಕೆ ಕೊಡುವನು ಅಂದನು.


ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಹೇಳಬಾರದು. ಪಾಪವೇ ಮರಣಕ್ಕೆ ಕಾರಣವಾದದ್ದು; ಅದು ಹಿತವಾದದರ ಮೂಲಕ ನನಗೆ ಮರಣವನ್ನು ಉಂಟುಮಾಡಿದ್ದರಿಂದ ಪಾಪವೇ ಎಂದು ಕಾಣಿಸಿಕೊಂಡಿತು; ಮತ್ತು ಆಜ್ಞೆಯ ಮೂಲಕ ಪಾಪವು ಕೇವಲ ಪಾಪಸ್ವರೂಪವೇ ಎಂದು ಕಾಣಬಂತು.


ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳಾಗಿರುವಂಥವುಗಳನ್ನು ತೆಗೆದುಬಿಟ್ಟು ಸೂಳೆಯ ಅಂಗಗಳಾಗ ಮಾಡಬಹುದೋ? ಎಂದಿಗೂ ಮಾಡಬಾರದು.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥವು ಗಂಭೀರವಾದದ್ದೆಂಬದಕ್ಕೆ ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ; ಅದೇನಂದರೆ - ಆತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮ ಸಂಬಂಧವಾಗಿ ಆತನೇ ಎಂದು ಸ್ಥಾಪಿಸಲ್ಪಟ್ಟನು; ದೇವದೂತರಿಗೆ ಕಾಣಿಸಿಕೊಂಡನು; ಅನ್ಯಜನರಲ್ಲಿ ಪ್ರಸಿದ್ಧಿ ಮಾಡಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಪ್ರಭಾವಸ್ಥಾನದಲ್ಲಿ ಸೇರಿಸಲ್ಪಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು