Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:16 - ಕನ್ನಡ ಸತ್ಯವೇದವು J.V. (BSI)

16 ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದಾಗಿರುವಂತೆ ಅದು ನಂಬಿಕೆಯ ಮೂಲಕ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರಮಾಡಿಕೊಂಡವರಿಗೆ ಮಾತ್ರವಲ್ಲದೆ ಅಬ್ರಹಾಮನಲ್ಲಿದ್ದಂಥ ನಂಬಿಕೆಯುಳ್ಳವರಿಗೆ ಸಹ ಸ್ಥಿರವಾಗಿ ನಿಲ್ಲುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೆಲ್ಲರ ತಂದೆಯಾದಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದೈವವಾಗ್ದಾನಕ್ಕೆ ವಿಶ್ವಾಸವೇ ಆಧಾರ. ಇವೆಲ್ಲಕ್ಕೂ ದೈವಾನುಗ್ರಹವೇ ಮೂಲ. ಇವು ಅಬ್ರಹಾಮನ ಸಂತತಿಯವರಿಗೆ, ಅಂದರೆ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರಿಗೆ ಮಾತ್ರವಲ್ಲ, ಅಬ್ರಹಾಮನಂತೆ ದೇವರಲ್ಲಿ ವಿಶ್ವಾಸ ಇಟ್ಟವರೆಲ್ಲರಿಗೂ ಖಚಿತವಾಗಿ ದೊರೆಯುತ್ತದೆ. ಏಕೆಂದರೆ, ಅಬ್ರಹಾಮನೇ ನಮ್ಮೆಲ್ಲರಿಗೂ ಮೂಲಪಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದಕಾರಣ ಜನರು ನಂಬಿಕೆಯ ಮೂಲಕವಾಗಿ ದೇವರ ವಾಗ್ದಾನವನ್ನು ಹೊಂದಿಕೊಳ್ಳುವರು. ವಾಗ್ದಾನವು ಉಚಿತ ಕೊಡುಗೆಯಾಗಬೇಕೆಂತಲೇ ಹೀಗಾಯಿತು. ವಾಗ್ದಾನವು ಉಚಿತ ಕೊಡುಗೆಯಾಗಿದ್ದರೆ, ಅಬ್ರಹಾಮನ ಜನರೆಲ್ಲರೂ ಆ ವಾಗ್ದಾನವನ್ನು ಹೊಂದಿಕೊಳ್ಳುವರು. ಈ ವಾಗ್ದಾನವನ್ನು ಮೋಶೆಯ ಧರ್ಮಶಾಸ್ತ್ರಕ್ಕೆ ಅಧೀನರಾಗಿ ಜೀವಿಸುವ ಜನರಿಗೆ ಮಾತ್ರವಲ್ಲ, ಅಬ್ರಹಾಮನಂತೆ ನಂಬಿಕೆಯಲ್ಲಿ ಜೀವಿಸುವ ಎಲ್ಲರಿಗೂ ಕೊಡಲಾಗಿದೆ. ಅಬ್ರಹಾಮನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದ್ದರಿಂದ ಆ ಬಾಧ್ಯತೆಯು ಕೃಪೆಯಿಂದಲೇ, ನಂಬಿಕೆಯ ಮೂಲಕ ದೊರಕುತ್ತದೆ. ಈ ವಾಗ್ದಾನವು ನಿಯಮದ ಸಂತತಿಯವರಿಗೆ ಮಾತ್ರವಲ್ಲ ಅಬ್ರಹಾಮನಲ್ಲಿ ಇದ್ದ ನಂಬಿಕೆ ಇರುವವರ ಸಂತತಿಯವರೆಲ್ಲರಿಗೂ ಶಾಶ್ವತವಾಗಿ ದೊರಕುವುದು. ಏಕೆಂದರೆ ಅವನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತೆಚೆಸಾಟ್ನಿ ದಿಲ್ಲಿ ಗೊಸ್ಟ್ ವಿಶ್ವಾಸಾಚ್ಯಾ ವರ್‍ತಿ ಠಿಕುನ್ ಹಾಯ್, ಅಶೆ ತಿ ದಿಲ್ಲಿ ಗೊಸ್ಟ್ ಅಮ್ಕಾ ಅಮ್ಚ್ಯಾ ಬಾಬಾಚ್ಯಾ ಪಿಳ್ಗಿಚ್ಯಾಕ್ನಿ, ಮಟ್ಲ್ಯಾರ್, ಖಾಲಿ ಖಾಯ್ದೆ ಫಾಳ್ತಲ್ಯಾಕ್ನಿ ಎವ್ಡಿಚ್ ನ್ಹಯ್, ಅಬ್ರಾಹಾಮಾನ್ ಕರಲ್ಲ್ಯಾ ಸಾರ್ಕೆ ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾಕ್ನಿ ಎಕ್ ಫುಕೊಟ್ಚಿ ಕಾನಿಕ್ ಸಾರ್ಕೆ ದಿಲ್ಲೆ ಹಾಯ್. ಕಶ್ಯಾಕ್ ಮಟ್ಲ್ಯಾರ್ ಅಬ್ರಾಹಾಮ್ ಅಮ್ಚೊ ಸಗ್ಳ್ಯಾಂಚೊಚ್ ಆತ್ಮಿಕ್ ಬಾಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:16
18 ತಿಳಿವುಗಳ ಹೋಲಿಕೆ  

ನಂಬಿಕೆಯ ಮೂಲಕ ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ವರವೇ.


ಹಾಗಾಗದೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವದರಿಂದ ಉಂಟಾಗುವ ಆ ವಾಗ್ದಾನದ ಫಲವು ನಂಬುವವರಿಗೇ ಕೊಡಲ್ಪಡಬೇಕೆಂದು ಶಾಸ್ತ್ರವು ಸಮಸ್ತವನ್ನು ಪಾಪಕ್ಕೊಳಗಾಗಿದೆಯೆಂದು ತೀರ್ಮಾನಿಸಿತು.


ಆ ಮಾತಿನ ಅರ್ಥವೇನಂದರೆ ಶರೀರಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ, ವಾಗ್ದಾನಸಂಬಂಧವಾಗಿ ಹುಟ್ಟಿದವರೇ ಅಬ್ರಹಾಮನ ಸಂತತಿಯವರೆಂದು ಎಣಿಸಲ್ಪಡುವರು ಎಂಬದು.


ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ.)


ಯಾಕಂದರೆ ನಾನು ಹೇಳುವದೇನಂದರೆ - ಕ್ರಿಸ್ತನು ಪಿತೃಗಳಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಒಳಗಾದನು;


ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ಉಂಟಾದ ಸಮಾಧಾನದಲ್ಲಿ ಇರೋಣ.


ನಿಮ್ಮ ಪಿತೃವಾದ ಅಬ್ರಹಾಮನನ್ನೂ ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ; ಅಬ್ರಹಾಮನು ಒಬ್ಬನೇ ಇದ್ದಾಗ ನಾನು ಅವನನ್ನು ಕರೆದು ಆಶೀರ್ವದಿಸಿ ಸಂತಾನದಿಂದ ಹೆಚ್ಚಿಸಿದೆನಲ್ಲವೆ.


ಆದದರಿಂದ ಸಹೋದರರೇ, ದೇವರು ನಿಮ್ಮನ್ನು ಕರೆದದ್ದನ್ನೂ ಆದುಕೊಂಡದ್ದನ್ನೂ ದೃಢಪಡಿಸಿಕೊಳ್ಳುವದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಹೀಗೆ ನೀವು ಮಾಡಿದರೆ ಎಂದಿಗೂ ಎಡಹುವದಿಲ್ಲ.


ಆಮೇಲೆ ಸುನ್ನತಿಯೆಂಬ ಸಂಸ್ಕಾರವನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾದ ನೀತಿಗೆ ಮುದ್ರೆಯಾಗಿತ್ತು. ಹೀಗಿರುವದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾದಾಗ್ಯೂ ಮೂಲತಂದೆಯಾದನು; ಅವರೂ ನೀತಿವಂತರೆಂದು ಎಣಿಸಲ್ಪಡುವರು.


ಇದನ್ನು ಕೇಳಿ ಯೇಸು - ಈಹೊತ್ತು ಈ ಮನೆಗೆ ರಕ್ಷಣೆಯಾಯಿತು; ಇವನು ಸಹ ಅಬ್ರಹಾಮನ ವಂಶಿಕನಲ್ಲವೇ.


ದೇವರಿಂದಾಗುವ ಆ ನೀತಿಯು ಯಾವದಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ ನಂಬುವವರೆಲ್ಲರಿಗೆ ದೊರಕುವಂಥದು. ಹೆಚ್ಚುಕಡಿಮೆ ಏನೂ ಇಲ್ಲ.


ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವದಕ್ಕೆ ಅವರ ನಂಬಿಕೆಯೇ ಆಧಾರ; ಸುನ್ನತಿಯಿಲ್ಲದವರನ್ನೂ ಹಾಗೆಯೇ ನಿರ್ಣಯಿಸುವದಕ್ಕೆ ನಂಬಿಕೆಯೇ ಕಾರಣ.


ಕ್ರಿಸ್ತನು ನಮ್ಮ ನಿವಿುತ್ತ ಶಾಪವಾಗಿ ಧರ್ಮಶಾಸ್ತ್ರದಲ್ಲಿ ಹೇಳಿರುವ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಶಾಸ್ತ್ರದಲ್ಲಿ ಬರೆದದೆಯಲ್ಲಾ.


ಒಳ್ಳೇದು, ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು. ಆತನು ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬನು ಕ್ರಿಸ್ತನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು