Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:18 - ಕನ್ನಡ ಸತ್ಯವೇದವು J.V. (BSI)

18 ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವದು ಎಂಬದಾಗಿ ತನಗೆ ಹೇಳಲ್ಪಟ್ಟ ಮಾತು ನೆರವೇರುವದಕ್ಕೆ ಮಾರ್ಗ ತೋರದೆ ಇರುವದರಿಂದ ಅಬ್ರಹಾಮನು ತಾನು ಅನೇಕ ಜನಾಂಗಗಳಿಗೆ ಮೂಲಪಿತೃವಾಗುವೆನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ ನಿರೀಕ್ಷಿಸಿ ನಂಬಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂಬುದಾಗಿ ತನಗೆ ಹೇಳಲ್ಪಟ್ಟ ಆ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ ಅಬ್ರಹಾಮನು ತಾನು ಬಹು ಜನಾಂಗಗಳಿಗೆ ಪಿತನಾಗುವೆನೆಂದು ನಿರೀಕ್ಷೆಗೆ ವಿರುದ್ಧವಾಗಿ ನಿರೀಕ್ಷಿಸಿ ನಂಬಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆತನ ವಿಶ್ವಾಸ ಮತ್ತು ಭರವಸೆ ಎಷ್ಟರಮಟ್ಟಿಗೆ ಇತ್ತೆಂದರೆ, ಈ ದೈವವಾಗ್ದಾನವು ನೆರವೇರುವ ನಿರೀಕ್ಷೆ ಇಲ್ಲದಿದ್ದರೂ ಆತನು ದೇವರನ್ನು ನಂಬಿದನು. ಆದುದರಿಂದಲೇ, “ನಿನ್ನ ಸಂತಾನವು ನಕ್ಷತ್ರಗಳಷ್ಟು ಅಸಂಖ್ಯಾತ ಆಗುವುದು,” ಎಂಬ ಹೇಳಿಕೆಯಂತೆ ಆತನು ಅನೇಕ ಜನಾಂಗಗಳಿಗೆ ಮೂಲಪಿತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅಬ್ರಹಾಮನಿಗೆ ಮಕ್ಕಳಾಗುವ ಆಸ್ಪದವೇ ಇರಲಿಲ್ಲ. ಆದರೂ ಅವನು ದೇವರನ್ನು ನಂಬಿ ತನ್ನ ನಿರೀಕ್ಷೆಯಲ್ಲಿಯೇ ಮುಂದುವರೆದನು. ಆದಕಾರಣವೇ ಅವನು ಅನೇಕ ಜನಾಂಗಗಳಿಗೆ ತಂದೆಯಾದನು. ದೇವರು ಅವನಿಗೆ, “ನೀನು ಅನೇಕ ಜನಾಂಗಗಳನ್ನು ಪಡೆಯುವೆ” ಎಂದು ಹೇಳಿದ್ದಂತೆಯೇ ಇದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವನು ತನಗೆ ದೇವರಿಂದ ಹೇಳಲಾದ ನಿರೀಕ್ಷೆಗೆ ಯಾವ ಆಸ್ಪದವು ಇಲ್ಲದಿರುವಾಗಲೂ ನಿರೀಕ್ಷೆಯಿಂದ ನಂಬಿ, “ನಿನ್ನ ಸಂತಾನವು ನಕ್ಷತ್ರಗಳಷ್ಟು ಇರುವುದು,” ಎಂಬ ಹೇಳಿಕೆಯಂತೆ ಅವನು ಅನೇಕ ಜನಾಂಗಗಳಿಗೆ ತಂದೆಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಅಬ್ರಾಹಾಮಾನ್ ವಿಶ್ವಾಸ್ ಕರ್‍ಲ್ಯಾನ್ ಅನಿ ಬರೊಸೊ ಥವ್ಲ್ಯಾನ್, ಬರೊಸೊ ಕರುಕ್ ಕಾಯ್ಬಿ ಕಾರನ್ ನತ್ತೊ ಜಾಲ್ಯಾರ್‍ಬಿ ತೆನಿ ಬರೊಸೊ ಥವ್ಲ್ಯಾನ್, ತೆಚೆಸಾಟ್ನಿ ತೊ “ಸುಮಾರ್ ದೆಶಾಂಚೊ ಬಾಬಾ ಹೊಲೊ” ಪವಿತ್ರ್ ಪುಸ್ತಕ್ ಮನ್ತಾ , “ತುಜ್ಯಾ ಪಿಳ್ಗಿಚಿ ಲೊಕಾ ಚಿಕ್ಕಿಯಾಂಚ್ಯಾ ಯೆವ್ಡಿ ರ್‍ಹಾತ್ಯಾತ್.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:18
12 ತಿಳಿವುಗಳ ಹೋಲಿಕೆ  

ನಾವು ರಕ್ಷಣೆಯನ್ನು ಹೊಂದಿದವರಾದರೂ ಇನ್ನು ಎದುರುನೋಡುವವರಾಗಿದ್ದೇವೆ. ಎದುರುನೋಡುವ ಪದವಿ ಪ್ರತ್ಯಕ್ಷವಾಗಿದ್ದರೆ ಎದುರುನೋಡುವದೇಕೆ? ಪ್ರತ್ಯಕ್ಷವಾದದ್ದನ್ನು ಎದುರುನೋಡುವದುಂಟೇ?


ಈ ನಿರೀಕ್ಷೆಯು ನಮ್ಮ ಆಶೆಯನ್ನು ಭಂಗಪಡಿಸುವದಿಲ್ಲ; ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿರಸವು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆಯಲ್ಲಾ.


ಆದದರಿಂದ ಜನರೇ ಧೈರ್ಯವಾಗಿರ್ರಿ. ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ದೇವರನ್ನು ನಂಬುತ್ತೇನೆ.


ಕೋರಿದ್ದಕ್ಕೆ ತಡವಾದರೆ ಮನಸ್ಸು ಬಳಲುವದು; ಕೈಗೂಡಿದ ಇಷ್ಟಾರ್ಥವು ಜೀವವೃಕ್ಷವು.


ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತೃವಾಗಿ ನೇವಿುಸಿದ್ದೇನೆಂದು ಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಅಬ್ರಹಾಮನು ನಮ್ಮೆಲ್ಲರಿಗೂ ದೇವರ ಸನ್ನಿಧಿಯಲ್ಲಿ ಮೂಲ ಪಿತೃವಾಗಿದ್ದಾನೆ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲದ್ದನ್ನು ಇರುವದಾಗಿ ಕರೆಯುವವನಾಗಿಯೂ ಇದ್ದಾನೆಂದು ಅಬ್ರಹಾಮನು ನಂಬಿದನು.


ಆಮೇಲೆ ಅತನು ನನಗೆ ಹೀಗೆ ಹೇಳಿದನು - ನರಪುತ್ರನೇ, ಈ ಎಲುಬುಗಳು ಇಸ್ರಾಯೇಲಿನ ಪೂರ್ಣವಂಶವು; ಇಗೋ, ಆ ವಂಶೀಯರು - ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆಯು ಹಾಳಾಯಿತು; ನಾವು ಬುಡನಾಶವಾದೆವು ಅಂದುಕೊಳ್ಳುತ್ತಿದ್ದಾರೆ.


ಜಕರೀಯನು ಆ ದೂತನಿಗೆ - ಇದನ್ನು ನಾನು ಯಾತರಿಂದ ತಿಳುಕೊಳ್ಳಲಿ? ನಾನು ಮುದುಕನು; ನನ್ನ ಹೆಂಡತಿಯೂ ದಿನಹೋದವಳು ಎಂದು ಹೇಳಿದ್ದಕ್ಕೆ


ಅವನು ಹೆಚ್ಚುಕಡಿಮೆ ನೂರು ವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದಾಗ್ಯೂ ಅವನ ನಂಬಿಕೆಯು ಕುಂದಲಿಲ್ಲ.


ಈ ಆಧಾರಗಳನ್ನು ಕೊಟ್ಟದ್ದರಲ್ಲಿ ದೇವರು ಸುಳ್ಳಾಡಿರಲಾರನು. ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಭರವಸಕ್ಕೆ ಯೋಗ್ಯವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಣ ದೇವಸಾನ್ನಿಧ್ಯವನ್ನು ಪ್ರವೇಶಿಸುವಂಥದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು