Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 5:12 - ಕನ್ನಡ ಸತ್ಯವೇದವು J.V. (BSI)

12 ಈ ವಿಷಯ ಹೇಗಂದರೆ - ಒಬ್ಬ ಮನುಷ್ಯನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕದೊಳಗೆ ಸೇರಿದವು; ಎಲ್ಲರು ಪಾಪ ಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಈ ವಿಷಯ ಹೇಗೆಂದರೆ ಒಬ್ಬ ಮನುಷ್ಯನಾದ ಆದಾಮನಿಂದಲೇ ಪಾಪವೂ ಲೋಕದೊಳಗೆ ಪ್ರವೇಶಿಸಿತು ಮತ್ತು ಮರಣವು ಪಾಪದ ನಿಮಿತ್ತ, ಹಾಗು, ಮರಣವು ಎಲ್ಲರು ಪಾಪಮಾಡಿದ್ದರಿಂದ ಎಲ್ಲರಿಗೂ ಪ್ರಾಪ್ತಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಒಬ್ಬ ಮನುಷ್ಯನಿಂದಲೇ ಪಾಪ, ಪಾಪದಿಂದ ಮರಣ, ಈ ಲೋಕವನ್ನು ಪ್ರವೇಶಿಸಿದವು. ಎಲ್ಲರೂ ಪಾಪಮಾಡಿದ್ದರಿಂದ ಮರಣವು ಎಲ್ಲರಿಗೂ ಪ್ರಾಪ್ತಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಒಬ್ಬ ಮನುಷ್ಯನು (ಆದಾಮ) ಮಾಡಿದ ಕೃತ್ಯದಿಂದ ಪಾಪವು ಲೋಕಕ್ಕೆ ಬಂದಿತು. ಆ ಪಾಪದೊಂದಿಗೆ ಮರಣವೂ ಬಂದಿತು. ಆದಕಾರಣವೇ ಎಲ್ಲಾ ಜನರು ಸಾಯಲೇಬೇಕು; ಏಕೆಂದರೆ ಎಲ್ಲಾ ಜನರು ಪಾಪ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ, ಒಬ್ಬ ಮನುಷ್ಯನ ಮೂಲಕ ಪಾಪವೂ ಪಾಪದ ಮೂಲಕ ಮರಣವೂ ಲೋಕದೊಳಗೆ ಪ್ರವೇಶಿಸಿದ ಹಾಗೆಯೇ ಎಲ್ಲರೂ ಪಾಪಮಾಡಿದ್ದರಿಂದ ಮರಣವು ಎಲ್ಲರಲ್ಲಿಯೂ ವ್ಯಾಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಎಕ್ ಮಾನ್ಸಾಚ್ಯಾ ವೈನಾ ಜಗಾತ್ ಪಾಪ್ ಯೆಲೊ, ಅನಿ ತೆಚ್ಯಾ ಪಾಪಾಚ್ಯಾ ವಾಂಗ್ಡಾ ಮರಾನ್‍ಬಿ ಯೆಲೆ. ಹ್ಯಾ ಕಾರನಾಕ್ ಲಾಗುನ್ ಸಗ್ಳ್ಯಾ ಬಾಶಾಂಚ್ಯಾ ಲೊಕಾತ್ನಿ ಮರಾನ್ ಫರ್ಗಟ್ಲೆ, ಕಶ್ಯಾಕ್ ಮಟ್ಲ್ಯಾರ್, ಹರಿ ಎಕ್ಲ್ಯಾನಿ ಪಾಪ್ ಕರಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 5:12
20 ತಿಳಿವುಗಳ ಹೋಲಿಕೆ  

ಒಬ್ಬನ ಅವಿಧೇಯತ್ವದಿಂದ ಎಲ್ಲರೂ ಹೇಗೆ ಪಾಪಿಗಳಾದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಎಲ್ಲರೂ ನೀತಿವಂತರಾಗುವರು.


ಯಾಕಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಉಚಿತಾರ್ಥವರವು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.


ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದೆ ಹೋಗಿದ್ದಾರೆ.


ಆಮೇಲೆ ಆಶೆಯು ಬಸುರಾಗಿ ಪಾಪವನ್ನು ಹೆರುತ್ತದೆ; ಪಾಪವು ತುಂಬಾ ಬೆಳೆದು ಮರಣವನ್ನು ಹಡೆಯುತ್ತದೆ.


ಒಳ್ಳೇದರ ಕೆಟ್ಟದ್ದರ ಅರುಹನ್ನು ಹುಟ್ಟಿಸುವ ಮರದ ಹಣ್ಣನ್ನು ಮಾತ್ರ ತಿನ್ನಬಾರದು; ತಿಂದ ದಿನ ಸತ್ತೇಹೋಗುವಿ ಎಂದು ವಿಧಿಸಿದನು.


ಹುಟ್ಟಿದಂದಿನಿಂದ ನಾನು ಪಾಪಿಯೇ; ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ.


ನೀನು ತಿರಿಗಿ ಮಣ್ಣಿಗೆ ಸೇರುವತನಕ ಬೆವರಿಡುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಲ್ಲವೋ; ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ ಎಂದು ಹೇಳಿದನು.


ಆಗ ಸ್ತ್ರೀಯು - ಆ ಮರದ ಹಣ್ಣು ತಿನ್ನುವದಕ್ಕೆ ಉತ್ತಮವಾಗಿಯೂ ನೋಡುವದಕ್ಕೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು. ಸಂಗಡ ಇದ್ದ ಗಂಡನಿಗೂ ಕೊಡಲು ಅವನೂ ತಿಂದನು.


ಹೀಗೆ ಪಾಪವು ಮರಣವನ್ನುಂಟುಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯನ್ನು ಕೊಟ್ಟು ನಿತ್ಯಜೀವವನ್ನುಂಟುಮಾಡುತ್ತಾ ಅಧಿಕಾರವನ್ನು ನಡಿಸುವದು.


ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಶಿಕ್ಷಿತನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.


ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.


ಹೀಗಿರಲಾಗಿ ಒಂದೇ ಅಪರಾಧದ ಮೂಲಕ ಎಲ್ಲಾ ಮನುಷ್ಯರಿಗೆ ಸಾಯಬೇಕೆಂಬ ನಿರ್ಣಯವು ಹೇಗೆ ಉಂಟಾಯಿತೋ ಹಾಗೆಯೇ ಒಂದೇ ಸತ್ಕಾರ್ಯದಿಂದ ಎಲ್ಲಾ ಮನುಷ್ಯರಿಗೆ ನೀತಿವಂತರೆಂಬ ನಿರ್ಣಯವು ಉಂಟಾಗಿ ಜೀವವನ್ನು ಫಲಿಸುತ್ತದೆ.


ಆದರೆ ನೀವು ಆಗ ಮಾಡಿದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ. ಕಡೆಗೆ ಅವುಗಳಿಂದ ಬರುವದು ಮರಣವಲ್ಲವೇ.


ಮರಣದ ಕೊಂಡಿ ಪಾಪವೇ; ಮತ್ತು ಪಾಪದ ಬಲಕ್ಕೆ ಆಧಾರವು ಧರ್ಮಶಾಸ್ತ್ರವೇ.


ನಾವೆಲ್ಲರೂ ಪೂರ್ವದಲ್ಲಿ ಅವಿಧೇಯರಾಗಿದ್ದು ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಫೆಗಳನ್ನು ನೆರವೇರಿಸುತ್ತಾ ನಡೆದು ವಿುಕ್ಕಾದವರಂತೆ ಸ್ವಭಾವಸಿದ್ಧವಾಗಿ ದೇವರ ಕೋಪಕ್ಕೆ ಗುರಿಯಾಗಿದ್ದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು