Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 5:15 - ಕನ್ನಡ ಸತ್ಯವೇದವು J.V. (BSI)

15 ಆದರೆ ಆ ಅಪರಾಧದ ಸಂಗತಿಗೂ ದೇವರ ಕೃಪಾದಾನದ ಸಂಗತಿಗೂ ಬಹಳ ಹೆಚ್ಚುಕಡಿಮೆ ಉಂಟು. ಹೇಗಂದರೆ ಆ ಒಬ್ಬನ ಅಪರಾಧದಿಂದ ಎಲ್ಲಾ ಮನುಷ್ಯರು ಸತ್ತದ್ದು ನಿಶ್ಚಯವಾಗಿರಲಾಗಿ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಕೃಪೆಯಿಂದ ಸಿಕ್ಕುವ ವರವೂ ಎಲ್ಲಾ ಮನುಷ್ಯರಿಗೆ ಹೇರಳವಾಗಿ ಸಿದ್ಧವಾಗಿರುವದು ಮತ್ತೂ ನಿಶ್ಚಯವಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ಆ ಅಪರಾಧದ ಸಂಗತಿಗೂ ದೇವರ ಕೃಪಾದಾನದ ಸಂಗತಿಗೂ ಬಹಳ ವ್ಯತ್ಯಾಸವುಂಟು. ಹೇಗೆಂದರೆ ಆ ಒಬ್ಬನ ಅಪರಾಧದಿಂದ ಬಹುಮಂದಿ ಸತ್ತರು ಹೀಗಿರಲಾಗಿ ದೇವರ ಕೃಪೆಯು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಕೃಪೆಯಿಂದ ಸಿಕ್ಕುವ ವರವೂ ಅನೇಕರಿಗೆ ಹೇರಳವಾಗಿ ಸಿದ್ಧವಾಗಿರುವುದು ನಿಶ್ಚಯವಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದರೆ ಆದಾಮನ ಪಾಪಕ್ಕೂ ದೇವರ ಅನುಗ್ರಹಕ್ಕೂ ವ್ಯತ್ಯಾಸವಿದೆ. ಒಬ್ಬ ಮನುಷ್ಯನ ಅಪರಾಧದಿಂದ ಎಲ್ಲರೂ ಮರಣಕ್ಕೊಳಗಾದರು ಎಂಬುದೇನೋ ನಿಜ. ಆದರೆ ದೇವರ ಅನುಗ್ರಹವು ಅದಕ್ಕಿಂತಲೂ ಅತ್ಯಧಿಕವಾದುದು. ಅಂತೆಯೇ, ಯೇಸುಕ್ರಿಸ್ತ ಎಂಬ ಒಬ್ಬ ಮಹಾತ್ಮನ ಅನುಗ್ರಹದಿಂದ ಲಭಿಸುವ ಉಚಿತಾರ್ಥವರಗಳು ಇನ್ನೂ ಅಧಿಕಾಧಿಕವಾದುವು ಎಂಬುದೂ ನಿಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ದೇವರ ಉಚಿತ ಕೊಡುಗೆಯು ಆದಾಮನ ಪಾಪದಂತಿಲ್ಲ. ಆ ಒಬ್ಬನು ಮಾಡಿದ ಪಾಪದ ದೆಸೆಯಿಂದಾಗಿ ಅನೇಕ ಜನರು ಸತ್ತರು. ಆದರೆ ಜನರು ದೇವರಿಂದ ಪಡೆದುಕೊಂಡ ಕೃಪೆಯು ಅದಕ್ಕಿಂತ ಬಹು ದೊಡ್ಡದಾಗಿದೆ. ಯೇಸು ಕ್ರಿಸ್ತನೆಂಬ ಒಬ್ಬ ಪುರುಷನ ಕೃಪೆಯ ಮೂಲಕ ದೇವರು ಉಚಿತವಾಗಿ ಕೊಡುವ “ಜೀವ”ವನ್ನು ಅನೇಕ ಜನರು ಹೊಂದಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ಆ ಅಪರಾಧಕ್ಕೂ ದೇವರ ವರಕ್ಕೂ ಬಹಳ ವ್ಯತ್ಯಾಸವಿದೆ. ಹೇಗೆಂದರೆ, ಆದಾಮನ ಅಪರಾಧದಿಂದ ಎಲ್ಲ ಮನುಷ್ಯರೂ ಸತ್ತರು. ಕ್ರಿಸ್ತ ಯೇಸುವೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದ ಸಿಕ್ಕುವ ದೇವರ ಕೃಪೆಯ ವರವು ಅನೇಕರಿಗೆ ಇನ್ನೂ ಹೆಚ್ಚಾಗಿ ಸಿಕ್ಕುವುದು ನಿಶ್ಚಯವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಖರೆ ತೆನಿ ಆದಾಮ್ ಅನಿ ಕ್ರಿಸ್ತ್ ಎಕ್ಲೊಚ್ ನ್ಹಯ್ ಕಶ್ಯಾಕ್‍ ಮಟ್ಲ್ಯಾರ್ ದೆವ್‍ ಅಮ್ಕಾ ದಿತಲಿ ಘುಕೊಟ್ಚಿ ದೆನ್ಗಿ ಆದಾಂವಾಚೊ ಪಾಪ್ ನ್ಹಯ್. ಎಕ್ ಮಾನ್ಸಾಚ್ಯಾ ಪಾಪಾಕ್ ಲಾಗುನ್ ಲೈ ಲೊಕಾ ಮರ್ಲಿ ಹೆ ಖರೆ ಹಾಯ್. ಖರೆ ದೆವಾಚ್ಯಾ ಕುರ್ಪೆ ವೈನಾ ಲೈ ಲೊಕಾಕ್ನಿ ಹಿ ಕುರ್ಪಾ ಎಕ್ ಫುಕೊಟ್ಚಿ ದೆನ್ಗಿ ಸರ್ಕಿ ದಿವ್ನ್ ಹೊಲಾ, ತೊಚ್ ಜೆಜು ಕ್ರಿಸ್ತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 5:15
20 ತಿಳಿವುಗಳ ಹೋಲಿಕೆ  

ಯಾಕಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಉಚಿತಾರ್ಥವರವು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.


ನಂಬಿಕೆಯ ಮೂಲಕ ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ವರವೇ.


ಈ ವಿಷಯ ಹೇಗಂದರೆ - ಒಬ್ಬ ಮನುಷ್ಯನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕದೊಳಗೆ ಸೇರಿದವು; ಎಲ್ಲರು ಪಾಪ ಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.


ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು, ಆ ಜೀವವು ಆತನ ಮಗನಲ್ಲಿ ಅದೆ ಎಂಬದೇ.


ವರ್ಣಿಸಲಶಕ್ಯವಾದ ದೇವರ ವರಕ್ಕಾಗಿ ಆತನಿಗೆ ಸ್ತೋತ್ರ.


ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.


ಆತನು ನಮ್ಮ ಪಾಪಗಳನ್ನು ನಿವಾರಣಮಾಡುವ ಯಜ್ಞವಾಗಿದ್ದಾನೆ; ನಮ್ಮ ಪಾಪಗಳನ್ನು ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನು ಸಹ ನಿವಾರಣಮಾಡುತ್ತಾನೆ.


ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು, ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ. ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು. ಆತನು ದೇವರ ಕೃಪೆಯಿಂದ ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಲೇಬೇಕಾಗಿತ್ತು.


ಅದಕ್ಕೆ ಯೇಸು - ದೇವರು ಕೊಡುವ ವರವೇನೆಂಬದೂ ಕುಡಿಯುವದಕ್ಕೆ ನೀರುಕೊಡು ಎಂದು ನಿನಗೆ ಹೇಳಿದವನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಅವನನ್ನು ಬೇಡಿಕೊಳ್ಳುತ್ತಿದ್ದಿ, ಅವನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಅಂದನು.


ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.


ಇದು ನನ್ನ ರಕ್ತ, ಇದು ಒಡಂಬಡಿಕೆಯ ರಕ್ತ, ಇದು ಪಾಪಗಳ ಕ್ಷಮೆಗಾಗಿ ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.


ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವದಕ್ಕೆ ಬರಲಿಲ್ಲ, ಸೇವೆಮಾಡುವದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.


ಧೂಳಿನ ನೆಲದೊಳಗೆ ದೀರ್ಘನಿದ್ರೆಮಾಡುವವರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನ ನಿತ್ಯತಿರಸ್ಕಾರಗಳನ್ನು ಅನುಭವಿಸುವರು.


ಕರ್ತನಾದ ಯೇಸುವಿನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು ಎಂದು ಹೇಳಿದನು.


ಕ್ರಿಸ್ತನ ಪ್ರೀತಿಯು ನಮಗೆ ಒತ್ತಾಯಮಾಡುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು