Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:13 - ಕನ್ನಡ ಸತ್ಯವೇದವು J.V. (BSI)

13 ಇದು ಮಾತ್ರವಲ್ಲದೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು ದುಷ್ಟತ್ವವನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು ನಿಮ್ಮ ಅಂಗಗಳನ್ನು ನೀತಿ ಕೃತ್ಯಗಳನ್ನು ನಡಿಸುವ ಸಾಧನಗಳನ್ನಾಗಿ ಆತನಿಗೆ ಸಮರ್ಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿಮ್ಮ ದೇಹದ ಯಾವುದೇ ಅಂಗವು ದುಷ್ಕೃತ್ಯವನ್ನೆಸಗುವ ಸಾಧನವಾಗುವಂತೆ ಪಾಪದ ಕಾರ್ಯಕ್ಕೆ ಅದನ್ನು ಒಪ್ಪಿಸದಿರಿ. ಬದಲಾಗಿ ಸತ್ತು ಜೀವಕ್ಕೆ ಬಂದವರಂತೆ ದೇವರಿಗೆ ನಿಮ್ಮನ್ನೇ ಸಮರ್ಪಿಸಿಕೊಳ್ಳಿರಿ; ನಿಮ್ಮ ಅಂಗಗಳನ್ನು ಸತ್ಕಾರ್ಯ ಸಾಧನಗಳನ್ನಾಗಿ ದೇವರಿಗೆ ಒಪ್ಪಿಸಿಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿಮ್ಮ ದೇಹದ ಅಂಗಗಳನ್ನು ಪಾಪದ ಸೇವೆಗೆ ಒಪ್ಪಿಸಬೇಡಿ; ನಿಮ್ಮ ದೇಹಗಳನ್ನು ಪಾಪಕ್ಕೆ ಒಪ್ಪಿಸಿ ದುಷ್ಟತ್ವವನ್ನು ನಡೆಸುವ ಸಾಧನಗಳಾಗಬೇಡಿ. ಅದಕ್ಕೆ ಬದಲಾಗಿ, ನಿಮ್ಮನ್ನೇ ದೇವರಿಗೆ ಸಮರ್ಪಿಸಿಕೊಳ್ಳಿರಿ; ಸತ್ತು ಈಗ ಜೀವಂತವಾಗಿ ಎದ್ದುಬಂದಿರುವವರಂತೆ ಜೀವಿಸಿರಿ; ಒಳ್ಳೆಯ ಕಾರ್ಯಗಳನ್ನು ಮಾಡುವ ಸಾಧನಗಳನ್ನಾಗಿ ನಿಮ್ಮ ದೇಹದ ಅಂಗಗಳನ್ನು ದೇವರಿಗೆ ಸಮರ್ಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿಮ್ಮ ದೇಹದ ಅವಯವಗಳನ್ನು ಅನೀತಿಯನ್ನು ನಡೆಸುವ ಸಾಧನಗಳಾಗುವಂತೆ ಪಾಪಕ್ಕೆ ಒಪ್ಪಿಸಬೇಡಿರಿ. ಆದರೆ ಅದರ ಬದಲಾಗಿ ಮರಣದಿಂದ ಜೀವಕ್ಕೆ ಬಂದವರಂತೆ ನಿಮ್ಮನ್ನು ದೇವರಿಗೆ ಸಮರ್ಪಿಸಿಕೊಳ್ಳಿರಿ. ನಿಮ್ಮ ದೇಹದ ಅವಯವಗಳನ್ನು ನೀತಿಯ ಸಾಧನಗಳಾಗಿರುವುದಕ್ಕಾಗಿ ದೇವರಿಗೆ ಸಮರ್ಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ನಾಹೊಲ್ಯಾರ್ ಬುರ್ಶ್ಯಾ ಉದ್ದೆಶಾಂಚ್ಯಾಸಾಟ್ನಿ ವಾಪ್ರುನ್ ಪಾಪಾತ್ ಪಡುಕ್ ತುಮ್ಚ್ಯಾ ಅಂಗಾಚ್ಯಾ ಖಲ್ಯಾಬಿ ಭಾಗಾಕ್ ತುಮಿ ಸೊಡುನ್ ದಿವ್ನಕಾಶಿ, ಹೆಚ್ಯಾ ಬದ್ಲಾಕ್, ಜೆ ಕೊನ್ ಮರ್‍ನಾತ್ನಾ ಝಿತ್ತೆ ಹೊವ್ನ್ ಉಟಲ್ಲೆ ಹಾತ್, ತೆಂಚ್ಯಾ ಸರ್ಕೆ ತುಮ್ಕಾಚ್ ತುಮಿ ದೆವಾಚ್ಯಾ ತಾಬೆತ್ ಒಪ್ಸುನ್ ದಿವಾ, ಅನಿ ತುಮ್ಚೊ ಸ್ವಬಾವ್ ಖರ್ಯಾ ಪಾನಾಚ್ಯಾ ಉದ್ದೆಸಾಂಚ್ಯಾಸಾಟಿ ವಾಪರ್ತಲ್ಯಾತ್ ಒಪ್ಸುನ್ ದಿವ್ನ್ ಸೊಡಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:13
39 ತಿಳಿವುಗಳ ಹೋಲಿಕೆ  

ಆದದರಿಂದ ಸಹೋದರರೇ, ದೇವರ ಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವದೇನಂದರೆ - ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ ಮೆಚ್ಚಿಗೆಯಾಗಿಯೂ ಇರುವ ಸಜೀವಯಜ್ಞವಾಗಿ ಅರ್ಪಿಸಿರಿ; ಇದೇ ನಿಮ್ಮ ವಿವೇಕಪೂರ್ವಕವಾದ ಆರಾಧನೆಯು.


ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; [ನಂಬಿಕೆಯೆಂಬ] ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ.


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಮರಣದ ಕಂಬವನ್ನು ಏರಿದನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಸಾಯಿಸಿರಿ. ಜಾರತ್ವ ಬಂಡುತನ ಕಾಮಾಭಿಲಾಷೆ ದುರಾಶೆ ವಿಗ್ರಹಾರಾಧನೆಗೆ ಸಮವಾಗಿರುವ ಲೋಭ ಇವುಗಳನ್ನು ವಿಸರ್ಜಿಸಿಬಿಡಿರಿ;


ನಾವು ಶರೀರಾಧೀನಸ್ವಭಾವವನ್ನು ಅನುಸರಿಸುತ್ತಿದ್ದಾಗ ದುರಾಶೆಗಳು ಧರ್ಮಶಾಸ್ತ್ರದಿಂದಲೇ ಪ್ರೇರಿತವಾಗಿ ನಮ್ಮ ಅಂಗಗಳಲ್ಲಿ ಯತ್ನೈಸುತ್ತಾ ಮರಣಕ್ಕೆ ಫಲವನ್ನು ಹುಟ್ಟಿಸುತ್ತಿದ್ದವು.


ಯಾಕಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪದ ವಶದಿಂದ ತಪ್ಪಿಸಿಕೊಂಡವನಾಗಿ ಉಳಿದಿರುವ ತನ್ನ ಜೀವಮಾನಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವದಕ್ಕೆ ಪ್ರಯತ್ನಮಾಡುವನು.


ಅಪರಾಧಗಳನ್ನು ಮಾಡುವದರಿಂದಲೂ ಸುನ್ನತಿಯಿಲ್ಲದ ಶರೀರಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ಸಹ ದೇವರು ಕ್ರಿಸ್ತನೊಂದಿಗೆ ಬದುಕಿಸಿದ್ದಾನೆ.


ನೀವು ನಿಮ್ಮ ಸ್ವಂತ ಸೊತ್ತಲ್ಲ; ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು; ಆದಕಾರಣ ನಿಮ್ಮ ದೇಹದಲ್ಲಿ ದೇವರ ಪ್ರಭಾವವನ್ನು ಪ್ರಕಾಶಪಡಿಸಿರಿ.


ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷವಿುಸಿಬಿಟ್ಟು ಸಕಲ ಅನೀತಿಯನ್ನು ಪರಿಹರಿಸಿ ನಮ್ಮನ್ನು ಶುದ್ಧಿಮಾಡುವನು.


ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳಾಗಿರುವಂಥವುಗಳನ್ನು ತೆಗೆದುಬಿಟ್ಟು ಸೂಳೆಯ ಅಂಗಗಳಾಗ ಮಾಡಬಹುದೋ? ಎಂದಿಗೂ ಮಾಡಬಾರದು.


ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ.)


ಹೇಗಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯದೆ; ಹಾಗೆಯೇ ಆಗುವದೆಂದು ಭರವಸವುಂಟು.


ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ, ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾವಿುಗಳು


ನಿಮ್ಮ ನರಭಾವದ ಬಲಹೀನತೆಯ ದೆಸೆಯಿಂದ ಲೋಕರೀತಿಯಾಗಿ ಮಾತಾಡುತ್ತೇನೆ. ಅಧರ್ಮಮಾಡುವದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ ಅಧರ್ಮಕ್ಕೂ ದಾಸರನ್ನಾಗಿ ಒಪ್ಪಿಸಿಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ.


ನಾವು ಉಪಯೋಗಿಸುವ ಆಯುಧಗಳು ಲೋಕಸಂಬಂಧವಾದ ಆಯುಧಗಳಲ್ಲ; ಅವು ದೇವರ ಎಣಿಕೆಯಲ್ಲಿ ಬಲವಾಗಿದ್ದು ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ.


ಅದೇ ಪ್ರಕಾರ ನೀವು ಸಹ ನಿಮ್ಮನ್ನು ಕ್ರಿಸ್ತ ಯೇಸುವಿನ ಐಕ್ಯದಿಂದ ಪಾಪದ ಪಾಲಿಗೆ ಸತ್ತವರೂ ದೇವರಿಗಾಗಿ ಜೀವಿಸುವವರೂ ಎಂದು ಎಣಿಸಿಕೊಳ್ಳಿರಿ.


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾ ಕೃಪೆಯಿಂದ ಕ್ಷವಿುಸುವನು.


ಈಗ ನಿಮ್ಮ ಪಿತೃಗಳಂತೆ ಆಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡ ಪವಿತ್ರಾಲಯಕ್ಕೆ ಬಂದು ಆತನನ್ನು ಸೇವಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವದು.


ಆದದರಿಂದ - ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಕ್ರಿಸ್ತನು ನಿನಗೆ ಪ್ರಕಾಶ ಕೊಡುವನು ಎಂದು ಹೇಳಿಯದೆ.


ನಾವು ನೆನಸಿದ್ದ ಪ್ರಕಾರವಾಗಿ ಅವರು ಕೊಡದೆ ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿದರು.


ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು.


ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರುದ್ಧವಾಗಿ ಕಾದಾಡಿ ನನ್ನನ್ನು ಸೆರೆಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದಾಗಿದೆ.


ಆದರೆ ಉಲ್ಲಾಸಪಡುವದೂ ಸಂತೋಷಗೊಳ್ಳುವದೂ ನ್ಯಾಯವಾದದ್ದೇ; ಯಾಕಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರಿಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು ಎಂದು ಹೇಳಿದನು.


ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಹುಟ್ಟುತ್ತವೆ? ನಿಮ್ಮ ಇಂದ್ರಿಯಗಳಲ್ಲಿ ಹೋರಾಡುವ ಭೋಗಾಶೆಗಳಿಂದಲೇ ಅಲ್ಲವೇ.


ಹೇಗಂದರೆ ಅವರು ಸಕಲವಿಧವಾದ ಅನ್ಯಾಯ ದುರ್ಮಾರ್ಗತನ ಲೋಲುಪ್ತಿ ದುಷ್ಟತ್ವಗಳಿಂದಲೂ ಹೊಟ್ಟೇಕಿಚ್ಚು ಕೊಲೆ ಜಗಳ ಮೋಸ ಹಗೆತನಗಳಿಂದಲೂ ತುಂಬಿದವರಾದರು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಮರಣದಿಂದ ಪಾರಾಗಿ ಜೀವಕ್ಕೆ ಸೇರಿದ್ದಾನೆ.


ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು ಎಂದು ಹೇಳಿದನು. ಆಗ ಅವರು ಉಲ್ಲಾಸಪಡುವದಕ್ಕೆ ತೊಡಗಿದರು.


ಆಗ ನೆಬೂಕದ್ನೆಚ್ಚರನು - ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲಾ.


ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.


ಕತ್ತಿ ತಿವಿದ ಹಾಗೆ ದುಡುಕಿ ಮಾತಾಡುವವರುಂಟು; ಮತಿವಂತರ ಮಾತೇ ಮದ್ದು.


ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ; ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ.


ನ್ಯಾಯವಿರುದ್ಧವಾದ ಅಳತೆತೂಕಗಳನ್ನು ಮಾಡುವವರೆಲ್ಲರೂ ನಿಮ್ಮ ದೇವರಾದ ಯೆಹೋವನಿಗೆ ಹೇಯವಾಗಿದ್ದಾರೆ.


ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ನ್ಯಾಯತೀರ್ಪಿಗೆ ಒಳಗಾಗುವರು.


ಕ್ರಿಸ್ತನ ಪ್ರೀತಿಯು ನಮಗೆ ಒತ್ತಾಯಮಾಡುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡೆವು.


ನೀನು ದೇವರ ದೃಷ್ಟಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು