Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:21 - ಕನ್ನಡ ಸತ್ಯವೇದವು J.V. (BSI)

21 ಆದರೆ ನೀವು ಆಗ ಮಾಡಿದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ. ಕಡೆಗೆ ಅವುಗಳಿಂದ ಬರುವದು ಮರಣವಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಯಾವ ಕೃತ್ಯಗಳ ವಿಷಯದಲ್ಲಿ ಈಗ ನೀವು ನಾಚಿಕೆಪಡುತ್ತೀರೋ ಅವುಗಳನ್ನು ನೀವು ಹಿಂದೆ ಮಾಡುತ್ತಾ ಬಂದಿರಿ. ಅವುಗಳಿಂದ ನಿಮಗೆ ದೊರೆತ ಪ್ರತಿಫಲವಾದರೂ ಏನು? ಮೃತ್ಯುವೇ ಅವುಗಳ ಅಂತ್ಯಫಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀವು ದುಷ್ಕೃತ್ಯಗಳನ್ನು ಮಾಡಿದಿರಿ. ಈಗ ನೀವು ಆ ಕಾರ್ಯಗಳ ವಿಷಯದಲ್ಲಿ ನಾಚಿಕೆಪಡುತ್ತೀರಿ. ಆ ಕಾರ್ಯಗಳು ನಿಮಗೆ ಸಹಾಯ ಮಾಡಿದವೇ? ಇಲ್ಲ. ಆ ಕಾರ್ಯಗಳು ಆತ್ಮಿಕ ಮರಣವನ್ನು ಮಾತ್ರ ಉಂಟುಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದ್ದರಿಂದ ಈಗ ನೀವು ನಾಚಿಕೆ ಪಟ್ಟುಕೊಳ್ಳುತ್ತಿರುವ ಸಂಗತಿಗಳಿಂದ ನಿಮಗಾದ ಲಾಭವೇನು? ಅವು ಮರಣದಲ್ಲಿ ಸಮಾಪ್ತವಾಗುತ್ತವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಅತ್ತಾ ತುಮ್ಕಾ ಲಜ್ಜಾ ದಿಸಿ ಸರ್ಕೆ ಕರ್‍ತಲ್ಯಾ ತ್ಯಾ ತುಮಿ ಕರಲ್ಲ್ಯಾ ಕಾಮಾಂಚ್ಯಾ ವೈನಾ ತುಮ್ಕಾ ಕಾಯ್ ಗಾವ್ಲೆ? ತ್ಯಾ ಕಾಮಾಂಚೊ ಪ್ರತಿಪಳ್ ಮರಾನ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:21
46 ತಿಳಿವುಗಳ ಹೋಲಿಕೆ  

ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವದಲ್ಲದೆ ಮಾಡುವವರನ್ನೂ ಅನುಮೋದಿಸುತ್ತಾರೆ.


ನಾವು ಶರೀರಾಧೀನಸ್ವಭಾವವನ್ನು ಅನುಸರಿಸುತ್ತಿದ್ದಾಗ ದುರಾಶೆಗಳು ಧರ್ಮಶಾಸ್ತ್ರದಿಂದಲೇ ಪ್ರೇರಿತವಾಗಿ ನಮ್ಮ ಅಂಗಗಳಲ್ಲಿ ಯತ್ನೈಸುತ್ತಾ ಮರಣಕ್ಕೆ ಫಲವನ್ನು ಹುಟ್ಟಿಸುತ್ತಿದ್ದವು.


ಯಾಕಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಉಚಿತಾರ್ಥವರವು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.


ಮನುಷ್ಯದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು. ಅದು ಕಟ್ಟಕಡೆಗೆ ಮರಣಮಾರ್ಗವೇ.


ಪ್ರಿಯರಾದ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.


ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳಸಿದರೆ ಅಯೋಗ್ಯವೆನಿಸಿಕೊಂಡು ಶಾಪಕ್ಕೆ ಗುರಿಯಾಗುತ್ತದೆ, ಅದರ ಅಂತ್ಯವು ಸುಡಲ್ಪಡುವದೇ.


ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವದಾದರೆ ಜೀವಿಸುವಿರಿ.


ಶರೀರಭಾವದವುಗಳ ಮೇಲೆ ಮನಸ್ಸಿಡುವದು ಮರಣ; ಪವಿತ್ರಾತ್ಮನವುಗಳ ಮೇಲೆ ಮನಸ್ಸಿಡುವದು ಜೀವವೂ ಮನಶ್ಶಾಂತಿಯೂ ಆಗಿದೆ.


ಧೂಳಿನ ನೆಲದೊಳಗೆ ದೀರ್ಘನಿದ್ರೆಮಾಡುವವರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನ ನಿತ್ಯತಿರಸ್ಕಾರಗಳನ್ನು ಅನುಭವಿಸುವರು.


ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು ಹೃದಯವನ್ನು ಪರೀಕ್ಷಿಸುವವನೂ ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.


ಆಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.


ಅವರು ದೇವಜನರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ; ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ಕೇಳಿದೆನು.


ನ್ಯಾಯವಿಚಾರಣೆಯ ಸಮಯ ಬಂದದೆ; ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಯಿತಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗಲು ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಗತಿ ಏನಾಗಬಹುದು?


ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದವನು ಅವನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಿರಿ.


ಆಮೇಲೆ ಆಶೆಯು ಬಸುರಾಗಿ ಪಾಪವನ್ನು ಹೆರುತ್ತದೆ; ಪಾಪವು ತುಂಬಾ ಬೆಳೆದು ಮರಣವನ್ನು ಹಡೆಯುತ್ತದೆ.


ಯಾವನು ದೇವಕುಮಾರನನ್ನು ತುಳಿದು ಒಡಂಬಡಿಕೆಯನ್ನು ಸ್ಥಿರಪಡಿಸಿದಂಥ ತನ್ನನ್ನು ಪವಿತ್ರಮಾಡಿದಂಥ ರಕ್ತವನ್ನು ಅಶುದ್ಧವೆಂದೆಣಿಸಿ ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬದನ್ನು ಯೋಚಿಸಿರಿ.


ನೀವು ದೇವರ ಚಿತ್ತಾನುಸಾರವಾಗಿ ಪಟ್ಟ ದುಃಖವು ನಿಮಗೆ ಎಂಥ ತಹತಹವನ್ನು ಉಂಟುಮಾಡಿತು ನೋಡಿರಿ. ನೀವು ನಿರ್ದೋಷಿಗಳೆಂದು ಸ್ಥಾಪಿಸುವದಕ್ಕೆ ಎಷ್ಟೋ ಪ್ರಯಾಸಪಟ್ಟಿರಿ, ಎಷ್ಟೋ ಮನೋವ್ಯಥೆಯನ್ನು ಅನುಭವಿಸಿದಿರಿ; ಎಂಥ ಭಯವನ್ನು ಎಂಥ ಹಂಬಲವನ್ನು ತೋರಿಸಿದಿರಿ; ಮಾನಹಾನಿಗಾಗಿ ಎಷ್ಟೋ ರೋಷಪಟ್ಟು ಶಿಕ್ಷೆಮಾಡಿದಿರಿ. ನೀವು ಆ ಕಾರ್ಯಕ್ಕೆ ಸೇರಿದವರಲ್ಲವೆಂಬದನ್ನು ಎಲ್ಲಾ ವಿಧದಲ್ಲಿಯೂ ತೋರಿಸಿದಿರಿ.


ತಾವು ನಡಿಸಿದ ದುಷ್ಕೃತ್ಯಗಳಿಗೆಲ್ಲಾ ನಾಚಿಕೆಪಟ್ಟರೆ ನೀನು ದೇವಸ್ಥಾನದ ರೂಪವನ್ನೂ ವ್ಯವಸ್ಥೆಯನ್ನೂ ಗಮನಾಗಮನ ನಿಯಮಗಳನ್ನೂ ಸಕಲ ರಚನಾವಿಧಾನಗಳನ್ನೂ ಸಮಸ್ತ ವಿಧಿಗಳನ್ನೂ ಸರ್ವನಿರ್ಮಾಣರೀತಿಗಳನ್ನೂ ಎಲ್ಲಾ ಕಟ್ಟಳೆಗಳನ್ನೂ ಅವರಿಗೆ ತಿಳಿಸಿ ಅವರು ಅದರ ಪೂರ್ಣಕ್ರಮವನ್ನೂ ಎಲ್ಲಾ ವಿಧಿಗಳನ್ನೂ ಅನುಸರಿಸಿ ಕೈಕೊಳ್ಳುವಂತೆ ಅವರ ಕಣ್ಣೆದುರಿಗೆ ಬರೆ.


ತಿರುಗಿಸಲ್ಪಟ್ಟ ಮೇಲೆಯೇ ಪಶ್ಚಾತ್ತಾಪಪಟ್ಟೆನು; ತಿಳುವಳಿಕೆಯನ್ನು ಹೊಂದಿದ ಮೇಲೆಯೇ ತೊಡೆಯನ್ನು ಬಡಿದುಕೊಂಡೆನು; ನನ್ನ ಯೌವನದ ಅವಮಾನವು ನನ್ನ ಮೇಲೆ ಹೊತ್ತ ಕಾರಣ ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.


ಗೋದಿಯನ್ನು ಬಿತ್ತಿ ಮುಳ್ಳನ್ನು ಕೊಯ್ದಿದ್ದಾರೆ; ಕ್ಷೇಮ ಕೆಡುವಷ್ಟು ಪ್ರಯಾಸಪಟ್ಟರೂ ಯಾವ ಲಾಭವನ್ನೂ ಹೊಂದಲಿಲ್ಲ; ಯೆಹೋವನ ರೋಷಾಗ್ನಿಯ ನಿವಿುತ್ತ ನಿಮ್ಮ ಬೆಳೆಯ ವಿಷಯವಾಗಿ ನಿಮಗೆ ನಾಚಿಕೆಯಾಗುವದು.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ; ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇಹೋಗುವರು ಎಂದು ಯೆಹೋವನು ಅನ್ನುತ್ತಾನೆ.


ಆದಕಾರಣ ಹದಮಳೆಗೆ ಅಡ್ಡಿಯಾಯಿತು, ಹಿಂಗಾರೂ ಆಗಲಿಲ್ಲ; ಆದರೂ ನೀನು ಸೂಳೆಯ ಮುಖವುಳ್ಳವಳಾಗಿ ನಾಚಿಕೆಗೆಟ್ಟಿದ್ದೀ.


ಶಿಷ್ಟರಿಗೆ ಶುಭವೇ ಎಂದು ಹೇಳಿರಿ, ಅವರು ತಮ್ಮ ಸುಕೃತಫಲವನ್ನು ಅನುಭವಿಸುವರಷ್ಟೆ.


ಮನುಷ್ಯದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು; ಕಟ್ಟಕಡೆಗೆ ಅದು ಮರಣಮಾರ್ಗವೇ.


ಆದದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವದು.


ಆದರೆ ದೇವಾಲಯಕ್ಕೆ ಹೋಗಿ ಅವರ ಅಂತ್ಯಾವಸ್ಥೆಯನ್ನು ಆಲೋಚಿಸಿದಾಗ ನನಗೆ ಗೊತ್ತಾಯಿತು.


ಆದಕಾರಣ [ನಾನು ಆಡಿದ್ದನ್ನು] ತಿರಸ್ಕರಿಸಿ ಧೂಳಿಯಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ.


ಅಯ್ಯೋ, ನಾನು ಅಲ್ಪನೇ ಸರಿ, ನಿನಗೆ ಪ್ರತ್ಯುತ್ತರವಾಗಿ ಏನು ಹೇಳಲಿ? ಬಾಯ ಮೇಲೆ ಕೈಯಿಟ್ಟುಕೊಳ್ಳುವೆನು.


ನನ್ನ ದೇವರೇ, ನಾನು ಮನಗುಂದಿದವನಾಗಿದ್ದೇನೆ; ನಿನ್ನ ಕಡೆಗೆ ಮುಖವನ್ನೆತ್ತುವದಕ್ಕೆ ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದವು. ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಯಿತು.


ತರುವಾಯ ಅರಸನು ಯಾಜಕನಾದ ಎಬ್ಯಾತಾರನಿಗೆ - ನೀನು ಅಣತೋತಿನಲ್ಲಿರುವ ನಿನ್ನ ಸ್ವಾಸ್ತ್ಯಕ್ಕೆ ಹೋಗು; ನೀನು ಮರಣಕ್ಕೆ ಪಾತ್ರನು. ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆಯಾದ ದಾವೀದನೊಡನೆ ಸಂಚರಿಸುತ್ತಾ ಅವನ ಎಲ್ಲಾ ಕಷ್ಟಗಳಲ್ಲಿ ಪಾಲುಗಾರನಾಗಿದ್ದದರಿಂದ


ಅಪರಾಧ ಮಾಡಿದವನು ಮರಣಶಿಕ್ಷೆಯನ್ನು ಹೊಂದಿದ ಮೇಲೆ ನೀವು ಅವನ ಶವವನ್ನು ಮರಕ್ಕೆ ತೂಗಹಾಕಿದರೆ ಅದು ರಾತ್ರಿಯಲ್ಲಿಯೂ ಮರದ ಮೇಲೆ ಇರಬಾರದು;


ಒಬ್ಬನೇ ಒಬ್ಬನ ಸಾಕ್ಷಿಯ ಮಾತಿನ ಮೇಲೆ ಯಾರಿಗೂ ಮರಣಶಿಕ್ಷೆಯಾಗಬಾರದು; ಮರಣಶಿಕ್ಷೆಯನ್ನು ವಿಧಿಸುವದಕ್ಕೆ ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳು ಬೇಕು.


ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು, ಅವರು ಪ್ರಪಂಚದ ಕಾರ್ಯಗಳ ಮೇಲೆ ಮನಸ್ಸಿಡುವವರು. ನಾವಾದರೋ ಪರಲೋಕಸಂಸ್ಥಾನದವರು;


ಅವನು ಮನುಷ್ಯರ ಮುಂದೆ ನಿಂತು - ನಾನು ಪಾಪಮಾಡಿ ನ್ಯಾಯವನ್ನು ಕೆಡಿಸಿದ್ದರೂ ಆತನು ಮುಯ್ಯಿ ತೀರಿಸದೆ


ಈ ವಿಷಯ ಹೇಗಂದರೆ - ಒಬ್ಬ ಮನುಷ್ಯನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕದೊಳಗೆ ಸೇರಿದವು; ಎಲ್ಲರು ಪಾಪ ಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.


ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; [ನಂಬಿಕೆಯೆಂಬ] ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ.


ನಾಚಿಕೆಯನ್ನು ಹುಟ್ಟಿಸುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಕೆಡಿಸದೆ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಸಜ್ಜನರೆಂದು ಪ್ರತಿಮನುಷ್ಯನ ಮನಸ್ಸು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು