ರೋಮಾಪುರದವರಿಗೆ 8:33 - ಕನ್ನಡ ಸತ್ಯವೇದವು J.V. (BSI)33 ದೇವರು ಆದುಕೊಂಡವರ ಮೇಲೆ ಯಾರು ತಪ್ಪುಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ದೇವರು ಆದುಕೊಂಡವರ ಮೇಲೆ ಯಾರು ತಪ್ಪು ಹೊರಿಸುವವರು ಯಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವಾತನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33-34 ದೇವರೇ ಆರಿಸಿಕೊಂಡವರ ಮೇಲೆ ಯಾರು ತಾನೇ ದೋಷಾರೋಪಣೆ ಮಾಡಬಲ್ಲರು? ದೇವರೇ ಅವರನ್ನು ನಿರ್ದೋಷಿಗಳೆಂದು ನಿರ್ಣಯಿಸಿರುವಾಗ ಅವರನ್ನು ದೋಷಿಗಳೆಂದು ನಿರ್ಣಯಿಸುವವರು ಯಾರು? ಪ್ರಾಣತ್ಯಾಗ ಮಾಡಿದ್ದಲ್ಲದೆ ಪುನರುತ್ಥಾನ ಹೊಂದಿದ ಕ್ರಿಸ್ತಯೇಸುವೇ ದೇವರ ಬಲಪಾರ್ಶ್ವದಲ್ಲಿದ್ದುಕೊಂಡು ನಮ್ಮ ಪರವಾಗಿ ಬಿನ್ನಯಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ದೇವರು ಆರಿಸಿಕೊಂಡಿರುವ ಜನರ ಮೇಲೆ ಯಾರು ದೋಷಾರೋಪಣೆ ಮಾಡಬಲ್ಲರು? ಯಾರೂ ಇಲ್ಲ! ಅವರನ್ನು ನೀತಿವಂತರನ್ನಾಗಿ ಮಾಡುವಾತನು ದೇವರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ದೇವರು ತಾವೇ ಆರಿಸಿಕೊಂಡವರ ಮೇಲೆ ದೋಷಾರೋಪಣೆ ಮಾಡುವವರಾರು? ದೇವರೇ ನೀತಿವಂತರೆಂದು ನಿರ್ಣಯ ಮಾಡುವವರಾಗಿರುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ದೆವಾನ್ ಎಚುನ್ ಕಾಡಲ್ಲ್ಯಾಂಚ್ಯಾ ವರ್ತಿ ಅಪ್ವಾದ್ ಘಾಲ್ತಲೊ ಕೊನ್ ಹಾಯ್? ದೆವಾನುಚ್ ತೆನಿ ಚುಕಿದಾರ್ ನ್ಹಯ್ ಮನುನ್ ನಿರ್ನಯ್ ದಿವ್ನ್ ಸೊಡ್ಲ್ಯಾನಾಯ್! ಅಧ್ಯಾಯವನ್ನು ನೋಡಿ |
ದೇವರ ದಾಸನೂ ಯೇಸು ಕ್ರಿಸ್ತನ ಅಪೊಸ್ತಲನೂ ಆಗಿರುವ ಪೌಲನು ನಮ್ಮೆಲ್ಲರಿಗೆ ಹುದುವಾಗಿರುವ ನಂಬಿಕೆಯ ಸಂಬಂಧದಲ್ಲಿ ನನ್ನ ನಿಜಕುಮಾರನಾದ ತೀತನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಶಾಂತಿಯೂ ಆಗಲಿ. ದೇವರಾದುಕೊಂಡವರ ನಂಬಿಕೆಯೂ ಭಕ್ತಿಯನ್ನುಂಟುಮಾಡುವ ಸತ್ಯದ ಪರಿಜ್ಞಾನವೂ ವೃದ್ಧಿಯಾಗುವದಕ್ಕೋಸ್ಕರವೇ ಅಪೊಸ್ತಲನಾಗಿದ್ದೇನೆ. ಆ ನಂಬಿಕೆಗೂ ಸತ್ಯದ ಪರಿಜ್ಞಾನಕ್ಕೂ ನಿತ್ಯಜೀವದ ನಿರೀಕ್ಷೆಯೇ ಆಧಾರವಾಗಿದೆ. ಸುಳ್ಳಾಡದ ದೇವರು ಆ ನಿತ್ಯಜೀವವನ್ನು ಕೊಡುತ್ತೇನೆಂದು ಅನಾದಿಕಾಲದಲ್ಲಿ ವಾಗ್ದಾನಮಾಡಿ ತನ್ನ ಕ್ಲುಪ್ತ ಸಮಯದಲ್ಲಿ ವಾಗ್ದಾನ ನೆರವೇರಿಸಿ ಪ್ರಸಂಗದ ಮೂಲಕ ಪ್ರಕಟಿಸಿದನು. ಆ ಪ್ರಸಂಗೋದ್ಯೋಗವು ನಮ್ಮ ರಕ್ಷಕನಾದ ದೇವರ ಅಪ್ಪಣೆಯ ಪ್ರಕಾರ ನನಗೆ ಒಪ್ಪಿಸಲ್ಪಟ್ಟದೆ.