Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:34 - ಕನ್ನಡ ಸತ್ಯವೇದವು J.V. (BSI)

34 ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತ ಯೇಸು ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ದೇವಜನರು ದೋಷಿಗಳೆಂದು ಯಾರು ಹೇಳಬಲ್ಲರು? ಯಾರು ಇಲ್ಲ! ಕ್ರಿಸ್ತ ಯೇಸು ನಮಗೋಸ್ಕರ ಪ್ರಾಣಕೊಟ್ಟನು. ಅಷ್ಟೇ ಅಲ್ಲ, ಆತನು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದನು. ಈಗ ಆತನು ದೇವರ ಬಲಗಡೆಯಲ್ಲಿದ್ದಾನೆ ಮತ್ತು ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತ ಯೇಸು ಮರಣವನ್ನು ಹೊಂದಿದ್ದಲ್ಲದೆ, ಜೀವಿತರಾಗಿ ಎದ್ದು ದೇವರ ಬಲಗಡೆಯಲ್ಲಿ ಇದ್ದಾರೆ ಮತ್ತು ಅವರೇ ನಮಗೋಸ್ಕರ ವಿಜ್ಞಾಪಿಸುವವರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಅಶೆ ಹೊಲ್ಯಾರ್ ತೆನಿ ಚುಕಿದಾರ್ ಮನುನ್ ಸಾಂಗ್ತಲೊ ಕೊನ್ ತೊ? ಕ್ರಿಸ್ತ್ ಜೆಜು ಮರ್‍ಲೊ, ತೊ ಝಿತ್ತೊ ಹೊಲಾ, ಅನಿ ದೆವಾಚ್ಯಾ ಉಜ್ವ್ಯಾ ಬಾಜುಕ್ ಬಸ್ಲಾ ಅನಿ ಅಮ್ಚ್ಯಾಸಾಟ್ನಿ ದೆವಾಕ್ಡೆ ಮಾಗುಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:34
37 ತಿಳಿವುಗಳ ಹೋಲಿಕೆ  

ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ಆದರೆ ಹೃದಯಗಳನ್ನು ಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನೆಂದು ತಿಳಿದದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ದೇವಜನರಿಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು.


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೇವದೂತರೂ ಅಧಿಕಾರಿಗಳೂ ಮಹತ್ವಗಳೂ ಆತನ ಸ್ವಾಧೀನವಾಗಿವೆ.


ಯಾಕಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಅನುರೂಪ ಮಾತ್ರವಾದದ್ದಾಗಿಯೂ ಕೈಯಿಂದ ಕಟ್ಟಿದ್ದಾಗಿಯೂ ಇರುವ ಆಲಯದಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.


ಆದದರಿಂದ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ಅಪರಾಧನಿರ್ಣಯವು ಈಗ ಇಲ್ಲವೇ ಇಲ್ಲ.


ಯೇಸುಸ್ವಾವಿುಯು ಅವರ ಕೂಡ ಮಾತಾಡಿದ ಮೇಲೆ ಆಕಾಶಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಆದಕಾರಣ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವದರಿಂದ ಮೇಲಿರುವವುಗಳನ್ನು ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ಇವನು ಇಂಥವನಾಗಿರುವದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು ಮರಣಹೊಂದಿ ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು ಬಹುಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆಮಾಡಿದನಲ್ಲಾ.


ಆತನು ದೀನನ ಬಲಗಡೆಯಲ್ಲಿ ನಿಂತುಕೊಂಡು ಪ್ರಾಣಶಿಕ್ಷೆ ವಿಧಿಸುವವರ ಕೈಯಿಂದ ತಪ್ಪಿಸಿ ರಕ್ಷಿಸುವನು.


ಸತ್ತವನಾದೆನು, ಮತ್ತು ಇಗೋ ಯುಗಯುಗಾಂತರಗಳಲ್ಲಿಯೂ ಬದುಕುವವನಾಗಿದ್ದೇನೆ; ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಅವೆ.


ಬದುಕಿದರೂ ಸತ್ತರೂ ನಾವು ಕರ್ತನವರೇ. ಯಾಕಂದರೆ ಸತ್ತವರಿಗೂ ಜೀವಿಸುವವರಿಗೂ ಒಡೆಯನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಜೀವಿತನಾದನು.


ದೇವರು ಆತನನ್ನು ನಮ್ಮ ಅಪರಾಧಗಳ ನಿವಿುತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ನಿವಿುತ್ತ ಜೀವದಿಂದ ಎಬ್ಬಿಸಿದನು.


ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ತಡಕಿದರೂ ಸಿಕ್ಕುವದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷವಿುಸುವೆನಲ್ಲವೆ. ಇದು ಯೆಹೋವನ ನುಡಿ.


ಆದರೆ ಯೆಹೋವನು ಅವನನ್ನು ಸಿಕ್ಕಗೊಡಿಸುವದಿಲ್ಲ; ಅವನನ್ನು ನ್ಯಾಯವಿಚಾರಣೆಯಲ್ಲಿ ಅಪರಾಧಿಯೆಂದು ಎಣಿಸುವದಿಲ್ಲ.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವದಕ್ಕಾಗಿ ಒಂದೇ ಸಾರಿ ಪಾಪನಿವಾರಣಕ್ಕೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧದಲ್ಲಿ ಕೊಲ್ಲಲ್ಪಟ್ಟನು, ಆತ್ಮಸಂಬಂಧದಲ್ಲಿ ತಿರಿಗಿ ಬದುಕುವವನಾದನು.


ಈತನು ದೇವರ ಪ್ರಭಾವದ ಪ್ರಕಾಶವೂ ಆತನ ತತ್ವದ ಮೂರ್ತಿಯೂ ತನ್ನ ಶಕ್ತಿಯ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ಪಾಪವಿಶುದ್ಧಿಮಾಡಿದ ಮೇಲೆ ಉನ್ನತಲೋಕದೊಳಗೆ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.


ಆ ದಿನದಲ್ಲಿ ನೀವು ನನಗೆ ಯಾವ ಪ್ರಶ್ನೆಯನ್ನೂ ಮಾಡುವದಿಲ್ಲ. ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ತಂದೆಯನ್ನು ಏನಾದರೂ ಬೇಡಿಕೊಂಡರೆ ಅದನ್ನು ಆತನು ನನ್ನ ಹೆಸರಿನ ಮೇಲೆ ನಿಮಗೆ ಕೊಡುವನು.


ಇನ್ನು ಸ್ವಲ್ಪಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ; ನಾನು ಬದುಕುವದರಿಂದ ನೀವೂ ಬದುಕುವಿರಿ.


ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವದಕ್ಕೆ ಬರಲಿಲ್ಲ, ಸೇವೆಮಾಡುವದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.


ದೇವರು ಒಂದು ವೇಳೆ ಆ ಮನುಷ್ಯನಿಗೆ ಮೆಚ್ಚಿ - ಈಡು ಸಿಕ್ಕಿತು, ಅಧೋಲೋಕಕ್ಕೆ ಇಳಿಯದಂತೆ ಇವನನ್ನು ರಕ್ಷಿಸು ಎಂದು ಅಪ್ಪಣೆಕೊಟ್ಟರೆ


ಆತನು ನೆಮ್ಮದಿಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು? ವಿಮುಖನಾದರೆ ಆತನ ದರ್ಶನ ಮಾಡುವವರಾರು? ಆತನು ಜನಾಂಗಕ್ಕಾಗಲಿ ಮನುಷ್ಯನಿಗಾಗಲಿ ಮಾಡುವದೆಲ್ಲಾ ಹೀಗೆಯೇ.


ನನ್ನ ನ್ಯಾಯಸ್ಥಾಪಕನು ಸಮೀಪದಲ್ಲಿದ್ದಾನೆ; ನನ್ನೊಡನೆ ಯಾರು ವ್ಯಾಜ್ಯವಾಡುವರು? ನಾವಿಬ್ಬರು [ನ್ಯಾಯಾಸನದ ಮುಂದೆ] ನಿಂತುಕೊಳ್ಳುವ; ನನಗೆ ಪ್ರತಿಕಕ್ಷಿಯು ಯಾರು? ನನ್ನ ಬಳಿಗೆ ಬರಲಿ.


ಆತನನ್ನು ದೇವರು ಮರಣವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಯಾಕಂದರೆ ಮರಣವು ಆತನನ್ನು ಹಿಡುಕೊಂಡಿರುವದು ಅಸಾಧ್ಯವಾಗಿತ್ತು.


ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಒಂದು ವರುಷದ ಕುರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು