Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:20 - ಕನ್ನಡ ಸತ್ಯವೇದವು J.V. (BSI)

20 ಎಲೋ ಮನುಷ್ಯನೇ, ಹಾಗನ್ನಬೇಡ; ದೇವರಿಗೆ ಎದುರುಮಾತಾಡುವದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ - ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಎಲೋ ಮನುಷ್ಯನೇ ಹಾಗೆನ್ನಬೇಡ ದೇವರಿಗೆ ವಿರುದ್ಧವಾಗಿ ಮಾತನಾಡುವುದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ, “ಏಕೆ ನನ್ನನ್ನು ಹೀಗೆ ರೂಪಿಸಿದೆ”, ಎಂದು ಕೇಳುವುದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಹುಲುಮಾನವಾ, ದೇವರೊಡನೆ ವಾದಿಸಲು ನೀನಾರು? ಮಡಿಕೆಯು ತನ್ನನ್ನು ಮಾಡಿದವನನ್ನು ನೋಡಿ, “ನನ್ನನ್ನು ಹೀಗೇಕೆ ಮಾಡಿದೆ” ಎಂದು ಕೇಳುವುದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಹಾಗೆ ಕೇಳಬೇಡಿ. ನೀವು ಕೇವಲ ಮನುಷ್ಯರು. ದೇವರನ್ನು ಪ್ರಶ್ನಿಸಲು ಮನುಷ್ಯರಿಗೆ ಯಾವ ಹಕ್ಕೂ ಇಲ್ಲ. ಮಡಕೆಯು ತನ್ನನ್ನು ತಯಾರಿಸಿದವನಿಗೆ, “ನೀನು ನನ್ನನ್ನು ಈ ರೀತಿ ತಯಾರಿಸಿದ್ದೇಕೆ” ಎಂದು ಕೇಳುವುದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಎಲೈ, ಮನುಷ್ಯನೇ, ದೇವರಿಗೆ ಎದುರಾಗಿ ಮಾತನಾಡಲು ನೀನು ಯಾರು? “ರೂಪಿಸಿರುವುದು ರೂಪಿಸಿದವನಿಗೆ, ‘ಏಕೆ ನನ್ನನ್ನು ಹೀಗೆ ರೂಪಿಸಿದೆ?’ ” ಎಂದು ಪ್ರಶ್ನಿಸಬಹುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಖರೆ, ಯೆ ಮಾನ್ಸಾ, ದೆವಾಕ್ ಹುರ್‍ಪಾಟಿ ಬೊಲುಕ್ ತಿಯಾ ಕೊನ್? ಎಕ್ ಮಾಟಿಚ್ಯಾ ಗಾಡ್ಗ್ಯಾನ್ ತೆಕಾ ಕರಲ್ಲ್ಯಾ ಮಾನ್ಸಾಕ್, “ತಿಯಾ ಮಾಕಾ ಅಶೆ ಕಶ್ಯಾಕ್ ಕರ್‍ಲೆ” ಮನುನ್ ಇಚಾರುಕ್ ಹೊತಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:20
30 ತಿಳಿವುಗಳ ಹೋಲಿಕೆ  

ಅಯ್ಯೋ, ನೀವು ಎಂಥಾ ಮೂರ್ಖರು! ಕುಂಬಾರನು ಮಣ್ಣೆನಿಸಿಕೊಂಡಾನೇ? ಕಾರ್ಯವು ಕರ್ತೃವನ್ನು ಕುರಿತು ಅವನು ನನ್ನನ್ನು ಮಾಡಲಿಲ್ಲ ಎಂದುಕೊಂಡೀತೇ? ನಿರ್ಮಿತವಾದದ್ದು ನಿರ್ಮಿಸಿದವನ ವಿಷಯವಾಗಿ ಅವನಿಗೆ ವಿವೇಕವಿಲ್ಲ ಎಂದೀತೇ?


ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದೀ; ನಾವು ಜೇಡಿಮಣ್ಣು, ನೀನು ಕುಂಬಾರ, ನಾವೆಲ್ಲರೂ ನಿನ್ನ ಕೈಕೆಲಸವೇ.


ಆತನು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ದಯಪಾಲಿಸನೆಂಬದಾಗಿ ನೀನು ಆತನೊಂದಿಗೆ ವ್ಯಾಜ್ಯವಾಡುವದೇಕೆ?


ಆಕ್ಷೇಪಕನು ಸರ್ವಶಕ್ತನ ಸಂಗಡಲೂ ವ್ಯಾಜ್ಯವಾಡುವನೋ? ದೇವರೊಂದಿಗೆ ವಿವಾದಮಾಡುವವನು ಇದಕ್ಕೆಲ್ಲಾ ಉತ್ತರಕೊಡಲಿ ಎಂದು ಹೇಳಿದನು.


ನನ್ನ ಬದುಕನ್ನು ನಾನು ಬೇಕಾದ ಹಾಗೆ ಮಾಡಬಹುದಲ್ಲವೋ? ನಾನು ಒಳ್ಳೆಯವನಾಗಿರುವದು ನಿನ್ನ ಕಣ್ಣನ್ನು ಒತ್ತುತ್ತದೋ ಎಂದು ಹೇಳಿದನು.


ಒಣಮಾತುಗಳಿಗೆ ಪಾರವಿಲ್ಲವೋ? ಯಾವ ನೋವಿನಿಂದ ಈ ಉತ್ತರ ಕೊಟ್ಟಿ?


ಇದಲ್ಲದೆ ಬುದ್ಧಿಗೆಟ್ಟು ಸತ್ಯವಿಹೀನರಾಗಿದ್ದು ದೇವ ಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ನಿತ್ಯವಾದ ಕಚ್ಚಾಟಗಳು ಉಂಟಾಗುತ್ತವೆ.


ಜ್ಞಾನಿಯು ಎಲ್ಲಿ? ಶಾಸ್ತ್ರಿಯೆಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕಜ್ಞಾನವನ್ನು ಹುಚ್ಚುತನವಾಗ ಮಾಡಿದ್ದಾನಲ್ಲವೇ.


ಏನು! ನನ್ನ ನೀತಿಯನ್ನು ಖಂಡಿಸಿಬಿಡುವಿಯಾ? ನಿನ್ನ ನ್ಯಾಯವನ್ನು ಸ್ಥಾಪಿಸಿಕೊಳ್ಳಲಿಕ್ಕೆ ನನ್ನನ್ನು ಕೆಟ್ಟವನೆಂದು ನಿರ್ಣಯಿಸುವಿಯೋ?


ಆತನ ಮಾರ್ಗವನ್ನು ಆತನಿಗೆ ಯಾರು ನೇವಿುಸಿದರು? ನೀನು ಅನ್ಯಾಯವನ್ನು ನಡಿಸಿದಿ ಎಂದು ಹೇಳಬಲ್ಲವರಾರು?


ಅಪ್ರಯೋಜಕನೇ, ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾಗಿದೆ ಎಂಬದಕ್ಕೆ ದೃಷ್ಟಾಂತಬೇಕೋ?


ದಾಸರು ಎಲ್ಲಾದರಲ್ಲಿ ತಮ್ಮ ಯಜಮಾನರಿಗೆ ಅಧೀನರಾಗಿದ್ದು ಅವರನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡುತ್ತಾ


ಆದದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಯಾವನಾದರೂ ಸರಿಯೇ, ಉತ್ತರ ಹೇಳುವದಕ್ಕೆ ನಿನಗೆ ಮಾರ್ಗವಿಲ್ಲ. ಹೇಗಂದರೆ ಮತ್ತೊಬ್ಬರಲ್ಲಿ ದೋಷವೆಣಿಸುವದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ನಡಿಸುತ್ತೀಯಲ್ಲಾ.


ಮನುಷ್ಯನೇ, ಒಳ್ಳೆಯದು ಇಂಥದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಷ್ಟೆ; ನ್ಯಾಯವನ್ನು ಆಚರಿಸುವದು, ಕರುಣೆಯಲ್ಲಿ ಆಸಕ್ತನಾಗಿರುವದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವದು, ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?


ಒಂದು ಸಾರಿ ಮಾತಾಡಿದ್ದೇನೆ, ಪ್ರತಿವಾದ ಮಾಡಲಾರೆನು; ಎರಡು ಸಲ ಹೌದು, ಇನ್ನೇನೂ ನುಡಿಯಲೊಲ್ಲೆನು ಎಂದು ಯೆಹೋವನಿಗೆ ಹೇಳಿದನು.


ಎಲೌ ಸ್ತ್ರೀಯೇ, ನಿನ್ನ ಗಂಡನನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? ಎಲೈ ಪುರುಷನೇ, ನಿನ್ನ ಹೆಂಡತಿಯನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು?


ಅದಕ್ಕೆ ಅರಸನು - ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ಬಿಡಿರಿ, ಅವನು ಶಪಿಸಲಿ; ದಾವೀದನನ್ನು ಶಪಿಸೆಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ ಮೇಲೆ ನೀನು ಹೀಗೇಕೆ ಮಾಡಿದಿ ಎಂದು ಅವನನ್ನು ಯಾರು ಕೇಳಬಹುದು ಎಂದು ಉತ್ತರಕೊಟ್ಟನು.


ಆತನು ನನ್ನಂಥವನಲ್ಲ, ಮನುಷ್ಯನಲ್ಲ, ನಾನು ಆತನೊಂದಿಗೆ ವಾದಿಸುವದು ಹೇಗೆ? ನಾವಿಬ್ಬರೂ ನ್ಯಾಯಾಸನದ ಮುಂದೆ ಕೂಡುವದು ಹೇಗೆ?


ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಆಡಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಎತ್ತಿಕೊಂಡವನನ್ನು ಕೋಲು ಬೀಸಿದಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು.


ಯೆಹೋವನು ಹೀಗನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಕೂಡದೋ? ಇಸ್ರಾಯೇಲ್ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ, ಹಾಗೆಯೇ ನೀವು ನನ್ನ ಕೈಯಲ್ಲಿದ್ದೀರಿ.


ಭೂನಿವಾಸಿಗಳೆಲ್ಲರೂ [ಆತನ ದೃಷ್ಟಿಯಲ್ಲಿ] ಏನೂ ಅಲ್ಲದಂತಿದ್ದಾರೆ, ಪರಲೋಕಸೈನ್ಯದವರಲ್ಲಿಯೂ ಭೂಲೋಕದವರಲ್ಲಿಯೂ ತನ್ನ ಇಚ್ಫಾನುಸಾರ ನಡೆಯುತ್ತಾನೆ; ಯಾರೂ ಆತನ ಕೈಯನ್ನು ಹಿಂದಕ್ಕೆ ತಳ್ಳಲಾರರು, ನೀನು ಏನು ಮಾಡುತ್ತೀ ಎಂದು ಯಾರೂ ಕೇಳಲಾರರು.


ಆತನು - ಎಲಾ ಮನುಷ್ಯ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇವಿುಸಿದವರಾರು ಎಂದು ಅವನನ್ನು ಕೇಳಿ


ಎಲೈ ಮನುಷ್ಯನೇ, ಅಂಥವುಗಳನ್ನು ನಡಿಸುವವರಲ್ಲಿ ದೋಷವೆಣಿಸಿ ಅವುಗಳನ್ನೇ ಮಾಡುತ್ತಿರುವ ನೀನು ದೇವರ ದಂಡನೆಯ ತೀರ್ಪಿಗೆ ತಪ್ಪಿಸಿಕೊಂಡೇನೆಂದು ಯೋಚಿಸುತ್ತೀಯಾ?


ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮುದ್ದೆಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?


ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ಸೈರಣೆಯಿಂದ ಸೈರಿಸಿಕೊಂಡಿದ್ದಾನೆ.


ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೋಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ಕರ್ತನು ಶಕ್ತನಾಗಿದ್ದಾನೆ.


ದೊಡ್ಡ ಮನೆಯಲ್ಲಿ ಬೆಳ್ಳಿಬಂಗಾರದ ಪಾತ್ರೆಗಳಲ್ಲದೆ ಮರದ ಪಾತ್ರೆಗಳೂ ಮಣ್ಣಿನ ಪಾತ್ರೆಗಳೂ ಇರುತ್ತವೆ; ಅವುಗಳಲ್ಲಿ ಕೆಲವು ಉತ್ತಮವಾದ ಬಳಕೆಗೂ ಕೆಲವು ಹೀನವಾದ ಬಳಕೆಗೂ ಬರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು