ರೋಮಾಪುರದವರಿಗೆ 9:30 - ಕನ್ನಡ ಸತ್ಯವೇದವು J.V. (BSI)30 ಹಾಗಾದರೆ ಏನು ಹೇಳೋಣ? ನೀತಿಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಹಾಗಾದರೆ ಏನು ಹೇಳೋಣ? ನೀತಿಯನ್ನು ಅನುಸರಿಸದ ಅನ್ಯಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾದ ನೀತಿಯು ದೊರಕಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಇಸ್ರಯೇಲರಾದರೋ ದೇವರೊಡನೆ ಸತ್ಸಂಬಂಧವನ್ನು ದೊರಕಿಸುವ ಧರ್ಮವನ್ನು ಅರಸುತ್ತಿದ್ದರೂ ಅದನ್ನು ಕಂಡುಹಿಡಿದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಇದರರ್ಥವೇನೆಂದರೆ, ಯೆಹೂದ್ಯರಲ್ಲದವರು ನೀತಿವಂತರಾಗಲು ಪ್ರಯತ್ನಿಸುತ್ತಿರಲಿಲ್ಲ. ಆದರೆ ಅವರನ್ನು ನೀತಿವಂತರನ್ನಾಗಿ ಮಾಡಲಾಯಿತು. ಅವರು ನಂಬಿಕೆಯಿಂದಲೇ ನೀತಿವಂತರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಹಾಗಾದರೆ ನಾವು ಏನು ಹೇಳೋಣ? ನೀತಿಯನ್ನು ಅನುಸರಿಸದ ಯೆಹೂದ್ಯರಲ್ಲದವರು ನಂಬಿಕೆಯ ಮೂಲಕ ದೊರಕುವ ನೀತಿಯನ್ನು ಪಡೆದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ತಸೆಮನುನ್ ಅಮಿ ಮನ್ತಾಂವ್ ದೆವಾಚ್ಯಾ ವಾಂಗ್ಡಾ ಖರ್ಯ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಥವ್ನ್ ಘೆವ್ನ್ ಖಟ್ಪಟ್ ಕರಿನಸಾಲ್ಲ್ಯಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿ ವಿಶ್ವಾಸಾಚ್ಯಾ ವೈನಾ ಖರ್ಯ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಠರ್ವುನ್ ಹೊಲೆ. ಅಧ್ಯಾಯವನ್ನು ನೋಡಿ |
ಆದರೂ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದರಿಂದ ನಾವು ಸಹ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿಸಲ್ಪಡುವದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು; ಯಾಕಂದರೆ ಯಾವನಾದರೂ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲ.