Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:4 - ಕನ್ನಡ ಸತ್ಯವೇದವು J.V. (BSI)

4 ಅವರು ಇಸ್ರಾಯೇಲನ ವಂಶದವರೂ ದೇವರು ಪುತ್ರರಾಗಿ ಸ್ವೀಕರಿಸಿದವರೂ ಆಗಿದ್ದಾರೆ. ಅವರಲ್ಲಿ ದೇವರ ತೇಜಸ್ಸಾನ್ನಿಧ್ಯವು ಇದೆ; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡನು; ಅವರಿಗೆ ಧರ್ಮಶಾಸ್ತ್ರವೂ ದೇವಾಲಯದಲ್ಲಿ ನಡೆಯುವ ಆರಾಧನೆಯೂ ವಾಗ್ದಾನಗಳೂ ಕೊಡೋಣವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಇಸ್ರಾಯೇಲಿನ ವಂಶದವರು. ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ ಅವರಿಗೆ ಧರ್ಮಶಾಸ್ತ್ರವು, ದೇವಾಲಯದಲ್ಲಿ ನಡೆಯುವ ಆರಾಧನೆಯೂ, ವಾಗ್ದಾನಗಳೂ ಕೊಡಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರೇ ಇಸ್ರಯೇಲರು. ದೇವರೇ ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡರು; ಇವರಿಗೆ ತಮ್ಮ ಮಹಿಮೆಯನ್ನು ವ್ಯಕ್ತಪಡಿಸಿದರು; ಇವರೊಡನೆ ಒಡಂಬಡಿಕೆಯನ್ನು ಮಾಡಿಕೊಂಡರು; ಇವರಿಗೆ ಧರ್ಮಶಾಸ್ತ್ರವನ್ನೂ ಸಭಾರಾಧನೆಯನ್ನೂ ವಾಗ್ದಾನಗಳನ್ನೂ ದಯಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರು ಇಸ್ರೇಲಿನ ಜನರು. ಅವರು ದೇವರಿಂದ ಆರಿಸಲ್ಪಟ್ಟ ಮಕ್ಕಳು. ಅವರು ದೇವರ ಮಹಿಮೆಯನ್ನು ಮತ್ತು ದೇವರು ಅವರೊಂದಿಗೆ ಮಾಡಿಕೊಂಡ ಒಡಂಬಡಿಕೆಗಳನ್ನು ಹೊಂದಿದ್ದಾರೆ. ದೇವರು ಅವರಿಗೆ ಮೋಶೆಯ ಧರ್ಮಶಾಸ್ತ್ರವನ್ನೂ ಸರಿಯಾದ ಆರಾಧನೆಯ ಕ್ರಮವನ್ನೂ ತನ್ನ ವಾಗ್ದಾನಗಳನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇಸ್ರಾಯೇಲರಾದ ಅವರಿಗೆ ಸ್ವೀಕಾರವೂ ದೇವರ ಮಹಿಮೆಯೂ ಒಡಂಬಡಿಕೆಗಳೂ ನಿಯಮ ಕೊಡೋಣವೂ ದೇವಾಲಯದ ಸೇವೆಯೂ ಹಾಗೂ ವಾಗ್ದಾನಗಳೂ ಒಪ್ಪಿಸಲಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೆನಿ ದೆವಾಚಿ ಲೊಕಾ; ತೆನಿ ತೆಂಕಾ ಅಪ್ನಾಚಿ ಪೊರಾ ಕರುನ್ ಘೆಟ್ಲ್ಯಾನ್ ಅನಿ ಅಪ್ನಾಚಿ ಮಹಿಮಾ ತೆಂಕಾ ದಾಕ್ವುನ್ ದಿಲ್ಯಾನ್; ತೆನಿ ತೆಂಚ್ಯಾ ವಾಂಗ್ಡಾ ಅಪ್ನಾಚಿ ಕರಾರಾ ಕರ್ಲ್ಲ್ಯಾನ್ ಅನಿ ಅಪ್ನಾಚೊ ಖಾಯ್ದೊ ತೆಂಕಾ ದಿಲ್ಯಾನ್; ತೆಂಚೆಕ್ಡೆ ಖರೆ ಆರಾದನ್ ಹಾಯ್; ತೆನಿ ದೆವಾನ್ ಗೊಸ್ಟ್ ದಿವ್ನ್ ದಿಲ್ಲ್ಯಾ ಗೊಸ್ಟಿಯಾ ಘೆಟ್ಲ್ಯಾನಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:4
61 ತಿಳಿವುಗಳ ಹೋಲಿಕೆ  

ನೀವು ಪೂರ್ವಕಾಲದಲ್ಲಿ ಕ್ರಿಸ್ತನನ್ನು ಸೇರದವರಾಗಿದ್ದು ಇಸ್ರಾಯೇಲ್ಯ ಹಕ್ಕಿನಲ್ಲಿ ಪಾಲಿಲ್ಲದವರೂ [ಅಬ್ರಹಾಮನಿಗೆ ಉಂಟಾದ] ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಸೇರದವರೂ ಈ ಲೋಕದಲ್ಲಿ ಯಾವ ನಿರೀಕ್ಷೆಯಿಲ್ಲದವರೂ ದೇವರನ್ನರಿಯದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.


ಆತನು ತನ್ನ ವಾಕ್ಯವನ್ನು ಯಾಕೋಬ್ಯರಿಗೆ ತಿಳಿಸುತ್ತಾನೆ; ತನ್ನ ನಿಯಮವಿಧಿಗಳನ್ನು ಇಸ್ರಾಯೇಲ್ಯರಿಗೆ ಪ್ರಕಟಿಸುತ್ತಾನೆ.


ದೇವರು ಹೇಳಿದ ಮಾತು ತಪ್ಪಿತೆಂದು ನಾವು ಭಾವಿಸಕೂಡದು. ಯಾಕಂದರೆ ಇಸ್ರಾಯೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ;


ನಾನು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅತ್ಯಧಿಕವಾದ ಸಂತತಿಯನ್ನು ಕೊಡುವೆನು ಅಂದನು.


ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವವರೆಲ್ಲರಿಗೆ ಮಾಡೋಣವಾಗಿದೆ ಎಂದು ಹೇಳಿದನು.


ಯಾಕಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನವಾಗುವದಕ್ಕೆ ಆದುಕೊಂಡನು.


ಆದಕಾರಣ ನೀನು ಫರೋಹನಿಗೆ - ಇಸ್ರಾಯೇಲ್ ಜನವು ನನಗೆ ಚೊಚ್ಚಲಮಗನಂತೆ ಇದೆ ಎಂದು ತಿಳುಕೋ; ನನ್ನ ಮಗನು ನಿನ್ನ ದೇಶದಿಂದ ಹೊರಟು ನನ್ನನ್ನು ಆರಾಧಿಸುವದಕ್ಕೆ ಅವನಿಗೆ ಅಪ್ಪಣೆ ಕೊಡಬೇಕು;


ಹೀಗಿದ್ದರೂ ಮೊದಲನೆಯ ಒಡಂಬಡಿಕೆಯಲ್ಲಿ ದೇವಾರಾಧನೆಯ ನಿಯಮಗಳಿದ್ದವು; ಮತ್ತು ದೇವಾಲಯವಿತ್ತು, ಅದು ಇಹಲೋಕ ಸಂಬಂಧವಾದದ್ದು.


[ನೀನು ನುಡಿದದ್ದೇನಂದರೆ - ] ನಾನು ಆರಿಸಿಕೊಂಡ ಸೇವಕನಾದ ದಾವೀದನ ಸಂಗಡ


ಯೆಹೋವನ ತೇಜಸ್ಸಿನಿಂದ ವ್ಯಾಪ್ತವಾಗಿದ್ದ ಮೇಘವು ಆಲಯವನ್ನು ತುಂಬಿಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದವರಾದರು.


ನೀವು ತಿರಿಗಿ ಭಯದಲ್ಲಿ ಬೀಳುವ ಹಾಗೆ ದಾಸನ ಭಾವವನ್ನು ಹೊಂದಿದವರಲ್ಲ, ಮಗನ ಭಾವವನ್ನು ಹೊಂದಿದವರಾಗಿದ್ದೀರಿ. ಈ ಭಾವದಿಂದ ನಾವು ದೇವರನ್ನು ಅಪ್ಪಾ, ತಂದೆಯೇ, ಎಂದು ಕೂಗುತ್ತೇವೆ.


ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು; ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ಯೆಹೋವನು ಇಂತೆನ್ನುತ್ತಾನೆ - ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;


ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವದರಿಂದ ಸತ್ತವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು; ಮುಂದಲೆಯನ್ನು ಬೋಳಿಸಿಕೊಳ್ಳಲೂಬಾರದು.


ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದು ನಾನು ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.


ಅನ್ನಪಾನಾದಿಗಳೂ ವಿವಿಧ ಸ್ನಾನಗಳೂ ಸಹಿತವಾಗಿ ದೇಹಕ್ಕೆ ಮಾತ್ರ ಸಂಬಂಧಪಟ್ಟ ನಿಯಮಗಳಾಗಿದ್ದು ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾದವು ಎಂಬದು.


ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಾನವೆನಿಸಿಕೊಳ್ಳುವ ಇನ್ನೊಂದು ಭಾಗವಿತ್ತು;


ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ - ಇಗೋ ಇವನು ನಿಜವಾದ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.


ಮತ್ತೊಂದು ಸಾಮ್ಯವನ್ನು ಕೇಳಿರಿ - ಒಬ್ಬ ಮನೆಯ ಯಜಮಾನನಿದ್ದನು. ಅವನು ಒಂದು ದ್ರಾಕ್ಷೇತೋಟವನ್ನು ಮಾಡಿ ಅದರ ಸುತ್ತಲೂ ಬೇಲಿಹಾಕಿಸಿ ಅದರಲ್ಲಿ ದ್ರಾಕ್ಷೆಯ ಆಲೆಯನ್ನು ಮಾಡಿಸಿ ಹೂಡೆಯನ್ನು ಕಟ್ಟಿಸಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋದನು.


ಇಸ್ರಾಯೇಲು ಕೇವಲ ಬಾಲ್ಯದಲ್ಲಿದ್ದಾಗ ನಾನು ಅದರ ಮೇಲೆ ಪ್ರೀತಿಯನ್ನಿಟ್ಟು ಆ ನನ್ನ ಮಗನನ್ನು ಐಗುಪ್ತದೇಶದಿಂದ ಕರೆದೆನು.


ಯೆಹೋವನು ಇಂತೆನ್ನುತ್ತಾನೆ - ಎಫ್ರಾಯೀಮು ನನಗೆ ಪ್ರಿಯಪುತ್ರನೋ, ಮುದ್ದುಮಗುವೋ, ಏನೋ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ; ಅವನನ್ನು ಕರುಣಿಸೇ ಕರುಣಿಸುವೆನು.


ಅವರು ಅಳುತ್ತಾ ನಡೆದು ಬರುವರು, ಅವರ ವಿಜ್ಞಾಪನೆಗಳಿಂದಲೇ ಅವರನ್ನು ಮುಂದರಿಸುವೆನು; ಎಡವದ ಸಮಮಾರ್ಗದಲ್ಲಿ ನಡಿಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು; ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.


ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗೊಳ್ಳನು; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು.


ಯಾಕೋಬವಂಶವೇ, ಇಸ್ರಾಯೇಲ್ ಸಂತಾನಶೇಷವೇ, ನನ್ನ ಮಾತಿಗೆ ಕಿವಿಗೊಡಿರಿ; ನಿಮ್ಮನ್ನು ಗರ್ಭದಿಂದ ಹೊರುತ್ತಿದ್ದೇನೆ, ಹುಟ್ಟಿದಂದಿನಿಂದ ವಹಿಸುತ್ತಿದ್ದೇನೆ;


ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,


ಅವನು ಅದನ್ನು ಅಗತೆಮಾಡಿ ಕಲ್ಲುಗಳನ್ನು ತೆಗೆದುಹಾಕಿ ಒಳ್ಳೊಳ್ಳೇ ದ್ರಾಕ್ಷೆಯ ಸಸಿಗಳನ್ನು ನೆಟ್ಟು ಮಧ್ಯದಲ್ಲಿ ಬುರುಜನ್ನು ಕಟ್ಟಿ ದ್ರಾಕ್ಷೆಯ ತೊಟ್ಟಿಯನ್ನು ಕೊರೆಯಿಸಿ ಮಾಡಿಕೊಂಡು ತೋಟವು [ಒಳ್ಳೇ] ದ್ರಾಕ್ಷೆಯ ಹಣ್ಣನ್ನು ಕೊಡುವದೆಂದು ಎದುರುನೋಡುತ್ತಿರಲು ಅದು ಹೊಲಸುಹಣ್ಣನ್ನು ಬಿಟ್ಟಿತು.


ನಿನ್ನ ಸೇವಕರಿಗೆ ನಿನ್ನ ರಕ್ಷಾಕಾರ್ಯವೂ ಅವರ ಮಕ್ಕಳಿಗೋಸ್ಕರ ನಿನ್ನ ಮಹತ್ತೂ ಪ್ರಕಟವಾಗಲಿ.


ನನ್ನ ಒಡಂಬಡಿಕೆಯನ್ನು ಭಂಗಪಡಿಸುವದಿಲ್ಲ; ನನ್ನ ಮಾತನ್ನು ಬದಲಿಸುವದಿಲ್ಲ.


ತನ್ನ ಪ್ರತಾಪವನ್ನು ಸೆರೆಗೂ ಮಹಿಮೆಯನ್ನು ವಿರೋಧಿಗಳಿಗೂ ಒಪ್ಪಿಸಿಬಿಟ್ಟನು.


ದೇವರು ನಿರ್ಮಲಚಿತ್ತರಾದ ಇಸ್ರಾಯೇಲ್ಯರಿಗೆ ದಯಾಪರನೇ ಹೌದು.


ನಿನ್ನ ಮಂದಿರದಲ್ಲಿ ನಾನು ನಿನ್ನ ಮಹತ್ತನ್ನೂ ಪ್ರಭಾವವನ್ನೂ ಕಂಡ ಪ್ರಕಾರ ಈಗಲೂ ಕಾಣಬೇಕೆಂದು ಅಪೇಕ್ಷಿಸುತ್ತೇನೆ.


ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರಲ್ಲಾ; ಇದನ್ನು ನೆನಪು ಮಾಡಿಕೋ.


ಯೆಹೋವನು ಮೋಶೆಗೆ - ನೀನು ಪಿತೃಗಳಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಿದ್ಧರಾಗಿ ನಿಂತಿರುವ ನಮ್ಮೊಡನೆ ಮಾತ್ರವಲ್ಲದೆ ಮುಂದೆ ಹುಟ್ಟುವ ನಮ್ಮ ಸಂತತಿಯವರೊಡನೆಯೂ ಪ್ರಮಾಣಪೂರ್ವಕವಾದ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವವನಾಗಿದ್ದಾನೆ.


ಯೆಹೋವನು ಹೋರೇಬಿನಲ್ಲಿ ಇಸ್ರಾಯೇಲ್ಯರೊಡನೆ ಮಾಡಿದ ನಿಬಂಧನವಲ್ಲದೆ ಆತನು ಮೋವಾಬ್ಯರ ದೇಶದಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ನಿಬಂಧನ ವಚನಗಳು.


ಮೋಶೆ ಯೆಹೋವನ ಸಂಗಡ ಮಾತಾಡಬೇಕೆಂದು ದೇವದರ್ಶನದ ಗುಡಾರದೊಳಗೆ ಹೋದಾಗ ಆಜ್ಞಾಶಾಸನಗಳ ಮಂಜೂಷದ ಮೇಲಣ ಕೃಪಾಸನದ ಮೇಲಿನಿಂದ ಆ ಎರಡು ಕೆರೂಬಿಗಳ ನಡುವೆಯಿಂದ ತನ್ನ ಸಂಗಡ ಮಾತಾಡುವ ಯೆಹೋವನ ಸ್ವರವು ಅವನಿಗೆ ಕೇಳಿಸಿತು. ಹೀಗೆ ಆತನು ಅವನ ಸಂಗಡ ಮಾತಾಡಿದನು.


ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿತು.


ಯೆಹೋವನು ಮೋಶೆಗೆ - ನೀನು ಈ ವಾಕ್ಯಗಳನ್ನು ಬರೆ. ಈ ವಾಕ್ಯಗಳ ಮೇರೆಗೆ ನಿನ್ನ ಸಂಗಡಲೂ ಇಸ್ರಾಯೇಲ್ಯರ ಸಂಗಡಲೂ ನಿಬಂಧನೆಮಾಡಿದ್ದೇನೆ ಎಂದು ಹೇಳಿದನು.


ಯೆಹೋವನು ತನ್ನ ಮಾತಿನ ಮೇರೆಗೆ ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ ಈ ಆಚಾರವನ್ನು ನಡಿಸಬೇಕು.


ಅವನು ಯಾಕೋಬನಿಗೆ - ಇನ್ನು ಮೇಲೆ ನೀನು ಯಾಕೋಬನೆನ್ನಿಸಿಕೊಳ್ಳುವದಿಲ್ಲ; ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದ್ದರಿಂದ ನಿನಗೆ ಇಸ್ರಾಯೇಲೆಂದು ಹೆಸರುಂಟಾಗುವದು ಎಂದು ಹೇಳಿದನು.


ನೀನೂ ನಿನ್ನ ಹಿಂದೆ ಬರುವ ಸಂತತಿಯವರೂ ಕೈಕೊಳ್ಳಬೇಕಾದ ನನ್ನ ನಿಬಂಧನೆಯು ಯಾವದಂದರೆ - ನಿಮ್ಮಲ್ಲಿ ಪ್ರತಿಯೊಬ್ಬ ಗಂಡಸಿಗೂ ಸುನ್ನತಿಯಾಗಬೇಕೆಂಬದೇ.


ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು - ಐಗುಪ್ತದೇಶದ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ ಅಂದನು;


ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು. ಮೊದಲನೇದಾಗಿ ದೈವೋಕ್ತಿಗಳು ಅವರ ವಶಕ್ಕೆ ಒಪ್ಪಿಸಲ್ಪಟ್ಟವು.


ನೀವು ಅನುಸರಿಸಬೇಕೆಂದು ಆತನು ನೇವಿುಸಿದ ನಿಬಂಧನೆಯನ್ನು ಅಂದರೆ ಹತ್ತು ಕಟ್ಟಳೆಗಳನ್ನು ನಿಮಗೆ ವಿವರಿಸಿ ಎರಡುಕಲ್ಲಿನ ಹಲಗೆಗಳಲ್ಲಿ ಕೆತ್ತಿಸಿದ್ದೂ;


ಮಳೆಗಾಲದಲ್ಲಿ ಮೇಘಮಂಡಲದೊಳಗೆ ಬಿಲ್ಲು ಹೊಳೆಯುವಂತೆ ಆತನ ಸುತ್ತಣ ಪ್ರಕಾಶವು ಹೊಳೆಯುತ್ತಿತ್ತು. ಹೀಗೆ ಯೆಹೋವನ ಮಹಿಮಾದ್ಭುತ ದರ್ಶನವು ಆಯಿತು. ಇದು ಕಣ್ಣಿಗೆ ಬೀಳಲು ನಾನು ಅಡ್ಡಬಿದ್ದು ಮಾತಾಡುವಾತನ ವಾಣಿಯನ್ನು ಕೇಳಿದೆನು.


ಇದನ್ನು ಬುದ್ಧಿಹೀನತೆಯಿಂದ ಹೇಳುತ್ತೇನೆ. ಅವರು ಇಬ್ರಿಯರೋ ನಾನೂ ಇಬ್ರಿಯನು; ಅವರು ಇಸ್ರಾಯೇಲ್ಯರೋ ನಾನೂ ಇಸ್ರಾಯೇಲ್ಯನು; ಅವರು ಅಬ್ರಹಾಮನ ವಂಶದವರೋ ನಾನೂ ಅದೇ ವಂಶದವನು;


ಒಳ್ಳೇದು, ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು. ಆತನು ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬನು ಕ್ರಿಸ್ತನೇ.


ಅದರ ಮೇಲೆ ದೇವರ ಪ್ರಭಾವವನ್ನು ಸೂಚಿಸುವ ಕೆರೂಬಿಗಳು ಕೃಪಾಸನವನ್ನು ಆಚ್ಫಾದಿಸಿಕೊಂಡಿದ್ದವು. ಸದ್ಯಕ್ಕೆ ಈ ವಿಷಯಗಳನ್ನು ಒಂದೊಂದಾಗಿ ವಿವರಿಸುವದಕ್ಕೆ ಆಗುವದಿಲ್ಲ.


ಇವುಗಳು ಹೀಗೆ ಸಿದ್ಧಮಾಡಲ್ಪಟ್ಟ ಮೇಲೆ ಯಾಜಕರು ಯಾವಾಗಲೂ ಗುಡಾರದ ಮುಂದಣ ಭಾಗದೊಳಗೆ ಹೋಗಿ ದೇವಾರಾಧನೆಯನ್ನು ನಡಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು