Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:22 - ಕನ್ನಡ ಸತ್ಯವೇದವು J.V. (BSI)

22 ಅವನು ಹೊರಗೆ ಬಂದಾಗ ಅವರ ಕೂಡ ಏನೂ ಮಾತಾಡಲಾರದೆ ಇರಲು ಅವರು - ಇವನಿಗೆ ದೇವಾಲಯದಲ್ಲಿ ಏನೋ ದಿವ್ಯದರ್ಶನವಾಗಿರಬೇಕು ಎಂದು ತಿಳುಕೊಂಡರು. ಅವನು ಅವರಿಗೆ ಕೈಸನ್ನೆ ಮಾಡುತ್ತಾ ಮೂಕನಾಗಿಯೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವನು ಹೊರಗೆ ಬಂದಾಗ ಅವರ ಕೂಡ ಏನೂ ಮಾತನಾಡಲಾರದೆ ಇರಲು ಅವರು, ಇವನಿಗೆ ದೇವಾಲಯದಲ್ಲಿ ಏನೋ ದಿವ್ಯ ದರ್ಶನವಾಗಿರಬೇಕು ಎಂದು ತಿಳಿದುಕೊಂಡರು. ಜಕರೀಯನು ಅವರಿಗೆ ಕೈಸನ್ನೆ ಮಾಡುತ್ತಾ ಮೂಕನಾಗಿಯೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅಷ್ಟರಲ್ಲಿ ಜಕರೀಯನು ಹೊರಗೆ ಬಂದು ಮಾತನಾಡಲೆತ್ನಿಸಿದರೂ ಅವನ ಬಾಯಿಂದ ಮಾತೇ ಹೊರಡಲಿಲ್ಲ. ಬರೀ ಕೈಸನ್ನೆಮಾಡುತ್ತಿದ್ದ ಅವನಿಗೆ ದೇವಾಲಯದಲ್ಲಿ ಏನೋ ದಿವ್ಯದರ್ಶನ ಆಗಿರಬೇಕೆಂದು ಜನರು ಅರಿತುಕೊಂಡರು. ಅಂದಿನಿಂದ ಅವನು ಮೂಕನಾಗಿಯೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಬಳಿಕ ಜಕರೀಯನು ಹೊರಗೆ ಬಂದಾಗ, ಅವನಿಗೆ ಅವರೊಡನೆ ಮಾತಾಡಲಾಗಲಿಲ್ಲ. ಆದ್ದರಿಂದ ಅವನಿಗೆ ದೇವಾಲಯದಲ್ಲಿ ದರ್ಶನವಾಗಿರಬೇಕೆಂದು ಅವರು ತಿಳಿದುಕೊಂಡರು. ಅಂದಿನಿಂದ ಅವನು ಮಾತಾಡಲಾಗದೆ ಕೇವಲ ಸನ್ನೆಗಳ ಮೂಲಕ ತಿಳಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಜಕರೀಯನು ಹೊರಗೆ ಬಂದಾಗ, ಅವರೊಂದಿಗೆ ಏನೂ ಮಾತನಾಡಲಾಗಲಿಲ್ಲ. ಅವನು ಅವರಿಗೆ ಸನ್ನೆಮಾಡುತ್ತಾ ಮೂಕನಾಗಿಯೇ ಇದ್ದುದರಿಂದ, ಅವರು ದೇವಾಲಯದಲ್ಲಿ ಅವನಿಗೆ ಏನೋ ದರ್ಶನವಾಗಿರಬೇಕೆಂದು ಗ್ರಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಜೆಕರಿಯಾ ದೆವಾಚ್ಯಾ ಗುಡಿತ್ನಾ ಭಾಯ್ರ್ ಯೆಲ್ಲ್ಯಾ ತನ್ನಾ ತೆಕಾ ಲೊಕಾಂಚ್ಯಾಕ್ಡೆ ಬೊಲುಕ್ ಹೊವುಕ್ನಾ, ಹಾತಾನಿ ಸೊನ್ನಿ ಕರುನ್ ತೆನಿ ದಾಕ್ವುಲ್ಯಾನ್ ತೆಕಾ ಬೊಲುಕುಚ್ ಹೊವ್ಕ್ ನಾ.ತನ್ನಾ ದೆವಾಚ್ಯಾ ಗುಡಿತ್ ತೆನಿ ದರ್ಶನ್ ಬಗಟ್ಲ್ಯಾನ್ ಮನುನ್ ಲೊಕಾಕ್ನಿ ಕಳ್ಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:22
8 ತಿಳಿವುಗಳ ಹೋಲಿಕೆ  

ಇದಕ್ಕೆ ಏನು ಹೆಸರಿಡಬೇಕೆಂದಿರುತ್ತೀ ಎಂಬದಾಗಿ ತಂದೆಗೆ ಸನ್ನೆ ಮಾಡಿದರು.


ಸಹಸ್ರಾಧಿಪತಿಯು ಅಪ್ಪಣೆ ಕೊಡಲು ಪೌಲನು ಮೆಟ್ಲುಗಳ ಮೇಲೆ ನಿಂತುಕೊಂಡು ಜನರಿಗೆ ಕೈಸನ್ನೆಮಾಡಿದನು. ಗದ್ದಲವು ಬಹಳ ಮಟ್ಟಿಗೆ ಶಾಂತವಾದ ಮೇಲೆ ಅವನು ಇಬ್ರಿಯ ಭಾಷೆಯಲ್ಲಿ -


ಯೆಹೂದ್ಯರು ಅಲೆಕ್ಸಾಂದ್ರನನ್ನು ಮುಂದಕ್ಕೆ ನೂಕಲು ಗುಂಪಿನಲ್ಲಿ ಕೆಲವರು ಅವನಿಗೆ ಸೂಚನೆ ಕೊಟ್ಟರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಕೂಡಿದ್ದ ಜನರಿಗೆ ಪ್ರತಿವಾದ ಮಾಡಬೇಕೆಂದಿದ್ದನು.


ಆದರೆ ಅವನು ಸುಮ್ಮಗಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರರೆಲ್ಲರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.


ಇವನಿಗೆ ಸೀಮೋನ ಪೇತ್ರನು ಸನ್ನೆಮಾಡಿ - ಯಾರನ್ನು ಕುರಿತು ಮಾತಾಡಿದನು, ತಿಳಿಸು ಎಂದು ಹೇಳಿದನು.


ಇದಲ್ಲದೆ ನಿನ್ನ ನಾಲಿಗೆಯು ಸೇದಿಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ನೀನು ಅವರನ್ನು ಖಂಡಿಸದಿರುವಿ; ಅವರು ದ್ರೋಹಿವಂಶದವರು.


ಇಷ್ಟರೊಳಗೆ ಜನರು ಜಕರೀಯನನ್ನು ಕಾದುಕೊಂಡಿದ್ದು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.


ಅವನ ಯಾಜಕವರ್ಗದ ದಿನಗಳು ತೀರಿದ ನಂತರ ಅವನು ತನ್ನ ಮನೆಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು