Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:24 - ಕನ್ನಡ ಸತ್ಯವೇದವು J.V. (BSI)

24 ದೆವ್ವವು ಮನುಷ್ಯನನ್ನು ಬಿಟ್ಟುಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ; ವಿಶ್ರಾಂತಿ ಸಿಕ್ಕದ ಕಾರಣ ಅದು - ನಾನು ಬಿಟ್ಟು ಬಂದ ನನ್ನ ಮನೆಗೆ ಹಿಂತಿರುಗಿ ಹೋಗುತ್ತೇನೆ ಅಂದುಕೊಂಡು ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಬೋಧನೆಯನ್ನು ಮುಂದುವರಿಸುತ್ತಾ ಯೇಸು, ದೆವ್ವವು ಮನುಷ್ಯನನ್ನು ಬಿಟ್ಟುಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ. ವಿಶ್ರಾಂತಿ ಸಿಕ್ಕದ ಕಾರಣ ಅದು, ‘ನಾನು ಬಿಟ್ಟು ಬಂದ ನನ್ನ ಮನೆಗೆ ಹಿಂತಿರುಗಿ ಹೋಗುತ್ತೇನೆ’ ಅಂದುಕೊಂಡು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಯೇಸುಸ್ವಾಮಿ ಬೋಧನೆಯನ್ನು ಮುಂದುವರಿಸುತ್ತಾ, “ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ತೊಲಗಿದ ಮೇಲೆ ನೆಲೆಯನ್ನು ಹುಡುಕುತ್ತಾ ಒಣಗಾಡಿನಲ್ಲಿ ಅಲೆದಾಡುತ್ತದೆ. ಅದಕ್ಕೆ ನೆಲೆ ಸಿಗದ ಕಾರಣ ಅದು, ‘ನಾನು ಬಿಟ್ಟುಬಂದ ನನ್ನ ಮನೆಗೇ ಹಿಂದಿರುಗುತ್ತೇನೆ’ ಎಂದುಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ದೆವ್ವವು ಒಬ್ಬ ವ್ಯಕ್ತಿಯಿಂದ ಹೊರಗೆ ಬಂದ ಮೇಲೆ ವಿಶ್ರಾಂತಿಗಾಗಿ ಸ್ಥಳವನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ಅಲೆದಾಡುತ್ತದೆ. ಆದರೆ ವಿಶ್ರಮಿಸಿಕೊಳ್ಳಲು ಅದಕ್ಕೆ ಸ್ಥಳ ದೊರೆಯುವುದಿಲ್ಲ. ಆದ್ದರಿಂದ ‘ನಾನು ಬಿಟ್ಟುಬಂದ ಮನೆಗೆ (ವ್ಯಕ್ತಿ) ಹಿಂತಿರುಗುವೆನು’ ಎಂದುಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ, ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ಹುಡುಕಾಡಿದರೂ ಅದನ್ನು ಕಂಡುಕೊಳ್ಳದೆ ಅದು, ‘ನಾನು ಹೊರಟು ಬಂದ ನನ್ನ ಮನೆಗೆ ಹಿಂದಿರುಗುವೆನು,’ ಎಂದು ಹೇಳಿಕೊಂಡು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 “ಎಕ್ ಮಾನ್ಸಾಕ್ನಾ ಗಿರೊ ಭಾಯ್ರ್ ಗೆಲ್ಲ್ಯಾ ತನ್ನಾ, ತೊ ಸಗ್ಳೆಕ್ಡೆ ಫಿರುನ್, ಅಪ್ನಾಕ್ ರ್‍ಹಾವ್ಕ್ ಜಾಗೊ ಗಾವ್ತಾ ಕಾಯ್ ಮನುನ್ ಬಗ್ತಾ. ತೆಕಾ ಖೈಬಿ ಜಾಗೊ ಗಾವಿನಸ್ಲ್ಯಾರ್, ತೆ ಅಪ್ನಾಕುಚ್ ಮಿಯಾ ಅನಿ ಪರ್ತುನ್ ಮಾಜ್ಯಾ ಘರಾಕ್ ಜಾತಾ” ಮನ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:24
18 ತಿಳಿವುಗಳ ಹೋಲಿಕೆ  

ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ; ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನೀರಿಲ್ಲದೆ ಒಣಗಿದ ಭೂವಿುಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.


ಯೆಹೋವನು - ಎಲ್ಲಿಂದ ಬಂದಿ ಎಂದು ಸೈತಾನನನ್ನು ಕೇಳಲು ಸೈತಾನನು ಯೆಹೋವನಿಗೆ - ಭೂಲೋಕದಲ್ಲಿ ಸಂಚರಿಸುತ್ತಾ ಅಲ್ಲಲ್ಲಿ ತಿರುಗುತ್ತಾ ಇದ್ದು ಬಂದೆನು ಅಂದನು.


ಯೆಹೋವನು ಸೈತಾನನನ್ನು - ಎಲ್ಲಿಂದ ಬಂದಿ ಎಂದು ಕೇಳಲು ಸೈತಾನನು ಯೆಹೋವನಿಗೆ - ಭೂಲೋಕದಲ್ಲಿ ಸಂಚರಿಸುತ್ತಾ ಅಲ್ಲಲ್ಲಿ ತಿರುಗುತ್ತಾ ಇದ್ದು ಬಂದೆನು ಎಂದು ಹೇಳಿದನು.


ನಮ್ಮನ್ನು ಈ ಸೀಮೆಯಿಂದ ಹೊರಡಿಸಬೇಡವೆಂದು ಆತನನ್ನು ಬಹಳವಾಗಿ ಬೇಡಿಕೊಂಡನು.


ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಯೆಹೋವನು ನುಡಿಯುತ್ತಾನೆ.


ನೀವು ಪೂರ್ವದಲ್ಲಿ ಅಪರಾಧಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರನಡಿಸುವ ಅಧಿಪತಿಗೆ, ಅಂದರೆ ನಂಬಲೊಲ್ಲದವರನ್ನು ಅವಿಧೇಯತೆಗೆ ಈಗ ಪ್ರೇರೇಪಿಸುವ ಆತ್ಮನಿಗೆ ಅನುಸಾರವಾಗಿ ನಡೆದುಕೊಂಡಿರಿ.


ಆಗ ಯೇಸು ಜನರ ಗುಂಪು ಓಡಿಬರುವದನ್ನು ಕಂಡು ಆ ದೆವ್ವವನ್ನು ಗದರಿಸಿ - ಎಲೇ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟುಹೋಗು; ಇನ್ನು ಮುಂದೆ ಹಿಡಿಯಬೇಡವೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ ಅಂದನು.


ಬತ್ತಿದ ಭೂವಿುಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು, ಸುರಿಸುವೆನು.


ಬೆಂಗಾಡು ಸರೋವರವಾಗುವದು; ಒಣನೆಲದಲ್ಲಿ ಬುಗ್ಗೆಗಳುಕ್ಕುವವು; ನರಿಗಳು ಮಲಗುತ್ತಿದ್ದ ಹಕ್ಕೆಯು ಆಪುಜಂಬುಗಳ ಪ್ರದೇಶವಾಗುವದು.


ಕೇಡುಮಾಡದಿದ್ದರೆ ಅವರಿಗೆ ನಿದ್ರೆಹತ್ತದು; ಯಾರನ್ನಾದರೂ ಎಡವಿಬೀಳಿಸದಿದ್ದರೆ ಅವರ ನಿದ್ರೆಗೆ ಭಂಗವಾಗುವದು.


ಆ ಮನೆ ಗುಡಿಸಿ ಅಲಂಕರಿಸಿದ್ದಾಗಿರುವದನ್ನು ಕಂಡು ಹೊರಟುಹೋಗಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು