Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:1 - ಕನ್ನಡ ಸತ್ಯವೇದವು J.V. (BSI)

1 ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಆತನು ಮೊದಲು ತನ್ನ ಶಿಷ್ಯರಿಗೆ ಹೇಳುವದಕ್ಕೆ ತೊಡಗಿದ್ದೇನಂದರೆ - ಫರಿಸಾಯರ ಕಪಟವೆಂಬ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಷ್ಟರಲ್ಲೇ, ಸಾವಿರಾರು ಜನರು ಒಬ್ಬರನ್ನೊಬ್ಬರು ಒತ್ತರಿಸುತ್ತಾ ಕಿಕ್ಕಿರಿದು ನೆರೆದಿದ್ದರು. ಯೇಸು ಮೊದಲು ಶಿಷ್ಯರನ್ನು ಉದ್ದೇಶಿಸಿ, “ಫರಿಸಾಯರ ‘ಹುಳಿಹಿಟ್ಟಿನ’ ಬಗ್ಗೆ. ಅಂದರೆ ಅವರ ಕಪಟತನದ ಬಗ್ಗೆ, ಎಚ್ಚರಿಕೆಯಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಾವಿರಾರು ಜನರು ಒಬ್ಬರನ್ನೊಬ್ಬರು ನೂಕುತ್ತಾ ಕಿಕ್ಕಿರಿದು ನೆರೆದಿದ್ದರು. ಜನರಿಗೆ ಉಪದೇಶಿಸುವ ಮೊದಲು ಯೇಸು ತನ್ನ ಶಿಷ್ಯರಿಗೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ ಅವರ ಕಪಟತನದ ಬಗ್ಗೆ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಷ್ಟರಲ್ಲಿ, ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿದಾಡುವಷ್ಟು ಕಿಕ್ಕಿರಿದು ಬಂದಿರಲಾಗಿ, ಯೇಸು ಮೊದಲು ತಮ್ಮ ಶಿಷ್ಯರಿಗೆ ಹೀಗೆಂದು ಮಾತನಾಡಲಾರಂಭಿಸಿದರು, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ, ಕಪಟತನದ ಬಗ್ಗೆ ನೀವು ಎಚ್ಚರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತ್ಯಾಚ್ ಎಳಾರ್ ಹಜಾರಾನ್ ಲೊಕಾಂಚೊ ತಾಂಡೊ ಥೈ ಗೊಳಾ ಹೊಲ್ಲೊ. ತೆಚೆಸಾಟ್ನಿ ತಿ ಲೊಕಾ ಎಕಾಮೆಕಾಕ್ನಿ ತುಡ್ವುನ್ ಘೆವ್‍ಲಾಗಲ್ಲಿ. ಜೆಜು ಅದ್ದಿ ಅಪ್ನಾಚ್ಯಾ ಶಿಸಾಕ್ನಿ “ಫಾರಿಜೆವಾಂಚ್ಯಾ ಇಸ್ಟಾಚ್ಯಾ ವಿಶಯಾತ್ ಉಶಾರ್ಕಿನ್ ರ್‍ಹಾವಾ- ತಸೆ ಮಟ್ಲ್ಯಾರ್ ತೆಂಚ್ಯಾ ಕುಸ್ಡ್ಯಾಪಾನಾಚ್ಯಾ ವಿಶಯಾತ್ ಮಟ್ಲೊ ಮಿಯಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:1
18 ತಿಳಿವುಗಳ ಹೋಲಿಕೆ  

ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೆಕಿಚ್ಚನ್ನೂ


ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದು, ಕರುಣೆ ಮುಂತಾದ ಒಳ್ಳೇ ಫಲಗಳಿಂದ ತುಂಬಿರುವಂಥದು ಆಗಿದೆ; ಅದರಲ್ಲಿ ಚಂಚಲವೂ ಕಪಟವೂ ಇಲ್ಲ.


ಕಪಟಿಗಳು ನೀವು, ಭೂಮ್ಯಾಕಾಶಗಳ ಭಾವವನ್ನು ಶೋಧಿಸುವದಕ್ಕೆ ನಿಮಗೆ ಗೊತ್ತಿರುವಲ್ಲಿ ಈ ಸಮಯವನ್ನು ಶೋಧಿಸುವದಕ್ಕೆ ನಿಮಗೆ ಯಾಕೆ ಗೊತ್ತಿಲ್ಲ?


ಭ್ರಷ್ಟಹೃದಯವುಳ್ಳವರಾದರೋ ಸಿಟ್ಟುಗೊಂಡಿರುವರು, ಆತನು ಅವರನ್ನು ಬಂಧಿಸುವಾಗಲೂ [ಆತನಿಗೆ] ಮೊರೆಯಿಡುವದಿಲ್ಲ.


ದೇವರು ಭ್ರಷ್ಟನ ಆತ್ಮವನ್ನು ಕಡಿದೆಳೆಯುವಾಗ ಅವನಿಗೆ ನಿರೀಕ್ಷೆಯೆಲ್ಲಿಯದು?


ದುಷ್ಟರ ಉತ್ಸಾಹಧ್ವನಿಯು ಅಲ್ಪಕಾಲದ್ದು, ಭ್ರಷ್ಟನ ಉಲ್ಲಾಸವು ಕ್ಷಣಿಕವಾದದ್ದು ಎಂದು ನಿನಗೆ ಗೊತ್ತಿಲ್ಲವೋ?


ಅರಸನು ತನ್ನ ಹಸ್ತಕನಾದ ಸರದಾರನನ್ನು ಊರು ಬಾಗಲು ಕಾಯುವದಕ್ಕಾಗಿ ಕಳುಹಿಸಿದಲ್ಲಿ ಅವನು ಜನರಿಂದ ತುಳಿಯಲ್ಪಟ್ಟು ಸತ್ತನು. ಹೀಗೆ ದೇವರ ಮನುಷ್ಯನು ಅರಸನ ಜೊತೆಯಲ್ಲಿ ತನ್ನ ಬಳಿಗೆ ಬಂದಿದ್ದ ಆ ಸರದಾರನಿಗೆ ಹೇಳಿದ ಮಾತು ನೆರವೇರಿತು.


ನಾನು ನಿಮಗೆ ತಿಳಿಸಿದ ಮೊದಲನೆಯ ಸಂಗತಿಗಳೊಳಗೆ ಒಂದು ಸಂಗತಿಯನ್ನು ನಿಮಗೆ ತಿಳಿಸಿಕೊಟ್ಟೆನು. ಅದು ನಾನು ಸಹ ಕಲಿತುಕೊಂಡದ್ದೇ. ಅದೇನಂದರೆ ಶಾಸ್ತ್ರದಲ್ಲಿ ಮುಂತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು;


ಅವರು ಇದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ ಹೇಳಿದ್ದು - ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೋಡುತ್ತೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದಲ್ಲಿ ಅಭಿಮಾನಿಗಳಾಗಿದ್ದಾರೆ.


ನಿಮ್ಮ ಗತಿಯನ್ನು ಏನು ಹೇಳಲಿ; ನೆಲಸಮವಾದ ಸಮಾಧಿಗಳ ಹಾಗಿದ್ದೀರಿ; ಅವುಗಳ ಮೇಲೆ ತಿರುಗಾಡುವ ಜನರಿಗೆ ಇವು ಸಮಾಧಿಗಳೆಂದು ತಿಳಿಯದು ಎಂದು ಹೇಳಿದನು.


ಆಮೇಲೆ ಆತನು ಅವರ ಸಂಗಡ ಬೆಟ್ಟದಿಂದ ಇಳಿದು ಸಮಭೂವಿುಯಲ್ಲಿ ನಿಂತನು. ಆತನ ಶಿಷ್ಯರ ದೊಡ್ಡ ಗುಂಪು ಮತ್ತು ಎಲ್ಲಾ ಯೂದಾಯದಿಂದಲೂ ಯೆರೂಸಲೇವಿುನಿಂದಲೂ ತೂರ್ ಸೀದೋನ್ ಪಟ್ಟಣಗಳಿರುವ ಸಮುದ್ರತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದವು. ಆ ಜನರು ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳನ್ನು ವಾಸಿಮಾಡಿಸಿಕೊಳ್ಳುವದಕ್ಕೂ ಬಂದಿದ್ದರು.


ಆದರೂ ಆತನ ಸುದ್ದಿಯು ಮತ್ತಷ್ಟು ಹಬ್ಬಿತು; ಮತ್ತು ಜನರು ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮತಮ್ಮ ಜಾಡ್ಯಗಳನ್ನು ವಾಸಿ ಮಾಡಿಸಿಕೊಳ್ಳುವದಕ್ಕೂ ಗುಂಪುಗುಂಪಾಗಿ ನೆರೆದರು.


ಒಂದಾನೊಂದು ದಿವಸ ಜನರು ಒತ್ತಾಗಿ ಬಂದು ಆತನ ಮೇಲೆ ಬಿದ್ದುಕೊಂಡು ದೇವರ ವಾಕ್ಯವನ್ನು ಕೇಳುತ್ತಿರಲು


ಚೀಯೋನಿನ ಪಾಪಿಗಳು ಹೆದರುತ್ತಾರೆ, ಆ ಭ್ರಷ್ಟರು ನಡುಕಕ್ಕೆ ಒಳಗಾಗಿ - ನಮ್ಮಲ್ಲಿ ಯಾರು ನುಂಗುವ ಕಿಚ್ಚಿನ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುತ್ತಾರೆ.


ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇವಿುಗೂ ಉತ್ಸವಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು