Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:15 - ಕನ್ನಡ ಸತ್ಯವೇದವು J.V. (BSI)

15 ಜನರಿಗೆ - ಎಲ್ಲಾ ಲೋಭಕ್ಕೂ ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವದಿಲ್ಲ ಎಂದು ಹೇಳಿ ಒಂದು ಸಾಮ್ಯವನ್ನು ಹೇಳಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಜನರಿಗೆ, “ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ” ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅನಂತರ ಜನರನ್ನುದ್ದೇಶಿಸಿ, “ಎಚ್ಚರಿಕೆ, ಯಾವ ವಿಧವಾದ ಲೋಭಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಏಕೆಂದರೆ, ಒಬ್ಬನಿಗೆ ಎಷ್ಟೇ ಸಿರಿಸಂಪತ್ತಿರಲಿ, ಅವನ ನಿಜವಾದ ಜೀವನ ಅದನ್ನು ಅವಲಂಬಿಸಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಬಳಿಕ ಯೇಸು ನೆರೆದಿದ್ದ ಜನರಿಗೆ, “ಎಚ್ಚರಿಕೆ, ಯಾವ ವಿಧವಾದ ಸ್ವಾರ್ಥಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಒಬ್ಬನಿಗೆ ಎಷ್ಟೇ ಆಸ್ತಿಯಿದ್ದರೂ ಅದರಿಂದ ಅವನು ಜೀವವನ್ನು ಪಡೆದುಕೊಳ್ಳಲಾರನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅನಂತರ ಯೇಸು ಜನರಿಗೆ, “ಎಚ್ಚರಿಕೆ! ನೀವು ಎಲ್ಲಾ ಲೋಭದಿಂದ ನಿಮ್ಮನ್ನು ಕಾಪಾಡಿಕೊಳ್ಳಿರಿ; ಏಕೆಂದರೆ ಜೀವನವು ಸಮೃದ್ಧಿಯಾದ ಆಸ್ತಿಗೆ ಆಧಾರವಾದದ್ದಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅನಿ ಥೈ ಹೊತ್ತ್ಯಾ ಸಗ್ಳ್ಯಾಕ್ನಿ ತೊ “ಸಗ್ಳ್ಯಾ ರಿತಿಚ್ಯಾ ಹವ್ರೆಪಾನಾನಿತ್ನಾ ತುಮ್ಕಾಚ್ ತುಮಿ ರಾಕುನ್ ಘೆವಾ, ಕಶ್ಯಾಕ್ ಮಟ್ಲ್ಯಾರ್, ಎಕ್ ಮಾನ್ಸಾನ್ ಜಿವ್ ಕಮ್ವುನ್ ಘೆತಲೆ, ತೆನಿ ಕಾಯ್ ಕಮ್ವುಲ್ಯಾನಾಯ್, ಅನಿ ತೆಚಿ ಕವ್ಡಿ ಸಾವ್ಕಾರ್ಕಿ ಹಾಯ್, ತೆಚೆ ವರ್‍ತಿ ಹೊಂದುನ್ ನಾ”, ಮನುನ್ ಸಾಂಗುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:15
34 ತಿಳಿವುಗಳ ಹೋಲಿಕೆ  

ದ್ರವ್ಯಾಶೆಯಿಲ್ಲದವರಾಗಿರಿ; ನಿಮಗಿರುವವುಗಳಲ್ಲಿ ತೃಪ್ತರಾಗಿರಿ; ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ, ಎಂದಿಗೂ ತೊರೆಯುವದಿಲ್ಲವೆಂದು ದೇವರು ತಾನೇ ಹೇಳಿದ್ದಾನೆ.


ಕಳವಳದಿಂದ ಕೂಡಿದ ಬಹುಧನಕ್ಕಿಂತಲೂ ಯೆಹೋವನ ಭಯದಿಂದ ಕೂಡಿದ ಅಲ್ಪಧನವೇ ಲೇಸು.


ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು; ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವದು ಲೇಸು.


ಮನುಷ್ಯರು ಸ್ವಾರ್ಥಚಿಂತಕರೂ ಹಣದಾಸೆಯವರೂ ಬಡಾಯಿಕೊಚ್ಚುವವರೂ ಅಹಂಕಾರಿಗಳೂ ದೂಷಕರೂ ತಂದೆತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ


ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ ತಾವು ಹಣದಾಶೆಯುಳ್ಳವರಾಗಿದ್ದದರಿಂದ ಹಾಸ್ಯಮಾಡಿದರು.


ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಸಾಯಿಸಿರಿ. ಜಾರತ್ವ ಬಂಡುತನ ಕಾಮಾಭಿಲಾಷೆ ದುರಾಶೆ ವಿಗ್ರಹಾರಾಧನೆಗೆ ಸಮವಾಗಿರುವ ಲೋಭ ಇವುಗಳನ್ನು ವಿಸರ್ಜಿಸಿಬಿಡಿರಿ;


ಬೇರೆ ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವಮಾನದಲ್ಲಿ ಆಗುವ ಚಿಂತೆ ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಮಾಗಿಸುವದಿಲ್ಲ; ಇವರೇ ಮುಳ್ಳುಗಿಡಗಳಲ್ಲಿ ಬೀಜ ಬಿದ್ದ ನೆಲವಾಗಿರುವವರು.


ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಸೊಕ್ಕಿರಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.


ದುಷ್ಟರ ಮಹಾಸಮೃದ್ಧಿಗಿಂತಲೂ ನೀತಿವಂತನ ಬಡತನವೇ ಲೇಸು.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಲೋಕಾದಿಯಿಂದ ಅಂಥವರಿಗೆ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವದು, ಅವರ ನಾಶವು ತೂಕಡಿಸುವದಿಲ್ಲ.


ಸೂಳೆಗಾರಿಕೆ ಕಳ್ಳತನ ಕೊಲೆ ಹಾದರ ದ್ರವ್ಯಾಶೆ ಕೆಡುಕುತನ ಮೋಸ ಬಂಡತನ ಹೊಟ್ಟೇಕಿಚ್ಚು ಬೈಗಳು ಸೊಕ್ಕು ಬುದ್ಧಿಗೇಡಿತನ ಇವೇ ಮೊದಲಾದವುಗಳ ಕೆಟ್ಟ ಆಲೋಚನೆಗಳು ಹೊರಡುತ್ತವೆ.


ಅಯ್ಯೋ, ತನ್ನ ಗೂಡನ್ನು ಎತ್ತರದಲ್ಲಿ ಕಟ್ಟಿ ಕೇಡಿನೊಳಗಿಂದ ತಪ್ಪಿಸಿಕೊಳ್ಳಬೇಕೆಂದು ತನ್ನ ಕುಲಕ್ಕೆ ಆಸ್ತಿಯನ್ನು ಅನ್ಯಾಯವಾಗಿ ದೋಚಿಕೊಳ್ಳುವವನ ಗತಿಯನ್ನು ಏನು ಹೇಳಲಿ;


ದುಷ್ಟನು ತನ್ನ ಮನೋರಥವು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಪರರ ಸೊತ್ತನ್ನು ಅಪಹರಿಸಿದವನು ಯೆಹೋವನನ್ನು ಅಲ್ಲಗಳೆದು ಬಿಟ್ಟುಬಿಡುತ್ತಾನೆ.


ಯೆಹೋವನ ಆ ಮಾತಿಗೆ ಸೈತಾನನು - ಚರ್ಮಕ್ಕೆ ಚರ್ಮ ಎಂಬಂತೆ ಒಬ್ಬ ಮನುಷ್ಯನು ಪ್ರಾಣವನ್ನು ಉಳಿಸಿಕೊಳ್ಳುವದಕ್ಕೋಸ್ಕರ ತನ್ನ ಸರ್ವಸ್ವವನ್ನೂ ಕೊಡುವನು.


ಕಳ್ಳರು ಲೋಭಿಗಳು ಕುಡಿಕರು ಬೈಯುವವರು ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.


ನಿಮ್ಮ ವಿಷಯದಲ್ಲಿ ಜಾಗರೂಕರಾಗಿರ್ರಿ. ಅತಿಭೋಜನದ ಮದಡಿನಿಂದಲೂ ಅಮಲಿನಿಂದಲೂ ಪ್ರಪಂಚದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿವಸವು ನಿಮ್ಮ ಮೇಲೆ ಉರ್ಲಿನಂತೆ ಫಕ್ಕನೆ ಬಂದೀತು.


ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರವಿುಸಿಕೊಳ್ಳುತ್ತಾರೆ, ಮನೆಗಳನ್ನು ಲೋಭದಿಂದ ಅಪಹರಿಸುತ್ತಾರೆ; ಮನೆಯನ್ನೂ ಮನೆಯವನನ್ನೂ ಸ್ವಾಸ್ತ್ಯವನ್ನೂ ಸ್ವಾಸ್ತ್ಯದವನನ್ನೂ ತುಳಿದುಬಿಡುತ್ತಾರೆ.


ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರು ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.


ವಿವೇಕಶೂನ್ಯನಾದ ಒಡೆಯನು ಮಹಾಹಿಂಸಕನು; ದೋಚಿಕೊಳ್ಳಲೊಲ್ಲದವನು ದೀರ್ಘಾಯುಷ್ಯನು.


ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲಚಿತ್ತರನ್ನು ಮರುಳುಗೊಳಿಸುವವರೂ ಲೋಭದಲ್ಲಿ ತೇರ್ಗಡೆಹೊಂದಿದ ಮನಸ್ಸುಳ್ಳವರೂ ಶಾಪಕ್ಕೆ ಪಾತ್ರರೂ ಆಗಿದ್ದಾರೆ.


[ಪ್ರಶ್ನೆ ಕೇಳುವದಕ್ಕೆ] ಬರುವ ಜನರಂತೆ ಅವರು ನಿನ್ನ ಬಳಿಗೆ ಬಂದು ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಕೊಳ್ಳುವದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೇನೋ ತಾವು ದೋಚಿಕೊಂಡದರ ಮೇಲೆ ಹೋಗುತ್ತದೆ.


ಅದೇನಂದರೆ ಒಬ್ಬಾನೊಬ್ಬ ಐಶ್ವರ್ಯವಂತನ ಭೂವಿುಯು ಚೆನ್ನಾಗಿ ಬೆಳೆಯಿತು.


ದಾಸರು ಗತ್ ಊರಿನಲ್ಲಿರುವದು ಶಿಮ್ಮಿಗೆ ಗೊತ್ತಾದಾಗ ಅವನು ಕತ್ತೆಗೆ ತಡಿಹಾಕಿಸಿ ತನ್ನ ದಾಸರನ್ನು ಹುಡುಕುವದಕ್ಕೋಸ್ಕರ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಹೊರಟುಹೋಗಿ ಅವರನ್ನು ಗತ್ ಊರಿನಿಂದ ಹಿಡಿದುಕೊಂಡು ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು