Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:20 - ಕನ್ನಡ ಸತ್ಯವೇದವು J.V. (BSI)

20 ಆದರೆ ದೇವರು ಅವನಿಗೆ - ಬುದ್ಧಿಹೀನನು ನೀನು! ಈ ಹೊತ್ತು ರಾತ್ರಿ ನಿನ್ನ ಪ್ರಾಣವನ್ನು ನಿನ್ನ ಕಡೆಯಿಂದ ಕೇಳುವರು; ಆಗ ನೀನು ಸಿದ್ಧಮಾಡಿಟ್ಟಿರುವದು ಯಾರಿಗಾಗುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 “ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಆದರೆ ದೇವರು ಅವನಿಗೆ, ‘ನೀನು ಬುದ್ಧಿಹೀನ! ಈ ರಾತ್ರಿ ನೀನು ಸಾಯುವೆ! ಈಗ ಹೇಳು, ನೀನು ಕೂಡಿಟ್ಟ ಪದಾರ್ಥಗಳ ಗತಿ ಏನಾಗುವುದು? ಅವು ಯಾರ ಪಾಲಾಗುತ್ತವೆ?’ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ! ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ತೆಗೆದುಕೊಳ್ಳಲಾಗುವುದು. ಆಗ ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಖರೆ ದೆವಾನ್ ತೆಕಾ “ಪಿಶ್ಯಾ! ಆಜ್ ರಾಚ್ಚೆ ತಿಯಾ ತುಜೊ ಜಿವ್ ಮಾಕಾ ಪರ್ತುನ್ ದಿವ್ಕ್ ಪಾಜೆ; ತನ್ನಾ ತಿಯಾ ತುಕಾ ಮನುನ್ ಗೊಳಾ ಕರುಕ್ ಥವಲ್ಲೆ ಹೆ ಸಗ್ಳೆ ಕೊನಾಚೆ ಹೊತಾ?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:20
35 ತಿಳಿವುಗಳ ಹೋಲಿಕೆ  

ಆಸ್ತಿಪಾಸ್ತಿಗಳನ್ನು ಅನ್ಯಾಯವಾಗಿ ಸಂಪಾದಿಸಿಕೊಂಡವನು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನನು; ಅವನ ಮಧ್ಯಪ್ರಾಯದಲ್ಲಿ ಅವು ಅವನಿಂದ ತೊಲಗಿಹೋಗುವವು; ಅವನು ತನ್ನ ಅಂತ್ಯಕಾಲದಲ್ಲಿ ಹುಚ್ಚನಾಗಿ ಕಂಡುಬರುವನು.


ದೇವರು ಭ್ರಷ್ಟನ ಆತ್ಮವನ್ನು ಕಡಿದೆಳೆಯುವಾಗ ಅವನಿಗೆ ನಿರೀಕ್ಷೆಯೆಲ್ಲಿಯದು?


ನಾವು ಲೋಕದೊಳಕ್ಕೆ ಏನೂ ತಕ್ಕೊಂಡು ಬರಲಿಲ್ಲವಷ್ಟೆ; ಅದರೊಳಗಿಂದ ಏನೂ ತಕ್ಕೊಂಡು ಹೋಗಲಾರೆವು.


ನರರು ನಿಜವಲ್ಲದ ಮಾಯಾರೂಪದಿಂದ ಸಂಚರಿಸುವವರು; ಅವರು ಸುಮ್ಮ ಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವದೋ ತಾವೇ ತಿಳಿಯರು.


ನಿಮ್ಮ ಜೀವಮಾನವು ಎಂಥದು? ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆಹೋಗುವ ಹಬೆಯಂತಿರುತ್ತೀರಿ.


ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಬುದ್ಧಿಯಿಲ್ಲದವರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನೂ ಮಾಡಿದನಲ್ಲವೇ.


ಅವರು ನಿವಿುಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ; ಭಯಂಕರರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ.


ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ ತಮ್ಮ ಮದ್ಯದಲ್ಲಿ ಮುಳುಗಿದ್ದರೂ ತುಂಬಾ ಒಣಗಿದ ಕೂಳೆಯಂತೆ ಬೆಂಕಿಗೆ ತುತ್ತಾಗುವರು.


ಬಡ್ಡಿಬಾಚಿಗಳಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವದು.


ಧನವು ಕೋಪದ ದಿನದಲ್ಲಿ ವ್ಯರ್ಥ; ಧರ್ಮವು ಮರಣವಿಮೋಚಕ.


ಅವರ ಇಷ್ಟಭೋಜನವು ಅವರಿಗೆ ಅಸಹ್ಯವಾಗುವದಕ್ಕಿಂತ ಮೊದಲು, ಅವರು ಅದನ್ನು ಇನ್ನೂ ಭುಜಿಸುತ್ತಿರುವಾಗಲೇ


ಅವರ ಮುಂದೆ ತನ್ನ ಘನೈಶ್ವರ್ಯಗಳನ್ನೂ ಪುತ್ರಲಾಭಾತಿಶಯವನ್ನೂ ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಸರದಾರರಲ್ಲಿಯೂ ರಾಜ ಸೇವಕರಲ್ಲಿಯೂ ತನಗೆ ಶ್ರೇಷ್ಠಸ್ಥಾನವನ್ನು ಅನುಗ್ರಹಿಸಿದ್ದನ್ನೂ ವರ್ಣಿಸಿದ ಮೇಲೆ -


ಸುಜ್ಞಾನಿಗಳು ಸಾಯುವದನ್ನು ನೋಡುತ್ತೇವಲ್ಲಾ; ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ. ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ.


ದುರ್ದ್ರವ್ಯವು ವ್ಯರ್ಥ; ಧರ್ಮವು ಮೃತ್ಯುವಿನಿಂದ ರಕ್ಷಕ.


ಒಬ್ಬನು ಧನವನ್ನು ಸಂಗ್ರಹಿಸಿದರೂ ಏನೂ ಇಲ್ಲದ ದರಿದ್ರನೇ; ಮತ್ತೊಬ್ಬನು ಧನವನ್ನೆಲ್ಲಾ ವ್ಯಯಮಾಡಿ ಬಡವನಾದರೂ ಬಹು ಐಶ್ವರ್ಯವಂತನೇ.


ನಾಳೆ ಎಂದು ಕೊಚ್ಚಿಕೊಳ್ಳಬೇಡ; ಒಂದು ದಿನದೊಳಗೇ ಏನಾಗುವದೋ ನಿನಗೆ ತಿಳಿಯದು.


ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ; ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷದಿನವಾಗಿರುವದು [ಎಂದು ಹರಟಿಕೊಳ್ಳುವರು].


ನೀವು ಹೆಚ್ಚಳಪಡುವದು ಶೂನ್ಯವಾದದ್ದರಲ್ಲಿಯೇ ಸ್ವಬಲದಿಂದ ಕೊಂಬುಗಳನ್ನು ಪಡೆದುಕೊಂಡಿದ್ದೇವಲ್ಲಾ ಅಂದುಕೊಳ್ಳುತ್ತೀರಿ.


ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು