Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:33 - ಕನ್ನಡ ಸತ್ಯವೇದವು J.V. (BSI)

33 ನಿಮಗಿರುವದನ್ನು ಮಾರಿಬಿಟ್ಟು ದಾನಾ ಕೊಡಿರಿ; ಹಳೇವಾಗದಂಥ ಹಮ್ಮೀಣಿಗಳನ್ನು ಮಾಡಿಕೊಂಡು ಪರಲೋಕದಲ್ಲಿ ಲಯವಾಗದ ದ್ರವ್ಯವನ್ನು ಇಟ್ಟುಕೊಳ್ಳಿರಿ. ಅಲ್ಲಿ ಕಳ್ಳನು ಸಮೀಪಕ್ಕೆ ಬರುವದಿಲ್ಲ; ಅದು ನುಸಿಹಿಡಿದು ನಾಶವಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ, ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ; ಲಯವಾಗದ ಸಂಪತ್ತನ್ನು ಸ್ವರ್ಗದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಅಲ್ಲಿ ಅದು ಕಳ್ಳನಿಗೆ ದಕ್ಕುವಂತಿಲ್ಲ; ನುಸಿಹಿಡಿದು ನಾಶವಾಗುವಂತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ನಿಮ್ಮಲ್ಲಿರುವ ಆಸ್ತಿಯನ್ನು ಮಾರಿ, ಬಂದ ಹಣವನ್ನು ಕೊರತೆಯಲ್ಲಿರುವ ಜನರಿಗೆ ಕೊಡಿರಿ. ಈ ಲೋಕದ ಐಶ್ವರ್ಯ ಶಾಶ್ವತವಲ್ಲ. ಆದ್ದರಿಂದ ಶಾಶ್ವತವಾದ ಐಶ್ವರ್ಯವನ್ನು ಗಳಿಸಿಕೊಳ್ಳಿರಿ. ಲಯವಾಗದ ಸಂಪತ್ತನ್ನು ಪರಲೋಕದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಆ ಭಂಡಾರವನ್ನು ಕಳ್ಳರು ಕದಿಯಲಾಗುವುದಿಲ್ಲ ಮತ್ತು ಹುಳಗಳು ನಾಶಮಾಡಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ ಬಡವರಿಗೆ ಕೊಡಿರಿ. ನಿಮಗೋಸ್ಕರ ನಾಶವಾಗದ ಹಣದ ಚೀಲಗಳನ್ನೂ, ಕ್ಷಯವಾಗದ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ, ಅಲ್ಲಿ ಕಳ್ಳನು ಸಮೀಪಕ್ಕೆ ಬರುವುದಿಲ್ಲ. ನುಸಿಹಿಡಿದು ಕೆಟ್ಟುಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತುಮ್ಚೆ ಮನುನ್ ಹೊತ್ತೆ ಸಗ್ಳೆ ಇಕಾ, ಅನಿ ಯಲ್ಲೆ ಪೈಸೆ ಗರಿಬಾಕ್ನಿ ದಿವಾ, ಕೊನಾಕ್ಬಿ ಪಿಂಜುಕ್ ಹೊಯ್‍ ನಸಲ್ಲ್ಯಾ ಪಿಸ್ವಿಯಾ ತುಮ್ಕಾಚ್ ತುಮಿ ತಯಾರ್ ಕರುನ್ ಘೆವಾ, ಅನಿ ತುಮ್ಚೆ ಬದಿಕ್ ಸರ್‍ಗಾತ್ ಗೊಳಾ ಕರುನ್ ಥವಾ, ಥೈ ತೆ ಕನ್ನಾಚ್ ಕಮಿ ಹೊಯ್ನಾ! ಕಶ್ಯಾಕ್ ಮಟ್ಲ್ಯಾರ್, ತೆ ಬದಿಕ್ ಚೊರಾಕ್ ಕನ್ನಾಚ್ ಗಾವಿನಾ, ಅನಿ ಥೈ ಕುಸಡ್ ಲಾಗಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:33
14 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ - ನೀನು ಸಂಪೂರ್ಣನಾಗಬೇಕೆಂದಿದ್ದರೆ ಹೋಗಿ ನಿನ್ನ ಆಸ್ತಿಯನ್ನು ಮಾರಿ ಬಡವರಿಗೆ ಕೊಡು; ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.


ಯೇಸು ಅದನ್ನು ಕೇಳಿ ಅವನಿಗೆ - ಇನ್ನೂ ನಿನಗೆ ಒಂದು ಕಡಿಮೆಯಾಗಿದೆ; ನಿನ್ನ ಬದುಕನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.


ತಮ್ಮ ತಮ್ಮ ಚರಸ್ಥಿರಸೊತ್ತುಗಳನ್ನು ಮಾರಿ ಬಂದ ಹಣವನ್ನು ಎಲ್ಲರಿಗೂ ಅವರವರ ಅಗತ್ಯವಿದ್ದ ಹಾಗೆ ಹಂಚಿಕೊಡುತ್ತಾ ಇದ್ದರು.


ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ.


ತನಗೋಸ್ಕರ ದ್ರವ್ಯವನ್ನಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತನಾಗದೆ ಇರುವವನು ಅವನಂತೆಯೇ ಇದ್ದಾನೆ ಅಂದನು.


ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ತಿನ್ನುತ್ತೀರಿ, ತೃಪ್ತಿಯಾಗದು, ಕುಡಿಯುತ್ತೀರಿ, ಆನಂದವಾಗದು; ಹೊದಿಯುತ್ತೀರಿ, ಬೆಚ್ಚಗಾಗದು; ಸಂಬಳಗಾರನು ಸಂಬಳಹಾಕುವ ಚೀಲವು ತೂತಿನದು.


ಆ ಸಭೆಗಳವರು ಬಹಳ ಹಿಂಸೆ ತಾಳುವವರಾದರೂ ಮತ್ತು ವಿಪರೀತವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.


ಅವನು ಬಡವರಿಗೋಸ್ಕರ ಚಿಂತಿಸಿ ಇದನ್ನು ಹೇಳಲಿಲ್ಲ; ಅವನು ಕಳ್ಳನಾಗಿದ್ದು ತನ್ನ ವಶದಲ್ಲಿದ್ದ ಅವರ ಹಣದ ಚೀಲದಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದದರಿಂದಲೇ ಹೇಳಿದನು.


ಹೇಗೂ ಒಳಗಿರುವಂಥದನ್ನು ದಾನಾಕೊಡಿರಿ; ಆಗ ಸಕಲವೂ ನಿಮಗೆ ಶುದ್ಧವಾಗಿರುವದು.


ಒಬ್ಬನು ಧನವನ್ನು ಸಂಗ್ರಹಿಸಿದರೂ ಏನೂ ಇಲ್ಲದ ದರಿದ್ರನೇ; ಮತ್ತೊಬ್ಬನು ಧನವನ್ನೆಲ್ಲಾ ವ್ಯಯಮಾಡಿ ಬಡವನಾದರೂ ಬಹು ಐಶ್ವರ್ಯವಂತನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು