Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:48 - ಕನ್ನಡ ಸತ್ಯವೇದವು J.V. (BSI)

48 ತಿಳಿಯದೆ ಪೆಟ್ಟುಗಳಿಗೆ ಯೋಗ್ಯವಾದದ್ದನ್ನು ನಡಿಸಿದವನು ಸ್ವಲ್ಪ ಪೆಟ್ಟು ತಿನ್ನುವನು. ಯಾವನಿಗೆ ಬಹಳವಾಗಿ ಕೊಟ್ಟದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವದು; ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ತಿಳಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಯಾವನಿಗೆ ಬಹಳವಾಗಿ ಕೊಡಲ್ಪಟ್ಟಿದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವುದು. ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಅರಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ವಹಿಸಿಕೊಂಡವನಿಂದ ಇನ್ನೂ ಹೆಚ್ಚಾಗಿ ಕೇಳಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಆದರೆ ತನ್ನ ಯಜಮಾನನ ಬಯಕೆಯನ್ನು ತಿಳಿದಿಲ್ಲದ ಸೇವಕನಿಗೆ ಏನಾಗುವುದು? ಇವನು ಸಹ ದಂಡನೆಗೆ ಅರ್ಹವಾದ ಕಾರ್ಯಗಳನ್ನು ಮಾಡುತ್ತಾನೆ. ಆದರೆ ತನ್ನ ಕರ್ತವ್ಯವನ್ನು ತಿಳಿದಿದ್ದರೂ ಮಾಡದೆಹೋದ ಸೇವಕನಿಗಿಂತ ಇವನಿಗೆ ಕಡಿಮೆ ದಂಡನೆ ಆಗುವುದು. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ಪಡೆದವನಿಂದ ಇನ್ನೂ ಹೆಚ್ಚಾಗಿ ನಿರೀಕ್ಷಿಸಲಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ದಂಡನೆಗೆ ಯೋಗ್ಯವಾದದ್ದನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳಿಗೆ ಗುರಿಯಾಗುವನು. ಯಾವನಿಗೆ ಹೆಚ್ಚು ಕೊಡಲಾಗಿದೆಯೋ, ಅವನಿಂದ ಹೆಚ್ಚು ಕೇಳಲಾಗುವುದು; ಯಾವನಿಗೆ ಹೆಚ್ಚಾಗಿ ಒಪ್ಪಿಸಿರುವುದೋ, ಅವನಿಂದ ಹೆಚ್ಚಾಗಿಯೇ ಕೇಳಲಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ಅನಿ ಧನಿಯಾಸಾಟ್ನಿ ಕಾಯ್ ಕರ್‍ತಲೆ ಮನುನ್ ಗೊತ್ತ್ ನಸಲ್ಲೊ ಆಳ್ ರ್‍ಹಾತಾ, ಅನಿ ತೆನಿ ಕಾಯ್ಬಿ ಧನಿಯಾಕ್ ನಕ್ಕೊ ಹೊಲ್ಲಿ ಚುಕ್ ಕರ್ಲ್ಯಾರ್, ತೆಕಾ ಕಮಿ ಶಿಕ್ಷಾ ಗಾವ್ತಾ. ಕೊನಾಕ್ ಲೈ ದಿಲ್ಲೆ ಹಾಯ್, ತೆಚೆಕ್ನಾ ಜಾಸ್ತಿಚೆ ಫಾಟಿ ಯವ್ಕ್ ಪಾಜೆ; ಅನಿ ಕೊನಾಕ್ ಎಗ್ದಮ್ ಜಾಸ್ತಿಚೆ ದಿಲ್ಲೆ ಹಾಯ್, ತೆಚೆಕ್ನಾ ಎಗ್ದಮ್ ಜಾಸ್ತಿಚೆ ಫಾಟಿ ಪರ್ತುನ್ ಯೆವ್ಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:48
21 ತಿಳಿವುಗಳ ಹೋಲಿಕೆ  

ನನ್ನ ಸಹೋದರರೇ, ಬೋಧಕರಾದ ನಮಗೆ ಕಠಿನವಾದ ತೀರ್ಪು ಆಗುವದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.


ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ಮಾಡಿ ದೋಷಕ್ಕೆ ಒಳಗಾದರೆ ಅದು ಅವನಿಗೆ ತಿಳಿಯದೆಹೋದರೂ ಅವನು ಅದರಿಂದ ಅಪರಾಧಿಯಾಗಿ ತನ್ನ ಪಾಪಫಲವನ್ನು ಅನುಭವಿಸಬೇಕು.


ನಾನು ಬಂದು ಅವರ ಕೂಡ ಮಾತಾಡದಿದ್ದರೆ ಅವರಿಗೆ ಪಾಪವು ಇರುತ್ತಿದ್ದಿಲ್ಲ; ಆದರೆ ಅವರು ಮಾಡಿದ ಪಾಪಕ್ಕಾಗಿ ಅವರಿಗೆ ಈಗ ನೆವವಿಲ್ಲ.


ಯಾಕಂದರೆ ಇದ್ದವನಿಗೆ ಕೊಡಲ್ಪಡುವದು, ಅವನಿಗೆ ಮತ್ತೂ ಹೆಚ್ಚಾಗುವದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.


ಆ ಅಜ್ಞಾನಕಾಲಗಳನ್ನು ದೇವರು ಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಾನೆ.


ಈ ಬೋಧೆ ಭಾಗ್ಯವಂತನಾದ ದೇವರ ಮಹಿಮೆಯನ್ನು ಪ್ರದರ್ಶಿಸುವ ಸುವಾರ್ತೆಗೆ ಅನುಸಾರವಾಗಿದೆ.


ಯಜಮಾನನು ಅವನನ್ನು ಕರೆದು - ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಮನೆವಾರ್ತೆಯ ಲೆಕ್ಕವನ್ನು ಒಪ್ಪಿಸು; ನೀನು ಇನ್ನು ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಎಂದು ಹೇಳಿದನು.


ಎಲೈ ತಿಮೊಥೆಯನೇ, ಜ್ಞಾನೋಪದೇಶವೆಂದು ಸುಳ್ಳಾಗಿ ಹೇಳಿಕೊಳ್ಳುವ ಬೋಧನೆಗೆ ಸಂಬಂಧಪಟ್ಟ ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೂ ವಿವಾದಗಳಿಗೂ ನೀನು ದೂರವಾಗಿದ್ದು ನಿನ್ನ ವಶಕ್ಕೆ ಕೊಟ್ಟಿರುವದನ್ನೇ ಕಾಪಾಡು.


ಯಾವನಾದರೂ ಒಬ್ಬನು ಮಾತ್ರ ತಿಳಿಯದೆ ತಪ್ಪು ಮಾಡಿದರೆ ಅವನು ದೋಷಪರಿಹಾರಕಯಜ್ಞಕ್ಕಾಗಿ ಒಂದು ವರುಷದ ಆಡನ್ನು ಸಮರ್ಪಿಸಬೇಕು.


ಅಪರಾಧಿಗೆ ಪೆಟ್ಟಿನ ಶಿಕ್ಷೆ ತೀರ್ಮಾನವಾದರೆ ನ್ಯಾಯಾಧಿಪತಿಯು ಅವನನ್ನು ಮಲಗಿಸಿ ಅವನ ಅಪರಾಧಕ್ಕೆ ಅನುಸಾರವಾಗಿ ಪೆಟ್ಟುಗಳನ್ನು ತನ್ನ ಮುಂದೆಯೇ ಹೊಡಿಸಿ ಲೆಕ್ಕಿಸಬೇಕು.


ಆಗ ಪೇತ್ರನು - ಸ್ವಾಮೀ, ನೀನು ಈ ಸಾಮ್ಯವನ್ನು ನಮಗೆ ಮಾತ್ರ ಹೇಳುತ್ತೀಯೋ? ಎಲ್ಲರಿಗೂ ಹೇಳುತ್ತೀಯೋ ಎಂದು ಕೇಳಲು


ನಾನು ಬೆಂಕಿಯನ್ನು ಭೂವಿುಯ ಮೇಲೆ ಹಾಕಬೇಕೆಂದು ಬಂದೆನು; ಅದು ಇಷ್ಟರೊಳಗೆ ಹತ್ತಿಕೊಂಡಿದ್ದರೆ ನನಗೆ ಎಷ್ಟೋ ಸಂತೋಷ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು