Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:15 - ಕನ್ನಡ ಸತ್ಯವೇದವು J.V. (BSI)

15 ಆ ಮಾತನ್ನು ಕೇಳಿ ಸ್ವಾವಿುಯು ಅವನಿಗೆ - ಕಪಟಿಗಳು ನೀವು, ನಿಮ್ಮಲ್ಲಿ ಪ್ರತಿಯೊಬ್ಬನೂ ಸಬ್ಬತ್‍ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವದಕ್ಕಾಗಿ ಹಿಡುಕೊಂಡು ಹೋಗುತ್ತಾನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಮಾತನ್ನು ಕೇಳಿ ಕರ್ತನು ಅವನಿಗೆ, “ಕಪಟಿಗಳೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವುದಕ್ಕಾಗಿ ಹಿಡಿದುಕೊಂಡು ಹೋಗುತ್ತಾನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಪ್ರಭು, ಅವನಿಗೆ ಪ್ರತ್ಯುತ್ತರವಾಗಿ, “ಕಪಟಿಗಳೇ, ಸಬ್ಬತ್‍ದಿನ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಕತ್ತೆಯನ್ನಾಗಲಿ, ಎತ್ತನ್ನಾಗಲಿ ಕೊಟ್ಟಿಗೆಯಿಂದ ಬಿಚ್ಚಿ ನೀರಿಗೆ ಹಿಡಿದುಕೊಂಡು ಹೋಗುವುದಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅದಕ್ಕೆ ಪ್ರಭುವು (ಯೇಸು), “ನೀವು ಕಪಟಿಗಳು! ನೀವೆಲ್ಲರೂ ನಿಮ್ಮ ದುಡಿಮೆಯ ಪಶುಗಳನ್ನು ಪ್ರತಿದಿನ ಬಿಚ್ಚಿ ನೀರು ಕುಡಿಸಲು ಕರೆದೊಯ್ಯುತೀರಿ. ಸಬ್ಬತ್‌ದಿನದಲ್ಲಿಯೂ ನೀವು ಹಾಗೆಯೇ ಮಾಡುತ್ತೀರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅದಕ್ಕೆ ಕರ್ತದೇವರು ಅವನಿಗೆ, “ಕಪಟಿಗಳೇ! ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ, ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವುದಕ್ಕಾಗಿ ಹೋಗುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಧನಿಯಾನ್ ತೆಕಾ “ತುಮಿ ಕುಸ್ಡ್ಯಾನೊ! ತುಮ್ಚ್ಯಾತ್ಲೊ ಕೊನ್ಬಿ ಸಬ್ಬತಾಚ್ಯಾ ದಿಸಿ,ತುಮ್ಚ್ಯಾ ಗಾಡ್ವಾಕ್ ನಾಹೊಲ್ಯಾರ್, ಬೈಲಾಕ್ ಗೊಟ್ಯಾತ್ನಾ ಸೊಡ್ವುನ್ ಪಾನಿಯಾಕ್ ನ್ಹೆಯ್‌ನ್ಯಾಶಿ ಕಾಯ್;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:15
16 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾವನೊಬ್ಬನ ಮಗನಾಗಲಿ ಎತ್ತಾಗಲಿ ಬಾವಿಯಲ್ಲಿ ಬಿದ್ದರೆ ಅವನು ತಡಮಾಡದೆ ಸಬ್ಬತ್‍ದಿನದಲ್ಲಾದರೂ ಮೇಲಕ್ಕೆ ತೆಗೆಯುವದಿಲ್ಲವೇ ಎಂದು ಅವರನ್ನು ಕೇಳಿದನು.


ಹಾಗೆಯೇ ನೀವು ಸಹ ಹೊರಗೆ ಜನರಿಗೆ ಸತ್ಪುರುಷರಂತೆ ಕಾಣಿಸಿಕೊಳ್ಳುತ್ತೀರಿ ಸರಿ, ಆದರೆ ಒಳಗೆ ಕಪಟದಿಂದಲೂ ಅನ್ಯಾಯದಿಂದಲೂ ತುಂಬಿದವರಾಗಿದ್ದೀರಿ.


ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಆತನು ಮೊದಲು ತನ್ನ ಶಿಷ್ಯರಿಗೆ ಹೇಳುವದಕ್ಕೆ ತೊಡಗಿದ್ದೇನಂದರೆ - ಫರಿಸಾಯರ ಕಪಟವೆಂಬ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ್ರಿ.


ಇಲ್ಲವೆ ನಿನ್ನ ಕಣ್ಣಿನಲ್ಲಿರುವ ತೊಲೆಯನ್ನೇ ನೀನು ನೋಡದೆ ನಿನ್ನ ಸಹೋದರನಿಗೆ - ಅಣ್ಣಾ, ನಿನ್ನ ಕಣ್ಣಿನೊಳಗಿನ ರವೆಯನ್ನು ತೆಗೆಯುತ್ತೇನೆ ಬಾ ಎಂದು ಹೇಳುವದಕ್ಕೆ ಹೇಗಾದೀತು? ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿಂದ ತೊಲೆಯನ್ನು ತೆಗೆದುಹಾಕಿಕೋ, ಆಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ರವೆಯನ್ನು ತೆಗೆಯುವದಕ್ಕೆ ಚೆನ್ನಾಗಿ ಕಾಣಿಸುವದು.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕರಾಜ್ಯದ ಬಾಗಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ; ನೀವಂತೂ ಒಳಕ್ಕೆ ಹೋಗುವದಿಲ್ಲ, ಒಳಕ್ಕೆ ಹೋಗಬೇಕೆಂದಿರುವವರನ್ನೂ ಹೋಗಗೊಡಿಸುವದಿಲ್ಲ.


ಅವರ ಮಾತನ್ನು ಬಿಡಿರಿ; ತಾವೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸುವದಕ್ಕೆ ಹೋಗುತ್ತಾರೆ; ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಕುಣಿಯಲ್ಲಿ ಬೀಳುವರು ಅಂದನು.


ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ; ಅವನು ಬರೆದದ್ದೇನಂದರೆ -


ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿಂದ ತೊಲೆಯನ್ನು ತೆಗೆದುಹಾಕಿಕೋ; ಆಮೇಲೆ ನಿನ್ನ ಸಹೋದರನ ಕಣ್ಣಿನೊಳಗಿಂದ ರವೆಯನ್ನು ತೆಗೆಯುವದಕ್ಕೆ ಚೆನ್ನಾಗಿ ಕಾಣಿಸುವದು.


ಏಕಂದರೆ ಭಯಂಕರರು ನಿಶ್ಶೇಷವಾಗುವರು, ಧರ್ಮನಿಂದಕರು ನಿರ್ನಾಮವಾಗುವರು,


ಧರ್ಮಭ್ರಷ್ಟನು ಬಾಯಿಂದ ನೆರೆಯವನನ್ನು ಹಾಳು ಮಾಡುವನು; ಶಿಷ್ಟನು ತಿಳುವಳಿಕೆಯಿಂದ ಉದ್ಧಾರವಾಗುವನು.


ಭ್ರಷ್ಟನು ಆಳಬಾರದು, ಯಾರೂ ಜನರಿಗೆ ಉರುಲಾಗಕೂಡದು ಎಂಬದೇ ಆತನ ಉದ್ದೇಶ.


ಸ್ವಾವಿುಯು ಆಕೆಯನ್ನು ಕಂಡು ಕನಿಕರಿಸಿ - ಅಳಬೇಡ ಎಂದು ಆಕೆಗೆ ಹೇಳಿ


ಅವನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು - ಬರಬೇಕಾದವನು ನೀನೋ, ನಾವು ಬೇರೊಬ್ಬನ ದಾರಿಯನ್ನು ನೋಡಬೇಕೋ ಎಂದು ಸ್ವಾವಿುಗೆ ಹೇಳಿಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು