Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:12 - ಕನ್ನಡ ಸತ್ಯವೇದವು J.V. (BSI)

12 ಆತನು ತನ್ನನ್ನು ಊಟಕ್ಕೆ ಕರೆದವನಿಗೆ ಸಹ ಒಂದು ಮಾತು ಹೇಳಿದನು; ಅದೇನಂದರೆ - ನೀನು ಮಧ್ಯಾಹ್ನದ ಊಟಕ್ಕೆ ಅಥವಾ ಸಾಯಂಕಾಲದ ಊಟಕ್ಕೆ ನಿನ್ನ ಸ್ನೇಹಿತರನ್ನಾಗಲಿ ನಿನ್ನ ಅಣ್ಣತಮ್ಮಂದಿರನ್ನಾಗಲಿ ನಿನ್ನ ಬಂಧುಬಾಂಧವರನ್ನಾಗಲಿ ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ. ಒಂದು ವೇಳೆ ಅವರು ಸಹ ಪ್ರತಿಯಾಗಿ ನಿನ್ನನ್ನು ಕರೆದಾರು, ಮತ್ತು ನಿನಗೆ ಮುಯ್ಯಿಗೆಮುಯ್ಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನು ತನ್ನನ್ನು ಊಟಕ್ಕೆ ಕರೆದವನಿಗೆ ಸಹ ಒಂದು ಮಾತು ಹೇಳಿದನು; ಅದೇನೆಂದರೆ, “ನೀನು ಮಧ್ಯಾಹ್ನದ ಊಟಕ್ಕೆ ಅಥವಾ ಸಾಯಂಕಾಲದ ಊಟಕ್ಕೆ ನಿನ್ನ ಸ್ನೇಹಿತರನ್ನಾಗಲಿ, ನಿನ್ನ ಅಣ್ಣತಮ್ಮಂದಿರನ್ನಾಗಲಿ, ನಿನ್ನ ಬಂಧುಬಾಂಧವರನ್ನಾಗಲಿ, ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ. ಒಂದು ವೇಳೆ ಅವರು ಸಹ ಪ್ರತಿಯಾಗಿ ನಿನ್ನನ್ನು ಕರೆದಾರು, ಮತ್ತು ನಿನಗೆ ಮುಯ್ಯಿಗೆಮುಯ್ಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅನಂತರ ತಮ್ಮನ್ನು ಊಟಕ್ಕೆ ಆಮಂತ್ರಿಸಿದವನನ್ನು ನೋಡಿ ಯೇಸುಸ್ವಾಮಿ, “ನೀನು ಊಟ ಅಥವಾ ಔತಣವನ್ನು ಏರ್ಪಡಿಸುವಾಗ ನಿನ್ನ ಸ್ನೇಹಿತರನ್ನಾಗಲಿ, ಸೋದರರನ್ನಾಗಲಿ, ಬಂಧುಬಳಗದವರನ್ನಾಗಲಿ, ಧನಿಕರಾದ ನೆರೆಯವರನ್ನಾಗಲಿ ಕರೆಯಬೇಡ. ಏಕೆಂದರೆ, ಅವರು ನಿನ್ನನ್ನು ಪ್ರತಿಯಾಗಿ ಕರೆದು ಮುಯ್ಯಿತೀರಿಸಿ ಬಿಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಬಳಿಕ ಯೇಸು ತನ್ನನ್ನು ಆಮಂತ್ರಿಸಿದ ಫರಿಸಾಯನಿಗೆ, “ನೀನು ಮಧ್ಯಾಹ್ನದ ಊಟಕ್ಕೆ ಅಥವಾ ರಾತ್ರಿಯ ಊಟಕ್ಕೆ ನಿನ್ನ ಸ್ನೇಹಿತರನ್ನು, ಸಹೋದರರನ್ನು, ಸಂಬಂಧಿಕರನ್ನು ಮತ್ತು ಶ್ರೀಮಂತರಾದ ನೆರೆಯವರನ್ನು ಆಮಂತ್ರಿಸಿದರೆ, ಅವರೂ ನಿನ್ನನ್ನು ಮತ್ತೊಮ್ಮೆ ಊಟಕ್ಕೆ ಆಮಂತ್ರಿಸುವರು. ಆಗ ಅದೇ ನಿನಗೆ ಪ್ರತಿಫಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೇಸು ತಮ್ಮನ್ನು ಆಹ್ವಾನಿಸಿದವನಿಗೆ, “ನೀನು ಮಧ್ಯಾಹ್ನದ ಊಟಕ್ಕೆ ಇಲ್ಲವೆ ರಾತ್ರಿಯ ಊಟಕ್ಕೆ ಸಿದ್ಧಪಡಿಸಿದಾಗ, ನಿನ್ನ ಸ್ನೇಹಿತರನ್ನಾಗಲಿ ನಿನ್ನ ಸಹೋದರ ಸಹೋದರಿಯನ್ನಾಗಲಿ, ನಿನ್ನ ಬಂಧುಗಳನ್ನಾಗಲಿ, ಇಲ್ಲವೆ ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ, ಏಕೆಂದರೆ ಅವರೂ ಪ್ರತಿಯಾಗಿ ನಿನ್ನನ್ನೂ ಆಹ್ವಾನಿಸಬಹುದು ಮತ್ತು ನಿನಗೆ ಪ್ರತ್ಯುಪಕಾರವಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತನ್ನಾ ಜೆಜುನ್ ಅಪ್ನಾಕ್ ಜೆವ್ನಾಕ್ ಬಲ್ವಲ್ಲ್ಯಾಕ್ “ಕನ್ನಾಬಿ ಜೆವ್ನಾಕ್ ಬಲ್ವುತಾನಾ ತಿಯಾ ತುಜ್ಯಾ ದೊಸ್ತಾಕ್ನಿ, ನಾಹೊಲ್ಯಾರ್ ಭಾವಾಕ್ನಿ, ನಾಹೊಲ್ಯಾರ್ ಸೊಯ್ರ್ಯಾಕ್ನಿ, ನಾಹೊಲ್ಯಾರ್, ತುಜ್ಯಾ ಸಾವ್ಕಾರ್ ಸೆಜಾರ್‍ಯಾಕ್ನಿ ಬಲ್ವುನಕೊ, ಕಶ್ಯಾಕ್ ಮಟ್ಲ್ಯಾರ್, ತೆನಿಬಿ ತುಕಾ ಜೆವ್ನಾಕ್ ಬಲ್ವುತ್ಯಾತ್. ಅನಿ ತಿಯಾ ತೆಂಕಾ ಕಾಯ್ ಕರ್‍ಲೆ, ತೆ ಸಗ್ಳೆ ತೆನಿ ತುಕಾಬಿ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:12
13 ತಿಳಿವುಗಳ ಹೋಲಿಕೆ  

ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಭ್ರಷ್ಟರೂ ಹಾಗೆ ಮಾಡುವದಿಲ್ಲವೇ.


ಸ್ವಂತ ಲಾಭಕ್ಕಾಗಿ ಬಡವರನ್ನು ಹಿಂಸಿಸುವವನಿಗೂ ಬಲ್ಲಿದರಿಗೆ ಲಂಚಕೊಡುವವನಿಗೂ ಕೊರತೆಯೇ ಗತಿ.


ಬಡವನು ನೆರೆಯವನಿಗೂ ಅಸಹ್ಯ; ಧನವಂತನಿಗೆ ಬಹು ಜನ ವಿುತ್ರರು.


ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸಿ ಸ್ಥಿತಿವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾನೆ.


ಆಕೆಯ ನೆರೆಹೊರೆಯವರೂ ಬಂಧುಬಾಂಧವರೂ ಆಕೆಯ ಮೇಲೆ ಕರ್ತನು ತನ್ನ ದಯವನ್ನು ವಿಶೇಷವಾಗಿ ತೋರಿಸಿದ್ದಾನೆಂಬದನ್ನು ಕೇಳಿ ಆಕೆಯ ಕೂಡ ಸಂತೋಷಪಟ್ಟರು.


ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.


ಆದರೆ ನೀನು ಔತಣ ಮಾಡಿಸುವಾಗ ಬಡವರು ಊನವಾದವರು ಕುಂಟರು ಕುರುಡರು ಇಂಥವರನ್ನು ಕರೆ;


ನಿಮ್ಮ ವಿಷಯದಲ್ಲಿ ನಮ್ಮ ಹೃದಯವು ವಿಶಾಲವಾಗಿರುವದರಿಂದ ನಮ್ಮ ವಿಷಯದಲ್ಲಿ ನಿಮ್ಮ ಹೃದಯವನ್ನೂ ವಿಶಾಲಮಾಡಿಕೊಳ್ಳಿರಿ. ನೀವು ನನ್ನ ಮಕ್ಕಳೆಂದು ಭಾವಿಸಿ ಹೀಗೆ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು