Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:21 - ಕನ್ನಡ ಸತ್ಯವೇದವು J.V. (BSI)

21 ಆ ಆಳು ಬಂದು ತನ್ನ ಯಜಮಾನನಿಗೆ ಈ ಸಂಗತಿಗಳನ್ನು ತಿಳಿಸಲು ಮನೇಯಜಮಾನನು ಸಿಟ್ಟುಗೊಂಡು ಆಳಿಗೆ - ನೀನು ತಟ್ಟನೆ ಈ ಊರಿನ ಬೀದಿಬೀದಿಗೂ ಸಂದುಸಂದಿಗೂ ಹೋಗಿ ಬಡವರು ಊನವಾದವರು ಕುರುಡರು ಕುಂಟರು ಇಂಥವರನ್ನು ಇಲ್ಲಿಗೆ ಕರಕೊಂಡು ಬಾ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆ ಆಳು ಬಂದು ತನ್ನ ಯಜಮಾನನಿಗೆ ಈ ಸಂಗತಿಗಳನ್ನು ತಿಳಿಸಲು ಮನೆಯ ಯಜಮಾನನು ಸಿಟ್ಟುಗೊಂಡು ಆಳಿಗೆ, ‘ನೀನು ತಟ್ಟನೆ ಈ ಊರಿನ ಬೀದಿಬೀದಿಗೂ ಸಂದುಸಂದಿಗೂ ಹೋಗಿ ಬಡವರು, ಅಂಗಹೀನರು, ಕುರುಡರು, ಕುಂಟರು, ಇಂಥವರನ್ನು ಇಲ್ಲಿಗೆ ಕರೆದುಕೊಂಡು ಬಾ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಆ ಸೇವಕನು ಬಂದು ಯಜಮಾನನಿಗೆ ಹಾಗೆಯೇ ವರದಿ ಮಾಡಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಆದ್ದರಿಂದ ಆ ಸೇವಕನು ಹಿಂತಿರುಗಿ ಹೋಗಿ ಅವರು ಹೇಳಿದ್ದನ್ನೆಲ್ಲ ತನ್ನ ಯಜಮಾನನಿಗೆ ತಿಳಿಸಿದನು. ಆಗ ಯಜಮಾನನು ಬಹಳ ಕೋಪಗೊಂಡು ಆ ಸೇವಕನಿಗೆ, ‘ಈ ಊರಿನ ಬೀದಿಗಳಿಗೂ ಸಂದಿಗಳಿಗೂ ಬೇಗನೆ ಹೋಗಿ ಬಡವರನ್ನೂ ಅಂಗವಿಕಲರನ್ನೂ ಕುರುಡರನ್ನೂ ಕುಂಟರನ್ನೂ ಇಲ್ಲಿಗೆ ಕರೆದುಕೊಂಡು ಬಾ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಆ ಸೇವಕನು ಬಂದು ತನ್ನ ಯಜಮಾನನಿಗೆ ಈ ವಿಷಯಗಳನ್ನು ತಿಳಿಸಲು, ಆ ಮನೆಯಜಮಾನನು ಕೋಪಗೊಂಡು ತನ್ನ ಸೇವಕನಿಗೆ, ‘ನೀನು ಬೇಗನೆ ಪಟ್ಟಣದ ಬೀದಿಗಳಿಗೂ ಸಂದುಗಳಿಗೂ ಹೋಗಿ, ಬಡವರನ್ನೂ ಊನವಾದವರನ್ನೂ ಕುರುಡರನ್ನೂ ಕುಂಟರನ್ನೂ ಇಲ್ಲಿ ಕರೆದುಕೊಂಡು ಬಾ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 “ಪರ್ತುನ್ ಜಾವ್ನ್ ಆಳಾನ್ ಹೆ ಸಗ್ಳೆ ಅಪ್ನಾಚ್ಯಾ ಧನಿಯಾಕ್ ಸಾಂಗಟ್ಲ್ಯಾನ್. ತನ್ನಾ ಧನಿಯಾಕ್ ರಾಗ್ ಯೆಲೊ, ಅನಿ ಧನಿಯಾನ್ ಆಳಾಕ್” ತಾಬೊಡ್ತೊಬ್ ಶಾರಾನಿತ್ನಿ, ವನಿಯಾತ್ನಿ, ಸಂದ್ಡಿಯಾತ್ನಿ ಜಾ, ಅನಿ ಗರಿಬಾಕ್ನಿ, ಸೊಟ್ಟ್ಯಾಕ್ನಿ, ಕುಡ್ಡ್ಯಾಕ್ನಿ, ಅದು ಹೊತ್ತ್ಯಾಕ್ನಿ ಬಲ್ವುನ್ ಘೆವ್ನ್ ಯೆ, ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:21
38 ತಿಳಿವುಗಳ ಹೋಲಿಕೆ  

ಆದರೆ ನೀನು ಔತಣ ಮಾಡಿಸುವಾಗ ಬಡವರು ಊನವಾದವರು ಕುಂಟರು ಕುರುಡರು ಇಂಥವರನ್ನು ಕರೆ;


ನನ್ನ ಪ್ರಿಯ ಸಹೋದರರೇ, ಕೇಳಿರಿ, ದೇವರು ಲೌಕಿಕ ವಿಷಯದಲ್ಲಿ ಬಡವರಾಗಿರುವವರನ್ನು ಆದುಕೊಂಡು ಅವರು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ನೇವಿುಸಲಿಲ್ಲವೋ?


ಆಗ ಯೇಸು - ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ; ಆ ತೀರ್ಪು ಏನಂದರೆ, ಕಣ್ಣಿಲ್ಲದವರಿಗೆ ಕಣ್ಣುಬರುವವು. ಕಣ್ಣಿದ್ದವರು ಕುರುಡರಾಗುವರು ಅಂದನು.


ಆದರೆ ಊಟಕ್ಕೆ ಹೇಳಿಸಿಕೊಂಡವರಲ್ಲಿ ಒಬ್ಬನಾದರೂ ನಾನು ಮಾಡಿಸಿದ ಅಡಿಗೆಯ ಸವಿಯನ್ನು ನೋಡಬಾರದು ಎಂದು ನಿಮಗೆ ಹೇಳುತ್ತೇನೆ ಅಂದನು.


ಅರಣ್ಯದಲ್ಲಿ ಒರತೆಗಳು ಒಡೆಯುವವು, ಒಣ ನೆಲದಲ್ಲಿ ನದಿಗಳು ಹುಟ್ಟಿ ಹರಿಯುವವು.


ಈ ಅತ್ಯಂತ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು; ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು;


ಆತನು ದೀನನನ್ನು ಧೂಳಿಯಿಂದ ಎತ್ತಿ ದರಿದ್ರನನ್ನು ತಿಪ್ಪೆಯಿಂದ ಎಬ್ಬಿಸಿ ಪ್ರಭುಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂವಿುಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.


ಆತ್ಮನೂ ಮದಲಗಿತ್ತಿಯೂ - ಬಾ ಅನ್ನುತ್ತಾರೆ. ಕೇಳುವವನು - ಬಾ ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ತೆಗೆದುಕೊಳ್ಳಲಿ.


ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಬರುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.


ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವಂತೆ ನೋಡಿರಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.


ಪಾಪಪರಿಹಾರಕ್ಕೋಸ್ಕರ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಮಾತು ಯೆರೂಸಲೇಮು ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡುವದೆಂತಲೂ ಬರೆದದೆ.


ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುವೆನು.


ನಿನ್ನ ಹಗ್ಗಗಳು ಸಡಲಿ ಸ್ತಂಭದ ಪಾದವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು, ಪಠವನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ; ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವದಕ್ಕೆ ಆಸ್ಪದವಾಯಿತು. ಕುಂಟರೂ ಸುಲಿಗೆಮಾಡಿದರು.


ಇತ್ತಲಾಗಿ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದ್ದನ್ನೆಲ್ಲಾ ಯೇಸುವಿಗೆ ವಿವರವಾಗಿ ಹೇಳಲು ಆತನು ಅವರನ್ನು ಬೇತ್ಸಾಯಿದವೆಂಬ ಊರಿಗೆ ವಿಂಗಡವಾಗಿ ಕರಕೊಂಡು ಹೋದನು.


ಅವನ ಜೊತೇ ಸೇವಕರು ನಡೆದ ಸಂಗತಿಯನ್ನು ನೋಡಿ ಬಹಳವಾಗಿ ದುಃಖಪಟ್ಟು ಒಡೆಯನ ಬಳಿಗೆ ಬಂದು ನಡೆದದ್ದನ್ನೆಲ್ಲಾ ತಿಳಿಸಿದರು.


ಆಗ ಶಿಷ್ಯರು ಬಂದು ಆತನನ್ನು - ಫರಿಸಾಯರು ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿನಗೆ ಗೊತ್ತಾಯಿತೋ ಎಂದು ಕೇಳಿದರು.


ಆಗಲೇ ಮುರಿದುಹೋಯಿತು; ಇದರಿಂದ ಆ ದೀನವಾದ ಮಂದೆಯಲ್ಲಿ ನನ್ನನ್ನು ಲಕ್ಷಿಸುತ್ತಿದ್ದ ಕುರಿಗಳು ಇದು ಯೆಹೋವನ ನುಡಿ ಎಂದು ತಿಳುಕೊಂಡವು.


ಆಗ ನಾನು ದೀನಾವಸ್ಥೆಯಲ್ಲಿದ್ದ ಆ ಕೊಯ್ಗುರಿಗಳ ಮಂದೆಯನ್ನು ಮೇಯಿಸಿದೆನು. ಎರಡು ಕೋಲುಗಳನ್ನು ತೆಗೆದುಕೊಂಡು ಒಂದಕ್ಕೆ ಕನಿಕರವೆಂತಲೂ ಇನ್ನೊಂದಕ್ಕೆ ಒಗ್ಗಟ್ಟೆಂತಲೂ ಹೆಸರಿಟ್ಟು ಅವುಗಳಿಂದ ಮಂದೆಯನ್ನು ಮೇಯಿಸಿದೆನು.


ಯೆರೂಸಲೇವಿುನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನನುಸರಿಸುವ ಒಬ್ಬನಾದರೂ ಇದ್ದಾನೋ, ಇಂಥ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷವಿುಸುವೆನು.


ಆ ಸೇವಕರು ಹಿಂದಿರುಗಿ ತಮ್ಮ ದಾರಿ ಹಿಡಿದು ದಾವೀದನ ಬಳಿಗೆ ಬಂದು ಅವನಿಗೆ ಎಲ್ಲವನ್ನೂ ತಿಳಿಸಲಾಗಿ


ನನ್ನ ಸೊಂಟಕ್ಕೆ ಉರಿಬಡಿದಂತಿದೆ; ನನ್ನ ದೇಹದಲ್ಲಿ ಸ್ವಲ್ಪವಾದರೂ ಕ್ಷೇಮವಿಲ್ಲ.


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಆತನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಆತನ ಮರೆಹೊಕ್ಕವರೆಲ್ಲರು ಧನ್ಯರು.


ಇನ್ನೊಬ್ಬನು - ನಾನು ಮದುವೆಮಾಡಿಕೊಂಡಿದ್ದೇನೆ, ಆದ್ದರಿಂದ ನಾನು ಬರುವದಕ್ಕಾಗುವದಿಲ್ಲ ಅಂದನು.


ಬಳಿಕ ಆ ಆಳು - ಅಯ್ಯಾ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾಯಿತು; ಆದರೂ ಇನ್ನೂ ಸ್ಥಳವದೆ ಅಂದನು.


ಅವರು - ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ ಅಂದಾಗ ಅವನು - ನೀವು ಸಹ ನನ್ನ ದ್ರಾಕ್ಷೇತೋಟಕ್ಕೆ ಹೋಗಿರಿ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು