Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:16 - ಕನ್ನಡ ಸತ್ಯವೇದವು J.V. (BSI)

16 ಹೀಗಿರಲಾಗಿ ಅವನು ಹಂದಿ ತಿನ್ನುತ್ತಿದ್ದ ಕಾಯಿಗಳನ್ನಾದರೂ ತಿಂದು ಹಸಿವನ್ನು ತೀರಿಸಿಕೊಳ್ಳಬೇಕೆಂದು ಆಶೆಪಟ್ಟನು; ಆದರೂ ಯಾರೂ ಅವನಿಗೆ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹೀಗಿರಲಾಗಿ ಅವನು ಹಂದಿ ತಿನ್ನುತ್ತಿದ್ದ ಕಾಯಿಗಳನ್ನಾದರೂ ತಿಂದು ಹಸಿವನ್ನು ತೀರಿಸಿಕೊಳ್ಳಬೇಕೆಂದು ಆಸೆಪಟ್ಟನು, ಆದರೂ ಯಾರೂ ಅವನಿಗೆ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅಲ್ಲಿ ಹಂದಿ ತಿನ್ನುತ್ತಿದ್ದ ಕಾಳುಗಳನ್ನಾದರೂ ತಿಂದು ಹಸಿವನ್ನು ನೀಗಿಸಿಕೊಳ್ಳಲು ಹಂಬಲಿಸಿದ. ಆದರೆ ಅದನ್ನೂ ಅವನಿಗೆ ಯಾರೂ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಗ ಅವನು ಬಹಳ ಹಸಿವೆಗೊಂಡಿದ್ದನು. ಆದ್ದರಿಂದ ಹಂದಿಗಳು ತಿನ್ನುತ್ತಿದ್ದ ಕಾಯಿಗಳನ್ನೇ ತಿನ್ನಲು ಹಂಬಲಿಸಿದನು. ಆದರೆ ಅದನ್ನೂ ಅವನಿಗೆ ಯಾರೂ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವನು ಹಂದಿಗಳು ತಿನ್ನುತ್ತಿದ್ದ ಸಿಪ್ಪೆಗಳಿಂದಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವುದಕ್ಕೆ ಆಶೆಪಟ್ಟನು, ಆದರೆ ಅದನ್ನು ಸಹ ಅವನಿಗೆ ಯಾರೂ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತೆನಿ ಡುಕ್ರಾನಿ ಖಾತಲೆ ಗಡ್ಡೆ ತರ್ ಬಿ ಖಾವ್ನ್, ಮಿಯಾ ಮಾಜೆ ಪೊಟ್ ಭರುನ್ ಘೆತಾ, ಮನುನ್ ಯವಜ್ಲ್ಯಾನ್, ಖರೆ, ಕೊನ್ಬಿ ತೆಕಾ ಕಾಯ್ಬಿ ಖಾವ್ಕ್ ದಿವ್ಕನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:16
13 ತಿಳಿವುಗಳ ಹೋಲಿಕೆ  

ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣ ಗಾಳಿಯೇ; ಅದು ಮೋಸವನ್ನೂ ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡಿಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು [ಕಾಣಿಕೆಯಾಗಿ] ಕಳುಹಿಸುತ್ತದೆ.


ಮೃಷ್ಟಾನ್ನವನ್ನು ಉಣ್ಣುತ್ತಿದ್ದವರು ಬೀದಿಗಳಲ್ಲಿ ದಿಕ್ಕೆಟ್ಟು ಅಲೆಯುತ್ತಾರೆ; ಚಿಕ್ಕತನದಿಂದಲೂ ಸಕಲಾತಿಯನ್ನು ಹೊದೆಯುತ್ತಿದ್ದವರಿಗೆ ತಿಪ್ಪೆಗಳನ್ನು ಅಪ್ಪಿಕೊಳ್ಳುವ ಗತಿ ಬಂತು.


ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು, ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.


ನನ್ನ ಬಲಗಡೆಗೆ ನೋಡಿ ಪರಾಂಬರಿಸು; ಅಲ್ಲಿ ಸಹಾಯಕರು ಯಾರೂ ಇಲ್ಲ. ಆಶ್ರಯವು ನಾಶವಾಯಿತು; ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ.


ಮಾಟಗಾತಿಯ ಮಕ್ಕಳೇ, ಸೂಳೆಗಾರನ ಮತ್ತು ಸೂಳೆಯ ಸಂತಾನದವರೇ, ನೀವು ಇಲ್ಲಿಗೆ ಬನ್ನಿರಿ! ಯಾರನ್ನು ಅಣಕಿಸಿ ವಿನೋದ ಪಡುತ್ತೀರಿ?


ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ರಯಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೇದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.


ನಾನು ವಿವೇಕಹೀನಪಾಮರನಾಗಿ ನಿನ್ನ ದೃಷ್ಟಿಯಲ್ಲಿ ಕೇವಲ ಪಶುವೇ ಆಗಿದ್ದೆನು.


ದೇವರ ವಸ್ತುವನ್ನು ನಾಯಿಗಳಿಗೆ ಹಾಕಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಚೆಲ್ಲಿದರೆ ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.


ಆಗ ಅವನು ಹೋಗಿ ಆ ದೇಶದ ನಿವಾಸಿಗಳೊಳಗೆ ಒಬ್ಬನಲ್ಲಿ ಸೇರಿಕೊಂಡನು; ಆ ಮನುಷ್ಯನು ಹಂದಿಗಳನ್ನು ಮೇಯಿಸುವದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.


ಆಗ ಅವನಿಗೆ ಬುದ್ಧಿ ಬಂದು ಅವನು - ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವದೆ; ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತೇನೆ.


ಪೊದೆಗಳಲ್ಲಿ ಚಕ್ಕೋತ ಸೊಪ್ಪನ್ನು ಕಿತ್ತು [ತಿಂದು] ಜಾಲಿಯ ಬೇರುಗಳನ್ನೂ ಆಹಾರಮಾಡಿಕೊಳ್ಳುವರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು