Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:8 - ಕನ್ನಡ ಸತ್ಯವೇದವು J.V. (BSI)

8 ಯಾವ ಹೆಂಗಸು ತನ್ನಲ್ಲಿ ಹತ್ತು ಪಾವಲಿಗಳಿರಲಾಗಿ ಒಂದು ಪಾವಲಿ ಕಳೆದುಹೋದರೆ ದೀಪಾಹಚ್ಚಿ ಮನೆಯನ್ನು ಗುಡಿಸಿ ಸಿಕ್ಕುವ ತನಕ ಅದನ್ನು ಎಚ್ಚರದಿಂದ ಹುಡುಕದೆ ಇದ್ದಾಳು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಇಲ್ಲವೇ ಒಬ್ಬ ಹೆಂಗಸಿನ ಬಳಿಯಲ್ಲಿ ಹತ್ತು ಬೆಳ್ಳಿನಾಣ್ಯಗಳಿರಲಾಗಿ ಒಂದು ಬೆಳ್ಳಿನಾಣ್ಯ ಕಳೆದು ಹೋದರೆ ದೀಪಹಚ್ಚಿ, ಮನೆಯನ್ನು ಗುಡಿಸಿ ಸಿಕ್ಕುವ ತನಕ ಅದನ್ನು ಎಚ್ಚರದಿಂದ ಹುಡುಕದೆ ಇದ್ದಾಳೂ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಅಂತೆಯೇ, ಮನೆಯಾಕೆಯೊಬ್ಬಳು ತನ್ನ ಬಳಿಯಿದ್ದ ಹತ್ತು ನಾಣ್ಯಗಳಲ್ಲಿ ಒಂದನ್ನು ಕಳೆದುಕೊಂಡಳು ಎನ್ನೋಣ. ಆಗ ಅವಳೇನು ಮಾಡುತ್ತಾಳೆ? ದೀಪ ಹಚ್ಚಿ ಮನೆಯನ್ನು ಗುಡಿಸಿ, ಕಳೆದುಹೋದ ನಾಣ್ಯ ಸಿಕ್ಕುವವರೆಗೂ ಚೆನ್ನಾಗಿ ಹುಡುಕಾಡುತ್ತಾಳೆ, ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಒಬ್ಬ ಸ್ತ್ರೀಯ ಬಳಿ ಹತ್ತು ಬೆಳ್ಳಿನಾಣ್ಯಗಳು ಇವೆಯೆಂದು ಭಾವಿಸಿಕೊಳ್ಳಿರಿ. ಆಕೆಯು ಅವುಗಳಲ್ಲಿ ಒಂದನ್ನು ಕಳೆದುಕೊಳ್ಳುತ್ತಾಳೆ. ಆಕೆ ದೀಪವನ್ನು ತಂದು ಮನೆಯನ್ನು ಗುಡಿಸುತ್ತಾಳೆ. ಆ ನಾಣ್ಯವು ಸಿಕ್ಕುವ ತನಕ ಆಕೆ ಎಚ್ಚರಿಕೆಯಿಂದ ಹುಡುಕುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಒಬ್ಬ ಸ್ತ್ರೀಯು ತನ್ನ ಬಳಿ ಹತ್ತು ಬೆಳ್ಳಿಯ ನಾಣ್ಯವಿರಲಾಗಿ, ಒಂದು ನಾಣ್ಯವನ್ನು ಕಳೆದುಕೊಂಡರೆ, ಅವಳು ದೀಪಹಚ್ಚಿ ಮನೆಯನ್ನು ಗುಡಿಸಿ, ಅದು ಸಿಕ್ಕುವವರೆಗೆ ಜಾಗ್ರತೆಯಿಂದ ಹುಡುಕುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 “ನಾಹೊಲ್ಯಾರ್, ಧಾ ಚಾಂದಿಚೆ ಪೈಸೆ ಹೊತ್ತಿ ಎಕ್ ಬಾಯ್ಕೊಮಾನುಸ್, ತ್ಯಾತುರ್‍ಲಿ ಎಕ್ ಗಾಲಿ ಕಳ್ದುನ್ ಘೆತಾ ತನ್ನಾ ತಿ ಕಾಯ್ ಕರ್‍ತಾ? ತಿ, ಎಕ್ ಚಿಮ್ನಿ ಪೆಟ್ವುತಾ, ಸಗ್ಳೆ ಘರ್ ಝಾಡ್ತಾ! ಅನಿ ತೊ ಪೈಸೊ ಗಾವಿ ಪತರ್, ಸಗ್ಳ್ಯಾಕ್ಡೆ ಬರೆ ಕರುನ್ ಹುಡಕ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:8
9 ತಿಳಿವುಗಳ ಹೋಲಿಕೆ  

ಮಂದೆಯ ಕುರುಬನು ಸುತ್ತುಮುತ್ತಲು ಚದರಿಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ ನಾನು ನನ್ನ ಕುರಿಗಳನ್ನು ಹುಡುಕುವೆನು; ಕಾರ್ಮುಗಿಲಿನ ದುರ್ದಿನದಲ್ಲಿ ಚೆಲ್ಲಾಪಿಲ್ಲಿಯಾದ ಎಲ್ಲಾ ಸ್ಥಳಗಳಿಂದ ಅವುಗಳನ್ನು ಬಿಡಿಸಿ


ಮನುಷ್ಯಕುಮಾರನು ಕೆಟ್ಟುಹೋಗಿರುವದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.


ಇದಲ್ಲದೆ ಈ ಹಟ್ಟಿಗೆ ಸೇರದಿರುವ ಇನ್ನು ಬೇರೆ ಕುರಿಗಳು ನನಗೆ ಅವೆ, ಅವುಗಳನ್ನೂ ನಾನು ತರಬೇಕು; ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು, ಒಬ್ಬನೇ ಕುರುಬನಿರುವನು.


ಯೇಸು ಆ ಜನಕ್ಕೋಸ್ಕರ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೆ ಸಹ ಸಾಯುವದಕ್ಕಿದ್ದನು.


ಇದಲ್ಲದೆ ಆತನು ಬಂದು ದೂರವಾಗಿದ್ದ ನಿಮಗೂ ಸಮಾಧಾನವನ್ನು ಮತ್ತು ಸಮೀಪವಾಗಿದ್ದವರಿಗೂ ಸಮಾಧಾನವನ್ನು ಸಾರಿದನು.


ಮತ್ತು ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕುಕೊಡುವದು.


ಅದರಂತೆ ದೇವರ ಕಡೆಗೆ ತಿರುಗಿಕೊಳ್ಳುವದಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ಮಂದಿ ನೀತಿವಂತರಿಗಿಂತ ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವುಂಟಾಗುವದೆಂದು ನಿಮಗೆ ಹೇಳುತ್ತೇನೆ.


ಸಿಕ್ಕಿದ ಮೇಲೆ ಆಕೆಯು ತನ್ನ ಗೆಳತಿಯರನ್ನೂ ನೆರೆಹೊರೆಯವರನ್ನೂ ಕೂಡಿಸಿ - ಕಳೆದು ಹೋಗಿದ್ದ ಪಾವಲಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ ಎಂದು ಹೇಳುವಳಲ್ಲವೇ.


ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದವರಲ್ಲಿ ಅನೇಕರು ತಮ್ಮ ಪುಸ್ತಕಗಳನ್ನು ತಂದು ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವುಗಳ ಕ್ರಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳೀ ನಾಣ್ಯ ಆಯಿತೆಂದು ತಿಳಿದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು