Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:23 - ಕನ್ನಡ ಸತ್ಯವೇದವು J.V. (BSI)

23 ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಇವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಪಾತಾಳದಲ್ಲಿ ಯಾತನೆಪಡುತ್ತಾ ಅವನು ಕಣ್ಣೆತ್ತಿನೋಡಿದಾಗ, ದೂರದಲ್ಲಿ ಅಬ್ರಹಾಮನನ್ನೂ ಅವನ ಪಕ್ಕದಲ್ಲೇ ಕುಳಿತಿದ್ದ ಲಾಜರನನ್ನೂ ಕಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ಅವನು ಪಾತಾಳದಲ್ಲಿ ಬಹಳ ಯಾತನೆಪಡುತ್ತಾ ಬಹಳ ದೂರದಲ್ಲಿ ಅಬ್ರಹಾಮನ ಎದೆಗೆ ಒರಗಿಕೊಂಡಿದ್ದ ಲಾಜರನನ್ನು ನೋಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವನು ಪಾತಾಳದಲ್ಲಿ, ಯಾತನೆಪಡುತ್ತಾ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಲ್ಲಿ ಅಬ್ರಹಾಮನನ್ನೂ, ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ನರ್‍ಕಾತ್ ಮೊಟ್ಯಾ ವಳ್ವಳ್ಯಾಚ್ಯಾ ಜಾಗ್ಯಾತ್, ತೊ ಹೊತ್ತೊ. ಥೈತ್ನಾ ತೆನಿ ವೈರ್ ಬಗಟಲ್ಲ್ಯಾ ತನ್ನಾ, ತೆಕಾ ಅಬ್ರಾಮ್ ದಿಸ್ಲೊ ಥೈತ್ನಾ ತೊ ಧುರ್ ಹೊತ್ತೊ, ಅನಿ ಲಾಜರಸ್ ಅಬ್ರಾಹಾಮಾಚ್ಯಾ ಬಾಜುಕುಚ್ ಬಸಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:23
26 ತಿಳಿವುಗಳ ಹೋಲಿಕೆ  

ಹೇಗಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರಬೇಕೆಂದು ಕತ್ತಲೇ ಗುಂಡಿಗಳಿಗೆ ಒಪ್ಪಿಸಿದನು.


ನನಗೆ ಐದು ಮಂದಿ ಅಣ್ಣತಮ್ಮಂದಿರಿದ್ದಾರೆ; ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಂದಾರು; ಬಾರದಂತೆ ಅವನು ತಾನು ಕಂಡದ್ದನ್ನು ಅವರಿಗೆ ಚೆನ್ನಾಗಿ ಹೇಳಲಿ ಅಂದನು.


ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಗೆ ಹೇಗೆ ತಪ್ಪಿಸಿಕೊಂಡೀರಿ?


ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಿತ್ತು ಬಿಸಾಟುಬಿಡು; ಎರಡು ಕಣ್ಣುಳ್ಳವನಾಗಿದ್ದು ಅಗ್ನಿ ನರಕದಲ್ಲಿ ಹಾಕಿಸಿಕೊಳ್ಳುವದಕ್ಕಿಂತ ಒಂದೇ ಕಣ್ಣುಳ್ಳವನಾಗಿದ್ದು ಜೀವದಲ್ಲಿ ಸೇರುವದು ನಿನಗೆ ಉತ್ತಮ.


ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು.


ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.


ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಬಿದ್ದು ಮಹಾಶಬ್ದದಿಂದ - ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂತ ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.


ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಿತ್ತು ಬಿಸಾಟುಬಿಡು; ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವದಕ್ಕಿಂತ ಅವಯವಗಳಲ್ಲಿ ಒಂದು ಹೋಗುವದು ನಿನಗೆ ಹಿತವಲ್ಲವೇ.


ಆದರೆ ನಾನು ನಿಮಗೆ ಹೇಳುವದೇನಂದರೆ - ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿ ಮನುಷ್ಯನು ನ್ಯಾಯವಿಚಾರಣೆಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ - ಛೀ ನೀಚಾ ಅನ್ನುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ಮೂರ್ಖಾ ಅನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.


ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧಸ್ಥಳಗಳಿಗೆ, ತಳ್ಳಲ್ಪಡುತ್ತಿದ್ದೀ.


ಬರುತ್ತಿರುವ ನಿನ್ನನ್ನು ಎದುರುಗೊಳ್ಳುವದಕ್ಕೆ ಕೆಳಗಡೆ ಪಾತಾಳವು ತಳಮಳಪಡುತ್ತದೆ; ನಿನಗೋಸ್ಕರ ಪ್ರೇತಗಳನ್ನು, ಅಂದರೆ ಭೂಲೋಕದಲ್ಲಿ ಮುಖಂಡರಾಗಿದ್ದವರೆಲ್ಲರನ್ನು ಎಚ್ಚರಗೊಳಿಸಿ ಜನಾಂಗಗಳ ಸಕಲ ರಾಜರನ್ನು ಅವರವರ ಆಸನಗಳಿಂದ ಎಬ್ಬಿಸುತ್ತದೆ.


ಮರಣವೇ, ನಿನ್ನ ಜಯವೆಲ್ಲಿ? ಮರಣವೇ, ನಿನ್ನ ವಿಷದ ಕೊಂಡಿ ಎಲ್ಲಿ?


ಎಲಾ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಪಾತಾಳಕ್ಕೇ ಇಳಿಯುವಿ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋವಿುನಲ್ಲಿ ನಡೆದಿದ್ದರೆ ಅದು ಇಂದಿನವರೆಗೂ ಉಳಿಯುತ್ತಿತ್ತು.


ಅವರು - ದೇವರ ಮಗನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವದಕ್ಕಿಂತ ಮುಂಚೆ ನಮ್ಮನ್ನು ಕಾಡುವದಕ್ಕೆ ಇಲ್ಲಿಗೆ ಬಂದಿಯಾ ಎಂದು ಕೂಗಿದರು.


ವಿವೇಕಿಗೆ ಜೀವದ ಮಾರ್ಗವು ಮೇಲು ಮೇಲಕ್ಕೆ ಹೋಗುತ್ತದೆ; ಅದನ್ನು ಹಿಡಿದವನು ಪಾತಾಳದಿಂದ ತಪ್ಪಿಸಿಕೊಳ್ಳುವನು.


ಆ ಮನೆಯು ಪ್ರೇತನಿವಾಸವೆಂದೂ ಅವಳ ಅತಿಥಿಗಳು ಅಗಾಧಪಾತಾಳದಲ್ಲಿ ಬಿದ್ದಿರುವರೆಂದೂ ಅವನಿಗೆ ತಿಳಿಯದು.


ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಅಂತಃಪುರಕ್ಕೆ ಇಳಿದು ಹೋಗುತ್ತದೆ.


ಅವಳು ಮರಣದ ಕಡೆಗೆ ನಡೆಯುತ್ತಾ ಇಳಿದು ಹೋಗುವಳು. ಅವಳ ಹೆಜ್ಜೆಗಳು ಪಾತಾಳದ ದಾರಿಯನ್ನು ಹಿಡಿಯುವವು.


ನೀನು ಬಹಳವಾಗಿ ಕನಿಕರಿಸಿ ನನ್ನ ಪ್ರಾಣವನ್ನು ಪಾತಾಳತಲದಿಂದ ತಪ್ಪಿಸಿದ್ದೀಯಲ್ಲಾ.


ಆದರೆ ದೇವರು ನನ್ನ ಪ್ರಾಣವನ್ನು ಮೃತ್ಯುಹಸ್ತದಿಂದ ತಪ್ಪಿಸಿ ಸ್ವೀಕಾರ ಮಾಡುವನು. ಸೆಲಾ.


ಯಾಕಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವದಿಲ್ಲ; ನಿನ್ನ ಪ್ರಿಯನಿಗೆ ಅಧೋಲೋಕವನ್ನು ನೋಡಗೊಡಿಸುವದಿಲ್ಲ.


ತಂದೆಯೇ, ಅಬ್ರಹಾಮನೇ, ನನ್ನ ಮೇಲೆ ದಯವಿಟ್ಟು ಲಾಜರನನ್ನು ಕಳುಹಿಸು; ಅವನು ತನ್ನ ತುದಿಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ; ಈ ಉರಿಯಲ್ಲಿ ಸಂಕಟಪಡುತ್ತೇನೆ ಎಂದು ಕೂಗಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು