Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:25 - ಕನ್ನಡ ಸತ್ಯವೇದವು J.V. (BSI)

25 ಆದರೆ ಅಬ್ರಹಾಮನು - ಕಂದಾ, ನೀನು ಆಶಿಸಿದ ಸುಖವನ್ನು ನಿನ್ನ ಜೀವಮಾನದಲ್ಲಿ ಹೊಂದಿದಿ; ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದರೆ ಅಬ್ರಹಾಮನು, ‘ಕಂದಾ, ನೀನು ಆಶಿಸಿದ ಸುಖಸಂಪತ್ತನ್ನು ನಿನ್ನ ಜೀವಮಾನದಲ್ಲಿ ಹೊಂದಿದ್ದಿ. ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬುದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅದಕ್ಕೆ ಅಬ್ರಹಾಮನು, ‘ಮಗನೇ, ಜೀವಮಾನದಲ್ಲಿ ಬೇಕಾದಷ್ಟು ಸುಖಸಂಪತ್ತನ್ನು ನೀನು ಅನುಭವಿಸಿದೆ; ಲಾಜರನಾದರೋ ದುಃಖ ದಾರಿದ್ರ್ಯವನ್ನು ಅನುಭವಿಸಿದ, ಎಂಬುದನ್ನು ನೆನಪಿಗೆ ತಂದುಕೊ. ಆದರೆ ಈಗ ಅವನು ಇಲ್ಲಿ ಸುಖಪಡುತ್ತಿದ್ದಾನೆ; ನೀನು ಅಲ್ಲಿ ಸಂಕಟಪಡುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ಅದಕ್ಕೆ ಅಬ್ರಹಾಮನು, ‘ಕಂದಾ, ನಿನ್ನ ಜೀವಮಾನದ ದಿನಗಳು ನಿನಗೆ ನೆನಪಿಲ್ಲವೇ? ಅಲ್ಲಿ ನಿನಗೆ ಎಲ್ಲ ಬಗೆಯ ಸುಖವಿತ್ತು. ಆದರೆ ಲಾಜರಿನಿಗಾದರೋ ಕಷ್ಟಗಳೇ ತುಂಬಿಕೊಂಡಿದ್ದವು. ಆದ್ದರಿಂದ ಈಗ ಅವನು ಸುಖಪಡುತ್ತಿದ್ದಾನೆ, ನೀನು ಸಂಕಟಪಡುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ಆದರೆ ಅಬ್ರಹಾಮನು, ‘ಮಗನೇ, ನೀನು ನಿನ್ನ ಜೀವಮಾನದಲ್ಲಿ ಒಳ್ಳೆಯವುಗಳನ್ನು ಹೊಂದಿದೆಯಲ್ಲಾ, ಲಾಜರನು ಕೆಟ್ಟವುಗಳನ್ನು ಅನುಭವಿಸಿದ್ದನ್ನು ನೆನಪಿಗೆ ತಂದುಕೋ, ಈಗ ಅವನು ಆದರಣೆ ಹೊಂದುತ್ತಿದ್ದಾನೆ. ನೀನು ಯಾತನೆಪಡುತ್ತಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಖರೆ ಅಬ್ರಾಹಾಮಾನ್ ತೆಕಾ, “ಮಾಜ್ಯಾ ಲೆಕಾ, ಯಾದ್‍ ಕರ್, ತುಜ್ಯಾ ಜಿವನಾತ್ ತುಕಾ ಸಾವ್ಕಾರ್‍ಕಿಚೆ ಜಿವನ್ ಹೊತ್ತೆ,ಖರೆ ಲಾಜರಸಾಚೆ ಜಿವನ್ ಲೈ ತರಾಸಾಚೆ ಹೊತ್ತೆ, ತೆಚೆಕ್ಡೆ ಕಾಯ್ಬಿ ನತ್ತೆ. ಖರೆ ಅತ್ತಾ ತಿಯಾ ತರಾಸಾನ್ ವಳ್ವಳುನ್ಗೆತ್ ಹಾಸ್, ಅನಿ ತೊ ಹಿತ್ತೆ ಮಜ್ಯಾ ಕರುನ್ಗೆತ್, ಕುಶಿನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:25
25 ತಿಳಿವುಗಳ ಹೋಲಿಕೆ  

ಆದರೆ ಐಶ್ವರ್ಯವಂತರೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮ ಸುಖ ನಿಮಗೆ ಬಂದದೆ.


ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಣ ಪ್ರೀತಿಯು ಅವನಲ್ಲಿಲ್ಲ.


ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ವಿುಕ್ಕ ಆಸ್ತಿಯನ್ನು ತನ್ನ ಮಕ್ಕಳಿಗೆ ಬಿಡುತ್ತಾರೆ.


ಮತ್ತು ನಿನ್ನ ಕಾಲು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಡಿದುಬಿಡು; ಎರಡು ಕಾಲುಳ್ಳವನಾಗಿದ್ದು ನರಕದಲ್ಲಿ ಹಾಕಿಸಿಕೊಳ್ಳುವದಕ್ಕಿಂತ ಕಾಲುಕಳಕೊಂಡವನಾಗಿ ಜೀವದಲ್ಲಿ ಸೇರುವದು ನಿನಗೆ ಉತ್ತಮ.


ಯಾಕಂದರೆ ಶರೀರಭಾವದವುಗಳ ಮೇಲೆ ಮನಸ್ಸಿಡುವದು ದೇವರಿಗೆ ಶತ್ರುತ್ವವು; ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದೂ ಇಲ್ಲ, ಒಳಪಡುವದಕ್ಕಾಗುವದೂ ಇಲ್ಲ.


ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು, ಅವರು ಪ್ರಪಂಚದ ಕಾರ್ಯಗಳ ಮೇಲೆ ಮನಸ್ಸಿಡುವವರು. ನಾವಾದರೋ ಪರಲೋಕಸಂಸ್ಥಾನದವರು;


ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕೆಂಬದಾಗಿ ಎಚ್ಚರಿಕೆಯ ಮಾತನ್ನು ಹೇಳಿ ಕ್ರಿಸ್ತನಂಬಿಕೆಯಲ್ಲಿ ಸ್ಥಿರವಾಗಿರ್ರಿ ಎಂದು ಅವರನ್ನು ಧೈರ್ಯಗೊಳಿಸಿದರು.


ಸ್ವಲ್ಪಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವರ ಜನರೊಂದಿಗೆ ಕಷ್ಟವನ್ನನುಭವಿಸುವದೇ ಒಳ್ಳೇದೆಂದು ತೀರ್ಮಾನಿಸಿಕೊಂಡನು.


ಸಂಕಟಗಳನ್ನು ಅನುಭವಿಸುವದಕ್ಕಾಗಿ ನಾವು ನೇವಿುಸಲ್ಪಟ್ಟವರೆಂದು ನೀವೇ ಬಲ್ಲಿರಷ್ಟೆ.


ಅವನು ನನಗೆ - ಇವರು ಆ ಮಹಾ ಹಿಂಸೆಯನ್ನು ಅನುಭವಿಸಿ ಬಂದವರು; ಯಜ್ಞದ ಕುರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿದ್ದಾರೆ.


ನೀವು ನನ್ನಲ್ಲಿದ್ದು ಮನಶ್ಶಾಂತಿಯನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟ ಉಂಟು; ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ ಎಂದು ಹೇಳಿದನು.


ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಇವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ -


ಅವನ ಮನೇ ಬಾಗಿಲಲ್ಲಿ ಲಾಜರನೆಂಬ ಒಬ್ಬ ಭಿಕ್ಷಗಾರನು ಬಿದ್ದುಕೊಂಡಿದ್ದನು.


ಅದೇ ರಾತ್ರಿಯಲ್ಲಿ ಕಸ್ದೀಯ ರಾಜನಾದ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.


ಯೆರೂಸಲೇಮ್ ಪುರಿಯು ದಿಕ್ಕಾಪಾಲಾಗಿ ಅಲೆದು ಕಷ್ಟಪಡುವಾಗ ಪುರಾತನಕಾಲದಿಂದ ತನಗಿದ್ದ ಭೋಗ್ಯ ವಸ್ತುಗಳನ್ನು ಜ್ಞಾಪಿಸಿಕೊಳ್ಳುತ್ತಾಳೆ; ಆಕೆಗೆ ಯಾರ ಸಹಾಯವೂ ಇಲ್ಲದೆ ಆಕೆಯ ಜನರು ವಿರೋಧಿಯ ಕೈಗೆ ಸಿಕ್ಕಿದಾಗ ಹಾಳುಬಿದ್ದಿರುವ ಆಕೆಯನ್ನು ವೈರಿಗಳು ನೋಡಿ ಹಾಸ್ಯಮಾಡಿದರು.


ಯಾರು ವಿಸ್ತಾರವಾದ ಭೂಸ್ಥಿತಿಗಳಿಗೆ ತಮ್ಮ ಹೆಸರುಗಳನ್ನು ಕೊಟ್ಟಿದ್ದಾರೋ ಅಂಥವರಿಗೂ ಸಮಾಧಿಯೇ ಶಾಶ್ವತಮಂದಿರವು; ಅದೇ ಅವರ ನಿತ್ಯನಿವಾಸಸ್ಥಾನ.


ಸರ್ವಶಕ್ತನು ನಮಗೇನು ಮಾಡಾನು ಎಂದು ಹೇಳಿಕೊಳ್ಳುತ್ತಿದ್ದರು. ಅಬ್ಬಾ, ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ!


ಕೊಬ್ಬಿನಿಂದ ಅವರ ಕಣ್ಣುಗಳು ಮೇಲೆ ಅವೆ; ಅವರ ದುಷ್ಕಲ್ಪನೆಗಳು ತುಂಬಿತುಳುಕುತ್ತವೆ.


ದೊರೆಯೇ, ಆ ಮೋಸಗಾರನು ಬದುಕಿದ್ದಾಗ ತಾನು ಮೂರು ದಿನದ ಮೇಲೆ ಏಳುತ್ತೇನೆ ಅಂತ ಹೇಳಿದ್ದು ನಮ್ಮ ನೆನಪಿಗೆ ಬಂತು;


ಇದು ಮಾತ್ರವಲ್ಲದೆ ನಮಗೂ ನಿಮಗೂ ನಡುವೆ ದೊಡ್ಡದೊಂದು ಡೊಂಗರ ಸ್ಥಾಪಿಸಿಯದೆ; ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಹೋಗಬೇಕೆಂದಿರುವವರು ಹೋಗಲಾರರು; ಮತ್ತು ಆ ಕಡೆಯಿಂದ ನಮ್ಮ ಬಳಿಗೆ ಯಾರೂ ದಾಟುವದಕ್ಕಾಗದು ಅಂದನು.


ನಿಮ್ಮ ಪುಟ್ಟಿಗಳಿಗೂ ಕೊಣವಿಗೆಗಳಿಗೂ ಅಶುಭವುಂಟಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು