Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:3 - ಕನ್ನಡ ಸತ್ಯವೇದವು J.V. (BSI)

3 ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು; ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷವಿುಸಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು. ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷಮಿಸಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನೀವಾದರೋ ಎಚ್ಚರಿಕೆಯಿಂದಿರಿ! “ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಖಂಡಿಸು; ಪಶ್ಚಾತ್ತಾಪಪಟ್ಟರೆ ಕ್ಷಮಿಸಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದ್ದರಿಂದ ಎಚ್ಚರಿಕೆಯಾಗಿರಿ! “ನಿನ್ನ ಸಹೋದರನು ಪಾಪಮಾಡಿದರೆ, ಅವನನ್ನು ಖಂಡಿಸು. ಒಂದುವೇಳೆ ಅವನೇನಾದರೂ ತನ್ನ ತಪ್ಪಿಗಾಗಿ ಪಶ್ಚಾತ್ತಾಪಪಟ್ಟರೆ ಅವನನ್ನು ಕ್ಷಮಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಿಂದಿರಿ. “ನಿನ್ನ ಸಹೋದರನು ಅಥವಾ ಸಹೋದರಿ ನಿನಗೆ ವಿರೋಧವಾಗಿ ಪಾಪಮಾಡಿದರೆ, ಅವರನ್ನು ಗದರಿಸು; ಅವರು ಪಶ್ಚಾತ್ತಾಪಪಟ್ಟರೆ, ಅವರನ್ನು ಕ್ಷಮಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತುಮ್ಚ್ಯಾ ಕರ್ನ್ಶಾಂಚ್ಯಾ ವಿಶಯಾತ್ ಉಶಾರ್ಕಿನ್ ರ್‍ಹಾವಾ. ಜರ್ ತರ್ ತುಜ್ಯಾ ಭಾವಾನ್ ಪಾಪ್ ಕರ್‍ಲ್ಯಾನ್ ತರ್, ತೆಕಾ ಬುದ್‍ಬಾಳ್ ಸಾಂಗ್, ತೆ ಆಯ್ಕುನ್ ತೊ ಬದಲ್ಲ್ಯಾರ್ ತೆಕಾ ಮಾಪ್ ಕರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:3
18 ತಿಳಿವುಗಳ ಹೋಲಿಕೆ  

ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.


ಆಗ ಪೇತ್ರನು ಆತನ ಬಳಿಗೆ ಬಂದು - ಸ್ವಾಮೀ, ನನ್ನ ಸಹೋದರನು ನನಗೆ ತಪ್ಪುಮಾಡುತ್ತಾ ಬಂದರೆ ನಾನು ಎಷ್ಟು ಸಾರಿ ಅವನಿಗೆ ಕ್ಷವಿುಸಬೇಕು? ಏಳು ಸಾರಿಯೋ ಎಂದು ಕೇಳಲು


ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು; ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು.


ನನ್ನ ಸಹೋದರರೇ, ನಿಮ್ಮಲ್ಲಿ ಒಬ್ಬನು ಸತ್ಯಮಾರ್ಗವನ್ನು ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಸನ್ಮಾರ್ಗಕ್ಕೆ ತಂದರೆ -


[ಕಾರ್ಯದಿಂದ] ಹೊರಪಡದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯು ಲೇಸು.


ಎಚ್ಚರಿಕೆಯಾಗಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ನೀವು ಮರೆತು ಪೂಜಿಸಬೇಡಿರೆಂದು ಆತನು ನಿಷೇಧಿಸಿದ ಯಾವ ವಸ್ತುವಿನ ವಿಗ್ರಹವನ್ನೂ ಮಾಡಿಕೊಳ್ಳಬಾರದು.


ಹೀಗಿರುವದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.


ನೀವು ಸೇರುವ ದೇಶದ ನಿವಾಸಿಗಳ ಸಂಗಡ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು ನೋಡಿಕೊಳ್ಳಿರಿ; ಮಾಡಿಕೊಂಡರೆ ಅದು ನಿಮ್ಮ ಮಧ್ಯದಲ್ಲಿ ಉರುಲಿನಂತಿರುವದು.


ನಾವು ಪ್ರಯಾಸಪಟ್ಟು ಮಾಡಿದವುಗಳನ್ನು ನೀವು ಕಳಕೊಳ್ಳದೆ ಪೂರ್ಣಫಲವನ್ನು ಹೊಂದುವಂತೆ ಜಾಗರೂಕರಾಗಿರಿ.


ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ. ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹಿಂಜರಿಯದಂತೆ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಸಭೆಯವರನ್ನು ಕೆಡಿಸದಂತೆ


ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಜ್ಞಾನವಿಲ್ಲದರಾಗಿರದೆ ಜ್ಞಾನವಂತರಾಗಿರ್ರಿ.


ನಿಮ್ಮ ವಿಷಯದಲ್ಲಿ ಜಾಗರೂಕರಾಗಿರ್ರಿ. ಅತಿಭೋಜನದ ಮದಡಿನಿಂದಲೂ ಅಮಲಿನಿಂದಲೂ ಪ್ರಪಂಚದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿವಸವು ನಿಮ್ಮ ಮೇಲೆ ಉರ್ಲಿನಂತೆ ಫಕ್ಕನೆ ಬಂದೀತು.


ಮಂದನಿಗೆ ನೂರು ಪೆಟ್ಟು ಹೊಡೆಯುವದಕ್ಕಿಂತಲೂ ಗದರಿಕೆಯೇ ವಿವೇಕಿಗೆ ಹೆಚ್ಚಾದ ಶಿಕ್ಷೆ.


ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗುಪಕಾರ; ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ; ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರೋಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.


ಹೋರೇಬಿನಲ್ಲಿ ಯೆಹೋವನು ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತಾಡಿದಾಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲವಷ್ಟೆ. ಆದದರಿಂದ ನೀವು ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು